Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು ಸ್ಮಾರ್ಟ್‌ಸಿಟಿ ಕಾಮಗಾರಿಯಿಂದಾದ...

ಮಂಗಳೂರು ಸ್ಮಾರ್ಟ್‌ಸಿಟಿ ಕಾಮಗಾರಿಯಿಂದಾದ ರಸ್ತೆ ಗುಂಡಿ ಮುಚ್ಚಲು ಮನಪಾ ಕ್ರಮ

ವಾರ್ತಾಭಾರತಿ ವರದಿ ಫಲಶ್ರುತಿ

ವಾರ್ತಾಭಾರತಿವಾರ್ತಾಭಾರತಿ23 Jun 2022 10:22 PM IST
share
ಮಂಗಳೂರು ಸ್ಮಾರ್ಟ್‌ಸಿಟಿ ಕಾಮಗಾರಿಯಿಂದಾದ ರಸ್ತೆ ಗುಂಡಿ ಮುಚ್ಚಲು ಮನಪಾ ಕ್ರಮ

ಮಂಗಳೂರು, ಜೂ.23: ನಗರದಲ್ಲಿ ಸ್ಮಾರ್ಟ್‌ಸಿಟಿ ಮತ್ತು ಗೇಲ್ ಇಂಡಿಯಾ ಪೈಪ್‌ಲೈನ್ ಅಳವಡಿಕೆ ಕಾಮಗಾರಿ ನಡೆಯುತ್ತಿದ್ದು, ಈ ಸಂಬಂಧ ಕಳಪೆ ಸುರಕ್ಷತಾ ಕ್ರಮಗಳ ಕುರಿತು ‘ವಾರ್ತಾಭಾರತಿ’ಯಲ್ಲಿ ಸುದ್ದಿ ಪ್ರಕಟಗೊಂಡ ಬೆನ್ನಲ್ಲೇ ಮಂಗಳೂರು ಮಹಾನಗರ ಪಾಲಿಕೆಯ ಅಧಿಕಾರಿಗಳು ಸಾರ್ವಜನಿಕರಿಗೆ ತೊಂದರೆಯಾಗುತ್ತಿದ್ದ ಗುಂಡಿಗಳನ್ನು ಸರಿಪಡಿಸುವಲ್ಲಿ ಕಾರ್ಯಪ್ರವೃತ್ತರಾಗಿದ್ದಾರೆ.

‘ಮಂಗಳೂರು: ಸ್ಮಾರ್ಟ್‌ಸಿಟಿ, ಗೇಲ ಇಂಡಿಯಾ ಕಾಮಗಾರಿಯಿಂದ ಅಲ್ಲಲ್ಲಿ ಗುಂಡಿ, ಜನರಿಗೆ ಪ್ರಾಣ ಸಂಕಟ’ ಎಂಬ ಶೀರ್ಷಿಕೆಯಲ್ಲಿ ಮಾರಣಾಂತಿಕ ರಸ್ತೆ ಗುಂಡಿಗಳ ಬಗ್ಗೆ ವಿಶೇಷ ವರದಿ ಗುರುವಾರದ ‘ವಾರ್ತಾಭಾರತಿ’ಯಲ್ಲಿ ಪ್ರಕಟವಾಗಿತ್ತು.

ಇದರಲ್ಲಿ ನಗರದಲ್ಲಿ ಸ್ಮಾರ್ಟ್‌ಸಿಟಿ ಯೋಜನೆ ಹಾಗೂ ಗೇಲ್ ಇಂಡಿಯಾ ಪೈಪ್‌ಲೈನ್ ಅಳವಡಿಕೆ ಕಾಮಗಾರಿಯಿಂದ ರಸ್ತೆಯಲ್ಲಿ ಆಗಿರುವ ಅಪಾಯಕಾರಿ ಗುಂಡಿಗಳು ಮತ್ತು ಅವ್ಯವಸ್ಥೆಗಳ ಬಗ್ಗೆ ಬೆಳಕು ಚೆಲ್ಲಲಾಗಿತ್ತು. ಈ ಸಮಸ್ಯೆಗಳ ಬಗ್ಗೆ ಮನಪಾ ಆಯುಕ್ತ ಅಕ್ಷಿ ಶ್ರೀಧರ್ ಹಾಗೂ ಮಂಗಳೂರು ಸ್ಮಾರ್ಟ್‌ಸಿಟಿ ಕಾಮಗಾರಿಯ ಪ್ರಧಾನ ವ್ಯವಸ್ಥಾಪಕ ಅರುಣ್ ಪ್ರಭಾ ಕೆ.ಎಸ್. ಸೇರಿದಂತೆ ಸಂಬಂಧಪಟ್ಟ ಅಧಿಕಾರಿಗಳ ಗಮನಸೆಳೆಯಲಾಗಿತ್ತು. ಈ ಇಬ್ಬರು ಅಧಿಕಾರಿಗಳೂ ಈ ವಿಚಾರವನ್ನು ಪರಿಶೀಲಿಸಿ ಕ್ರಮ ಕೈಗೊಳ್ಳುವುದಾಗಿ ‘ವಾರ್ತಾಭಾರತಿ’ಗೆ ಭರವಸೆ ನೀಡಿದ್ದರು.

ಅದರಂತೆ ಕಾರ್ಯಪ್ರವೃತ್ತರಾಗಿ ಗುರುವಾರ ನಗರದ ಬಲ್ಮಠದಲ್ಲಿ ಮನಪಾದ ವತಿಯಿಂದ ರಸ್ತೆ ಗುಂಡಿಗಳನ್ನು ಮುಚ್ಚಲಾಗಿದೆ. ಈ ಕಾಮಗಾರಿಯ ಚಿತ್ರಗಳನ್ನು ಮನಪಾ ಆಯುಕ್ತ ಅಕ್ಷಿ ಶ್ರೀಧರ್ ಗುರುವಾರ ‘ವಾರ್ತಾಭಾರತಿ’ಯೊಂದಿಗೆ ಹಂಚಿಕೊಂಡಿದ್ದಾರೆ.

ಬಲ್ಮಠ ಜಂಕ್ಷನ್‌ನಲ್ಲಿನ ರಸ್ತೆ ಗುಂಡಿಗಳಿಗೆ ಕಾಂಕ್ರಿಟ್ ಮತ್ತು ಮಣ್ಣು ಹಾಕಿ ತಾತ್ಕಾಲಿಕವಾಗಿ ಸರಿಪಡಿಸಲಾಗಿದೆ. ಅದೇರೀತಿ ಡಾ.ಬಿ.ಆರ್.ಅಂಬೇಡ್ಕರ್ (ಜ್ಯೋತಿ) ವೃತ್ತದಲ್ಲಿ ಅಪಾಯಕಾರಿ ಹೊಂಡವನ್ನು ಕಾಂಕ್ರಿಟ್‌ನಿಂದ ತುಂಬಿಸಿ ಸರಿಪಡಿಸಲಾಗಿದೆ. ಬೆಂದೂರ್‌ವೆಲ್‌ನಲ್ಲಿ ಅಗೆದಿದ್ದ ಸ್ಥಳವನ್ನು ಮಣ್ಣು ತುಂಬಿ ತಾತ್ಕಾಲಿಕವಾಗಿ ಸರಿಪಡಿಸಲಾಗಿದೆ. ಈ ಎಲ್ಲಾ ಪ್ರದೇಶಗಳಲ್ಲಿ ಸ್ಮಾರ್ಟ್‌ಸಿಟಿ ಮತ್ತು ಗೇಲ್ ಇಂಡಿಯಾ ಪೈಪ್‌ಲೈನ್ ಕಾಮಗಾರಿಯಿಂದಾಗಿ ರಸ್ತೆ ಗುಂಡಿಗಳು ಸೃಷ್ಟಿಯಾಗಿರುವ ಬಗ್ಗೆ ವಾರ್ತಾಭಾರತಿಯ ವಿಶೇಷ ವರದಿಯಲ್ಲಿ ಉಲ್ಲೇಖಿಸಲಾಗಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X