Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಮ್ಯಾನ್ಮಾರ್: ಸೇನಾಡಳಿತದಿಂದ ಕನಿಷ್ಟ...

ಮ್ಯಾನ್ಮಾರ್: ಸೇನಾಡಳಿತದಿಂದ ಕನಿಷ್ಟ 2000 ಪ್ರಜೆಗಳ ಹತ್ಯೆ; ವಿಶ್ವಸಂಸ್ಥೆ

ವಾರ್ತಾಭಾರತಿವಾರ್ತಾಭಾರತಿ23 Jun 2022 11:35 PM IST
share
ಮ್ಯಾನ್ಮಾರ್: ಸೇನಾಡಳಿತದಿಂದ ಕನಿಷ್ಟ 2000 ಪ್ರಜೆಗಳ ಹತ್ಯೆ; ವಿಶ್ವಸಂಸ್ಥೆ

ಯಾಂಗಾಂಗ್, ಜೂ.24: ಕಳೆದ ವರ್ಷ ಕ್ಷಿಪ್ರಕ್ರಾಂತಿಯ ಮೂಲಕ ಅಧಿಕಾರ ಕೈವಶ ಮಾಡಿಕೊಂಡಿರುವ ಮ್ಯಾನ್ಮಾರ್ ನ ಸೇನೆ, ತನ್ನ ವಿರೋಧಿಗಳನ್ನು ದಮನಿಸುವ ಕಾರ್ಯ ಮುಂದುವರಿಸಿದ್ದು ಈ ಕಾರ್ಯಾಚರಣೆಯಲ್ಲಿ ಇದುವರೆಗೆ 2000ಕ್ಕೂ ಅಧಿಕ ಮಂದಿ ಹತರಾಗಿದ್ದಾರೆ ಎಂದು ವಿಶ್ವಸಂಸ್ಥೆಯ ತಜ್ಞರು ಹೇಳಿದ್ದಾರೆ. ಮ್ಯಾನ್ಮಾರ್ ಸೇನೆಯ ಕಾರ್ಯಾಚರಣೆಗೆ ತಡೆಯೊಡ್ಡುವ ನಿಟ್ಟಿನಲ್ಲಿ ಅಂತರಾಷ್ಟ್ರೀಯ ಸಮುದಾಯ ತಕ್ಷಣ ಸೂಕ್ತ ಕ್ರಮ ಕೈಗೊಳ್ಳುವ ಅಗತ್ಯವಿದೆ ಎಂದವರು ಹೇಳಿದ್ದಾರೆ. 

ಮ್ಯಾನ್ಮಾರ್ ನ ಸೇನಾಡಳಿತ 2,000ಕ್ಕೂ ಅಧಿಕ ನಾಗರಿಕರನ್ನು ಹತ್ಯೆಗೈದಿದ್ದು 14,000ಕ್ಕೂ ಅಧಿಕ ಜನರನ್ನು ಬಂಧಿಸಿದೆ. ಇದರಿಂದ 7 ಲಕ್ಷಕ್ಕೂ ಅಧಿಕ ಜನರು ನೆಲೆಕಳೆದುಕೊಂಡಿದ್ದಾರೆ. ದೇಶದ ಒಳಗೆ ಸ್ಥಳಾಂತರಗೊಂಡವರ ಸಂಖ್ಯೆ 1 ಮಿಲಿಯನ್ಗೂ ಅಧಿಕ. ಈ ಕ್ರಮಗಳು ದೇಶವನ್ನು ಆರ್ಥಿಕ ಮತ್ತು ಮಾನವೀಯ ದುರಂತದ ಅಂಚಿಗೆ ತಂದಿರಿಸಿದ್ದು ಮಿಲಿಯಾಂತರ ಜನರ ಬದುಕು ಅತಂತ್ರಸ್ಥಿತಿಯಲ್ಲಿದೆ ಎಂದು ಮ್ಯಾನ್ಮಾರ್ನಲ್ಲಿನ ಪರಿಸ್ಥಿತಿಯ ಕುರಿತ ವಿಶ್ವಸಂಸ್ಥೆಯ ವಿಶೇಷ ಪ್ರತಿನಿಧಿ ಟಾಮ್ ಆ್ಯಂಡ್ರೂ ಹೇಳಿದ್ದಾರೆ.

ಮ್ಯಾನ್ಮಾರ್ ನ ಜನರ ಮೇಲೆ ಸೇನಾಡಳಿತದ ದಾಳಿ ಮಾನವೀಯತೆಯ ವಿರುದ್ಧದ ಅಪರಾದ ಹಾಗೂ ಯುದ್ಧಾಪರಾಧಕ್ಕೆ ಸಮವಾಗಿದ್ದು, ಸೇನೆಯ ಹಿಂಸಾಚಾರದ ಪರಿಣಾಮ ಎಲ್ಲರ ಮೇಲೂ ಆಗಿದೆ ಎಂದವರು ಹೇಳಿದ್ದಾರೆ. ಮ್ಯಾನ್ಮಾರ್ ಬಿಕ್ಕಟ್ಟಿನ ವಿಷಯದಲ್ಲಿ ಪ್ರಬಲ ನಿರ್ಣಯ ಅಂಗೀಕರಿಸುವಂತೆ ಆಸಿಯಾನ್ ಸಂಘಟನೆಯ ಮೇಲೆ ಒತ್ತಡ ಹೇರುವ ಮಲೇಶ್ಯಾದ ಪ್ರಯತ್ನ ಶ್ಲಾಘನೀಯವಾಗಿದೆ ಎಂದು ಟಾಮ್ ಆ್ಯಂಡ್ರೂ ಹೇಳಿದ್ದಾರೆ.

ಪ್ರಜಾಸತ್ತಾತ್ಮಕ ರೀತಿಯಲ್ಲಿ ಆಯ್ಕೆಯಾದ ಸರಕಾರವನ್ನು ಪದಚ್ಯುತಗೊಳಿಸಿ ಅಧಿಕಾರ ವಶಪಡಿಸಿಕೊಂಡ ಬಳಿಕ ಕಳೆದೊಂದು ವರ್ಷದಿಂದ ಮ್ಯಾನ್ಮಾರ್ನ ಸೇನೆ ನಡೆಸುತ್ತಿರುವ ಕಾರ್ಯಾಚರಣೆಯ ಬಗ್ಗೆ ಅಂತರಾಷ್ಟ್ರೀಯ ಸಮುದಾಯ ಇದುವರೆಗೆ ಧ್ವನಿ ಎತ್ತಿಲ್ಲ. ಅಧಿಕಾರ ಕೈವಶ ಮಾಡಿಕೊಳ್ಳುವುದಕ್ಕಿಂತ ಮೊದಲೂ ಮ್ಯಾನ್ಮಾರ್ ಸೇನೆಯು ನಾಗರಿಕರ ವಿರುದ್ಧದ ದೌರ್ಜನ್ಯಕ್ಕೆ ಕುಖ್ಯಾತಿ ಪಡೆದಿತ್ತು. ಬಹುತೇಕ ಮುಸ್ಲಿಂ ರೊಹಿಂಗ್ಯಾಗಳ ಮೇಲೆ 2017ರ ಕ್ರೂರ ಜನಾಂಗೀಯ ದಾಳಿ ಇದಕ್ಕೆ ಒಂದು ನಿದರ್ಶನ ಎಂದವರು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X