Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. 598 ಕೋಟಿ ರೂ. ಕಾಮಗಾರಿಗಳ ತನಿಖೆಯಾಗಲಿ:...

598 ಕೋಟಿ ರೂ. ಕಾಮಗಾರಿಗಳ ತನಿಖೆಯಾಗಲಿ: ಐವನ್ ಡಿಸೋಜಾ

ಮಂಗಳೂರು ಸ್ಮಾರ್ಟ್ ಸಿಟಿ ಯೋಜನೆ

ವಾರ್ತಾಭಾರತಿವಾರ್ತಾಭಾರತಿ24 Jun 2022 12:26 PM IST
share
598 ಕೋಟಿ ರೂ. ಕಾಮಗಾರಿಗಳ ತನಿಖೆಯಾಗಲಿ: ಐವನ್ ಡಿಸೋಜಾ

ಮಂಗಳೂರು: ನಗರದ ಸೌಂದರ್ಯೀಕರಣ, ಅಭಿವೃದ್ಧಿ ಉದ್ದೇಶದಿಂದ ನಡೆಯುತ್ತಿರುವ ಸ್ಮಾರ್ಟ್ ಸಿಟಿ ಯೋಜನೆ ಯಡಿ ಮಂಗಳೂರಿನಲ್ಲಿ ಕಳೆದ ಮೂರೂವರೆ ವರ್ಷದಲ್ಲಿ ಪೂರ್ಣಗೊಂಡಿರುವ ಒಂದು ಕಾಮಗಾರಿಯನ್ನು ತೋರಿಸಿ ಎಂದು ವಿಧಾನ ಪರಿಷತ್‌ನ ಮಾಜಿ ಸದಸ್ಯ, ಕಾಂಗ್ರೆಸ್ ಮುಖಂಡ ಐವನ್ ಡಿಸೋಜಾ ಮನಪಾ ಆಯುಕ್ತರಿಗೆ ಸವಾಲು ಹಾಕಿದ್ದಾರೆ.

ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, 598 ಕೋಟಿ ರೂ. ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗಿರುವ ಸ್ಮಾರ್ಟ್ ಸಿಟಿ ಯೋಜನೆಯಡಿ ಕೇವಲ ಚರಂಡಿಗಳನ್ನು ತೆಗೆಯುವುದು, ಕಟ್ಟುವುದು ಬಿಟ್ಟು ಬೇರೇನೂ ನಗರದಲ್ಲಿ ನಡೆಯುತ್ತಿಲ್ಲ. ಎಲ್ಲಾ ಕಾಮಗಾರಿಗಳು ಅರ್ಧಂಬರ್ಧವಾಗಿವೆ. ಹಾಗಾಗಿ ಈವರೆಗೆ ಆಗಿರುವ ಕಾಮಗಾರಿಗಳ ಖರ್ಚು ವೆಚ್ಚಗಳ ತನಿಖೆ ಅಗತ್ಯವಾಗಿದೆ. ಜತೆಗೆ ಸ್ಮಾರ್ಟ್ ಸಿಟಿ ಯೋಜನೆಯ ಕುರಿತಂತೆ ಮನಪಾ ಶ್ವೇತಪತ್ರವನ್ನು ಸಾರ್ವಜನಿಕರ ಮುಂದಿಡಬೇಕು ಎಂದು ಆಗ್ರಹಿಸಿದರು.

ಸ್ಮಾರ್ಟ್ ಸಿಟಿ ಯೋಜನೆ ಆರಂಭಕ್ಕೆ ಮುನ್ನ ಯೋಜನೆಯಲ್ಲಿ ಮಾಡಬೇಕಾದ ಕಾಮಗಾರಿಗಳ ಕುರಿತು ಸಾರ್ವಜನಿಕರ ಅಭಿಪ್ರಾಯವನ್ನು ನನ್ನ ಕಚೇರಿಯಲ್ಲಿ ಸಂಗ್ರಹಿಸಲಾಗಿತ್ತು. 800 ಜನರ ಅಭಿಪ್ರಾಯ ಪಡೆದು ಯಾವ ಕಾಮಗಾರಿ ಸೂಕ್ತ ಎಂಬುದನ್ನು ಪುಸ್ತಕ ರೂಪದಲ್ಲಿ ಅಂದಿನ ಪಾಲಿಕೆ ಆಯುಕ್ತರಿಗೆ ನೀಡಲಾಗಿತ್ತು. ಆದರೆ ಕಾಮಗಾರಿಗಳು ಆರಂಭವಾಗಿ ಆರು ವರ್ಷದವಾದರೂ ಜನಾಭಿಪ್ರಾಯಕ್ಕೆ ವ್ಯತಿರಿಕ್ತವಾಗಿ ಕಾಮಗಾರಿಗಳು ನಡೆಯುತ್ತಿವೆ. ಕಾಮಗಾರಿಯ ಅವಾಂತರದ ಬಗ್ಗೆ ಪ್ರಶ್ನಿದಾಗ ಅದು ಗೇಲ್ ಕಾಮಗಾರಿ, ಜಲಸಿರಿ ಕಾಮಗಾರಿ ಎನ್ನಲಾಗುತ್ತಿದೆ. ಹಂಪನಕಟ್ಟದಲ್ಲಿ ರಸ್ತೆ ಅಗಲೀಕರಣಕ್ಕೆ ಸಾಕಷ್ಟು ಜಾಗವನ್ನು ಸ್ವಾಧೀನಪಡಿಸಲಾಗಿದೆ. ಆದರೆ ಈಗ ಪಾರ್ಕ್, ಅಸಂಬಂಧ ಸರ್ಕಲ್, ವೇಗ ತಡೆ ಕಾಮಗಾರಿಗಳ ಮೂಲಕ ರಸ್ತೆಗಳನ್ನು ಕಿರಿದಾಗಿಸಲಾಗುತ್ತಿದೆ. ಕೇಳಿದರೆ ಇವೆಲ್ಲಾ ಪ್ರಾಯೋಗಿಕ ಎನ್ನುತ್ತಿದ್ದಾರೆ. ಯಾವ ತಂತ್ರಜ್ಞಾನ ಇವರದ್ದು ಎಂಬುದೇ ಅರ್ಥ ಆಗುತ್ತಿಲ್ಲ. ಕದ್ರಿ ಪಾರ್ಕ್ ಅಭಿವೃದ್ಧಿ ಮಾಡಿರುವುದು ಜನರಿಗಾಗಿ. ಆದರೆ ಅಲ್ಲಿ ಬರುವ ಜನರಿಗೆ ಸೂಕ್ತ ಪಾರ್ಕಿಂಗ್ ವ್ಯವಸ್ಥೆಯೇ ಇಲ್ಲ ಎಂದು ಅವರು ಆಕ್ಷೇಪಿಸಿದರು.

ನಗರದಲ್ಲಿ 420 ಸರ್ವಿಸ್ ಬಸ್ಸುಗಳು ದಿನಕ್ಕೆ ಸುಮಾರು 1700 ಟ್ರಿಪ್, 235 ಸಿಟಿ ಬಸ್ಸುಗಳು 700 ಟ್ರಿಪ್, 180 ಕೆಎಸ್‌ಆರ್‌ಟಿಸಿ ಬಸ್ಸುಗಳು 500 ಟ್ರಿಪ್, 60 ಕಾಂಟ್ರಾಕ್ಟ್ ಕ್ಯಾರಿಯೇಜ್ ಬಸ್ಸುಗಳು 180 ಟ್ರಿಪ್ ಸೇರಿ ನಗರದ ಒಳಗಡೆ ದಿನಕ್ಕೆ ಸುಮಾರು 900 ಬಸ್ಸುಗಳು ಅಂದಾಜು 4000 ಟ್ರಿಪ್‌ಗಳನ್ನು ನಡೆಸುತ್ತವೆ. ಆದರೆ ಸೂಕ್ತ ಬಸ್ಸು ನಿಲ್ದಾಣವಾಗಲಿ, ಸುಗಮ ಸಂಚಾರಕ್ಕೆ ವ್ಯವಸ್ಥೆ ಇಲ್ಲ ಎಂದು ಅವರು ದೂರಿದರು.

ಗೋಷ್ಠಿಯಲ್ಲಿ ಭಾಸ್ಕರ್, ಅಲಿಸ್ಟನ್ ಡಿಕುನ್ನ, ಸಲೀಂ ಮುಕ್ಕ, ಸಿ. ಮುಸ್ತಫಾ, ಹುಸೇನ್ ಕುಳೂರು, ವಿಕಾಸ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

ಅಗ್ನಿಪಥ್ ಯುವಕರ ಭವಿಷ್ಯಕ್ಕೆ ಕಂಟಕ

"ಕೇಂದ್ರ ಸರಕಾರದ ಅಗ್ನಿಪಥ್ ಯೋಜನೆ ಯುವಕರ ಭವಿಷ್ಯಕ್ಕೆ ಕಂಟಕವಾಗಿದೆ. 18 ವರ್ಷ ಪ್ರಾಯದ ಯುವಕರು ಸೇನೆಗೆ ಸೇರಿದ್ದಲ್ಲಿ ಅವರ ಶಿಕ್ಷಣದ ಹಕ್ಕು ಮೊಟಕುಗೊಳ್ಳಲಿದೆ. ಸೇನೆಯಲ್ಲಿ ಸುಮಾರು ನಾಲ್ಕು ವರ್ಷಗಳ ಬಳಿಕ ಹೊರ ಬರಲಿರುವ ಶೇ. 75ರಷ್ಟು ಮಂದಿಯ ಭವಿಷ್ಯಕ್ಕೆ ಪೂರಕ ಭದ್ರತೆಯನ್ನು ಈ ಯೋಜನೆಯಲ್ಲಿ ಸ್ಪಷ್ಟಪಡಿಸಿಲ್ಲ. ಇದರಿಂದ ಅವರು ಮುಂದಿನ ಭವಿಷ್ಯಕ್ಕೆ ಉದ್ಯೋಗಕ್ಕಾಗಿ ಏನು ಮಾಡಬೇಕು? ಪಿಯುಸಿ ವಿದ್ಯಾರ್ಹತೆಯಲ್ಲಿ ಅವರು ಮುಂದಿನ ಭವಿಷ್ಯವನ್ನು ರೂಪಿಸಿಕೊಳ್ಳಲು ಸಾಧ್ಯವೇ? ಎಂಬ ಪ್ರಶ್ನೆಗಳಿಗೆ ಈ ಯೋಜನೆಯಲ್ಲಿ ಉತ್ತರವಿಲ್ಲ. ಹಾಗಾಗಿ   ಇದನ್ನು ವಿರೋಧಿಸಿ ಎಐಸಿಸಿ, ಕೆಪಿಸಿಸಿ ಮಾರ್ಗದರ್ಶನದಂತೆ ರಾಜ್ಯದ 224 ವಿಧಾನ ಸಭಾ ಕ್ಷೇತ್ರಗಳಲ್ಲಿ ಜೂ. 27ರಂದು ಸತ್ಯಾಗ್ರಹ ನಡೆಯಲಿದೆ. ರಾಜ್ಯದ ವಿಧಾನಸಬಾ ಕಾರ್ಯದರ್ಶಿಗಳು ಉಪಸ್ಥಿತರಿದ್ದು, ಸತ್ಯಾಗ್ರಹ ನಡೆಸುವಂತೆ ಸೂಚನೆ ನೀಡಲಾಗಿದೆ. ಶಿರಸಿಯ ಸತ್ಯಾಗ್ರಹದಲ್ಲಿ ನಾನು ಭಾಗವಹಿಸಲಿದ್ದೇನೆ".
-ಐವನ್ ಡಿಸೋಜಾ, ವಿಧಾನ ಪರಿಷತ್ ಮಾಜಿ ಸದಸ್ಯರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X