Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಉಳ್ಳಾಲ ಬಟಪ್ಪಾಡಿಯಲ್ಲಿ ಮುಳುಗಿದ ಹಡಗು;...

ಉಳ್ಳಾಲ ಬಟಪ್ಪಾಡಿಯಲ್ಲಿ ಮುಳುಗಿದ ಹಡಗು; ಮುನ್ನೆಚ್ಚರಿಕಾ ಕ್ರಮವಾಗಿ ಅಳಿವೆ ಬಾಗಿಲು ಸಮೀಪ ಆಯಿಲ್ ಬೂಮ್ ಅಳವಡಿಕೆ

ವಾರ್ತಾಭಾರತಿವಾರ್ತಾಭಾರತಿ24 Jun 2022 9:36 PM IST
share
ಉಳ್ಳಾಲ ಬಟಪ್ಪಾಡಿಯಲ್ಲಿ ಮುಳುಗಿದ ಹಡಗು; ಮುನ್ನೆಚ್ಚರಿಕಾ ಕ್ರಮವಾಗಿ ಅಳಿವೆ ಬಾಗಿಲು ಸಮೀಪ ಆಯಿಲ್ ಬೂಮ್ ಅಳವಡಿಕೆ

ಮಂಗಳೂರು: ಉಳ್ಳಾಲದ ಬಟಪ್ಪಾಡಿ ಅರಬ್ಬಿ ಸಮುದ್ರದಲ್ಲಿ ಇತ್ತೀಚೆಗೆ ಮುಳುಗಿರುವ ಪ್ರಿನ್ಸೆಸ್ ಮಿರಾಲ್ ಸರಕು ಹಡಗಿನಿಂದ ತೈಲ ಸೋರಿಕೆಯಾಗದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಅಳಿವೆ ಬಾಗಿಲಿನ ಬಳಿ ಆಯಿಲ್ ಬೂಮ್‌ಗಳನ್ನು ಹಾಕಲಾಗಿದೆ ಎಂದು ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಮಾಹಿತಿ ನೀಡಿದ್ದಾರೆ.

ಎಂಆರ್‌ಪಿಎಲ್ ಹಾಗೂ ಕೋಸ್ಟ್‌ಗಾರ್ಡ್‌ಗೆ ತೈಲ ಸೋರಿಕೆ ಹಾಗೂ ಜಲಮಾಲಿನ್ಯ ನಿಯಂತ್ರಣದ ಜವಾಬ್ದಾರಿ ಯನ್ನು ವಹಿಸಲಾಗಿದ್ದು, ಸೂಕ್ತ ರಕ್ಷಣಾ ಸಾಮಗ್ರಿ ಒದಗಿಸುವಂತೆ ಜಿಲ್ಲಾಧಿಕಾರಿ ಸೂಚಿಸಿದ್ದಾರೆ.

ಈ ಮಧ್ಯೆ ಎಂಆರ್‌ಪಿಎಲ್ ಅರಬ್ಬಿ ಸಮುದ್ರದಲ್ಲಿರುವ ಸಿಂಗಲ್ ಪಾಯಿಂಟ್ ಮೂರ್ ತೇಲುಜೆಟ್ಟಿಯ ಉಸ್ತುವಾರಿ ನೋಡಿಕೊಳ್ಳುವ ಟಗ್ ನೌಕೆಯನ್ನೂ ಒದಗಿಸಿದೆ. ಕೋಸ್ಟ್‌ಗಾರ್ಡ್‌ನವರು ಎರಡು ನೌಕೆಗಳನ್ನು ಕೂಡಾ ತೈಲಸೋರಿಕೆ ಮೇಲೆ ನಿಗಾ ಇರಿಸುವುದಕ್ಕೆ ನಿಯೋಜನೆ ಮಾಡಿದೆ.

ಮುಳುಗಿದ ಹಡಗಿನಲ್ಲಿ ೨೨೦ ಮೆಟ್ರಿಕ್ ಟನ್‌ನಷ್ಟು ತೈಲ ಹಾಗೂ ಫರ್ನೆಸ್ ತೈಲವಿದ್ದು ಅದು ಸೋರಿಕೆಯಾಗಿ ಅಳಿವೆ ಬಾಗಿಲಿನಿಂದ ಒಳಕ್ಕೆ ನೇತ್ರಾವತಿ ನದಿ ಕಡೆಗೆ ಬಾರದಂತೆ ಆಯಿಲ್ ಬೂಮ್‌ಗಳನ್ನು ಹಾಕುವ ಕೆಲಸ ಕೈಗೊಳ್ಳಲಾಗಿದೆ. ಅದಲ್ಲದೆ ಮುಳುಗಿರುವ ಹಡಗಿನ ಸುತ್ತಳತೆ ಸುಮಾರು ೧೦೦ ಮೀಟರ್ ಇದ್ದು, ಅದರ ಸುತ್ತಲೂ ಬೂಮ್‌ಗಳನ್ನು ಹಾಕಲಾಗಿದೆ.

ಸಮುದ್ರವು ಪ್ರಕ್ಷುಬ್ದವಾಗಿರುವುದರಿಂದ ನಿರ್ವಹಣೆ ಕೋಸ್ಟ್‌ಗಾರ್ಡ್‌ಗೆ ಸವಾಲಾಗಿ ಪರಿಣಮಿಸಿದೆ ಎಂದು ಹೇಳಲಾಗುತ್ತಿದೆ. ಹಡಗಿನಲ್ಲಿರುವ ಫರ್ನೆಸ್ ಆಯಿಲ್ ಸಮುದ್ರದ ಅಬ್ಬರದಲ್ಲಿ ಸೋರಿಕೆಯಾದರೆ ನಿರ್ವಹಣೆ ಕಷ್ಟವಾಗುವ ಭೀತಿಯೂ ಎದುರಾಗಿದೆ.

ಹಡಗಿನವರು ಈವರಗೆ ಅಧಿಕೃತ ಏಜೆನ್ಸಿಯವನ್ನು ನಿಯೋಜಿಸಿಲ್ಲ. ಹಡಗು ತೀರಾ ಹಳೆಯದಾಗಿದ್ದು ಅದರ ದಾಖಲೆಗಳು, ವಿಮೆ ಇತ್ಯಾದಿ ಬಗ್ಗೆ ಪರಿಶೀಲನೆ ನಡೆಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ತಿಳಿಸಿದ್ದಾರೆ.

ಮುಳುಗಡೆಯಾದ ನೌಕೆಯಿಂದ ರಕ್ಷಿಸಲ್ಪಟ್ಟಿರುವ ೧೫ ಮಂದಿ ಸಿರಿಯನ್ ಪ್ರಜೆಗಳು ನವಮಂಗಳೂರು ಬಂದರು ಪ್ರಾಧಿಕಾರದವರ ಆಶ್ರಯ ಪಡೆದಿದ್ದಾರೆ. ಬೆಂಗಳೂರಿನಲ್ಲಿರುವ ವಿದೇಶಿ ಪ್ರಜೆಗಳ ತಾತ್ಕಾಲಿಕ ಆಶ್ರಿತ ಕೇಂದ್ರ ಸದ್ಯ ಭರ್ತಿಯಾಗಿರುವುದರಿಂದ ಪರ್ಯಾಯ ವ್ಯವಸ್ಥೆ ಬಗ್ಗೆ ಯೋಜಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮುಳುಗಿರುವ ಈ ಹಡಗನ್ನು ಮೇಲೆತ್ತುವ ಸಾಧ್ಯತೆ ಬಗ್ಗೆ ಪರಿಶೀಲಿಸಲು ಮುಂಬೈ ಕಂಪನಿಯೊಂದರ ತಂತ್ರಜ್ಞರು ಶುಕ್ರವಾರ ಮಂಗಳೂರಿಗೆ ಆಗಮಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮುಳುಗಡೆಯಲ್ಲಿರುವ ನೌಕೆಯ ರಂಧ್ರವನ್ನು ಮುಚ್ಚುವ ಕುರಿತಂತೆ ತಜ್ಞರ ತಂಡ ಆಗಮಿಸಿ ವೀಕ್ಷಿಸಿದೆ. ಆದರೆ ಈಗ ಸಮುದ್ರ ಪ್ರಕ್ಷುಬ್ಧ ಇರುವುದರಿಂದ ಹಡಗಿನ ಬಳಿಗೆ ತೆರಳಲು ಸಾಧ್ಯವಾಗುತ್ತಿಲ್ಲ. ತಂತ್ರಜ್ಞರ ತಂಡ ಮಂಗಳೂರಿನಲ್ಲೇ ಬೀಡು ಬಿಟ್ಟಿದ್ದು. ಹಡಗಿನ ಸಮೀಪ ತೆರಳಲು ಪ್ರಯತ್ನ ಮುಂದುವರಿಸಲಿದೆ ಎಂದು ತಿಳಿದುಬಂದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X