Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಚರಿತ್ರೆಯಿಂದ ಪಾಠ ಕಲಿಯದಿದ್ದರೆ ಒಳ್ಳೆಯ...

ಚರಿತ್ರೆಯಿಂದ ಪಾಠ ಕಲಿಯದಿದ್ದರೆ ಒಳ್ಳೆಯ ಭವಿಷ್ಯ ಕಟ್ಟಲು ಸಾಧ್ಯವಿಲ್ಲ: ಡಾ.ರಹಮತ್ ತರೀಕೆರೆ

ವಾರ್ತಾಭಾರತಿವಾರ್ತಾಭಾರತಿ24 Jun 2022 10:06 PM IST
share
ಚರಿತ್ರೆಯಿಂದ ಪಾಠ ಕಲಿಯದಿದ್ದರೆ ಒಳ್ಳೆಯ ಭವಿಷ್ಯ ಕಟ್ಟಲು ಸಾಧ್ಯವಿಲ್ಲ: ಡಾ.ರಹಮತ್ ತರೀಕೆರೆ

ಮೈಸೂರು,ಜೂ.24:  ವರ್ತಮಾನದ ನಾಗರಿಕ ಸಮಾಜ ಭೂತಕಾಲದ ಕೇಡುಗಳನ್ನು ಧ್ಯಾನಿಸುತ್ತಿದ್ದರೆ ಒಳ್ಳೇಯ ಭವಿಷ್ಯ ಕಟ್ಟಲು ಸಾಧ್ಯವಿಲ್ಲ ಎಂದು ಹಿರಿಯ ಸಾಹಿತಿ ಡಾ.ರಹಮತ್ ತರೀಕೆರೆ ಅಭಿಪ್ರಾಯಪಟ್ಟರು.  

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಪ್ರಸಾರಾಂಗ ವತಿಯಿಂದ ಕಾವೇರಿ ಸಭಾಂಗಣದಲ್ಲಿ ಶುಕ್ರವಾರ ಏರ್ಪಡಿಸಿದ್ದ ಪ್ರಚಾರೋಪನ್ಯಾಸ ಮಾಲೆ ಉದ್ಘಾಟಿಸಿ, ಕುವೆಂಪು ಚಿಂತನೆಗಳಲ್ಲಿ ನಾಗರಿಕ ಸಮಾಜದ ಪರಿಕಲ್ಪನೆ ವಿಚಾರ ಕುರಿತು ಮಾತನಾಡಿದರು. 

ಭೂತಕಾಲವನ್ನು ಹೇಗೆ ನೋಡಬೇಕು. ಭವಿಷ್ಯವನ್ನು ಹೇಗೆ ಅರ್ಥ ಮಾಡಿಕೊಳ್ಳಬೇಕು ತಿಳಿದಿರಬೇಕು. ಹಾಗೇ ಭೂತಕಾಲದ ಒಳಿತು-ಕೇಡುಕಗಳಲ್ಲಿ ಒಳಿತನ್ನು ಸ್ವೀಕರಿಸಬೇಕು. ಚರಿತ್ರೆಯಿಂದ ಪಾಠ ಕಲಿಯದಿದ್ದರೆ ಒಳ್ಳೇಯ ಭವಿಷ್ಯ ಕಟ್ಟುವುದು ಸಾಧ್ಯವಿಲ್ಲ ಎಂಬ ಎಚ್ಚರವಿರಬೇಕು ಎಂದರು. 

ವಿಚಾರಕ್ರಾಂತಿಗೆ ಆಹ್ವಾನಕೊಟ್ಟ ಕುವೆಂಪು ನಾಡಿನಲ್ಲಿ ಇಂದು ವಿಚಾರ ಮಾಡೋದು ಅಪರಾಧ ಎನ್ನುವಂತಾಗಿದೆ. ವಿಚಾರವಂತರನ್ನು ಕೊಲ್ಲುವ, ಜೈಲಿನಲ್ಲಿರಿಸುವ ಸ್ಥಿತಿ ಇದೆ. ಮುಕ್ತತೆಗೆ ನಿರಂಕುಶ ಮತಿಗಳಾಗಲು ಅವಕಾಶ ಇದೆಯೇ? ಪ್ರಶ್ನಿಸಿಕೊಳ್ಳಬೇಕಾಗಿದೆ ಎಂದರು. 
ಕುವೆಂಪು ಕವಿ, ಲೇಖಕ ಮಾತ್ರವಲ್ಲ. ಸಾಂಸ್ಕೃತಿಕ ನಾಯಕ. ಹಾಗಾಗಿಯೇ ನಮಗೆಲ್ಲ ನೋವಾದಂತೆ ಮತ್ತೆ ಮತ್ತೆ ನೆನಪಾಗುತ್ತಾರೆ. ಬಿಸಿಲಿನಲ್ಲಿ ನಿಂತವರಿಗೆ ಮರದಂತೆ ನೆರಳು ನೀಡುತ್ತಾರೆ. ಕೈಗನ್ನಡಿಯಾಗಿ ನಮ್ಮೆದುರು ನಿಲ್ಲುತ್ತಾರೆ. ಅವರೊಂದಿಗೆ ಎಲ್ಲರೂ ಅನುಸಂಧಾನ ಮಾಡಬೇಕಾಗಿದೆ ಎಂದು ವಿವರಿಸಿದರು. 

ಕುವೆಂಪು ಅವರ 70 ವರ್ಷಗಳ ಸಾಹಿತ್ಯದ ಬದುಕಿನಲ್ಲಿ ನಾಗರಿಕ ಸಮಾಜ ಹೇಗಿರಬೇಕು ಎಂಬುದಕ್ಕೆ ಉತ್ತರವಿದೆ. ಮತದಿಂದ ಹೊರ ಬರಬೇಕು. ರಾಜಕೀಯ ಪ್ರಜ್ಞೆ, ಪ್ರಭುತ್ವದ ಪ್ರಶ್ನೆ, ಪರಂಪರೆಯ ಪ್ರಜ್ಞೆ, ಭಾಷೆಯ ಪ್ರೇಮ, ವಿಶ್ವಮಾನವ ಪ್ರಜ್ಞೆಗಳು ಕುವೆಂಪು ಅವರ ಕನಸಿನ ನಾಗರಿಕ ಸಮಾಜದ ಪರಿಕಲ್ಪನೆ ಎಂದು ಬಣ್ಣಿಸಿದರು. 

ಎರಡು ಪರಂಪರೆಯ ಲೇಖಕರು ಇರುತ್ತಾರೆ. ಸೌಂದರ್ಯವನ್ನು ವರ್ಣಿಸುವವರು. ಮತ್ತೊಂದು ವರ್ಗ ವ್ಯವಸ್ಥೆಯನ್ನು ಪ್ರಶ್ನಿಸಿ ಸಾರ್ವಜನಿಕ ಅಪಾದನೆ, ಸಾರ್ವಜನಿಕ ಆಕ್ರೋಶ ಎದುರಿಸುತ್ತಾರೆ. ಎರಡನೇ ಸ್ಥಾನದಲ್ಲಿ ನಿಲ್ಲುವವರು ಕವಿ ಕುವೆಂಪು ಮತ್ತು ಬಸವಣ್ಣ ಎಂದರು. 
ಕೆಟ್ಟ ವ್ಯವಸ್ಥೆ ವಿರುದ್ಧ ಬಂಡೆದ್ದ ಲೇಖಕರೆಲ್ಲರೂ ಪರ್ಯಾಯ ಸಮಾಜದ ಪರಿಕಲ್ಪನೆ ಕೊಟ್ಟಿದ್ದಾರೆ. ಇರುವುದಕ್ಕಿಂತ ಜಗತನ್ನು ಸುಂದರವಾಗಿಸಲು ಪ್ರಯತ್ನಿಸಿದ್ದಾರೆ. ಬಸವಣ್ಣ, ಅಂಬೇಡ್ಕರ್, ಕುವೆಂಪು, ಟ್ಯಾಗೋರ್ ಪರ್ಯಾಯ ಸಮಾಜದ ಪರಿಕಲ್ಪನೆ ಕೊಟ್ಟ ಮಹನೀಯರಾಗಿದ್ದಾರೆ ಎಂದು ನುಡಿದರು. 

ಸಂವಿಧಾನದ ಪ್ರಸ್ತಾವನೆ ಬರುವ ಮುನ್ನವೇ ನಮ್ಮಲ್ಲಿ ಸಾಂಸ್ಕøತಿಕ ಪ್ರಾಸ್ತಾವನೆ ಇತ್ತು. ಅದನ್ನು ಪಂಪ, ಬಸವಣ್ಣ, ಕುವೆಂಪು ಕೊಟ್ಟಿದ್ದರು. 1924ರಲ್ಲಿ ಬರೆದ ನಾಡಗೀತೆಯಲ್ಲಿ ಹಿಂದೂ-ಮುಸ್ಲಿಂ-ಕ್ರೈಸ್ತ ಎಂಬ ಸಾಲನ್ನು ಈಗ ಹೆಚ್ಚು ನೆನಪಿಸಿಕೊಳ್ಳಲಾಗಿದೆ. ಸರ್ವ ಜನಾಂಗದ ಶಾಂತಿಯ ತೋಟದ ಚರ್ಚೆ ಮುನ್ನೆಲೆಗೆ ಬಂದಿದೆ ಎಂದರು. 

ಕುಲಪತಿ ಪ್ರೊ.ಎಸ್.ವಿದ್ಯಾಶಂಕರ್ ಅಧ್ಯಕ್ಷತೆ ವಹಿಸಿದ್ದರು. ಕುಲಸಚಿವ ಪ್ರೊ.ಆರ್.ರಾಜಣ್ಣ, ಪ್ರಸಾರಾಂಗ ಸಂಯೋಜನಾಧಿಕಾರಿ ಡಾ.ಆರ್.ಸಂತೋಷ್ ನಾಯಕರ್ ಹಾಜರಿದ್ದರು.  

ಸಾವಿರ ವರ್ಷದ ನಮ್ಮ ಪರಂಪರೆಯಲ್ಲಿ ವಿಭೂತಿ ಪುರುಷರು ವಿಭೂತಿ ಮಹಿಳೆಯರು ಬಂದು ಹೋಗಿದ್ದಾರೆ. ಇವರ ಪೈಕಿ ಬಸವಣ್ಣ ಮತ್ತು ಕುವೆಂಪು ಮತ್ತೆ ಮತ್ತೆ ಕಾಡುತ್ತಾರೆ. ನೆನಪಿಸೋದು ಇವರಿಬ್ಬರನ್ನು. ಹಾಗಾಗಿಯೇ ಇವರಿಬ್ಬರು ಕರ್ನಾಟಕದ ವಿವೇಕದ ಎರಡು ಕಣ್ಣುಗಳು. 

-ಡಾ.ರಹಮತ್ ತರೀಕೆರೆ, ವಿದ್ವಾಂಸ .

share
ವಾರ್ತಾಭಾರತಿ
ವಾರ್ತಾಭಾರತಿ
Next Story
X