Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬೆಂಗಳೂರು: ವಿಶೇಷ ಚೇತನರ ಸ್ನೇಹಿ...

ಬೆಂಗಳೂರು: ವಿಶೇಷ ಚೇತನರ ಸ್ನೇಹಿ ಉದ್ಯಾನವನ ಉದ್ಘಾಟಿಸಿದ ರಾಜ್ಯಪಾಲರು

ವಾರ್ತಾಭಾರತಿವಾರ್ತಾಭಾರತಿ25 Jun 2022 1:48 PM IST
share
ಬೆಂಗಳೂರು: ವಿಶೇಷ ಚೇತನರ ಸ್ನೇಹಿ ಉದ್ಯಾನವನ ಉದ್ಘಾಟಿಸಿದ ರಾಜ್ಯಪಾಲರು

ಬೆಂಗಳೂರು : ಮೈಂಡ್‌ಟ್ರೀ ಮತ್ತು ಬಾಲಭವನ ಸೊಸೈಟಿ ವತಿಯಿಂದ ನಗರದ ಕಬ್ಬನ್ ಪಾರ್ಕ್ ನ ಬಾಲಭವನದ ಆವರಣದಲ್ಲಿ ನಿರ್ಮಿಸಲಾಗಿರುವ ವಿಕಲಾಂಗ ಮಕ್ಕಳಿಗಾಗಿ ಕರ್ನಾಟಕ ರಾಜ್ಯದ ಮೊದಲ ವಿಶೇಷ ಚೇತನರ ಸ್ನೇಹಿ ಉದ್ಯಾನವನ್ನು ಕರ್ನಾಟಕದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಶನಿವಾರ ಉದ್ಘಾಟಿಸಿದರು.

ಬಾಲ ಭವನ ಮತ್ತು ಸ್ಮಾರ್ಟ್ ಸಿಟಿ ಸಹಯೋಗದಲ್ಲಿ ಮೈಂಡ್‌ಟ್ರೀ ಸಂಸ್ಥೆ ವಿಕಲಚೇತನರಿಗೆ ಸುರಕ್ಷಿತ, ಅಂತರ್ಗತ ಮತ್ತು ಭೌತಚಿಕಿತ್ಸೆಯ ಸ್ಥಳವನ್ನು ಒದಗಿಸಲು ಅನನ್ಯವಾಗಿ ವಿನ್ಯಾಸಗೊಳಿಸಿದ ಉದ್ಯಾನವನವನ್ನು ರಚಿಸಿದೆ, ಈ ನೂತನ ಉದ್ಯಾನವನದಲ್ಲಿ ವಿಶೇಷ ಚೇತನ ಮಕ್ಕಳು ಯಾವುದೇ ಅಡೆತಡೆಯಿಲ್ಲದೆ ಆಟವಾಡಲು ಸಾಧ್ಯವಾಗುತ್ತದೆ. ವಿಶೇಷ ಅಗತ್ಯವುಳ್ಳ ಲಕ್ಷಾಂತರ ಮಕ್ಕಳು ಈ ಉದ್ಯಾನವನದಿಂದ ಪ್ರಯೋಜನ ಪಡೆಯುತ್ತಾರೆ ಎಂದು ಹೇಳಿದರು.

ವಿಶೇಷ ಚೇತನರ ಸಬಲೀಕರಣಕ್ಕಾಗಿ ಸಂಸ್ಥೆಯಿಂದ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ. ಸಿಎಸ್‌ಆರ್ ಅಂಗವಾಗಿರುವ ಮೈಂಡ್‌ಟ್ರೀ ಫೌಂಡೇಶನ್, ಹಿಂದುಳಿದ ಮಕ್ಕಳಿಗೆ ಶಿಕ್ಷಣ ಮತ್ತು ಆರೋಗ್ಯ ಸೇವೆಗಳನ್ನು ಉತ್ತೇಜಿಸುವ ಗುರಿಯನ್ನು ಹೊಂದಿದೆ, ಅವರಿಗೆ ಉದ್ಯೋಗ ಮತ್ತು ಉದ್ಯಮಶೀಲತೆಯ ಅವಕಾಶಗಳಿಗೆ ಅಗತ್ಯವಾದ ಕೌಶಲ್ಯಗಳನ್ನು ಒದಗಿಸುತ್ತಿರುವುುದು ಶ್ಲಾಘನೀಯ ಎಂದರು.

ದಿವ್ಯಾಂಗಜನರು ಮಾನವ ಸಂಪನ್ಮೂಲದ ಅವಿಭಾಜ್ಯ ಅಂಗವಾಗಿದ್ದು, ಅವರನ್ನು ಸಮಾಜದ ಮುಖ್ಯ ವಾಹಿನಿಯೊಂದಿಗೆ ಸಂಪರ್ಕಿಸುವ ಮೂಲಕ ದೇಶದ ಅಭಿವೃದ್ಧಿಯಲ್ಲಿ ಪಾಲುದಾರರನ್ನಾಗಿ ಮಾಡುವುದು ನಮ್ಮ ಗುರಿಯಾಗಿದೆ. ಭಾರತ ಸರ್ಕಾರದ ವಿಶೇಷ ಚೇತನರ ವ್ಯಕ್ತಿಗಳ ಸಬಲೀಕರಣ ಇಲಾಖೆಯ ಎಡಿಐಪಿ ಯೋಜನೆಯಡಿ ದೃಷ್ಟಿ ವಿಕಲಚೇತನರಿಗೆ ಸ್ಮಾರ್ಟ್ ಫೋನ್, ಡಿಜಿಪ್ಲೇಯರ್ ಮತ್ತು ವಾಕಿಂಗ್ ಸ್ಟಿಕ್ ಮತ್ತು ಸ್ಮಾರ್ಟ್ ಕೇನ್ ಇತ್ಯಾದಿಗಳನ್ನು ನೀಡಲಾಗುತ್ತಿದೆ. ಶ್ರವಣದೋಷವುಳ್ಳ ಮಕ್ಕಳಿಗೆ ಕಾಕ್ಲಿಯರ್ ಇಂಪ್ಲಾಂಟ್ ಯೋಜನೆಯಡಿ 6 ಲಕ್ಷದವರೆಗೆ ಶಸ್ತ್ರಚಿಕಿತ್ಸೆಗೆ ಅವಕಾಶವಿದೆ.

ವಿಶೇಷಚೇತನರು ಕ್ರೀಡಾ ಚಟುವಟಿಕೆಗಳನ್ನು ಕೈಗೊಳ್ಳಲು ಪ್ರೋತ್ಸಾಹಿಸಲು ವಿಶೇಷ ಚೇತನರ ಕ್ರೀಡಾ ಕೇಂದ್ರಗಳನ್ನು ಸ್ಥಾಪಿಸಲಾಗುತ್ತಿದೆ. ಮಾನಸಿಕ ಆರೋಗ್ಯ ಪುನರ್ವಸತಿ ಕೇಂದ್ರವನ್ನು ಸ್ಥಾಪಿಸಲಾಗಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರವು ಅನೇಕ ಯೋಜನೆಗಳ ಮೂಲಕ ವಿಶೇಷ ಚೇತನರ ಸಬಲೀಕರಣವನ್ನು ಮಾಡುತ್ತಿದೆ. ಈ ಸೌಲಭ್ಯಗಳು ಅವರಿಗೆ ತಲುಪಿಸುವ ನಿಟ್ಟಿನಲ್ಲಿ ನಾವೆಲ್ಲರೂ ಕಾರ್ಯನಿರ್ವಹಿಸಬೇಕು ಎಂದು ಕರೆ ನೀಡಿದರು.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವರಾದ ಹಾಲಪ್ಪ ಆಚಾರ್, ಬಾಲಭವನ ಸೊಸೈಟಿ ಅಧ್ಯಕ್ಷರಾದ ಚಿಕ್ಕಮ್ಮ ಬಸವರಾಜ್,   ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕಾರ್ಯದರ್ಶಿ .ಎಂ.ಟಿ.ರೇಜು, ಹಾಗೂ ಇಲಾಖೆಯ ನಿರ್ದೇಶಕರಾದ ಪ್ರಿಯಾಂಕಾ ಮೇರಿ ಫ್ರಾನ್ಸಿಸ್,  ಮೈಂಡ್ ಟ್ರೀ ಸಂಸ್ಥೆಯ ಸಿಇಓ ದೇಬಾಶಿಸ್ ಚಟರ್ಜಿ ಮುಂತಾದ ಗಣ್ಯರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X