Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಇಸ್ರೇಲ್ ಯೋಧರು ಸಿಡಿಸಿದ ಬುಲೆಟ್‌ ನಿಂದ...

ಇಸ್ರೇಲ್ ಯೋಧರು ಸಿಡಿಸಿದ ಬುಲೆಟ್‌ ನಿಂದ ಪತ್ರಕರ್ತೆ ಶಿರೀನ್ ಮೃತ್ಯು: ವಿಶ್ವಸಂಸ್ಥೆ ತನಿಖಾ ವರದಿ

ವಾರ್ತಾಭಾರತಿವಾರ್ತಾಭಾರತಿ25 Jun 2022 8:56 PM IST
share
ಇಸ್ರೇಲ್ ಯೋಧರು ಸಿಡಿಸಿದ ಬುಲೆಟ್‌ ನಿಂದ ಪತ್ರಕರ್ತೆ ಶಿರೀನ್ ಮೃತ್ಯು: ವಿಶ್ವಸಂಸ್ಥೆ ತನಿಖಾ ವರದಿ

ಜಿನೆವಾ, ಜೂ.25: ಇಸ್ರೇಲ್ ಯೋಧರು ಪ್ರಯೋಗಿಸಿದ ಬುಲೆಟ್ನಿಂದ ಅಲ್ಜಝೀರಾದ ಪತ್ರಕರ್ತೆ ಶಿರೀನ್ ಹತರಾಗಿದ್ದಾರೆ ಎಂದು ವಿಶ್ವಸಂಸ್ಥೆ ಹೇಳಿರುವುದಾಗಿ ಖತರ್ ನ ಸರಕಾರಿ ಸ್ವಾಮ್ಯದ ಟಿವಿ ವಾಹಿನಿ ಶುಕ್ರವಾರ ವರದಿ ಮಾಡಿದೆ.

ನಾವು ಸಂಗ್ರಹಿಸಿರುವ ಎಲ್ಲಾ ಮಾಹಿತಿಗಳೂ , ಪತ್ರಕರ್ತೆ ಶಿರೀನ್ ರ ಹತ್ಯೆ ಮತ್ತು ಅವರ ಸಹೋದ್ಯೋಗಿಯನ್ನು ಗಾಯಗೊಳಿಸಲು ಕಾರಣವಾದ ಗುಂಡುಗಳು ಇಸ್ರೇಲ್ ಭದ್ರತಾ ಪಡೆಗಳಿಂದ ಬಂದವು ಮತ್ತು ಸಶಸ್ತ್ರ ಪೆಲೆಸ್ತೀನ್ ಸಂಘಟನೆಗಳ ವಿವೇಚನೆಯಿಲ್ಲದ ಗುಂಡಿನ ದಾಳಿಯಿಂದ ಅಲ್ಲ ಎಂಬುದಕ್ಕೆ ಪೂರಕವಾಗಿವೆ ಎಂದು ವಿಶ್ವಸಂಸ್ಥೆಯ ಮಾನವಹಕ್ಕು ವಿಭಾಗದ ವಕ್ತಾರೆ ರವೀನಾ ಶಾಮ್ದಾಸಾನಿ ಜಿನೆವಾದಲ್ಲಿ ಹೇಳಿದ್ದಾರೆ.

ತಾವು ಮಾಧ್ಯಮದ ಸದಸ್ಯರು ಎಂದು ಇಸ್ರೇಲ್ ಯೋಧರಿಗೆ ಮನವರಿಕೆ ಮಾಡಲು ಶಿರೀನ್ ಪ್ರಯತ್ನ ಪಟ್ಟಿರುವುದು ತಮ್ಮ ಸಂಸ್ಥೆಯು ನಡೆಸಿದ ತನಿಖೆಯಲ್ಲಿ ಕಂಡುಬಂದಿದೆ. ಶಿಬಿರದೊಳಗಿರುವ ಶಸ್ತ್ರಸಜ್ಜಿತ ಪೆಲೆಸ್ತೀನೀಯರ ಪ್ರದೇಶದಿಂದ ದೂರವಿರಲು ಬದಿಯಲ್ಲಿದ್ದ ರಸ್ತೆಯನ್ನು ಶಿರೀನ್ ಮತ್ತಾಕೆಯ ಜತೆಗಿದ್ದ ಪತ್ರಕರ್ತರು ಆಯ್ಕೆ ಮಾಡಿಕೊಂಡರು ಮತ್ತು ಬೀದಿಯಲ್ಲಿ ನಿಯೋಜಿಸಲಾದ ಇಸ್ರೇಲಿ ಪಡೆಗಳಿಗೆ ತಮ್ಮ ಉಪಸ್ಥಿತಿಯನ್ನು ಗೋಚರಿಸುವಂತೆ ಅವರು ನಿಧಾನವಾಗಿ ಮುಂದುವರಿದರು. ಆ ಸಮಯದಲ್ಲಿ ಮತ್ತು ಆ ಸ್ಥಳದಲ್ಲಿ ಯಾವುದೇ ಎಚ್ಚರಿಕೆ ನೀಡಲಾಗಿಲ್ಲ ಅಥವಾ ಗುಂಡಿನ ದಾಳಿ ನಡೆದಿಲ್ಲ. ಇಸ್ರೇಲಿ ಪಡೆಗಳ ದಿಕ್ಕಿನಿಂದ ಪತ್ರಕರ್ತರ ಕಡೆಗೆ ಗುಂಡು ಹಾರಿಸಲಾಗಿದೆ. ಗುಂಡೇಟಿನಿಂದ ಕೆಳಗೆ ಬಿದ್ದ ಶಿರೀನ್ರ ನೆರವಿಗೆ ಧಾವಿಸಿದ ನಿರಾಯುಧ ವ್ಯಕ್ತಿಯ ಮೇಲೂ ಗುಂಡು ಹಾರಿಸಿರುವುದು ತನಿಖೆಯಿಂದ ತಿಳಿದುಬಂದಿದೆ ಎಂದು ರವೀನಾ ಶಾಮ್ದಾಸಾನಿ ಹೇಳಿದ್ದಾರೆ.

ಈ ವರದಿಗೆ ಪ್ರತಿಕ್ರಿಯಿಸಿರುವ ಇಸ್ರೇಲ್ ರಕ್ಷಣಾ ಪಡೆ, ತನ್ನ ಯೋಧರು ಉದ್ದೇಶಪೂರ್ವಕವಾಗಿ ಶಿರೀನ್ ಮೇಲೆ ಗುಂಡು ಹಾರಿಸಿಲ್ಲ ಎಂಬುದು ತಾನು ನಡೆಸಿದ ತನಿಖೆಯಿಂದ ತಿಳಿದುಬಂದಿದೆ. ಶಿರೀನ್ ಹತ್ಯೆಗೆ ಪೆಲೆಸ್ತೀನ್ ಬಂದೂಕುಧಾರಿಯ ವಿವೇಚನಾರಹಿತ ಗುಂಡಿನ ದಾಳಿ ಕಾರಣವೇ ಅಥವಾ ಇಸ್ರೇಲ್ ಯೋಧರು ಸರಿಯಾಗಿ ಗಮನಿಸದೆ ನಡೆಸಿದ ಗುಂಡಿನ ದಾಳಿ ಕಾರಣವೇ ಎಂಬುದನ್ನು ನಿರ್ಧರಿಸಲು ಸಾಧ್ಯವಿಲ್ಲ ಎಂದಿದೆ.

ಪೆಲೆಸ್ತೀನ್ ಸಂಘಟನೆಯ ಸದಸ್ಯರ ಗುಂಡೇಟಿಗೆ ಶಿರಿನ್ ಬಲಿಯಾಗಿರುವ ಸಾಧ್ಯತೆಯಿದೆ ಎಂದು ಇಸ್ರೇಲ್ ಪ್ರಧಾನಿ ಸಹಿತ ಪ್ರಮುಖ ಮುಖಂಡರು ಆರಂಭದಲ್ಲಿ ಪ್ರತಿಪಾದಿಸಿದ್ದರು. ಆದರೆ ಬಳಿಕ ಹೇಳಿಕೆ ಬದಲಿಸಿದ ಇಸ್ರೇಲ್, ಇಸ್ರೇಲ್ ಯೋಧ ಗುಂಡು ಹಾರಿಸಿರುವ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ ಎಂದಿತ್ತು. ಹತ್ಯೆ ಪ್ರಕರಣದ ತನಿಖೆ ನಡೆಯುತ್ತಿದೆ ಎಂದು ಇಸ್ರೇಲ್ ಹೇಳಿಕೆ ನೀಡಿದ್ದರೂ ತನಿಖೆಯ ವರದಿಯನ್ನು ಇದುವರೆಗೆ ಬಿಡುಗಡೆಗೊಳಿಸಿಲ್ಲ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X