Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಭಯೋತ್ಪಾದಕರ ಗುರುತಿಸುವಿಕೆಯಲ್ಲಿ ರಾಜಕೀಯ...

ಭಯೋತ್ಪಾದಕರ ಗುರುತಿಸುವಿಕೆಯಲ್ಲಿ ರಾಜಕೀಯ ಸಲ್ಲದು: ನರೇಂದ್ರ ಮೋದಿ

ವಾರ್ತಾಭಾರತಿವಾರ್ತಾಭಾರತಿ25 Jun 2022 9:05 PM IST
share
ಭಯೋತ್ಪಾದಕರ ಗುರುತಿಸುವಿಕೆಯಲ್ಲಿ ರಾಜಕೀಯ ಸಲ್ಲದು: ನರೇಂದ್ರ ಮೋದಿ

ಹೊಸದಿಲ್ಲಿ, ಜೂ.25: ಭಯೋತ್ಪಾದಕರ ಗುರುತಿಸುವಿಕೆಯನ್ನು ರಾಜಕೀಯಗೊಳಿಸಬಾರದು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಈ ಮೂಲಕ ಲಷ್ಕರೆ ತೈಯಬ ಸಂಘಟನೆಯ ಉಗ್ರಗಾಮಿಗಳನ್ನು ವಿಶ್ವಸಂಸ್ಥೆ ಭದ್ರತಾ ಸಮಿತಿ ನೇತೃತ್ವದಲ್ಲಿ ನಿರ್ಬಂಧಿತರ ಪಟ್ಟಿಗೆ ಸೇರಿಸುವ ಪ್ರಯತ್ನಕ್ಕೆ ಚೀನಾದ ಆಕ್ಷೇಪವನ್ನು ಪರೋಕ್ಷವಾಗಿ ಉಲ್ಲೇಖಿಸಿದರು ಎಂದು ಮಾಧ್ಯಮಗಳು ವರದಿ ಮಾಡಿದೆ.

ವರ್ಚುವಲ್ ವೇದಿಕೆಯಲ್ಲಿ ನಡೆದ ಬ್ರಿಕ್ಸ್ ಶೃಂಗಸಭೆಯಲ್ಲಿ ಮಾತನಾಡಿದ ಮೋದಿ, ಬ್ರಿಕ್ಸ್ ಸದಸ್ಯರಾಗಿ ನಾವು ಪರಸ್ಪರರ ಭದ್ರತಾ ಕಾಳಜಿಗಳನ್ನು ಅರ್ಥಮಾಡಿಕೊಳ್ಳಬೇಕು ಮತ್ತು ಭಯೋತ್ಪಾದಕರನ್ನು ಗುರುತಿಸುವ ಪ್ರಕ್ರಿಯೆಗೆ ಪರಸ್ಪರ ಬೆಂಬಲ ನೀಡಬೇಕು. ಈ ಸೂಕ್ಷ್ಮ ವಿಷಯವನ್ನು ರಾಜಕೀಯಗೊಳಿಸಬಾರದು ಎಂದರು. ಪಾಕಿಸ್ತಾನ ಮೂಲದ ಉಗ್ರಗಾಮಿ ಅಬ್ದುಲ್ ರೆಹ್ಮಾನ್ ಮಕ್ಕಿಯನ್ನು ಜಾಗತಿಕ ಉಗ್ರರ ಪಟ್ಟಿಗೆ ಸೇರಿಸುವ ವಿಶ್ವಸಂಸ್ಥೆ ಭದ್ರತಾ ಸಮಿತಿಯ ಉಪಕ್ರಮಗಳಿಗೆ ಚೀನಾವು ಅಂತಿಮ ಕ್ಷಣದಲ್ಲಿ ತಡೆನೀಡಿತ್ತು. ಇದು ಅತ್ಯಂತ ದುರದೃಷ್ಟಕರ ಮತ್ತು ಎರಡು ಮಾನದಂಡದ ಧೋರಣೆಯಾಗಿದೆ ಎಂದು ವ್ಯಾಪಕ ಟೀಕೆ ವ್ಯಕ್ತವಾಗಿತ್ತು. ಚೀನಾದ ಅಧ್ಯಕ್ಷತೆಯಲ್ಲಿ ನಡೆದ 2 ದಿನಗಳ ಬ್ರಿಕ್ಸ್ ಶೃಂಗಸಭೆ ಶುಕ್ರವಾರ ಸಮಾರೋಪಗೊಂಡಿದೆ.

ಅಂತಿಮ ದಿನದಂದು ಹೊರಡಿಸಲಾದ ಜಂಟಿ ಹೇಳಿಕೆಯಲ್ಲೂ ವಿಶ್ವಸಂಸ್ಥೆ ಭದ್ರತಾ ಸಮಿತಿಯ ನಿರ್ಬಂಧ ಸಮಿತಿಯ ಕಾರ್ಯಗಳನ್ನು ರಾಜಕೀಯಗೊಳಿಸುವುದನ್ನು ತಪ್ಪಿಸುವ ಅಗತ್ಯದ ಬಗ್ಗೆ ಉಲ್ಲೇಖಿಸಲಾಗಿದೆ. ‘ಭಯೋತ್ಪಾದನಾ ನಿಗ್ರಹ ಸಹಕಾರವನ್ನು ಮತ್ತಷ್ಟು ಆಳಗೊಳಿಸುವುದನ್ನು ನಾವು ಎದುರು ನೋಡುತ್ತಿದ್ದೇವೆ ಮತ್ತು ನಿರ್ಬಂಧನೆ ವಿಧಿಸುವ ವಿಷಯದಲ್ಲಿ ವಿಶ್ವಸಂಸ್ಥೆ ಭದ್ರತಾ ಮಂಡಳಿಯ ಏಕೈಕ ಅಧಿಕಾರವನ್ನು ಪುನರುಚ್ಚರಿಸುತ್ತೇವೆ. ಪರಿಣಾಮಕಾರಿತ್ವ, ಸ್ಪಂದಿಸುವಿಕೆ ಮತ್ತು ಪಾರದರ್ಶಕತೆಯನ್ನು ಖಚಿತಪಡಿಸಿಕೊಳ್ಳುವ ನಿಟ್ಟಿನಲ್ಲಿ ವಿಶ್ವಸಂಸ್ಥೆ ಭದ್ರತಾ ಮಂಡಳಿಯ ನಿರ್ಬಂಧಗಳ ಸಮಿತಿಯ ಕಾರ್ಯ ವಿಧಾನಗಳನ್ನು ಮತ್ತಷ್ಟು ಬಲಪಡಿಸಲು , ಸಾಕ್ಷ್ಯಾಧಾರಿತ ಮಾನದಂಡಗಳ ಮೇಲೆ ವಸ್ತುನಿಷ್ಟವಾಗಿ ಪ್ರಸ್ತಾವನೆಗಳನ್ನು ಪಟ್ಟಿಮಾಡುವುದು ಸೇರಿದಂತೆ ಯಾವುದೇ ಪ್ರಕ್ರಿಯೆಗಳನ್ನು ರಾಜಕೀಯಗೊಳಿಸುವುದನ್ನು ತಪ್ಪಿಸಬೇಕೆಂದು ಕರೆ ನೀಡುತ್ತೇವೆ’ ಎಂದು ಹೇಳಿಕೆ ತಿಳಿಸಿದೆ. ಈ ಹಿಂದೆ, ಎಲ್ಇಟಿ ಮುಖ್ಯಸ್ಥ ಮಸೂದ್ ಅಝರ್ನನ್ನು ಜಾಗತಿಕ ಉಗ್ರರ ಪಟ್ಟಿಗೆ ಸೇರಿಸುವ ವಿಶ್ವಸಂಸ್ಥೆ ಭದ್ರತಾ ಸಮಿತಿ ನಿರ್ಣಯಕ್ಕೂ ಚೀನಾ ಆಕ್ಷೇಪ ಸಲ್ಲಿಸಿ ತಡೆಯೊಡ್ಡಿತ್ತು. ಆದರೆ 2019ರ ಮೇ ತಿಂಗಳಿನಲ್ಲಿ ಆಕ್ಷೇಪಣೆ ಹಿಂಪಡೆದ ಕಾರಣ ಅಝರ್ ಮೇಲೆ ನಿರ್ಬಂಧ ಜಾರಿಯಾಗಿದ್ದು ಪ್ರಯಾಣದ ಮೇಲೆ ನಿಷೇಧ, ಶಸ್ತ್ರಾಸ್ತ್ರ ನಿರ್ಬಂಧ, ಆಸ್ತಿಯ ಮುಟ್ಟುಗೋಲು ಮುಂತಾದ ಕ್ರಮ ಕೈಗೊಳ್ಳಲು ಸಾಧ್ಯವಾಗಿದೆ.

ಶುಕ್ರವಾರ ಬ್ರಿಕ್ಸ್ ಮುಖಂಡರು ಜಾಗತಿಕ ಬೆಳವಣಿಗೆಯ ವಿಷಯದಲ್ಲಿ 13 ಅತಿಥಿ ದೇಶಗಳೊಂದಿಗೆ ಸಂವಾದ ನಡೆಸಿದರು. ಮುಕ್ತ, ನಿರ್ಬಂಧರಹಿತ, ಅಂತರ್ಗತ ಮತ್ತು ನಿಯಮ ಆಧಾರಿತ ಸಮುದ್ರವ್ಯಾಪ್ತಿಯ ಬಗ್ಗೆ, ಮತ್ತು ಹಿಂದೂ ಮಹಾಸಾಗರ ಪ್ರದೇಶದಿಂದ ಪೆಸಿಫಿಕ್ ಸಾಗರದವರೆಗೆ ಎಲ್ಲಾ ರಾಷ್ಟ್ರಗಳ ಸಾರ್ವಭೌಮತ್ವ ಮತ್ತು ಪ್ರಾದೇಶಿಕ ಸಮಗ್ರತೆಯನ್ನು ಗೌರವಿಸುವ ಭಾರತದ ಧೋರಣೆಯನ್ನು ಮೋದಿ ಒತ್ತಿಹೇಳಿದರು ಎಂದು ಭಾರತದ ವಿದೇಶಾಂಗ ಇಲಾಖೆಯ ಹೇಳಿಕೆ ತಿಳಿಸಿದೆ.

 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X