Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಎನ್ಐಟಿಕೆ ಟೋಲ್ ಗೇಟ್ ಬಿಡ್ ಗೆ...

ಎನ್ಐಟಿಕೆ ಟೋಲ್ ಗೇಟ್ ಬಿಡ್ ಗೆ ಗುತ್ತಿಗೆದಾರರ ನಿರಾಸಕ್ತಿ

ಜೂ.‌‌ 23ಕ್ಕೆ ಕೊನೆಗೊಂಡ ಬಿಡ್ ದಿನಾಂಕ

ವಾರ್ತಾಭಾರತಿವಾರ್ತಾಭಾರತಿ25 Jun 2022 10:09 PM IST
share

ಮಂಗಳೂರು : ರಾಷ್ಟ್ರೀಯ ಹೆದ್ದಾರಿ 66ರ ಸುರತ್ಕಲ್ ಎನ್ಐಟಿಕೆ ಟೋಲ್ ಗೇಟ್ ಬಿಡ್ ಕರೆಯುವ ದಿನಾಂಕ ಮುಕ್ತಾಯಗೊಂಡಿದ್ದರೂ, ಯಾವುದೇ ಹೊಸ ಬಿಡ್‌ದಾರರು ಟೋಲ್ ಗೇಟ್ ನಿರ್ವಹಿಸಲು ಆಸಕ್ತಿ ತೋರುತ್ತಿಲ್ಲ ಎಂದು ತಿಳಿದು ಬಂದಿದೆ.

ಈಗಾಗಲೇ ಟೋಲ್ ಗೇಟ್ ತೆರವಿಗೆ ನಡೆಯುತ್ತಿರುವ ಹೋರಾಟಗಳು, ಕೇಂದ್ರ ಹೆದ್ದಾರಿ ಸಚಿವರು ಮಾಹಿತಿ ನೀಡಿರುವಂತೆ 60 ಕಿ.ಮೀ. ಅಂತರದಲ್ಲಿರುವ  ಟೋಲ್ ಗೇಟ್ ಗಳ ವಿಸರ್ಜನೆ ಹಾಗೂ ಸುಂಕ ವಸೂಲಿಯ ಗುರಿ ಹೆಚ್ವಿಸಿರುವುದೂ ಗುತ್ತಿಗೆದಾರರ ನಿರಾಸಕ್ತಿಗೆ ಕಾರಣ ಎನ್ನಲಾಗಿದೆ.

ಎನ್ಐಟಿಕೆ ಕೋಲ್ಗೇಟ್ ಗೆ ಬಿಡ್ ಕರೆಯುವ ಪ್ರಕ್ರಿಯೆ ಜೂನ್ 23ರಂದು ಕೊನೆ ಗೊಂಡಿರುತ್ತದೆ. ಈ ನೆಲೆಯಲ್ಲಿ ಹೊಸ ಗುತ್ತಿಗೆದಾರರ ಹುಡುಗಾಟದಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾದಿಕಾರ ತೊಡಗಿದೆ. ಆದರೆ ಯಾವುದೇ ಗುತ್ತಿಗೆದಾರರು ಎನ್ಐಟಿಕೆ ಟೋಲ್ ಗೇಟ್ ಅನ್ನು ಗುತ್ತಿಗೆ ಪಡೆಯಲು ಮುಂದೆ ಬಂದಿಲ್ಲ ಎಂದು ತಿಳಿದುಬಂದಿದೆ.
ಸುಂಕ ವಸೂಲಾತಿಗೆ 48.57 ಕೋಟಿ ರೂ. ಗುರಿ ನಿಗದಿ ಪಡಿಸಲಾಗಿದ್ದು, ಕಳೆದ ಬಾರಿ 54 ಕೋ.ರೂ. ವಸೂಲಿ ಮಾಡುವ ಗುರಿ ಇತ್ತು. ಈ ಬಾರಿ 50 ಕೋ.ರೂ. ನಿಗದಿ ಮಡಿದರೂ ಗುತ್ತಿಗೆ ದಾರರು ಗುತ್ತಿಗೆ ಪಡೆದುಕೊಳ್ಳಲು ಹಿಂದೇಟು ಹಾಕುತ್ತಿದ್ದಾರೆ ಎಂದು ಟೋಲ್ ಗೇಟ್ ನ ಮೂಲಗಳು ಮಾಹಿತಿ ನೀಡಿದೆ.

ರಾ.ಹೆ.ಪ್ರಾಧಿಕಾರಕ್ಕೆ ಮುಳುವಾದ ಟೋಲ್ ಗೇಟ್ ತೆರವಿನ ಹೋರಾಟ

ಈಗಾಗಲೇ ಸುರತ್ಕಲ್ ಎನ್ಐಟಿಕೆ ಟೋಲ್ ಗೇಟ್ ಸಂಬಂಧಿಸಿ ಬಿಡ್ ಪ್ರಕ್ರಿಯೆ ಜೂನ್ 23ಕ್ಕೆ ಕೊನೆ ಗೊಂಡಿರುತ್ತದೆ. ಆದರೆ ಈವರೆಗೂ ಬಿಡದವರು ಟೋಲ್ ಗಟ್ ಗುತ್ತಿಗೆ ಪಡೆಯಲು ಹಿಂದೇಟು ಹಾಕುತ್ತಿದ್ದಾರೆ ಇದಕ್ಕೆ ಟೋಲ್ಗೇಟ್ ತೆರವಿಗೆ ಆಗ್ರಹಿಸಿ ನಡೆಯುತ್ತಿರುವ ಹೋರಾಟವೇ ಮುಖ್ಯ ಕಾರಣ ಎಂದು ಹೇಳಲಾಗುತ್ತಿದೆ.

ಈಗಾಗಲೇ ಶಾಸಕರು, ಸಂಸದರು ಹಾಗೂ ಹೋರಾಟಗಾರರ ಮಧ್ಯೆ ಆರೋಪ-ಪ್ರತ್ಯಾರೋಪಗಳ ಸರಣಿ ನಡೆಯುತ್ತಿದ್ದು ಹೋರಾಟಗಾರರು ಪಟ್ಟು ಸಡಿಲಿಸುವ ಲಕ್ಷಣಗಳು ಇಲ್ಲದಿರುವುದರಿಂದಲೇ ಎನ್ಐಟಿಕೆ ಟೋಲ್ಗೇಟ್ ಗುತ್ತಿಗೆ ಪಡೆಯಲು ಬಿಡ್ ದಾರರು ನಿರಾಸಕ್ತಿ ತೋರುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.

ಹೋರಾಟಕ್ಕೆ ಶಾಸಕರ ಬೆಂಬಲ

ಒಂದು ಮೂಲಗಳ ಪ್ರಕಾರ ಇತ್ತೀಚೆಗೆ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರ ಶಾಸಕರಾದ ಭರತ್ ಶೆಟ್ಟಿ ಅವರು ಸುದ್ದಿಗೋಷ್ಠಿಯೊಂದರಲ್ಲಿ ಟೋಲ್ಗೇಟ್ ತೆರವಿಗೆ ನನ್ನ ಸಹಮತವಿದೆ. ನಾನು ಟೋಲ್ ಗೇಟ್ ತೆರವಿನ ಹೋರಾಟಗಳಲ್ಲಿ ಭಾಗವಹಿಸುವುದಾಗಿ ಹೇಳಿಕೆಯನ್ನು ನೀಡಿದ್ದರು. ಈ ಕಾರಣದಿಂದಲೂ ಗುತ್ತಿಗೆದಾರರು ಬಿಡ್ ಹಾಕಲು ಹಿಂದೇಟು ಹಾಕುತ್ತಿದ್ದಾರೆ ಎಂದು ತಿಳಿದುಬಂದಿದೆ.

ಬಿಡ್ ದಾರರ ನಿರಾಸಕ್ತಿಗೆ ಕೇಂದ್ರ ಸಾರಿಗೆ ಸಚಿವರ‌ ಹೇಳಿಕೆಯೂ ಕಾರಣ?

ಒಂದೆಡೆ ಎನ್ಐಟಿಕೆ ಟೋಲ್ಗೇಟ್ ಗುತ್ತಿಗೆದಾರರು ನಿರಾಸಕ್ತಿ ತೋರುತ್ತಿರುವ ಅಂತೆಯೇ ದೇಶದ ಹಲವೆಡೆಯ ಟೋಲ್ ಗೇಟ್ ಗಳಿಗೂ ಇದೇ ಪರಿಸ್ಥಿತಿ ಬಂದರಿಗೆ ಇದೆ ಎನ್ನಲಾಗಿದೆ.

ಒಡಿಶಾದ ದುಲಾರ್ ಪುರ್, ಆಂಧ್ರದ ಬಸಪುರಮ್‌, ತಮಿಳು ನಾಡಿನ ನಗರ್ ಟೋಲ್‌ಗೂ ಬಿಡ್‌ ದಾರರು ನಿರಾಸಕ್ತಿ ತೋರಿಸುತ್ತಿದ್ದಾರೆ ಎಂದು ಟೋಲ್ ಗೇಟ್ ನ ಮೂಲಗಳು ಮಾಹಿತಿ ನೀಡಿದ್ದು ಇದಕ್ಕೆ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ಇತ್ತೀಚೆಗೆ ನೀಡಿದ್ದ 60 ಕಿಲೋಮೀಟರ್ ವ್ಯಾಪ್ತಿಯ ಒಳಗೆ ಎರಡು ಟೋಲ್ ಗೇಟ್ ಇದ್ದರೆ ಅವುಗಳನ್ನು ತೆರವುಗೊಳಿಸುವುದಾಗಿ ನೀಡಿದ್ದ ಹೇಳಿಕೆಯೂ ಕಾರಣ ಎಂದು ಮೂಲಗಳು ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X