Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಐಎಂಎಫ್ ಜತೆಗಿನ ಒಪ್ಪಂದಕ್ಕೆ ಸೋಮವಾರ...

ಐಎಂಎಫ್ ಜತೆಗಿನ ಒಪ್ಪಂದಕ್ಕೆ ಸೋಮವಾರ ಅಂತಿಮ ಮುದ್ರೆ: ಪಾಕಿಸ್ತಾನ

ವಾರ್ತಾಭಾರತಿವಾರ್ತಾಭಾರತಿ26 Jun 2022 10:04 PM IST
share
ಐಎಂಎಫ್ ಜತೆಗಿನ ಒಪ್ಪಂದಕ್ಕೆ ಸೋಮವಾರ ಅಂತಿಮ ಮುದ್ರೆ: ಪಾಕಿಸ್ತಾನ

ಇಸ್ಲಮಾಬಾದ್, ಜೂ.26: ಪಾಕಿಸ್ತಾನಕ್ಕೆ ಆರ್ಥಿಕ ಪರಿಹಾರ ಪ್ಯಾಕೇಜ್ ಒದಗಿಸುವ ನವೀಕೃತ ಒಪ್ಪಂದಕ್ಕಾಗಿ ಆರ್ಥಿಕ ಮತ್ತು ಹಣಕಾಸು ಕಾರ್ಯನೀತಿಯನ್ನು ಹಸ್ತಾಂತರಿಸಲು ಐಎಂಎಫ್ ಯೋಚಿಸಿರುವುದರಿಂದ ಸೋಮವಾರ(ಜೂನ್ 27)ದ ವೇಳೆಗೆ ಅಂತರಾಷ್ಟ್ರೀಯ ಹಣಕಾಸು ಸಂಸ್ಥೆ(ಐಎಂಎಫ್) ಜತೆಗಿನ ಒಪ್ಪಂದಕ್ಕೆ ಅಂತಿಮ ಮುದ್ರೆ ಬೀಳುವ ನಿರೀಕ್ಷೆಯಿದೆ ಎಂದು ಪಾಕಿಸ್ತಾನದ ವಿದೇಶಾಂಗ ಸಚಿವಾಲಯ ರವಿವಾರ ಹೇಳಿದೆ.

ಆರ್ಥಿಕ ಸ್ಥಿತಿಯ ಕುರಿತ ತ್ರೈಮಾಸಿಕ ವರದಿಯಲ್ಲಿ ನಕಾರಾತ್ಮಕ ಅಂಶಗಳಿದ್ದರೂ ಐಎಂಎಫ್ ನೆರವಿನ ಮರುಸ್ಥಾಪನೆಯ ಸಾಧ್ಯತೆ ನಿಚ್ಚಳವಾಗಿದೆ ಎಂದು ಸಂಸತ್ತಿನಲ್ಲಿ ವಿವರ ನೀಡಿದ ಪಾಕಿಸ್ತಾನದ ವಿತ್ತಸಚಿವ ಮಿಫ್ತಾ ಇಸ್ಮಾಯಿಲ್ ಹೇಳಿದ್ದಾರೆ. ಇದಕ್ಕೂ ಮುನ್ನ ಮಾತನಾಡಿದ್ದ ಪ್ರಧಾನಿ ಶಹಬಾರ್ ಶರೀಫ್, ಐಎಂಎಫ್‌ನೊಂದಿಗಿನ ಷರತ್ತುಗಳನ್ನು ಅಂತಿಮಗೊಳಿಸಲಾಗಿದೆ ಎಂದು ಪ್ರತಿಪಾದಿಸಿದರು.

ಐಎಂಎಫ್ ಮುಂದಿರಿಸಿದ್ದ ಷರತ್ತಿನಂತೆ ಶುಕ್ರವಾರ ಪಾಕ್ ಸರಕಾರ ವೇತನ ವರ್ಗದವರ ಮೇಲಿನ ತೆರಿಗೆ ದರವನ್ನು ಹೆಚ್ಚಿಸಿತ್ತು ಮತ್ತು ಜೂನ್ 10ರಂದು ವೇತನದಾರರಿಗೆ ನೀಡಿದ್ದ ತೆರಿಗೆ ವಿನಾಯತಿ ಘೋಷಣೆಯನ್ನು ಹಿಂಪಡೆದಿತ್ತು. ಹೀಗೆ ಐಎಂಎಫ್ ಮುಂದಿರಿಸಿದ್ದ ಬಹುತೇಕ ಎಲ್ಲಾ ಷರತ್ತುಗಳನ್ನೂ ಈಡೇರಿಸಿರುವುದರಿಂದ ಒಪ್ಪಂದದ ಕುರಿತ ‘ಮೆಮೊರ್ಯಾಂಡಮ್ ಆಫ್ ಫೈನಾನ್ಶಿಯಲ್ ಆ್ಯಂಡ್ ಇಕನಾಮಿಕ್ ಪಾಲಿಸೀಸ್(ಎಂಇಎಫ್‌ಪಿ)ಯನ್ನು ಸೋಮವಾರ ಹಸ್ತಾಂತರಿಸುವ ನಿರೀಕ್ಷೆಯಿದೆ ಎಂದು ವಿತ್ತ ಸಚಿವಾಲಯ ಹೇಳಿದೆ.

 ಕಳೆದ ಕೆಲ ದಿನಗಳಿಂದ ಐಎಂಎಫ್, ವಿತ್ತ ಸಚಿವಾಲಯ ಹಾಗೂ ಸ್ಟೇಟ್ ಬ್ಯಾಂಕ್ ಆಫ್ ಪಾಕಿಸ್ತಾನ ನಿರಂತರ ಮಾತುಕತೆ ನಡೆಸುತ್ತಿವೆ. ವಿದ್ಯುತ್ ದರಗಳನ್ನು ಹೆಚ್ಚಿಸುವ ಸರಕಾರದ ಕಾರ್ಯತಂತ್ರಕ್ಕೆ ಸಂಬಂಧಿಸಿದ ಸಭೆ ವಿತ್ತ ಸಚಿವರ ಅಧ್ಯಕ್ಷತೆಯಲ್ಲಿ ನಡೆದಿದೆ ಎಂದು ಜಿಯೊ ನ್ಯೂಸ್ ವರದಿ ಮಾಡಿದೆ. ಈ ಮಧ್ಯೆ ಸಿಮೆಂಟ್, ಸಕ್ಕರೆ, ಉಕ್ಕು, ತೈಲ ಮತ್ತು ಅನಿಲ, ಆರ್‌ಎಲ್‌ಎನ್‌ಜಿ ಟರ್ಮಿನಲ್, ಜವಳಿ, ಬ್ಯಾಂಕಿಂಗ್, ಆಟೊ ಉದ್ಯಮ, ತಂಬಾಕು, ರಸಗೊಬ್ಬರ, ವಾಯುಯಾನ, ರಾಸಾಯನಿಕ ಮತ್ತು ಪಾನೀಯ ಕ್ಷೇತ್ರದ 13 ಬೃಹತ್ ಕೈಗಾರಿಕೆಗಳ ಮೇಲೆ ಸರಕಾರ 10% ಸೂಪರ್‌ಟ್ಯಾಕ್ಸ್ ವಿಧಿಸಿದೆ. ಪಾಕಿಸ್ತಾನದಲ್ಲಿ ಸುಮಾರು 30,000 ಆಭರಣಗಳ ಅಂಗಡಿಗಳಿದ್ದು ಪ್ರತೀ ಅಂಗಡಿಗೆ 40,000 ರೂ. ತೆರಿಗೆಯನ್ನು ಸರಕಾರ ಪ್ರಸ್ತಾವಿಸಿದೆ. ಮುಂದಿನ ಬಜೆಟ್‌ಗೆ ‘ಪ್ರೈಸ್ ಡಿಫರೆನ್ಶಿಯಲ್ ಕ್ಲೇಮ್’ ವಿಭಾಗಕ್ಕೆ 225 ಬಿಲಿಯನ್ ರೂ. ಅನುದಾನ ಒದಗಿಸುವ ಸರಕಾರದ ಪ್ರಸ್ತಾವನೆಗೆ ಐಎಂಎಫ್ ಆಕ್ಷೇಪ ಎತ್ತಿದ್ದು ಇದು ಸುಮಾರು 350ರಿಂದ 450 ಬಿಲಿಯನ್ ರೂ.ಗೆ ಏರಿಕೆಯಾಗಬಹುದು ಎಂದು ಅಂದಾಜಿಸಿದೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X