Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಅಫ್ಘಾನ್‌ಗೆ 10 ಮಿಲಿಯನ್ ಡಾಲರ್ ನಿಧಿ...

ಅಫ್ಘಾನ್‌ಗೆ 10 ಮಿಲಿಯನ್ ಡಾಲರ್ ನಿಧಿ ನಿಗದಿ: ವಿಶ್ವಸಂಸ್ಥೆ

ವಾರ್ತಾಭಾರತಿವಾರ್ತಾಭಾರತಿ26 Jun 2022 11:09 PM IST
share

ವಿಶ್ವಸಂಸ್ಥೆ, ಜೂ.26: ಭೂಕಂಪದಿಂದ ಜರ್ಝರಿತಗೊಂಡಿರುವ ಅಫ್ಘಾನಿಸ್ತಾನಕ್ಕೆ ವಿಶ್ವಸಂಸ್ಥೆಯ ಕೇಂದ್ರ ತುರ್ತು ಪ್ರತಿಕ್ರಿಯೆ ನಿಧಿ(ಯುಎನ್‌ಸಿಇಆರ್‌ಎಫ್)ನಿಂದ 10 ಮಿಲಿಯನ್ ಡಾಲರ್ ಮೊತ್ತವನ್ನು ನಿಗದಿಗೊಳಿಸಲಾಗಿದ್ದು ಭೂಕಂಪದಿಂದ ಪರಿಣಾಮಕ್ಕೆ ಒಳಗಾಗಿರುವ ಜನತೆಗೆ ನೆರವು ನೀಡಲಾಗುವುದು ಎಂದು ವಿಶ್ವಸಂಸ್ಥೆ ರವಿವಾರ ಘೋಷಿಸಿದೆ. ಈ ನೆರವನ್ನು ತಕ್ಷಣ ಒದಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಮಾನವೀಯ ವ್ಯವಹಾರ ಮತ್ತು ತುರ್ತು ಪರಿಹಾರ ಸಂಯೋಜನೆಯ ಉಪ-ಪ್ರಧಾನ ಕಾರ್ಯದರ್ಶಿ ಮಾರ್ಟಿನ್ ಗ್ರಿಫಿತ್ ಹೇಳಿದ್ದಾರೆ. 

ಅಫ್ಘಾನಿಸ್ತಾನದಲ್ಲಿ ಜೂನ್ 22ರಂದು ಬೆಳಿಗ್ಗೆ ಭೀಕರ ಭೂಕಂಪ ಸಂಭವಿಸಿದ್ದು ಹಲವು ಮನೆಗಳು ಕುಸಿದು ಬಿದ್ದಿವೆ. ಕನಿಷ್ಟ 1000 ಮಂದಿ ಮೃತಪಟ್ಟಿದ್ದು ಸುಮಾರು 1,500 ಮಂದಿ ಗಾಯಗೊಂಡಿದ್ದರು. ಪಾಕಿಸ್ತಾನದ ಗಡಿಭಾಗದ ಸನಿಹದಲ್ಲಿರುವ ಖೋಸ್ಟ್ ನಗರದಿಂದ ಸುಮಾರು 44 ಕಿ.ಮೀ ದೂರದಲ್ಲಿ ಭೂಕಂಪ ಸಂಭವಿಸಿದ್ದು ರಿಕ್ಟರ್ ಮಾಪನದಲ್ಲಿ 6.1 ತೀವ್ರತೆಯನ್ನು ದಾಖಲಿಸಿತ್ತು. ತಕ್ಷಣ ವಿಶ್ವದಾದ್ಯಂತದ ದೇಶಗಳು, ಸಂಘಟನೆಗಳು ಅಫ್ಘಾನಿಸ್ತಾನಕ್ಕೆ ನೆರವು ಒದಗಿಸಿವೆ. ಭಾರತ ಶುಕ್ರವಾರ 2ನೇ ಕಂತಿನ ನೆರವನ್ನು ರವಾನಿಸಿದೆ. ವಿದೇಶಾಂಗ ಸಚಿವಾಲಯದ ಜಂಟಿ ಕಾರ್ಯದರ್ಶಿ ಜೆಪಿ ಸಿಂಗ್ ಅವರು ನೆರವನ್ನು ತಾಲಿಬಾನ್ ಅಧಿಕಾರಿಗಳ ಉಪಸ್ಥಿತಿಯಲ್ಲಿ ಸಾಂಕೇತಿಕವಾಗಿ ಹಸ್ತಾಂತರಿಸಿದರು.

 ತಾತ್ಕಾಲಿಕ ಶಿಬಿರ ಸ್ಥಾಪಿಸಲು ಅಗತ್ಯವಿರುವ ಟೆಂಟ್‌ಗಳು, ಪ್ಲಾಸ್ಟಿಕ್ ಶೀಟ್‌ಗಳು, ಮಲಗುವ ಚೀಲಗಳು, ಕಂಬಳಿಗಳು, ಮಲಗುವ ಚಾಪೆ ಇತ್ಯಾದಿ ಅಗತ್ಯದ ವಸ್ತುಗಳನ್ನು ಭೂಕಂಪದಿಂದ ನಲುಗಿರುವ ಅಫ್ಘಾನ್‌ನ ಜನತೆಗೆ ಭಾರತ ರವಾನಿಸಿದೆ. ಗುರುವಾರ ಭಾರತದ ನೆರವಿನ ಪ್ರಥಮ ಕಂತನ್ನು ಹಸ್ತಾಂತರಿಸಲಾಗಿತ್ತು. ಜತೆಗೆ, ಅಫ್ಘಾನ್‌ಗೆ ಹರಿದು ಬರುವ ಮಾನವೀಯ ನೆರವಿನ ಉಪಕ್ರಮಗಳನ್ನು ಸಂತ್ರಸ್ತರಿಗೆ ತಲುಪಿಸುವ ಕಾರ್ಯದ ಸಂಯೋಜನೆಗೆ ನೆರವಾಗಲು ಭಾರತವು ಕಾಬೂಲ್‌ನಲ್ಲಿನ ರಾಯಭಾರಿ ಕಚೇರಿಗೆ ತಂಡವೊಂದನ್ನು ರವಾನಿಸಿದೆ. ಅಫ್ಘಾನ್‌ನಲ್ಲಿ ಮಾನವೀಯ ನೆರವಿನ ಉಪಕ್ರಮ ಮುಂದುವರಿಸಲು ತಂತ್ರಜ್ಞರ ತಂಡವನ್ನು ಮರಳಿ ಕಳಿಸಿರುವ ಭಾರತದ ಈ ಕ್ರಮವನ್ನು ಸ್ವಾಗತಿಸುವುದಾಗಿ ತಾಲಿಬಾನ್ ಪ್ರತಿಕ್ರಿಯಿಸಿದೆ.

ಈ ಮಧ್ಯೆ, ಯುರೋಪಿಯನ್ ಕಮಿಷನ್ ಕೂಡಾ 1 ಮಿಲಿಯನ್ ಯುರೋ ಮೊತ್ತದ ಆರ್ಥಿಕ ನೆರವನ್ನು ಅಫ್ಘಾನ್‌ಗೆ ಘೋಷಿಸಿದೆ. ಇದರಿಂದ ಭೂಕಂಪದಿಂದ ತೀವ್ರ ಹಾನಿಗೊಳಗಾಗಿರುವ ಪ್ರದೇಶದ ಸುಮಾರು 2,70,000 ಜನತೆಗೆ ನೆರವು ಒದಗಿಸಲು ಸಾಧ್ಯವಾಗಲಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ವಿಶ್ವ ಆರೋಗ್ಯ ಸಂಸ್ಥೆಯೂ ತಕ್ಷಣ ಸ್ಪಂದಿಸಿದ್ದು ಜೂನ್ 22ರಂದು 10 ಟನ್‌ಗಳಷ್ಟು ವೈದ್ಯಕೀಯ ನೆರವಿನ ಸಾಮಗ್ರಿಗಳ ಸಹಿತ ಇತರ ವಸ್ತುಗಳನ್ನು ಅಫ್ಘಾನ್‌ಗೆ ರವಾನಿಸಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X