Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಸಚಿವ ನಾಗೇಶ್ ಸಾಮಾಜಿಕ ಜಾಲತಾಣ...

ಸಚಿವ ನಾಗೇಶ್ ಸಾಮಾಜಿಕ ಜಾಲತಾಣ ನಿರ್ವಹಣೆಗೆ ಶಿಕ್ಷಣ ಮಂಡಳಿಯ ಬೊಕ್ಕಸದ ದುಡ್ಡು?

ನಿಯಮ ಉಲ್ಲಂಘಿಸಿ ಸರಕಾರಿ ಹಣ ವ್ಯಯ

ಜಿ.ಮಹಾಂತೇಶ್ಜಿ.ಮಹಾಂತೇಶ್27 Jun 2022 8:20 AM IST
share
ಸಚಿವ ನಾಗೇಶ್ ಸಾಮಾಜಿಕ ಜಾಲತಾಣ ನಿರ್ವಹಣೆಗೆ ಶಿಕ್ಷಣ ಮಂಡಳಿಯ ಬೊಕ್ಕಸದ ದುಡ್ಡು?

ಬೆಂಗಳೂರು, ಜೂ.26: ಪ್ರಾಥಮಿಕ, ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರ ಅಧಿಕಾರಾವಧಿ ತನಕ ಅವರ ಟ್ವಿಟರ್ ಖಾತೆ ಸೇರಿದಂತೆ ಸಾಮಾಜಿಕ ಜಾಲತಾಣ ನಿರ್ವಹಣೆ ಮಾಡಲು ಕರ್ನಾಟಕ ಪ್ರೌಢಶಿಕ್ಷಣ ಮಂಡಳಿಯ ಬೊಕ್ಕಸದಿಂದ ಲಕ್ಷಾಂತರ ರೂ. ವೆಚ್ಚವಾಗುತ್ತಿರುವುದು ಇದೀಗ ಬಹಿರಂಗವಾಗಿದೆ.

ರೋಹಿತ್ ಚಕ್ರತೀರ್ಥ ಸಮಿತಿಯು ಮಾಡಿರುವ  ಪಠ್ಯಪುಸ್ತಕ ಪರಿಷ್ಕರಣೆ ವಿರುದ್ಧ ರಾಜ್ಯಾದ್ಯಂತ ತೀವ್ರ ಸ್ವರೂಪದ ಹೋರಾಟ ನಡೆಯುತ್ತಿರುವ ಹೊತ್ತಿನಲ್ಲಿಯೇ ಸಚಿವ ಬಿ.ಸಿ. ನಾಗೇಶ್ ಅವರ ಸಾಮಾಜಿಕ ಜಾಲತಾಣಕ್ಕೆ ಸರಕಾರಿ ಸಂಸ್ಥೆಯೊಂದರಿಂದ ಹಣ ವ್ಯಯಿಸುತ್ತಿರುವುದು ಚರ್ಚೆಗೆ ಗ್ರಾಸವಾಗಿದೆ. ಈ ಸಂಬಂಧ ಸಚಿವ ನಾಗೇಶ್ ಅವರು ಹೊರಡಿಸಿರುವ ಟಿಪ್ಪಣಿ ಮತ್ತು ಸಮಗ್ರ ಶಿಕ್ಷಣ ಕರ್ನಾಟಕ ರಾಜ್ಯ ಯೋಜನಾ ನಿರ್ದೇಶಕರಿಗೆ ಶಿಕ್ಷಣ ಇಲಾಖೆಯು 2022ರ ಜೂನ್ 20ರಂದು ಬರೆದಿರುವ ಪತ್ರದ ಪ್ರತಿಯು "the-file.in'ಗೆ ಲಭ್ಯವಾಗಿದೆ.

 ಅಲ್ಲದೆ  ಸಾಮಾಜಿಕ ಜಾಲತಾಣ ನಿರ್ವಹಿಸಲು ಯಾವುದೇ ಟೆಂಡರ್ ಪ್ರಕ್ರಿಯೆಯೂ ನಡೆದಿಲ್ಲ. ಮಾಸಿಕ 1 ಲಕ್ಷ ರೂ. ಮೊತ್ತ ಪಾವತಿ ಮಾಡಬೇಕಾದರೆ ಟೆಂಡರ್ ಪ್ರಕ್ರಿಯೆ ನಡೆಸಬೇಕು. ಆದರೆ  ಟೆಂಡರ್ ಪ್ರಕ್ರಿಯೆಯಿಂದ ತಪ್ಪಿಸಿಕೊಳ್ಳಲು ಟೆಂಡರ್ ಮೊತ್ತವನ್ನು ಲಕ್ಷಕ್ಕೆ 6 ಸಾವಿರ ರೂ. ಕಡಿಮೆ ನಿಗದಿಗೊಳಿಸಿ ಟೆಂಡರ್ ಪ್ರಕ್ರಿಯೆ ನಡೆಸದೆಯೇ ಕೆಟಿಪಿಪಿ ಕಾಯ್ದೆ 4 (ಜಿ) ವಿನಾಯಿತಿ ಬಳಕೆ ಮಾಡಿಕೊಂಡಿದೆ. ಸಚಿವರ ಸಾಮಾಜಿಕ ಜಾಲತಾಣ ನಿರ್ವಹಿಸುತ್ತಿರುವ ಖಾಸಗಿ ಕಂಪೆನಿ ಅವಧಿ ಪೂರ್ಣಗೊಂಡಿದ್ದರೂ 2023ರ ಮಾರ್ಚ್‌ವರೆಗೂ ಮುಂದುವರಿಸಲು ಸಚಿವ ಬಿ.ಸಿ. ನಾಗೇಶ್ ಅವರು ಟಿಪ್ಪಣಿಯಲ್ಲಿ ಸೂಚಿಸಿದ್ದರು ಎಂಬುದು ತಿಳಿದು ಬಂದಿದೆ.

ವರ್ಷಕ್ಕೆ 11.38 ಲಕ್ಷ ರೂ.

ಬೆಂಗಳೂರಿನ ಜೆ.ಪಿ. ನಗರದಲ್ಲಿರುವ ಪಿ-ಪೋಲ್ ಅನಾಲಿಟಿಕ್ಸ್ ಎಲ್‌ಎಲ್‌ಪಿ ಸಂಸ್ಥೆಯು ಸಚಿವ ಬಿ.ಸಿ. ನಾಗೇಶ್ ಅವರ ಸಾಮಾಜಿಕ ಜಾಲತಾಣ ನಿರ್ವಹಿಸುತ್ತಿದೆ. ಪ್ರತೀ ತಿಂಗಳು 94,400 ರೂ. ಲೆಕ್ಕದಲ್ಲಿ ವರ್ಷಕ್ಕೆ 11,38,800 ರೂ. (ಜಿಎಸ್‌ಟಿ ಹೊರತುಪಡಿಸಿ) ಪಾವತಿಯಾಗುತ್ತಿದೆ ಎಂಬುದು ಗೊತ್ತಾಗಿದೆ.
ಸಾಮಾಜಿಕ ಜಾಲತಾಣಗಳ ನಿರ್ವಹಣೆ ಕಾರ್ಯಕ್ಕೆ ಪಿ-ಪೋಲ್ ಅನಾಲಿಟಿಕ್ಸ್ ಎಲ್‌ಎಲ್‌ಪಿ ಸಂಸ್ಥೆಯ ಸೇವೆಯನ್ನು ಮುಂದುವರಿಸಬೇಕು ಎಂದು ಪ್ರಾಥಮಿಕ, ಪ್ರೌಢಶಿಕ್ಷಣ ಸಚಿವರ ಸಚಿವ ಬಿ.ಸಿ.ನಾಗೇಶ್ ಅವರು ಸೂಚಿಸಿದ್ದರು.ಅದರಂತೆ   ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ಅಧಿನಿಯಮ 1999ರ ಕಲಂ 4(ಜಿ) ವಿನಾಯಿತಿ ಕೋರಿ ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯು ಕಡತ (ಇ-ಆಫೀಸ್ ಕಡತ ಸಂಖ್ಯೆ; ಕೆಎಸ್‌ಎಸ್‌ಇಬಿ/ಡಿಪಿಐಎಇ/ಬಿ1 (ಒಟಿಪಿ) 2022-ಬಿಎಸ್‌ಇಸಿ) ಸಲ್ಲಿಸಿತ್ತು ಎಂದು ತಿಳಿದು ಬಂದಿದೆ.

ಪ್ರಾಥಮಿಕ, ಪ್ರೌಢಶಿಕ್ಷಣ ಸಚಿವರ ಅಧಿಕಾರಾವಧಿ ತನಕ ಸಚಿವರ ಸಾಮಾಜಿಕ ಜಾಲತಾಣಗಳ ನಿರ್ವಹಣೆ ಕಾರ್ಯಕ್ಕೆ ಮಾಹೆಯಾನ 94,400 ರೂ. ಯಂತೆ 2022ರ ಎಪ್ರಿಲ್‌ನಿಂದ 2023ರ ಮಾರ್ಚ್‌ವರೆಗೆ ಒಂದು ವರ್ಷದ ಅವಧಿಗೆ 11,38,300 ರೂ. ವೆಚ್ಚದಲ್ಲಿ ಬೆಂಗಳೂರಿನ ಜೆ.ಪಿ.ನಗರದಲ್ಲಿರುವ  ಪಿ-ಪೋಲ್ ಅನಾಲಿಟಿಕ್ಸ್ ಎಲ್‌ಎಲ್‌ಪಿ ಸಂಸ್ಥೆ ಸೇವೆಯನ್ನು ಪಡೆಯಲು ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ಅಧಿನಿಯಮ 1999ರ ಕಲಂ 4(ಜಿ) ವಿನಾಯಿತಿ ನೀಡಲಾಗಿದೆ (BC 297 ವೆಚ್ಚ-12/2022 (ಇ-ಆಫೀಸ್ ಕಡತ- ದಿನಾಂಕ 20.06.2022) ಎಂದು ಗೊತ್ತಾಗಿದೆ.

ಮುಖ್ಯಮಂತ್ರಿ ಹೊರತುಪಡಿಸಿದರೆ ಉಳಿದ ಸಚಿವರ ಸಾಮಾಜಿಕ ಜಾಲತಾಣ ನಿರ್ವಹಣೆಗೆ ಸರಕಾರದಿಂದ ನಯಾ ಪೈಸೆಯನ್ನೂ ವೆಚ್ಚ ಮಾಡುತ್ತಿಲ್ಲ. ಬಿ.ಸಿ. ನಾಗೇಶ್ ಅವರನ್ನು  ಹೊರತುಪಡಿಸಿದರೆ ಉಳಿದ ಸಚಿವರು ಸಾಮಾಜಿಕ ಜಾಲತಾಣ ನಿರ್ವಹಣೆಗೆಂದೇ ತಂಡವನ್ನು ನೇಮಿಸಿಕೊಂಡಿದ್ದಾರೆ.

ಇತಿಹಾಸ ಪುರುಷರು, ರಾಜಕಾರಣಿಗಳ ಹುಟ್ಟುಹಬ್ಬ, ಇಲಾಖೆಯ ಮಹತ್ವದ ತೀರ್ಮಾನಗಳು, ಘೋಷಣೆಗಳು, ಕಾರ್ಯಕ್ರಮ ಉದ್ಘಾಟನೆ ಸೇರಿದಂತೆ ಇನ್ನಿತರ ಸಂಗತಿಗಳ ಕುರಿತು ಸಚಿವರುಗಳ ಅಧಿಕೃತ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಮಾಹಿತಿಗಳನ್ನು ಪ್ರಕಟಿಸಲಾಗುತ್ತದೆ. ಈ ತಂಡಕ್ಕೆ ಖಾಸಗಿಯಾಗಿ ಹಣ ಪಾವತಿಯಾಗುತ್ತಿದೆಯೇ ಹೊರತು ಸರಕಾರದಿಂದ ಯಾವುದೇ ಹಣವೂ ಪಾವತಿಯಾಗುತ್ತಿಲ್ಲ.

ಆದರೆ ಪ್ರಾಥಮಿಕ, ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರ ಸಾಮಾಜಿಕ ಜಾಲತಾಣ ನಿರ್ವಹಿಸುತ್ತಿರುವ ಖಾಸಗಿ ಕಂಪೆನಿಗೆ ಲಕ್ಷಾಂತರ ರೂ.ಯನ್ನು ಸರಕಾರವೇ ಪಾವತಿಸುತ್ತಿರುವುದಕ್ಕೆ  ಹಲವು ಆಕ್ಷೇಪಗಳು ವ್ಯಕ್ತವಾಗಿವೆ.

share
ಜಿ.ಮಹಾಂತೇಶ್
ಜಿ.ಮಹಾಂತೇಶ್
Next Story
X