Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಎಸ್.ಎಲ್.ಭೈರಪ್ಪ ಬಿಜೆಪಿ ವಕ್ತಾರರಂತೆ...

ಎಸ್.ಎಲ್.ಭೈರಪ್ಪ ಬಿಜೆಪಿ ವಕ್ತಾರರಂತೆ ಮಾತನಾಡಬಾರದು: ಎಚ್.ವಿಶ್ವನಾಥ್

ವಾರ್ತಾಭಾರತಿವಾರ್ತಾಭಾರತಿ27 Jun 2022 12:44 PM IST
share
ಎಸ್.ಎಲ್.ಭೈರಪ್ಪ ಬಿಜೆಪಿ ವಕ್ತಾರರಂತೆ ಮಾತನಾಡಬಾರದು: ಎಚ್.ವಿಶ್ವನಾಥ್

ಮೈಸೂರು, ಜೂ.27: ರೋಹಿತ್ ಚಕ್ರತೀರ್ಥ ನೇತೃತ್ವದ ಸಮಿತಿ ಪಠ್ಯಪರಿಷ್ಕರಣೆ ಮಾಡಿರುವುದನ್ನು ಸಾಹಿತಿ ಡಾ.ಎಸ್.ಎಲ್.ಭೈರಪ್ಪ ಸಮರ್ಥಿಸಿಕೊಂಡಿರುವುದು ಖಂಡನೀಯ. ಭೈರಪ್ಪ ಹಿರಿಯ ಸಾಹಿತಿ, ಅವರ ಬಗ್ಗೆ ನನಗೆ ಅಪಾರ ಗೌರವವಿದೆ. ಅವರು ಬಿಜೆಪಿ ವಕ್ತಾರರಂತೆ ಮಾತನಾಡಬಾರದು ಎಂದು ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಹೇಳಿದ್ದಾರೆ.

ನಗರದ ಕಾಡಾ ಕಚೇರಿ ಆವರಣದಲ್ಲಿ  ತಮ್ಮ ನೂತನ ವಿಧಾನ ಪರಿಷತ್ ಕಚೇರಿಯನ್ನು ಸೋಮವಾರ ಉದ್ಘಾಟನೆಗೊಳಿಸಿ ನಂತರ ಮಾಧ್ಯಮದವರೊಂದಿಗೆ ಅವರು ಮಾತನಾಡುತ್ತಿದ್ದರು.

ಸಾಹಿತಿ ಭೈರಪ್ಪ ಅವರ ಬಗ್ಗೆ ನಮಗೆ ಅಪಾರ ಗೌರವವಿದೆ. ಅವರು ಪಠ್ಯಪರಿಷ್ಕರಣೆ ಬಗ್ಗೆ ಧನಿ ಎತ್ತಿರುವುದು ಸರಿಯಲ್ಲ. ಅವರು ಸಾಹಿತ್ಯ ಲೋಕದ ಸೌಂದರ್ಯ ಹೆಚ್ಚಿಸುವ ಕೆಲಸ ಮಾಡಬೇಕೇ ಹೊರತೂ ಇಡೀ ಸಮಾಜ ವಿರೋಧಿಸುತ್ತಿರುವ ಪಠ್ಯಪರಿಷ್ಕರಣೆಯನ್ನು ಸಮರ್ಥಿಸಿಕೊಂಡಿರುವುದು ಸರಿಯಲ್ಲ. ಅವರು ಬಿಜೆಪಿ ವಕ್ತಾರರಂತೆ ಮಾತನಾಡಬಾರದು. ಬಿಜೆಪಿ ಪರ ವಕಾಲತ್ತು ವಹಿಸಬಾರದು. ಅವರ ಮಾತುಗಳಲ್ಲಿ ರಾಜಕೀಯ ದುರ್ನಾತ ಬರುತ್ತಿದೆ. ಇದು ಅವರಿಗೆ ಶೋಭೆ ತರುವುದಿಲ್ಲ ಎಂದು ಕುಟುಕಿದರು.

ಪಠ್ಯಪರಿಷ್ಕರಣೆ ಪುನರ್ ಪರಿಶೀಲಿಸುವ ವಿಚಾರದಲ್ಲಿ ಸರಕಾರ ಹಠ ಮಾಡಬಾರದು, ಇದನ್ನು ಪ್ರತಿಷ್ಠೆಯಾಗಿಯೂ ತೆಗೆದುಕೊಳ್ಳಬಾರದು, ಮೊದಲು ಪಠ್ಯಕ್ರಮವನ್ನು ಬದಲಾಯಿಸಿ ಶಿಕ್ಷಣ ಕ್ಷೇತ್ರವನ್ನು ಉನ್ನತ ಮಟ್ಟಕ್ಕೆ ಕೊಂಡೊಯ್ಯುವ ಕೆಲಸ ಮಾಡಬೇಕು ಎಂದು ಹೇಳಿದರು.

ಪಠ್ಯ ಪರಿಷ್ಕರಣೆ ಪ್ರಕ್ರಿಯೆ ಯಾವುದೋ ಪಕ್ಷದ ಕಾರ್ಯಕ್ರಮವಲ್ಲ, ಸದ್ಯ ಶಿಕ್ಷಣ ಇಲಾಖೆ ಅಧೋಗತಿಗೆ ಹೋಗುತ್ತಿದೆ. ಶಿಕ್ಷಣ ಇಲಾಖೆ ಗೊಂದಲಕ್ಕೆ ಕಂದಾಯ ಸಚಿವರು ಉತ್ತರ ಕೊಡಬೇಕಾ? ನಗರಾಭಿವೃದ್ಧಿ ಸಚಿವರು ಉತ್ತರಿಸುತ್ತಾರೆ ಎಂದರೆ ಏನರ್ಥ? ಶಿಕ್ಷಣ ಸಚಿವ ನಾಗೇಶ್ ಏನು ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.

ರೋಹಿತ್ ಚಕ್ರತೀರ್ಥ ನೇತೃತ್ವದ ಸಮಿತಿ ಪರಿಷ್ಕರಿಸಿರುವ ಪಠ್ಯಕ್ರಮವನ್ನು ಇಡೀ ನಾಡು ಒಕ್ಕೊರಲಿನಿಂದ ವಿರೋಧಿಸಿದೆ. ಆದ್ದರಿಂದ ಈ ಪಠ್ಯಕ್ರಮವನ್ನು ಹಿಂಪಡೆದು ಪ್ರಸಕ್ತ ಸಾಲಿನಲ್ಲಿ ಹಳೆಯದ್ದನ್ನೇ ಬೋಧಿಸಬೇಕು ಎಂದು ವಿಶ್ವನಾಥ್ ಆಗ್ರಹಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X