Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ವೈಜ್ಞಾನಿಕ ಆಧಾರಿತ ಸಾಕ್ಷ್ಯಾಧಾರಗಳು...

ವೈಜ್ಞಾನಿಕ ಆಧಾರಿತ ಸಾಕ್ಷ್ಯಾಧಾರಗಳು ಅಪರಾಧಗಳ ಪತ್ತೆಗೆ ಸಹಕಾರಿ: ಡಿಸಿಪಿ ಹರಿರಾಮ್ ಶಂಕರ್

ವಾರ್ತಾಭಾರತಿವಾರ್ತಾಭಾರತಿ27 Jun 2022 3:37 PM IST
share
ವೈಜ್ಞಾನಿಕ ಆಧಾರಿತ ಸಾಕ್ಷ್ಯಾಧಾರಗಳು ಅಪರಾಧಗಳ ಪತ್ತೆಗೆ ಸಹಕಾರಿ: ಡಿಸಿಪಿ ಹರಿರಾಮ್ ಶಂಕರ್

ಕೊಣಾಜೆ, ಜೂ.27: ಅಪರಾಧ ಪ್ರಕರಣಗಳಲ್ಲಿ ದೂರುದಾರರು ಹಿಂದೆ ಸರಿದರೂ, ವೈಜ್ಞಾನಿಕ ಆಧಾರಿತ ಸಾಕ್ಷ್ಯಾಧಾರಗಳು ಅಪರಾಧಿಗಳಿಗೆ ಶಿಕ್ಷೆಯನ್ನು ನೀಡುವುದರಲ್ಲಿ ಸಹಕರಿಸುತ್ತದೆ ಎಂದು ಮಂಗಳೂರು ನಗರ ಪೊಲೀಸ್ ಉಪ ಆಯುಕ್ತ ಹರಿರಾಮ್ ಶಂಕರ್  ತಿಳಿಸಿದ್ದಾರೆ.

ಅವರು ದೇರಳಕಟ್ಟೆಯ ನಿಟ್ಟೆ ಎ.ಬಿ. ಶೆಟ್ಟಿ ದಂತ ವಿಜ್ಞಾನ ಸಂಸ್ಥೆಗಳ ಆಶ್ರಯದಲ್ಲಿ ಆವಿಷ್ಕಾರ ಆಡಿಟೋರಿಯಂನಲ್ಲಿ ಕೆ.ಎಸ್. ಹೆಗ್ಡೆ ಮೆಡಿಕಲ್ ಅಕಾಡಮಿಯ ಫಾರೆನ್ಸಿಕ್ ಆಂಡಾಂಟಾಲಜಿ ವಿಭಾಗ, ಫಾರೆನ್ಸಿಕ್ ಮೆಡಿಸಿನ್ ಮತ್ತು ಟಾಕ್ಸಿಕಾಲಜಿ ವಿಭಾಗಗಳ ಆಶ್ರಯದಲ್ಲಿ ಜರುಗಿದ ಫಾರೆನ್ಸಿಕ್ ಆಂಡಾಂಟಾಲಜಿ ಮೊದಲ ಪ್ರಮಾಣ ಪತ್ರವುಳ್ಳ ಕೋರ್ಸ್‌ ಅನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.

 ಅಪರಾಧ ಪತ್ತೆ ಹಚ್ಚುವಿಕೆಗೆ ವೈಜ್ಞಾನಿಕ ವಿಧಾನಗಳನ್ನು ಅನುಸರಿಸಲು ಕರ್ನಾಟಕ ಪೊಲೀಸ್‌ ಹೆಚ್ಚಿನ ಆದ್ಯತೆಯನ್ನು ನೀಡುತ್ತಿದೆ. ಹಲ್ಲುಗಳಲ್ಲಿನ ಕುರುಹುಗಳಿಂದ ಅಪರಾಧಿಗಳ ಪತೆಹಚ್ಚುವ ಸಲುವಾಗಿ ಜೈಲಿನಲ್ಲಿರುವ ಪ್ರತಿಯೊಬ್ಬ ಖೈದಿಯ ದಂತ ಚರಿತ್ರೆಯನ್ನು ಅರಿಯಬೇಕು ಅನ್ನುವ ಕಾನೂನು ಕೂಡ ಜಾರಿಗೆ ಬಂದಿದೆ ಎಂದು ಹೇಳಿದರು.

ಮಂಗಳೂರು ವಿಮಾನ ಅಪಘಾತ, ಕೇರಳದ ಸುಕುಮಾರನ್‌ ಪ್ರಕರಣಗಳಲ್ಲಿ ಡೆಂಟಲ್‌ ಹಿಸ್ಟರಿಯಿಂದ ಗುರುತು ಪತ್ತೆಹಚ್ಚುವಿಕೆ ಸಾಧ್ಯವಾಗಿದೆ ಎಂದರು.

ಕರ್ನಾಟಕ ಪೊಲೀಸ್‌ ವಿಶೇಷ ತಂಡವನ್ನು ರಾಜ್ಯಾದ್ಯಂತ ರಚಿಸಿದೆ. ಅಪರಾಧ ನಡೆದಾಗ ತಂಡ ಸ್ಥಳದಲ್ಲಿ ಸಿಗುವ ಸಾಕ್ಷ್ಯಾಧಾರಗಳನ್ನು ವೈಜ್ಞಾನಿಕವಾಗಿ ಪತ್ತೆ ಹಚ್ಚುವ ಮೂಲಕ ಕಾರ್ಯಾಚರಿಸಲಿದೆ. ಪೊಲೀಸ್‌ ಇಲಾಖೆಗೆ ಫಾರೆನ್ಸಿಕ್‌ ವಿಭಾಗದ ಅಗತ್ಯ ಹೆಚ್ಚಿದೆ. ಈ ನಿಟ್ಟಿನಲ್ಲಿ ಪೊಲೀಸ್‌ ಇಲಾಖೆಯ ಜತೆಗೂ  ಇಂತಹ ಕೋರ್ಸ್‌ ಗಳನ್ನು ನಡೆಸಬೇಕಾಗಿದೆ ಎಂದರು.

ಇಂಡಿಯನ್‌ ಅಕಾಡಮಿ ಆಫ್‌ ಓರಲ್‌  ಮೆಡಿಸಿನ್‌ ರೇಡಿಯಾಲಜಿ ಇದರ ಪ್ರಧಾನ ಕಾರ್ಯದರ್ಶಿ, ಯೆನೆಪೊಯ ದಂತ ಕಾಲೇಜಿನ ಓರಲ್‌  ಮೆಡಿಸಿನ್‌ ರೇಡಿಯಾಲಜಿ ವಿಭಾಗ ಮುಖ್ಯಸ್ಥ ಡಾ.ಪ್ರಶಾಂತ್‌ ಶೆಣೈ ಕೆ. ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಎ.ಬಿ.ಶೆಟ್ಟಿ ದಂತ ಮಹಾವಿದ್ಯಾಲಯದ ಡೀನ್ ಡಾ.ಯು.ಎಸ್ ಕೃಷ್ಣ ನಾಯಕ್ ಮಾತನಾಡಿ, ಈ ಕೋರ್ಸ್‌ ಆರಂಭದಲ್ಲೇ ವಿದ್ಯಾರ್ಥಿಗಳ ಉತ್ತಮ ಪ್ರತಿಕ್ರಿಯೆ ದೊರೆತಿದೆ. ವಾರ್ಷಿಕವಾಗಿ ಎರಡು ಬಾರಿ ಕೋರ್ಸ್‌ ಕೈಗೊಳ್ಳುವ ಕುರಿತು ಚಿಂತನೆಯನ್ನು ನಿಟ್ಟೆ ಪರಿಗಣಿತ ವಿವಿ  ನಡೆಸಲಿದೆ ಎಂದರು.  

ಕೆ.ಎಸ್‌. ಹೆಗ್ಡೆ ವೈದ್ಯಕೀಯ ಕಾಲೇಜಿನ ಫಾರೆನ್ಸಿಕ್‌  ಮೆಡಿಸಿನ್‌ ಆಂಡ್‌ ಟಾಕ್ಸಿಕಾಲಜಿ ವಿಭಾಗ ಮುಖ್ಯಸ್ಥ ಡಾ.ಮಹಾಬಲೇಶ್‌ ಶೆಟ್ಟಿ ಕೆ., ಡಾ.ಸೂರಜ್‌ ಶೆಟ್ಟಿ, ಡಾ.ಜಿ.ಸುಹಾಸ್‌ ಬಾಬು, ಡಾ.ಪುಷ್ಪರಾಜ್‌ ಶೆಟ್ಟಿ ಉಪಸ್ಥಿತರಿದ್ದರು.

ಡಾ.ಕುಮುದಾ ರಾವ್ ಸ್ವಾಗತಿಸಿದರು. ಡಾ.ಊರ್ವಶಿ ಎ. ಶೆಟ್ಟಿ ವಂದಿಸಿದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X