Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಕರ್ನಾಟಕ ದಲಿತ ಸಂಘರ್ಷ ಸಮಿತಿ...

ಕರ್ನಾಟಕ ದಲಿತ ಸಂಘರ್ಷ ಸಮಿತಿ ನೇತೃತ್ವದಲ್ಲಿ 'ಸಂಘಟನಾ ವಿಚಾರ ಕಾರ್ಯಾಗಾರ'

ವಾರ್ತಾಭಾರತಿವಾರ್ತಾಭಾರತಿ27 Jun 2022 4:53 PM IST
share
ಕರ್ನಾಟಕ ದಲಿತ ಸಂಘರ್ಷ ಸಮಿತಿ ನೇತೃತ್ವದಲ್ಲಿ ಸಂಘಟನಾ ವಿಚಾರ ಕಾರ್ಯಾಗಾರ

ಮಂಗಳೂರು: ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ)ಪ್ರೊ. ಬಿ. ಕೃಷ್ಣಪ್ಪ ಸ್ಥಾಪಿತ. ದ. ಕನ್ನಡ ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ಸಂಘಟನೆಯ ಜಿಲ್ಲಾ, ತಾಲೂಕು ಹಾಗೂ ಗ್ರಾಮ ಪದಾಧಿಕಾರಿಗಳ 'ಸಂಘಟನಾ ವಿಚಾರ ಕಾರ್ಯಾಗಾರ'ವನ್ನು ಬಜ್ಪೆ ಸಿದ್ಧಾರ್ಥ ನಗರದ ಸಾಮ್ರಾಟ್ ಅಶೋಕ ಚಕ್ರವರ್ತಿ ಸಭಾಂಗಣದಲ್ಲಿ ರವಿವಾರ  ನಡೆಸಲಾಯಿತು.

ದ.ಸಂ.ಸ. ಹಿರಿಯ ಮುಖಂಡರೂ ಮಂಗಳೂರು ತಾಲೂಕು ಸಂಘಟನಾ  ಸಂಚಾಲಕರೂ ಆಗಿರುವ ರುಕ್ಕಯ್ಯ ಕರಂಬಾರು ಇವರು ಅಂಬೇಡ್ಕರ್ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ದೀಪ ಬೆಳಗಿಸಿ ಕಾರ್ಯಾಗಾರವನ್ನು ಉದ್ಘಾಟಿಸಿದರು.

ಜಿಲ್ಲಾ ಸಂಚಾಲಕರಾದ ರಘು. ಕೆ. ಎಕ್ಕಾರು ಪ್ರಾಸ್ತಾವಿಕವಾಗಿ ಕಾರ್ಯಾಗಾರದ ಉದ್ದೇಶವನ್ನು ತಿಳಿಸಿದರು. ಕಾರ್ಯಗಾರದಲ್ಲಿ ವಿಷಯ ಮಂಡಿಸಿದ ದ. ಸಂ. ಸ. ರಾಜ್ಯ ಸಂಘಟನಾ ಸಂಚಾಲಕರಾದ ಎಂ. ದೇವದಾಸ್ 1980ರ ದಶಕದಲ್ಲಿ ಭದ್ರಾವತಿಯ ಪ್ರೊ. ಬಿ. ಕೃಷ್ಣಪ್ಪರವರು ಕರ್ನಾಟಕ ದಲಿತ ಸಂಘರ್ಷ ಸಮಿತಿಯನ್ನು ಹುಟ್ಟುಹಾಕುವ ಮೂಲಕ ಕರ್ನಾಟಕದ ಅಸಂಘಟಿತ ಶೋಷಿತ ದಲಿತ ಸಮುದಾಯಗಳಲ್ಲಿ ಜಾಗೃತಿಯನ್ನು ಮೂಡಿಸಿ ಹೋರಾಟದ ಬೀಜವನ್ನು ಬಿತ್ತಿದರು. ನಂತರದ ದಿನಗಳಲ್ಲಿ ದಲಿತ ಸಂಘರ್ಷ ಸಮಿತಿಯು ಹಲವಾರು ಭೂ ಹೋರಾಟ, ಮಲಹೊರುವ ಅನಿಷ್ಟ ಪದ್ಧತಿ ವಿರುದ್ಧ ಹೋರಾಟ, ಸಾಮಾಜಿಕ ಶೋಷಣೆ, ಮೇಲ್ವರ್ಗಗಳ ದಬ್ಬಾಳಿಕೆ, ಮಹಿಳೆಯರ ಮೇಲಿನ ದೌರ್ಜನ್ಯಗಳ ವಿರುದ್ಧ ಸಂಘಟಿತ ಹೋರಾಟ ನಡೆಸುವ ಮೂಲಕ ದಲಿತ ಸಮುದಾಯಗಳಲ್ಲಿ ಸ್ವಾಭಿಮಾನ ಹಾಗೂ ಪ್ರಶ್ನಿಸುವ ಮನೋಭಾವವನ್ನು ಮೂಡಿಸಿತು. ಸಂಘಟನೆಯ ಪದಾಧಿಕಾರಿಗಳು ತಮ್ಮ ನೈಜ ಹೊಣೆಗಾರಿಕೆ ಮತ್ತು ಜವಾಬ್ದಾರಿಯನ್ನು ಅರಿತು ಡಾ. ಬಿ. ಆರ್. ಅಂಬೇಡ್ಕರ್ ಹಾಗೂ ಪ್ರೊ. ಬಿ. ಕೃಷ್ಣಪ್ಪ ರವರ ಆಶಯಗಳನ್ನು ಈಡೇರಿಸುವ ಪ್ರಾಮಾಣಿಕ ಪ್ರಯತ್ನ ಮಾಡುವಂತೆ ತಿಳಿಸಿದರು.

ದ.ಸಂ.ಸ.ಹಿರಿಯ ಮುಖಂಡರಾದ ಶ್ರೀಯುತ ನಾರಾಯಣ ಮಣೂರು ಮಾತನಾಡಿ "ಅಂಬೇಡ್ಕರ್ ರವರ ಪ್ರಕಾರ ಬೌದ್ಧ ಧಮ್ಮ ಹಾಗೂ ಬ್ರಾಹ್ಮಣ ಧರ್ಮದ ನಡುವಿನ ಸಂಘರ್ಷವೇ ಭಾರತದ ಇತಿಹಾಸ. ಭಗವಾನ್ ಬುದ್ಧರ ಕಾಲದಿಂದ ಇವತ್ತಿನವರೆಗೂ ಶೇ 3ರಷ್ಟಿರುವ ಮನುವಾದಿಗಳೇ ಎಲ್ಲಾ ಸ್ತರದ ಮುಖ್ಯ ಅಧಿಕಾರ ಸ್ಥಾನವನ್ನು ಅಲಂಕರಿಸಿ ಶೇ 97ರಷ್ಟಿರುವ ಬಹುಜನ ಸಮಾಜವನ್ನು ನಿಯಂತ್ರಿಸುತ್ತಿದ್ದಾರೆ. ಡಾ. ಬಿ. ಆರ್. ಅಂಬೇಡ್ಕರ್ ರವರು ಹೇಳಿದಂತೆ ನಾವು ಬ್ರಾಹ್ಮಣಶಾಹಿ ಹಾಗೂ ಬಂಡವಾಳಶಾಹಿ ಹಿಡಿತದಿಂದ ಹೊರಬಂದು ಸ್ವಾಭಿಮಾನ ಹಾಗೂ ಆತ್ಮಗೌರವದ ಬದುಕು ಕಟ್ಟಿಕೊಳ್ಳಲು ಸಂಘಟನೆಯ ಜವಾಬ್ದಾರಿ ಅತ್ಯಂತ ಮಹತ್ತರವಾದುದು ಎಂದು ತಿಳಿಸಿದರು.

ಕಾರ್ಯಾಗಾರದಲ್ಲಿ ದ. ಸಂ. ಸ. ಹಿರಿಯ ಮುಖಂಡರಾದ ಮಂಜಪ್ಪ ಪುತ್ರನ್ ಹಾಗೂ ಭಾಸ್ಕರ್. ಎಂ. ಇವರು ಸಂಘಟನಾ ಪದಾಧಿಕಾರಿಗಳ ಜವಾಬ್ದಾರಿ ಮತ್ತು ಹೊಣೆಗಾರಿಕೆಯ ಕುರಿತು ಮಾಹಿತಿ ತಿಳಿಸಿದರು. ವೇದಿಕೆಯಲ್ಲಿ ದ.ಸಂ. ಸ. ಜಿಲ್ಲಾ ಮಹಿಳಾ ಸಂಚಾಲಕಿ ಸರೋಜಿನಿ ಬಂಟ್ವಾಳ, ಸಿದ್ಧಾರ್ಥ ನಗರ ಗ್ರಾಮ ಸಂಚಾಲಕರಾದ ಸತೀಶ್ ಸಾಲ್ಯಾನ್ ಉಪಸ್ಥಿತರಿದ್ದರು.

ಜಿಲ್ಲಾ ಸಂಘಟನಾ ಸಂಚಾಲಕರಾದ ಕೃಷ್ಣಾನಂದ.ಡಿ. ಕಾರ್ಯಗಾರ ನಿರ್ವಹಿಸಿ, ಬಾಲು ಕುಂದರ್ ಧನ್ಯವಾದ ಸಮರ್ಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X