Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಬಜ್ಪೆ : ನಾಗರಿಕ ಹೋರಾಟ ಸಮಿತಿಯ...

ಬಜ್ಪೆ : ನಾಗರಿಕ ಹೋರಾಟ ಸಮಿತಿಯ ನೇತೃತ್ವದಲ್ಲಿ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ27 Jun 2022 8:10 PM IST
share
ಬಜ್ಪೆ : ನಾಗರಿಕ ಹೋರಾಟ ಸಮಿತಿಯ ನೇತೃತ್ವದಲ್ಲಿ ಪ್ರತಿಭಟನೆ

ಮಂಗಳೂರು: ಬಜ್ಪೆ ಪಟ್ಟಣ ಪಂಚಾಯತ್ ಆಗಿ‌ ಮೇಲ್ದರ್ಜೆಗೆ ಏರಿದ ಬಳಿಕ ಕನಿಷ್ಠ ಮೂಲ‌ ಸೌಕರ್ಯಗಳನ್ನು ಜನ ಸಾಮಾನ್ಯರಿಗೆ ನೀಡುವ ಬದಲು ದುಬಾರಿ ಮನೆ ತೆರಿಗೆ, ವಿದ್ಯುತ್ ದರ, ನೀರಿನ ದರ ಹಾಗೂ ಅಂಗಡಿಗಳ ಪರವಾನಿಗೆ ಗೆ 3ರಿಂದ ನಾಲ್ಕು ಪಟ್ಟು ಹೆಚ್ಚು ಪಡೆಯುತ್ತಾ ಜನರನ್ನು ಕತ್ತಲಿನಲ್ಲಿ‌ ಇಡುವ ಪ್ರಯತ್ನ ಮಾಡುತ್ತಿದೆ ಎಂದು ಆರೋಪಿಸಿ ಸಾರ್ವಜನಿಕರು ಪಕ್ಷಾತೀತವಾಗಿ ನಾಗರಿಕ ಹೋರಾಟ ಸಮಿತಿಯ ನೇತೃತ್ವದಲ್ಲಿ ಸೋಮವಾರ ಬಜಪೆ ಬಸ್ ನಿಲ್ದಾಣದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.

ಈ ವೇಳೆ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಬಜ್ಪೆ ಗ್ರಾಮ ಪಂಚಾಯತ್ ಮಾಜಿ ಸದಸ್ಯ ಸಿರಾಜ್ ಮಾತನಾಡಿ, ಕಳೆದ ಏಪ್ರಿಲ್ ತಿಂಗಳಲ್ಲಿ ಬಜ್ಪೆ ಗ್ರಾಮ ಪಂಚಾಯತ್ ಅನು ಪಟ್ಟಣ ಪಂಚಾಯತ್ ಆಗಿ ಸರಕಾರ ಘೋಷಿಸಿತ್ತು. ನಾವೆಲ್ಲರೂ ಕೋಟಿಗಟ್ಟಲೆ ಅನುದಾನ ಬರುತ್ತದೆ ಬಜಪೆ ಮಂಗಳೂರು ನಗರದಂತೆ ಅಭಿವೃದ್ಧಿಯಾಗುತ್ತದೆ ಎಂದು ತಿಳಿದುಕೊಂಡಿದ್ದೆವು ಆದರೆ ಅಭಿವೃದ್ಧಿಯ ಕನಸು ಕಂಡಿದ್ದ ಬಜ್ಪೆಯ 18,500 ನಾಗರಿಕರಿಗೆ ಕನಿಷ್ಠ ಮೂಲಸೌಕರ್ಯ ಒದಗಿಸುವ ಬದಲು ತೆರಿಗೆ ಹೆಸರಿನಲ್ಲಿ ಪಟ್ಟಣ ಪಂಚಾಯತ್ ಗಳಿಗೆ ಮಾಡುತ್ತಿದೆ ಎಂದು ಆರೋಪಿಸಿದರು.

ಪಟ್ಟಣ ಪಂಚಾಯತ್ ಘೋಷಣೆಯಾದ ಬಳಿಕ ಮನೆ ತೆರಿಗೆ ಮೂರು ಪಟ್ಟು ಹೆಚ್ಚಿಸಲಾಗಿದೆ. ವಿದ್ಯುತ್ ಬಿಲ್ಲನ್ನು ದುಪಟ್ಟ ಮಾಡಲಾಗಿದೆ. ಅಂಗಡಿಗಳ ಪರವಾನಿಗೆ 500 ಶುಲ್ಕ ರೂ.ಯಿಂದ 2000 ರೂ.ಗೆ ಹೆಚ್ಚಿಸಲಾಗಿದೆ. ಇದರಿಂದ ಜನರು ರೋಸಿ ಹೋಗಿದ್ದಾರೆ ಎಂದರು.

ಬಳಿಕ ಮಾತನಾಡಿದ ದಸಂಸ ರಾಜ್ಯ ಸಂಘಟನಾ ಸಮಿತಿ ಸದಸ್ಯ ದೇವದಾಸ್, ಮಳವೂರು ಕೆಂಜಾರು ಬಜ್ಪೆ ಈ ಮೂರು ಪಂಚಾಯತಿಗಳನ್ನು ಸೇರಿಸಿಕೊಂಡು ಪಟ್ಟಣ ಪಂಚಾಯತ ಗ್ರಾಮಪಂಚಾಯತ್ ಅನುಸರಸಲಾಗಿತ್ತು
ಅಭಿವೃದ್ಧಿ ಮತ್ತು ತೆರಿಗೆ ಕಡಿಮೆಯಾಗಬಹುದೆಂದು ಎಲ್ಲರೂ ಹರ್ಷ ವ್ಯಕ್ತಪಡಿಸಿದ್ದೆವು ಆದರೆ ಇದಕ್ಕೆ ತದ್ವಿರುದ್ಧ ವಾಗಿ ಪಟ್ಟಣ ಪಂಚಾಯತ್ ಆಡಳಿತ ನಡೆಸುತ್ತಿದೆ.

ಬಜಪೆ ಪಟ್ಟಣ ಪಂಚಾಯತ್ ಆಗಿ ಮೇಲ್ದರ್ಜೆಗೆ ಏರಿದ ಬಳಿಕ ಇಲ್ಲಿ ಆಡಳಿತ ಸಮಿತಿಯ ರಚನೆಯಾಗಿಲ್ಲ ಆದ್ದರಿಂದ ಇಲ್ಲಿ ಶೀಘ್ರ ಆಡಳಿತ ಸಮಿತಿಯ ರಚನೆಯಾಗಬೇಕಿದೆ. ಆ ಮೂಲಕ ಅಧಿಕಾರಿಗಳು ಮಾಡುತ್ತಿರುವ ತೆರಿಗೆ ಹೆಚ್ಚಳ ಸಹಿತ ಇತರ ಹೆಚ್ಚುವರಿ ಸುಳ್ಳುಗಳಿಂದ ಜನಸಾಮಾನ್ಯರಿಗೆ ಮುಕ್ತಿ ದೊರೆಯಲಿದೆ. ಇಂದು ಸಾಂಕೇತಿಕವಾಗಿ ಪ್ರತಿಭಟನೆಯನ್ನು ಮಾಡಿ ಅಧಿಕಾರಿ ವರ್ಗವನ್ನು ಎಚ್ಚರಿಸುವ ಕೆಲಸ ಮಾಡಿದ್ದೇವೆ ನಮ್ಮ ಬೇಡಿಕೆಗಳು ಈಡೇರದಿದ್ದರೆ ಕಾನೂನು ಬದ್ಧ ರೀತಿಯಲ್ಲಿ ಉಗ್ರ ಹೋರಾಟವನ್ನು ನಡೆಸಲಾಗುವುದು ಎಂದು ಕರ್ನಾಟಕ ದಸಂಶದ ಜಿಲ್ಲಾ ಸಂಚಾಲಕರಾದ ರಘು ಕೆ. ಎಕ್ಕಾರು ಎಚ್ಚರಿಕೆ ನೀಡಿದರು.

"ಬಜ್ಪೆ ಯನ್ನು ಪಟ್ಟಣ ಪಂಚಾಯತ್ ಆಗಿ ಮೇಲ್ದರ್ಜೆಗೆ ಏರಿಸಲಾಗಿದೆ ಆದರೂ ಗ್ರಾಮಸ್ಥರಿಗೆ ಯಾವುದೇ ಸೇವೆಗಳು ಲಭ್ಯವಾಗುತ್ತಿಲ್ಲ ಇಲ್ಲಿನ ಆರೋಗ್ಯಕೇಂದ್ರ ಸಂಜೆ 5 ಗಂಟೆಗೆ ಬಾಗಿಲು ಮುಚ್ಚಿ ಕೊಳ್ಳುತ್ತಿದೆ ಕೂಡ ಐದು ಗಂಟೆಗೆ ಬಂದು ಮಾಡಲಾಗುತ್ತಿದೆ 24 ಗಂಟೆ ಸೇವೆ ನೀಡಬೇಕಿದ್ದ ಸಾರ್ವಜನಿಕ ಇಲಾಖೆಗಳು ಜನರಿಗೆ ಸ್ಪಂದಿಸುತ್ತಿಲ್ಲ".
-ಸಿರಾಜ್
ಬಜ್ಪೆ ಗ್ರಾಮ ಪಂಚಾಯತ್ ಮಾಜಿ ಸದಸ್ಯ

"ಬಜ್ಪೆ ಪಟ್ಟಣ ಪಂಚಾಯತ್‌  ಆಗಿಯೇ ಮುಂದುವರಿಸುವುದಾದರೆ ಅದಕ್ಕೆ ಪೂರಕವಾದ ಅಭಿವೃದ್ಧಿಗಳ ಜೊತೆಗೆ ಸಾರ್ವಜನಿಕರಿಗೆ ಮೂಲ ಸೌಕರ್ಯಗಳನ್ನು ಒದಗಿಸಬೇಕು. ತೆರಿಗೆ ಸಂಗ್ರಹಕ್ಕಾಗಿ ಬಜ್ಪೆ ಗ್ರಾಮ ಪಂಚಾಯತ್ ಅನ್ನು ಪಟ್ಟಣ ಪಂಚಾಯತ್ ಆಗಿ ಮೇಲ್ದರ್ಜೆಗೇರಿಸಿದ್ದರೆ, ಅಂತಹ ಪಟ್ಟಣ ಪಂಚಾಯತ್ ನಮಗೆ ಅಗತ್ಯವಿಲ್ಲ. ನಮಗೆ ಗ್ರಾಮ ಪಂಚಾಯತ್ ಮಾತ್ರವೇ ಸಾಕು. ಇದು‌ ಸರಕಾರ ನಾಗರಿಕರಿಗೆ ಸರಕಾರ ಮಾಡುತ್ತಿರುವ ದ್ರೋಹ. ಈ ಪರಿಸ್ಥಿತಿ ಇದೇ ರೀತಿ ಮುಂದುವರಿದರೆ ಈಗಿರುವ ಪಟ್ಟಣ ಪಂಚಾಯಿತಿಗೆ ಬೀಗ ಜಡಿದು ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಎಸ್ಡಿಪಿಐ ಮುಖಂಡ ಅಬೂಬಕ್ಕರ್ ಕುಳಾಯಿ ಎಚ್ಚರಿಕೆ ನೀಡಿದ್ದಾರೆ.

"ಈ ಪ್ರದೇಶದಲ್ಲಿ ಎಲ್ಲರೂ ಬಡವರಾಗಿದ್ದಾರೆ. ಗ್ರಾಮ ಪಂಚಾಯತನ್ನು ಪಟ್ಟಣ ಪಂಚಾಯಿತಿ ಮೇಲ್ದರ್ಜೆಗೆ ಏರಿಸಿರುವುದರಿಂದ ಬಲಿಪಶುಗಳಾಗುತ್ತಿರುವುದು ಇಲ್ಲಿನ ಕೂಲಿ ಕಾರ್ಮಿಕರು, ಹಿಂದುಳಿದ ವರ್ಗ ಮತ್ತು ದಲಿತರು.

ರಘು ಕೆ. ಎಕ್ಕಾರು
ಕರ್ನಾಟಕ ದಸಂಸ ಜಿಲ್ಲಾ ಸಂಚಾಲಕ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X