Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ತಲಪಾಡಿ ಗ್ರಾಮ ಸಭೆಯಲ್ಲಿ ಕುಡಿಯುವ ನೀರು,...

ತಲಪಾಡಿ ಗ್ರಾಮ ಸಭೆಯಲ್ಲಿ ಕುಡಿಯುವ ನೀರು, ತೆರಿಗೆ ಬಗ್ಗೆ ‌ಚರ್ಚೆ

ವಾರ್ತಾಭಾರತಿವಾರ್ತಾಭಾರತಿ27 Jun 2022 10:30 PM IST
share
ತಲಪಾಡಿ ಗ್ರಾಮ ಸಭೆಯಲ್ಲಿ ಕುಡಿಯುವ ನೀರು, ತೆರಿಗೆ ಬಗ್ಗೆ ‌ಚರ್ಚೆ

ಉಳ್ಳಾಲ: ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಗ್ರಾಮಸ್ಥರು ಸಭೆಯಲ್ಲಿ ಪ್ರಸ್ತಾಪಿಸಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಘಟನೆ ತಲಪಾಡಿ ಗ್ರಾಮ ಸಭೆಯಲ್ಲಿ ನಡೆದಿದೆ.

ತಲಪಾಡಿ ಎಪಿಜೆ ಅಬ್ದುಲ್ ಕಲಾಂ ಸಭಾಭವನದಲ್ಲಿ ಸೋಮವಾರ ಅಧ್ಯಕ್ಷೆ ಪುಷ್ಪಾವತಿ ಅವರ ಅಧ್ಯಕ್ಷತೆಯಲ್ಲಿ ನಡೆದ ಗ್ರಾಮ ಸಭೆಯಲ್ಲಿ ಪಿಡಿಒ ಕೇಶವ ಪೂಜಾರಿ  ಗ್ರಾಮದ ವಿವಿಧ ವಾರ್ಡ್ ಗಳ ಸಮಸ್ಯೆಗಳ ಪರಿಹಾರಕ್ಕೆ ಕೈಗೊಳ್ಳಲಾದ ಕ್ರಮ ಹಾಗೂ ನಿರ್ಣಯ ಗಳ ಬಗ್ಗೆ  ಸಭೆಯಲ್ಲಿ ಪ್ರಸ್ತಾಪಿಸಿದರು.

ಈ ವೇಳೆ ಗ್ರಾಮಸ್ಥ ಮಹಿಳೆಯೊಬ್ಬರು ನನ್ನ ಮನೆಗೆ ಕುಡಿಯುವ ನೀರು ಪಂಚಾಯತ್ ಒದಗಿಸಿಲ್ಲ. ಇ ಕಾರಣ ದಿಂದ ಹಣ ಕೊಟ್ಟು ನೀರು ತರಬೇಕಾದ ಪರಿಸ್ಥಿತಿ ಬಂತು. ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಪಂಚಾಯತ್ ನ ಗಮನ ಸೆಳೆದರೂ ಪಂಚಾಯತ್ ಕಡೆಗಣಿಸಿದೆ ಎಂದು ತನ್ನ ನೋವನ್ನು ತೋಡಿಕೊಂಡರು. ಈ ಸಂದರ್ಭ ಪಿಡಿಒ ಪಂಪ್ ನ ಸಮಸ್ಯೆ ಯಿಂದ ನೀರು ಒದಗಿಸಲು ಸಾಧ್ಯ ಆಗಿಲ್ಲ ಎಂದು  ಉತ್ತರ ನೀಡಿದಾಗ ಸಭೆಯಲ್ಲಿ ಆಕ್ರೋಶ ವ್ಯಕ್ತವಾಯಿತು.

ಕುಡಿಯುವ ನೀರು ಒದಗಿಸಲು ಅನುದಾನ ಮೀಸಲಿಟ್ಟಿದ್ದೀರಿ.ಆದರೆ ಎಪ್ರಿಲ್ ತಿಂಗಳಿನಿಂದ ಸಮರ್ಪಕವಾಗಿ ನೀರು ಒದಗಿಸಲು ಯಾಕೆ ಸಾಧ್ಯವಾಗಿಲ್ಲ ಎಂದು ಪ್ರಶ್ನಿಸಿದ ಗ್ರಾಮಸ್ಥರು ಅಧಿಕಾರಿಗಳನ್ನು ತರಾಟೆಗೆ ತೆಗೆದು ಕೊಂಡರು. ಈ ವೇಳೆ ಪಿಡಿಒ ಕೇಶವ ಪೂಜಾರಿ ಉತ್ತರಿಸಿ ಎ.1 ರಿಂದ ಮೇ 27 ವರೆಗೆ ನೀರು ಒದಗಿಸುವ ವ್ಯವಸ್ಥೆ ಮಾಡಲಾಗಿದೆ. ಮೇ ತಿಂಗಳ ಅಂತ್ಯದಲ್ಲಿ ಮಳೆ ಬಂದ ಕಾರಣ ನೀರು ಸರಬರಾಜು ನಿಲ್ಲಿಸಿದ್ದೇವೆ ಎಂದರು.

ಕುಡಿಯುವ ನೀರಿನ ವಿಚಾರದಲ್ಲಿ ಸಭೆಯಲ್ಲಿ ಕೆಲಕಾಲ ಕೋಲಾಹಲದ ವಾತಾವರಣ ನಿರ್ಮಾಣವಾಯಿತು.

ರಾಷ್ಟ್ರೀಯ ಹೆದ್ದಾರಿ ಬಳಿ ಚರಂಡಿ, ತಂಗುದಾಣ ಸರಿಯಾಗಿಲ್ಲ.ಈ  ಕಾರಣ ದಿಂದ ಕೆಲವು ಮನೆಗಳಿಗೆ ನೀರು ನುಗ್ಗಿದೆ.ಈ ಬಗ್ಗೆ ಲಿಖಿತ ರೂಪದಲ್ಲಿ ಅರ್ಜಿ ನೀಡಿ ಹೆದ್ದಾರಿ ಇಲಾಖೆ ಅಧಿಕಾರಿಗಳನ್ನು ಸಭೆ ಗೆ ಕರೆಸಬೇಕು ಎಂದು ಒತ್ತಾಯಿಸಿದರೂ ಯಾಕೆ ಕರೆಸಲಿಲ್ಲ ಎಂದು ಪ್ರಶ್ನಿಸಿ ಗ್ರಾಮಸ್ಥರೊಬ್ಬರು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಇದಕ್ಕೆ ಸಮರ್ಪಕವಾಗಿ ಉತ್ತರ ಅಧಿಕಾರಿಗಳು ನೀಡದ ಹಿನ್ನೆಲೆಯಲ್ಲಿ ಆಕ್ರೋಶ ಗೊಂಡ ಅವರು ಟೇಬಲ್ ಮುಂದೆ ಜಮಾಯಿಸಿ ಉತ್ತರ ನೀಡುವಂತೆ ಒತ್ತಾಯಿಸಿದರು.

ಈ ವೇಳೆ ಪಿಡಿಒ ಕೇಶವ ಪೂಜಾರಿ ಅವರು ನಿಮ್ಮ ಲಿಖಿತ ಅರ್ಜಿ ರಾ.ಹೆ.ಇಲಾಖೆಗೆ ನೀಡಲಾಗಿದೆ. ರಾ.ಹೆ. ಇಲಾಖೆ ಅಧಿಕಾರಿಗಳನ್ನು ಸಭೆಗೆ ಬರಬೇಕೆಂದು ಆಹ್ವಾನ ನೀಡಲಾಗಿದೆ.ಕ್ಷಣದಲ್ಲಿ ಅವರಿಗೆ ಮಾಹಿತಿ ನೀಡಿ ಕರೆಸುವ ವ್ಯವಸ್ಥೆ ಮಾಡುತ್ತೇವೆ ಎಂದರು.

ಅರ್ಧದಲ್ಲಿ ಎದ್ದು ಹೋದ ಅಧ್ಯಕ್ಷರು

ಸಭೆಯಲ್ಲಿ ತೆರಿಗೆ ಮತ್ತು ನೀರಿನ ಚರ್ಚೆ ನಡೆಯುವಾಗಲೇ ಸಭೆ ಮುಗಿಸದೇ ಅಧ್ಯಕ್ಷರು ಅರ್ಧದಲ್ಲೇ ಎದ್ದು ಹೋಗಿದ್ದು ಅಭಾಸವಾಗಿ ಕಂಡು ಬಂತು. ಈ ವೇಳೆ ನೋಡೆಲ್ ಅಧಿಕಾರಿ ಉಪಾಧ್ಯಕ್ಷರು ಇದ್ದಾರೆ ಸಭೆ ಮುಂದುವರಿಸಿ ಎಂದು ಸೂಚಿಸಿದರು.

ಮನೆ ತೆರಿಗೆ ಏರಿಕೆ ಮಾಡಿದ ವಿಚಾರ ದಲ್ಲಿ ಸಭೆಯಲ್ಲಿ ವ್ಯಾಪಕ  ಚರ್ಚೆ ನಡೆಯಿತು.ಇದಕ್ಕೆ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿ ತೆರಿಗೆ ಇಳಿಕೆ ಮಾಡಲು ಒತ್ತಾಯಿಸಿ ದರು. ಕೊರೋನ ಬಳಿಕ ಮಹಿಳಾ ಸಭೆ ನಡೆಯಲಿಲ್ಲ. ಮಹಿಳಾ ಸಭೆ ಯಾಕೆ ಕರೆಯುವುದಿಲ್ಲ ಎಂದು ಗ್ರಾಮಸ್ಥ ಮಹಿಳೆಯೊಬ್ಬರು ಪ್ರಶ್ನಿಸಿ ಅಧ್ಯಕ್ಷರನ್ನು ತರಾಟೆಗೆ ತೆಗೆದು ಕೊಂಡರು. ಈ ವೇಳೆ ಪಿಡಿಒ ಮುಂದಿನ ಹಂತದಲ್ಲಿ ಮಹಿಳಾ ಸಭೆ ನಡೆಸಲು ವ್ಯವಸ್ಥೆ ಮಾಡುವುದಾಗಿ ತಿಳಿಸಿದರು.

ಕೃಷಿ ಇಲಾಖೆಯ ಸಹಾಯಕ ನಿರ್ದೇಶಕರು ಮೀನಾ  ನೋಡೆಲ್ ಅಧಿಕಾರಿಯಾಗಿದ್ದರು. ಸಭೆಯಲ್ಲಿ ತಲಪಾಡಿ ಗ್ರಾಮ ಕರಣಿಕ ಶಿಲ್ಪ, ಪಿಡಿಒ ಕೇಶವ ಪೂಜಾರಿ, ತೋಟಗಾರಿಕಾ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಆರೋಗ್ಯ ಇಲಾಖೆ, ಮೆಸ್ಕಾಂ, ಶಿಕ್ಷಣ, ಕೃಷಿ, ಅರಣ್ಯ ಅಬಕಾರಿ, ಪೊಲೀಸ್, ಪಶು ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X