Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಜಿ7 ನಾಯಕರಿಂದ 600 ಬಿಲಿಯನ್ ಡಾಲರ್...

ಜಿ7 ನಾಯಕರಿಂದ 600 ಬಿಲಿಯನ್ ಡಾಲರ್ ಯೋಜನೆ ಅನಾವರಣ

ಅಭಿವೃದ್ಧಿಶೀಲ ದೇಶಗಳಲ್ಲಿ ಚೀನಾದ ಬೆಲ್ಟ್ ಆ್ಯಂಡ್ ರೋಡ್ ಉಪಕ್ರಮಕ್ಕೆ ಪ್ರತಿಸ್ಪರ್ಧಿ

ವಾರ್ತಾಭಾರತಿವಾರ್ತಾಭಾರತಿ27 Jun 2022 10:35 PM IST
share

ಎಲ್ಮಾವ್(ಜರ್ಮನಿ),ಜೂ.27: ಚೀನಾದ ಬೆಲ್ಟ್ ಆ್ಯಂಡ್ ರೋಡ್ ಉಪಕ್ರಮ (ಬಿಆರ್ಎ)ಕ್ಕೆ ಪ್ರತಿಸ್ಪರ್ಧಿಯಾಗಿ ಭಾರತದಂತಹ ಅಭಿವೃದ್ಧಿಶೀಲ ದೇಶಗಳಲ್ಲಿ ಪಾರದರ್ಶಕವಾದ ಮತ್ತು ಚಿತ್ರಣವನ್ನೇ ಬದಲಿಸಬಲ್ಲ ಮೂಲಸೌಕರ್ಯ ಯೋಜನೆಗಳನ್ನು ತಲುಪಿಸಲು 2027ರ ವೇಳೆಗೆ 600 ಶತಕೋಟಿ ಡಾ.ಗಳ ನಿಧಿಯನ್ನು ಕ್ರೋಡೀಕರಿಸುವ ಮಹತ್ವಾಕಾಂಕ್ಷೆಯ ಯೋಜನೆಯನ್ನು ಅಮೆರಿಕದ ಅಧ್ಯಕ್ಷ ಜೋ ಬೈಡೆನ್ ಮತ್ತು ಇತರ ಜಿ7 ನಾಯಕರು ಅನಾವರಣಗೊಳಿಸಿದ್ದಾರೆ.

ಇಲ್ಲಿ ಜಿ7 ಶೃಂಗಸಭೆಯಲ್ಲಿ ರವಿವಾರ ಅನಾವರಣಗೊಳಿಸಲಾದ ‘ಜಾಗತಿಕ ಮೂಲಸೌಕರ್ಯ ಮತ್ತು ಹೂಡಿಕೆಗಾಗಿ ಪಾಲುದಾರಿಕೆ (ಪಿಜಿಐಐ)’ಯು ಕಳೆದ ವರ್ಷ ಇಂಗ್ಲಂಡ್‌ನಲ್ಲಿ ನಡೆದಿದ್ದ ಜಿ7 ಮಾತುಕತೆಗಳಲ್ಲಿ ಪ್ರಕಟಿಸಲಾಗಿದ್ದ ಯೋಜನೆಯನ್ನು ಮತ್ತೆ ಮುನ್ನೆಲೆಗೆ ತಂದಿದೆ.

 ಜಿ7 ಗುಂಪಿನ ನೂತನ ಜಾಗತಿಕ ಮೂಲಸೌಕರ್ಯ ಪಾಲುದಾರಿಕೆ ಯೋಜನೆಯು ನೆರವು ಅಲ್ಲ,ದಾನವೂ ಅಲ್ಲ ಎನ್ನುವುದನ್ನು ಸ್ಪಷ್ಟಪಡಿಸಿದ ಬೈಡೆನ್,‘ಇದು ಅಮೆರಿಕದ ಜನರು ಸೇರಿದಂತೆ ಪ್ರತಿಯೊಬ್ಬರಿಗೂ ಪ್ರತಿಫಲವನ್ನು ನೀಡುವ ಹೂಡಿಕೆಯಾಗಿದೆ ಮತ್ತು ನಮ್ಮೆಲ್ಲರ ಆರ್ಥಿಕತೆಗಳನ್ನು ಹೆಚ್ಚಿಸಲಿದೆ ’ಎಂದು ಹೇಳಿದ್ದಾರೆ.
ಚೀನದ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರ ಬಹು ಲ.ಕೋ.ಡಾಲರ್‌ಗಳ ಬಿಆರ್‌ಐ ಹಲವಾರು ಅಭಿವೃದ್ಧಿಶೀಲ ದೇಶಗಳನ್ನು ಅತಿಯಾದ ಸಾಲದ ಸುಳಿಯಲ್ಲಿ ಸಿಲುಕಿಸಿದ್ದಕ್ಕಾಗಿ ವ್ಯಾಪಕ ಟೀಕೆಗೆ ಗುರಿಯಾಗಿದೆ.

ಪಿಜಿಐಐ ಅನ್ನು ಚೀನಾದ ಬಿಆರ್‌ಐ ಅನ್ನು ಎದುರಿಸಲು ಮಾರ್ಗೋಪಾಯ ಎಂದು ಶ್ಲಾಘಿಸಲಾಗಿದೆ.
2013ರಲ್ಲಿ ಆರಂಭಗೊಂಡಿದ್ದ ಬಿಆರ್‌ಐ ಬಂದರುಗಳು,ರಸ್ತೆಗಳು ಮತ್ತು ಸೇತುವೆಗಳಂತಹ ಮೂಲಸೌಕರ್ಯ ನಿರ್ಮಾಣಕ್ಕಾಗಿ ಅಭಿವೃದ್ಧಿಶೀಲ ದೇಶಗಳಿಗೆ ಹಣಕಾಸನ್ನು ಒದಗಿಸುತ್ತದೆ. ಇದು ವ್ಯಾಪಾರ ಸಂಬಂಧಗಳನ್ನು ಹೆಚ್ಚಿಸಿದೆಯಾದರೂ ‘ಸುಲಿಗೆಯ ಸಾಲ’ಗಳನ್ನು ನೀಡುವ ಸಾಧನವಾಗಿದೆ ಎಂದು ಟೀಕೆಗೊಳಗಾಗಿದೆ. ಸಾಲದ ಸುಳಿಯಲ್ಲಿ ಸಿಲುಕಿರುವ ಶ್ರೀಲಂಕಾದಂತಹ ದೇಶಗಳು ತಮ್ಮ ಸಾಲವನ್ನು ಮರುಪಾವತಿಸಲು ವಿಫಲಗೊಂಡರೆ ತಮ್ಮ ಪ್ರಮುಖ ಸ್ವತ್ತುಗಳನ್ನು ಚೀನಾಕ್ಕೆ ಬಿಟ್ಟುಕೊಡುವುದನ್ನು ಇದು ಅನಿವಾರ್ಯವಾಗಿಸುತ್ತದೆ.
ಪಿಜಿಐಐ ಯೋಜನೆಯು ಪ್ರಜಾಪ್ರಭುತ್ವಗಳೊಂದಿಗೆ ಪಾಲುದಾರಿಕೆಯ ಸದೃಢ ಲಾಭಗಳನ್ನು ಪಡೆಯಲು ದೇಶಗಳಿಗೆ ಅವಕಾಶವನ್ನು ಕಲ್ಪಿಸುತ್ತದೆ ಎಂದು ಬೈಡೆನ್ ಹೇಳಿದ್ದಾರೆ.

ಪಿಜಿಐಐ ಅಡಿ ಅಮೆರಿಕದ ಅಂತರರಾಷ್ಟ್ರೀಯ ಹಣಕಾಸು ನಿಗಮವು ಕೃಷಿ ತಂತ್ರಜ್ಞಾನ ಮತ್ತು ಹವಾಮಾನ ಸುಸ್ಥಿರತೆ ನಿಧಿ 3ರಲ್ಲಿ 30 ಮಿ.ಡಾ.ವರೆಗೆ ಹೂಡಿಕೆ ಮಾಡಲಿದೆ ಎಂದು ಶ್ವೇತಭವನದ ಯೋಜನಾ ವರದಿಯಲ್ಲಿ ಹೇಳಲಾಗಿದೆ. ಇದು ಭಾರತದಲ್ಲಿ ಕೃಷಿ,ಆಹಾರ ವ್ಯವಸ್ಥೆಗಳು, ಹವಾಮಾನ ಮತ್ತು ಗ್ರಾಮೀಣ ಆರ್ಥಿಕತೆಯ ಭವಿಷ್ಯ ನಿರ್ಮಾಣಗಳಲ್ಲಿ ಹೂಡಿಕೆ ಮಾಡುವ ಬಂಡವಾಳ ನಿಧಿಯಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X