Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರಾಜ್ಯದಲ್ಲಿ ಜು.1ರಿಂದ ವಿದ್ಯುತ್ ದರ...

ರಾಜ್ಯದಲ್ಲಿ ಜು.1ರಿಂದ ವಿದ್ಯುತ್ ದರ ಹೆಚ್ಚಳ; ಗ್ರಾಹಕರಿಂದ ಇಂಧನ ವೆಚ್ಚ ಹೊಂದಾಣಿಕೆ ಶುಲ್ಕ ಸಂಗ್ರಹ

ವಾರ್ತಾಭಾರತಿವಾರ್ತಾಭಾರತಿ28 Jun 2022 6:04 PM IST
share
ರಾಜ್ಯದಲ್ಲಿ ಜು.1ರಿಂದ ವಿದ್ಯುತ್ ದರ ಹೆಚ್ಚಳ; ಗ್ರಾಹಕರಿಂದ ಇಂಧನ ವೆಚ್ಚ ಹೊಂದಾಣಿಕೆ ಶುಲ್ಕ ಸಂಗ್ರಹ

ಬೆಂಗಳೂರು, ಜೂ.28: ಅಗತ್ಯ ವಸ್ತುಗಳು, ಪೆಟ್ರೋಲ್, ಡಿಸೇಲ್ ದರ ಏರಿಕೆಯಿಂದ ಕಂಗೆಟ್ಟಿರುವ ಜನಸಾಮಾನ್ಯರ ಮೇಲೆ ರಾಜ್ಯ ಸರಕಾರ ಮತ್ತೊಂದು ಹೊರೆ ಹಾಕಿದ್ದು, ಜುಲೈ 1ರಿಂದ ಅನ್ವಯವಾಗುವಂತೆ ಪ್ರತಿ ತಿಂಗಳು 100 ಯೂನಿಟ್ ವಿದ್ಯುತ್ ಬಳಸುವ ಗ್ರಾಹಕರಿಂದ ಹೆಚ್ಚುವರಿಯಾಗಿ ಪ್ರತಿ ಯೂನಿಟ್‌ಗೆ 19 ರಿಂದ 31 ಪೈಸೆ ಸಂಗ್ರಹಿಸಲು ರಾಜ್ಯ ವಿದ್ಯುತ್ ನಿಯಂತ್ರಣ ಆಯೋಗ(ಕೆಇಆರ್‌ಸಿ) ನಿರ್ಧರಿಸಿದೆ.

2021–22ನೇ ಸಾಲಿನ ಕೊನೆಯ ಎರಡು ತ್ರೈಮಾಸಿಕದಲ್ಲಿ ಕಲ್ಲಿದ್ದಲು ದರ ಹೆಚ್ಚಳವಾಗಿದೆ. ಹೀಗಾಗಿ, ಕಲ್ಲಿದ್ದಲು ಖರೀದಿಗೆ ಮಾಡಿರುವ ವೆಚ್ಚವನ್ನು ಗ್ರಾಹಕರಿಂದ ಸಂಗ್ರಹಿಸಲು ಅವಕಾಶ ಮಾಡಿಕೊಡುವಂತೆ ಎಸ್ಕಾಂಗಳು ಕೆಇಆರ್‌ಸಿಗೆ ಪಸ್ತಾವನೆ ಸಲ್ಲಿಸಿದ್ದವು. ಅದರ ಹಿನ್ನೆಲೆಯಲ್ಲಿ ಜು.1ರಿಂದ ಡಿ.31ರವರೆಗೆ ಇಂಧನ ವೆಚ್ಚ ಹೊಂದಾಣಿಕೆ ಶುಲ್ಕ(ಎಫ್‌ಎಸಿ) ಸಂಗ್ರಹಿಸಲು ಅನುವು ಮಾಡಿಕೊಡಲಾಗಿದೆ.

ಈ ಇಂಧನ ವೆಚ್ಚ ಹೊಂದಾಣಿಕೆ ಶುಲ್ಕವು ಮೆಸ್ಕಾಂ ವಸೂಲಿ ಮಾಡುವ ಮಂಗಳೂರು ವಿಶೇಷ ಆರ್ಥಿಕ ವಲಯ(ಎಸ್‌ಇಝೆಡ್)ಕ್ಕೂ ಅನ್ವಯವಾಗಲಿದೆ. ಅದೇ ರೀತಿ ಹೆಸ್ಕಾಂ ಸಂಗ್ರಹಿಸುವ ದರಗಳು ಹುಕ್ಕೇರಿ ಆರ್‌ಇಸಿಎಸ್ ಮತ್ತು ಎಇಕ್ಯೂಯುಎಸ್ ವಿಶೇಷ ಆರ್ಥಿಕ ವಲಯಕ್ಕೂ ಅನ್ವಯವಾಗಲಿದೆ ಎಂದು ಕೆಇಆರ್‌ಸಿ ಆದೇಶದಲ್ಲಿ ತಿಳಿಸಲಾಗಿದೆ.

ಎಸ್ಕಾಂ ಪ್ರಸ್ತಾವನೆಗಳು: ಇಂಧನ ವೆಚ್ಚ ಹೊಂದಾಣಿಕೆ ಶುಲ್ಕ(ಎಫ್‌ಎಸಿ)ವನ್ನು ಪ್ರತಿ ಯೂನಿಟ್‌ಗೆ ಬೆಸ್ಕಾಂ-55.28 ಪೈಸೆ, ಮೆಸ್ಕಾಂ-38.98 ಪೈಸೆ, ಸಿಇಎಸ್‌ಸಿ-40.47 ಪೈಸೆ, ಹೆಸ್ಕಾಂ-49.54 ಹಾಗೂ ಜೆಸ್ಕಾಂ-39.36 ಪೈಸೆ ಹೆಚ್ಚಳ ಮಾಡುವಂತೆ ಕೆಇಆರ್‌ಸಿಗೆ ಪ್ರಸ್ತಾವನೆಯನ್ನು ಸಲ್ಲಿಸಿದ್ದವು.

ಈ ಸಂಬಂಧ ಕೆಇಆರ್‌ಸಿ ಅಧ್ಯಕ್ಷ ಪಿ.ರವಿಕುಮಾರ್ ನೇತೃತ್ವದಲ್ಲಿ ಜೂ.20ರಂದು ನಡೆದ ಆಯೋಗದ ಸಭೆಯಲ್ಲಿ ಚರ್ಚಿಸಿ, ಎಸ್ಕಾಂಗಳು ಸಲ್ಲಿಸಿರುವ ದರ ಹೆಚ್ಚಳದ ಪ್ರಸ್ತಾವನೆಯನ್ನು ಗಣನೆಗೆ ತೆಗೆದುಕೊಂಡು, 100 ಯೂನಿಟ್‌ಗಿಂತ ಹೆಚ್ಚಿನ ಪ್ರಮಾಣದಲ್ಲಿ ಬಳಸಲ್ಪಡುವ ಪ್ರತಿಯೂನಿಟ್ ವಿದ್ಯುತ್‌ಗೆ 19 ರಿಂದ 31 ಪೈಸೆಯನ್ನು ಗ್ರಾಹಕರಿಂದ ಸಂಗ್ರಹಿಸಲು ವಿವಿಧ ಎಸ್ಕಾಂಗಳಿಗೆ ಅನ್ವಯಿಸುವಂತೆ ಹೆಚ್ಚಳ ಮಾಡಲಾಗಿದೆ.

ಹೆಚ್ಚಳವಾಗಿರುವ ದರ: ಬೆಸ್ಕಾಂ-31 ಪೈಸೆ, ಮೆಸ್ಕಾಂ-21 ಪೈಸೆ, ಸಿಇಎಸ್‌ಸಿ-19 ಪೈಸೆ, ಹೆಸ್ಕಾಂ-27 ಪೈಸೆ ಹಾಗೂ ಜೆಸ್ಕಾಂ-26 ಪೈಸೆಯಷ್ಟು ಹೆಚ್ಚಳ ಮಾಡಲಾಗಿದೆ. ಕಳೆದ ಒಂದು ವರ್ಷದಿಂದ ಕಲ್ಲಿದ್ದಲು ಪೂರೈಕೆಯಲ್ಲಿ ಸಮಸ್ಯೆಯಾಗಿತ್ತು. ಅಲ್ಲದೆ, ಶಾಖೋತ್ಪನ್ನ ವಿದ್ಯುತ್ ಘಟಕಗಳಲ್ಲಿ ವಿದ್ಯುತ್ ಉತ್ಪಾದನೆಯ ವೆಚ್ಚವು ಹೆಚ್ಚಾಗಿದೆ. ಆದುದರಿಂದ, ಎಫ್‌ಎಸಿ ಸಂಗ್ರಹಕ್ಕೆ ಎಸ್ಕಾಂಗಳಿಗೆ ಅವಕಾಶ ಮಾಡಿಕೊಡಲಾಗಿದೆ ಎಂದು ಕೆಇಆರ್‌ಸಿ ತಿಳಿಸಿದೆ.


ಎಸ್ಕಾಂಗಳು ಅನುಭವಿಸಿರುವ ನಷ್ಟದ ಪ್ರಮಾಣವನ್ನು ಪರಿಗಣಿಸಿ ಇಂಧನ ವೆಚ್ಚ ಹೊಂದಾಣಿಕೆ ಶುಲ್ಕ(ಎಫ್‌ಎಸಿ) ಸಂಗ್ರಹಕ್ಕೆ ಅವಕಾಶ ಮಾಡಿಕೊಡಲಾಗಿದೆ. ಕಲ್ಲಿದ್ದಲು ದರ ಹಾಗೂ ವಿದ್ಯುತ್ ಉತ್ಪಾದನಾ ವೆಚ್ಚ ಹೆಚ್ಚಾಗಿದೆ. ಆದುದರಿಂದ, ಎಫ್‌ಎಸಿ ಸಂಗ್ರಹಕ್ಕೆ ಆದೇಶ ನೀಡಲಾಗಿದೆ. ಇದೊಂದು ತಾತ್ಕಾಲಿಕ ಪ್ರಕ್ರಿಯೆಯಾಗಿದೆ.

- ಪಿ.ರವಿಕುಮಾರ್, ಕೆಇಆರ್‌ಸಿ ಅಧ್ಯಕ್ಷ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X