Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಟಿಪ್ಪು ಸುಲ್ತಾನ್ ದಲಿತರಿಗೆ ಭೂಮಿಯ...

ಟಿಪ್ಪು ಸುಲ್ತಾನ್ ದಲಿತರಿಗೆ ಭೂಮಿಯ ಹಕ್ಕನ್ನು ನೀಡಿದ ಮೊದಲ ನಾಯಕ: ಬಸವಲಿಂಗ ಸ್ವಾಮೀಜಿ

ವಾರ್ತಾಭಾರತಿವಾರ್ತಾಭಾರತಿ28 Jun 2022 8:39 PM IST
share
ಟಿಪ್ಪು ಸುಲ್ತಾನ್ ದಲಿತರಿಗೆ ಭೂಮಿಯ ಹಕ್ಕನ್ನು ನೀಡಿದ ಮೊದಲ ನಾಯಕ: ಬಸವಲಿಂಗ ಸ್ವಾಮೀಜಿ

ಮೈಸೂರು,ಜೂ.28: ರಾಜ್ಯವಷ್ಟೇ ಅಲ್ಲದೆ ತಾನು ಆಳ್ವಿಕೆ ನಡೆಸಿದ ಕೇರಳ, ತಮಿಳುನಾಡು ಮತ್ತು ಆಂಧ್ರದಲ್ಲಿ ದಲಿತರಿಗೆ ಭೂಮಿಯ ಹಕ್ಕನ್ನು ನೀಡಿದ ಮೊದಲ ನಾಯಕ ಟಿಪ್ಪು ಸುಲ್ತಾನ್ ಎಂದು ಬಸವಲಿಂಗ ಸ್ವಾಮೀಜಿ ಹೇಳಿದರು.

ನಗರದ ಅಶೋಕ ರಸ್ತೆಯ ಮಿಲಾದ್ ಬಾಗ್‍ನಲ್ಲಿ ಹಝ್ರತ್ ಟಿಪ್ಪು ಸುಲ್ತಾನ್ ಶಾಹಿದ್ ವೆಲ್‍ಫೇರ್ ಮತ್ತು ಉರೂಸ್ ಸಮಿತಿ ವತಿಯಿಂದ ಮಂಗಳವಾರ ಆಯೋಜಿಸಲಾಗಿದ್ದ ಟಿಪ್ಪು ಸುಲ್ತಾನ್ ಅವರ 230 ನೇ ಗಂಧ ಉರುಸ್‍ನಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ದಲಿತರಿಗೆ ಭೂಮಿಯ ಹಕ್ಕನ್ನು ಮೊದಲು ನೀಡಿದ್ದು ಟಿಪ್ಪು ಸುಲ್ತಾನ್. ರಾಜ್ಯವಷ್ಟೇ ಅಲ್ಲದೆ ಆಳ್ವಿಕೆ ನಡೆಸಿದ ಕೇರಳ ತಮಿಳುನಾಡು ಮತ್ತು ಆಂಧ್ರದಲ್ಲಿ ಎಲ್ಲ ದಲಿತರು ಭೂಮಿಯ ಮಾಲಕತ್ವವನ್ನು ಪಡೆದರು ಎಂದು ತಿಳಿಸಿದರು.

ಟಿಪ್ಪು ಕರ್ನಾಟಕದ ಕೀರ್ತಿಯನ್ನು ಬೆಳಗಿದವರು, ನಂಜನಗೂಡಿಗೆ  ಶ್ರೀಕಂಠೇಶ್ವರ ದೇಗುಲಕ್ಕೆ ಪಚ್ಚೆಲಿಂಗ ನೀಡಿದರು. ಶೃಂಗೇರಿಯನ್ನು ಮರಾಠರು ಲೂಟಿ ಮಾಡಿದಾಗ ಅಲ್ಲಿನ ಸ್ವಾಮೀಜಿಗೆ ರಕ್ಷಣೆ ಕೊಟ್ಟದ್ದಲ್ಲದೆ ಧನ ಕನಕ ನೀಡಿದರು. ಸೌಹಾರ್ಧ ಪರಂಪರೆಯನ್ನು ಕಟ್ಟಿದ ಅವರನ್ನು ಕನ್ನಡಿಗರು ನಿತ್ಯ ಸ್ಮರಿಸಬೇಕು ಎಂದು ಹೇಳಿದರು.

ಚಿಕ್ಕ ಸಂಸ್ಥಾನವಾಗಿದ್ದ ಮೈಸೂರನ್ನು ವಿಸ್ತರಿಸಿದರು. ಕೃಷ್ಣ ನದಿಯಿಂದ ತಮಿಳುನಾಡಿನ ದಿಂಡಿಗಲ್ ವರೆಗೆ ಸಾಮ್ರಾಜ್ಯ ಹಬ್ಬಿತ್ತು. ಮೈಸೂರು ಅರಸರ ಗೌರವಕ್ಕೆ ಅವರೆಂದೂ ಚ್ಯುತಿ ತರಲಿಲ್ಲ. ಆದರೆ ಕೆಲ ಮೂರ್ಖರು ಅಜ್ಞಾನದಿಂದ ವಿರೋಧಿಸುತ್ತಿದ್ದಾರೆ. ಸರಿಯಾಗಿ ಇತಿಹಾಸ ಓದಿಕೊಳ್ಳಬೇಕು ಎಂದರು.

ಟಿಪ್ಪು ಕನ್ನಡ ವಿರೋಧಿಯಲ್ಲ, ಶೃಂಗೇರಿ ಮಠದೊಂದಿಗೆ ಕನ್ನಡದಲ್ಲಿಯೇ ವ್ಯವಹರಿಸಿದ್ದ ಪತ್ರಗಳು ಲಭ್ಯವಿವೆ. ಅವುಗಳನ್ನು ಓಧಿದರೆ ಟಿಪ್ಪು ಕನ್ನಡದ ಸುಪುತ್ರ ಎಂಬುದು ಅರಿವಾಗುತ್ತದೆ. ಅಬ್ದುಲ್ ಕಲಾಂ ಅವರು ತಮ್ಮ ಪುಸ್ತಕಗಳಲ್ಲಿ ಟಿಪ್ಪು ಹಾಗು ರಾಕೇಟ್ ತಂತ್ರಜ್ಞಾನವನ್ನು ಕೊಂಡಾಡಿದ್ದಾರೆ ಎಂದರು.

ಅಶೋಕ ರಸ್ತೆಯ ಮಿಲಾದ್ ಬಾಗ್‍ನಲ್ಲಿ ಹಝ್ರತ್ ಟಿಪ್ಪು ಸುಲ್ತಾನ್ ಶಾಹಿದ್ ವೆಲ್‍ಫೇರ್ ಮತ್ತು ಉರೂಸ್ ಸಮಿತಿ ವತಿಯಿಂದ ಟಿಪ್ಪು ಸುಲ್ತಾನ್ ಅವರ 230 ನೇ ಗಂಧದ ಉರುಸ್ ಆಚರಣೆ ಪ್ರಯುಕ್ತ ಮಂಗಳವಾರ ಸಂದಲ್ ಗಂಧ ಮೆರವಣಿಗೆ ನಡೆಯಿತು. 

ಮೀನಾ ಬಜಾರ್‍ನ ಟಿಪ್ಪು ಹಾಲ್‍ನಲ್ಲಿ ಬೆಳಿಗ್ಗೆ ಅಹಮದ್ ಶಾಷ ಖಾದ್ರಿ ಅವರ ನೇತೃತ್ವದಲ್ಲಿ ಸಾ,ಮೂಹಿಕ ಪ್ರಾರ್ಥನೆ  ನೆರವೇರಿತು. ಆ ಬಳಿಕ ಪವಿತ್ರ ಗಂಧವನ್ನು ಮಿಲಾದ್ ಬಾಗ್‍ಗೆ ತರಲಾಯಿತು. ಗೌರವ ಸಮರ್ಪಣೆ ಬಳಿಕ ಶಾಸಕ ತನ್ವೀರ್ ಸೇಠ್ ಗಂಧವನ್ನು ಹೊತ್ತು ಹೆಜ್ಜೆ ಹಾಕಿದರು.

ದಫ್ ಕಲಾವಿದರು ಸೂಫಿ ಸಂತರು ಮೆರವಣಿಗೆಯಲ್ಲಿ ಪಾಲ್ಗೊಂಡರು. ಸಾರೋಟಿನಲ್ಲಿ ತನ್ವೀರ್ ಸೇಠ್ ಗಂಧವನ್ನು ತಲೆ ಮೇಲೆ ಹೊತ್ತು ಅಶೋಕ ರಸ್ತೆ ಸೆಂಟ್ ಫಿಲೋಮಿನ ವೃತ್ತ, ಫೌಂಟೇನ್ ವೃತ್ತ, ಬಡಾಮಖಾನ್ ಟಿಪ್ಪು ವೃತ್ತದವರೆಗೆ ಮೆರವಣಿಗೆಯಲ್ಲಿ ಸಾಗಿದರು.

ಅಲ್ಲಿಂದ ಪವಿತ್ರ ಗಂಧವನ್ನು ಲಾರಿಯಲ್ಲಿ ಶ್ರೀರಂಗಪಟ್ಟಣದ ದರಿಯಾ ದೌವಲತ್ ಬಾಗ್‍ಗೆ ಕೊಂಡೊಯ್ಯಲಾಯಿತು.
ಇದೇ ವೇಳೆ ಕನ್ನಡ ಚಳವಳಿ ಹೋರಾಟಗಾರ ವಾಠಾಳ್ ನಾಗರಾಜ್ ಅವರನ್ನು ಗೌರವಿಸಿ ಅಭಿನಂದಿಸಲಾಯಿತು.

ಟಿಪ್ಪು ಸುಲ್ತಾನ್ ಸರ್ವಜನಾಂಗದ ನಾಯಕ: ವಾಟಾಳ್ ನಾಗರಾಜ್ 

ಟಿಪ್ಪು ಸುಲ್ತಾನ್ ಒಂದು  ಜನಾಂಗದ ವ್ಯಕ್ತಿಯಲ್ಲ, ಅವರು ಸರ್ವಜನಾಂಗದ ನಾಯಕ ಎಂದು ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಬಣ್ಣಿಸಿದರು.

ನಗರದಲ್ಲಿ ಟಿಪ್ಪು ಸುಲ್ತಾನ್ ಅವರ 230 ನೇ ಗಂಧ ಉರಸ್ ಕಾರ್ಯಕ್ರಮದಲ್ಲಿ ಮಂಗಳವಾರ ಭಾಗವಹಿಸಿ ಮಾತನಾಡಿದ ಅವರು, ಟಿಪ್ಪು ಸುಲ್ತಾನ್ ಒಂದು ಜನಾಂಗದ  ವ್ಯಕ್ತಿಯಲ್ಲ, ಅವರು ಸರ್ವಜನಾಂಗದ ನಾಯಕ, ಅವರನ್ನು ಒಂದು ಜಾತಿಗೆ ಗುರುತಿಸಿದರೆ ಅಗೌರವ ನೀಡಿದ ಹಾಗೆ ಎಂದು ಹೇಳಿದರು.

ಟಿಪ್ಪು ಸುಲ್ತಾನ್ ಈ ದೇಶದ ಅಪ್ರತಿಮ ನಾಯಕ, ದೇಶಕ್ಕಾಗಿ ತನ್ನ ಮಕ್ಕಳನ್ನೇ ಬ್ರಿಟಿಷರಿಗೆ ಒತ್ತೆಯಿಟ್ಟ ನಾಯಕ. ಅವರ ಆಡಳತಾವಧಿಯಲ್ಲಿ ಸಾಕಷ್ಟು ಸಾಮಾಜಿಕ ಸುಧಾರಣೆಯನ್ನು ತಂದಿದ್ದಾರೆ. ಮೈಸೂರಿನ ಜೀವನಾಡಿ ಕನ್ನಂಬಾಡಿಗೆ ಮೊದಲ ಬಾರಿಗೆ ಶಂಕುಸ್ಥಾಪನೆ ಮಾಡಿದವರು. ಇದರ ಹೆಬ್ಬಾಗಿಲಿನಲ್ಲಿ ಕನ್ನಡದಲ್ಲಿ ಅದ್ಭುತವಾಗಿ ಕನ್ನಡದ ಅಕ್ಷರವನ್ನು ಬರೆಸಿದ್ದಾರೆ. ಇದರಲ್ಲೇ ಅವರ ಕನ್ನಡ  ಪ್ರೇಮ ಎಂತಹುದು ಎಂದು ಗೊತ್ತಾಗುತ್ತದೆ ಎಂದು ಸ್ಮರಿಸಿದರು.

ಟಿಪ್ಪು ಸುಲ್ತಾನ್ ಪಡೆದ ಈ ದೇಶ ಧನ್ಯ, ಅವರ ಬಗ್ಗೆ ರಾಷ್ಟ್ರಪತಿಯಾಗಿದ್ದ ಅಬ್ದುಲ್ ಕಲಾಂ ಅವರೇ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಟಿಪ್ಪು ಸುಲ್ತಾನ್ ಆಡಳಿತದಲ್ಲಿ ಜಾರಿಗೆ ತಂದ ರಾಕೆಟ್ ತಂತ್ರಜ್ಞಾನ ಸೇರಿದಂತೆ ಹಲವು ವಿಚಾರಗಳನ್ನು ಮೆಚ್ಚಿಕೊಂಡಿದ್ದಾರೆ.  ಯಾರು ಏನೆ ಹೇಳಿದರು ಸರಿ ನಾನು ಇರುವವರೆಗೂ ಟಿಪ್ಪು ಸುಲ್ತಾನ್ ಜನ್ಮ ದಿನಾಚರಣೆಯನ್ನು ಆಚರಣೆ ಮಾಡೇ ಮಾಡುತ್ತೇನೆ ಎಂದು ಹೇಳಿದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X