Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಸ್ವಚ್ಛತೆಗೆ ಆದ್ಯತೆ ನೀಡುವುದು ಎಲ್ಲರ...

ಸ್ವಚ್ಛತೆಗೆ ಆದ್ಯತೆ ನೀಡುವುದು ಎಲ್ಲರ ಕರ್ತವ್ಯ: ಸಚಿವ ಎಸ್.ಅಂಗಾರ

ವಾರ್ತಾಭಾರತಿವಾರ್ತಾಭಾರತಿ28 Jun 2022 9:24 PM IST
share
ಸ್ವಚ್ಛತೆಗೆ ಆದ್ಯತೆ ನೀಡುವುದು ಎಲ್ಲರ ಕರ್ತವ್ಯ: ಸಚಿವ ಎಸ್.ಅಂಗಾರ

ಉಡುಪಿ, ಜೂ.28: ಪ್ರತಿಯೊಂದು ಕ್ಷೇತ್ರದಲ್ಲಿಯೂ ಕಾರ್ಯನಿರ್ವಹಿಸು ತ್ತಿರುವ ಪ್ರತಿಯೊಬ್ಬರೂ ಸ್ವಚ್ಛತೆಗೆ ಆದ್ಯತೆ ನೀಡುವುದು ಮುಖ್ಯ ಕರ್ತವ್ಯವಾಗಿದೆ. ಇದರಿಂದ ಸಮಾಜದಲ್ಲಿ ಎಲ್ಲರೂ ಉತ್ತಮ ಅರೋಗ್ಯವಂತರಾಗಿ ಇರಲು ಸಾಧ್ಯ ಎಂದು ರಾಜ್ಯ ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ ಹೇಳಿದ್ದಾರೆ.

ಮಂಗಳವಾರ ಮಣಿಪಾಲದಲ್ಲಿರುವ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಾರ್ವಜನಿಕ ಶಿಕ್ಷಣ ಇಲಾಖೆ, ಸಮಗ್ರ ಶಿಕ್ಷಣ ಕರ್ನಾಟಕ ಉಡುಪಿ ಜಿಲ್ಲೆ ಸಹಯೋಗದಲ್ಲಿ ನಡೆದ ಸ್ವಚ್ಛ ವಿದ್ಯಾಲಯ ಪುರಸ್ಕಾರ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡುತಿದ್ದರು.

ನಮ್ಮ ಸುತ್ತಮುತ್ತಲಿನ ಪರಿಸರವನ್ನು ನಾವು ಸ್ವಚ್ಛವಾಗಿಟ್ಟುಕೊಳ್ಳುವುದು ಪ್ರಥಮ ಆದ್ಯತೆಯಾಗಬೇಕು. ಕೇವಲ ಪ್ರಶಸ್ತಿ ಪುರಸ್ಕಾರ ಪಡೆಯುವ ದೃಷ್ಟಿಯಿಂದ ಈ ಕಾರ್ಯವನ್ನು ಮಾಡದೇ, ಇದೊಂದು ನಮ್ಮ ದೈನಂದಿನ ಚಟುವಟಿಕೆಗಳ ಭಾಗವಾಗಬೇಕು ಎಂದರು.

ಯಾವುದೇ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುವಾಗ ಫಲಾಪೇಕ್ಷೆ ಇಲ್ಲದೆ ನಮ್ಮ ಕರ್ತವ್ಯಗಳನ್ನು ಶ್ರದ್ಧೆಯಿಂದ ಮಾಡಿದಾಗ ಅದಕ್ಕೆ ಪ್ರತಿಫಲ ತಾನಾಗಿಯೇ ಹುಡುಕಿಕೊಂಡು ಬರುತ್ತದೆ. ಅಂತಹ ಪ್ರತಿಫಲ ಮಹತ್ವನ್ನು ಪಡೆದಿರುತ್ತದೆ. ಇದು ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ನಾಂದಿಯಾಗುತ್ತದೆ ಎಂದರು.

ಪ್ರಸಕ್ತ ಸಾಲಿನಲ್ಲಿ ಈ ಪುರಸ್ಕಾರಕ್ಕೆ ಜಿಲ್ಲೆಯ 1168 ಶಾಲಾ ಕಾಲೇಜುಗಳಲ್ಲಿ 729 ಶಾಲೆಗಳು ನೊಂದಾಯಿಸಿಕೊಂಡಿದ್ದು, 627 ಶಾಲೆಗಳು ಆನ್‌ಲೈನ್‌ನಲ್ಲಿ ತಮ್ಮ ಶಾಲೆಯ ಕಾರ್ಯ ಸಾಧನೆಗಳ ಮಾಹಿತಿಯನ್ನು ದಾಖಲಿಸಿವೆ. ಜಿಲ್ಲಾ ಮಟ್ಟದ ಸಮಿತಿಯು ಸರಕಾರದ ಮಾನದಂಡದಂತೆ 38 ಶಾಲೆಗಳನ್ನು ವಿವಿಧ ಆಯಾಮಗಳಲ್ಲಿ ಆಯ್ಕೆಮಾಡಿವೆ. ಆಯ್ಕೆಯಾದ ಎಲ್ಲಾ ಶಾಲಾ-ಕಾಲೇಜು ಗಳನ್ನು ವೈಯಕ್ತಿಕವಾಗಿ ಅಭಿನಂದಿಸುತ್ತೇನೆ ಎಂದು ಅಂಗಾರ ನುಡಿದರು.

ಪ್ರಶಸ್ತಿ ಪುರಸ್ಕೃತರು: ಸ್ವಚ್ಛ ವಿದ್ಯಾಲಯ ಪ್ರಶಸ್ತಿ ಪುರಸ್ಕಾರದಲ್ಲಿ, ಕಾರ್ಕಳ ತಾಲೂಕಿನ ನಲ್ಲೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಬ್ರಹ್ಮಾವರದ ಚೇತನಾ ಪ್ರೌಢಶಾಲೆ ಹಂಗಾರಕಟ್ಟೆ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರ್ಸೆ, ಹಾರಾಡಿ ಜಿ.ಎಂ.ವಿದ್ಯಾನಿಕೇತನ ಶಾಲೆ, ಕುಂದಾಪುರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಪಡುವಳತ್ತೂರು, ಕಾರ್ವಾಡಿ ಹಿರಿಯ ಪ್ರಾಥಮಿಕ ಶಾಲೆ, ನೇತಾಜಿ ಹಿರಿಯ ಪ್ರಾಥಮಿಕ ಶಾಲೆ ಹಳ್ನಾಡು, ಉಡುಪಿಯ ಸೈಂಟ್ ಸಿಸಿಲಿಸ್ ಶಾಲೆಗಳಿಗೆ ಸಮಗ್ರ ಪ್ರಶಸ್ತಿ ಹಾಗೂ 30 ಶಾಲೆಗಳಿಗೆ ಇತರೆ ಪ್ರಶಸ್ತಿ ನೀಡಲಾಯಿತು.

ಕಾರ್ಯಕ್ರಮದಲ್ಲಿ ಶಾಸಕ ರಘುಪತಿ ಭಟ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪ್ರಸನ್ನ ಹೆಚ್., ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್., ಡಿಡಿಪಿಐ ಗೋವಿಂದ ಮಡಿವಾಳ ಹಾಗೂ ಜಿಲ್ಲೆಯ ವಿವಿಧ ಶಾಲಾ ಕಾಲೇಜುಗಳ ಪ್ರಾಂಶುಪಾಲರು ಉಪಸ್ಥಿತರಿದ್ದರು.
ಚಂದ್ರಾ ನಾಯಕ್ ಸ್ವಾಗತಿಸಿ,ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X