Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ‘ಅಗ್ನಿಪಥ್’ ವಿರುದ್ಧ ನಿರ್ಣಯ:...

‘ಅಗ್ನಿಪಥ್’ ವಿರುದ್ಧ ನಿರ್ಣಯ: ಪ್ರ‌ತಿಪಕ್ಷಗಳ ಸಲಹೆ ಅನುಮೋದಿಸಿದ ಪಂಜಾಬ್ ಮುಖ್ಯಮಂತ್ರಿ

ವಾರ್ತಾಭಾರತಿವಾರ್ತಾಭಾರತಿ28 Jun 2022 10:03 PM IST
share
‘ಅಗ್ನಿಪಥ್’ ವಿರುದ್ಧ ನಿರ್ಣಯ: ಪ್ರ‌ತಿಪಕ್ಷಗಳ ಸಲಹೆ ಅನುಮೋದಿಸಿದ ಪಂಜಾಬ್ ಮುಖ್ಯಮಂತ್ರಿ

ಚಂಡಿಗಡ,ಜೂ.28: ಸಶಸ್ತ್ರ ಪಡೆಗಳಲ್ಲಿ ನೇಮಕಾತಿಗಾಗಿ ‘ಅಗ್ನಿಪಥ್’ ಯೋಜನೆಯ ವಿರುದ್ಧ ನಿರ್ಣಯವೊಂದನ್ನು ತರಬೇಕೆಂಬ ಪ್ರತಿಪಕ್ಷ ನಾಯಕ ಪ್ರತಾಪಸಿಂಗ್ ಬಾಜ್ವಾ ಅವರ ಸಲಹೆಯನ್ನು ಪಂಜಾಬ್ ಮುಖ್ಯಮಂತ್ರಿ ಭಗವಂತ ಮಾನ್ ಅವರು ಅನುಮೋದಿಸಿದ್ದಾರೆ.

 ಮಂಗಳವಾರ ವಿಧಾನಸಭೆಯ ಶೂನ್ಯವೇಳೆಯಲ್ಲಿ ‘ಅಗ್ನಿಪಥ್’ ವಿಷಯವನ್ನೆತ್ತಿದ ಹಿರಿಯ ಕಾಂಗ್ರೆಸ್ ನಾಯಕ ಬಾಜ್ವಾ,ಈ ಯೋಜನೆಯು ಪಂಜಾಬಿನ ಯುವಜನರ ಮೇಲೆ ಋಣಾತ್ಮಕ ಪರಿಣಾಮವನ್ನು ಬೀರುತ್ತದೆ ಎಂದು ವಾದಿಸಿದರು.
ಯೋಜನೆಯಿಂದಾಗಿ ಸೇನೆಯಲ್ಲಿ ಪಂಜಾಬಿನ ಪ್ರಾತಿನಿಧ್ಯವು ಭವಿಷ್ಯದಲ್ಲಿ ಈಗಿನ ಶೇ.7.8ರಿಂದ ಶೇ.2.3ಕ್ಕೆ ಕುಸಿಯುತ್ತದೆ ಎಂಬ ಆತಂಕವನ್ನು ವ್ಯಕ್ತಪಡಿಸಿದ ಅವರು,‘ಅಗ್ನಿಪಥ್’ಪಂಜಾಬಿನ ಹಿತಾಸಕ್ತಿಗಳಿಗೆ ವಿರುದ್ಧವಾಗಿದೆ ಎಂದರು.
ಮುಖ್ಯಮಂತ್ರಿಗಳು ಹಾಲಿ ವಿಧಾನಸಭಾ ಅಧಿವೇಶನದಲ್ಲಿ ‘ಅಗ್ನಿಪಥ್ ’ವಿರುದ್ಧ ಜಂಟಿ ನಿರ್ಣಯವನ್ನು ತರಬೇಕು ಎಂದು ಬಾಜ್ವಾ ಆಗ್ರಹಿಸಿದರು.
ಇದೊಂದು ಭಾವನಾತ್ಮಕ ವಿಷಯವಾಗಿದೆ ಎಂದು ಬಣ್ಣಿಸಿದ ಮಾನ್ ಬಾಜ್ವಾರ ಸಲಹೆಯನ್ನು ಅನುಮೋದಿಸಿದರಲ್ಲದೆ ಅದನ್ನು ಪರಿಗಣಿಸಲಾಗುವದು ಎಂದು ತಿಳಿಸಿದರು. ಯೋಜನೆಯ ವಿರುದ್ಧ ದೇಶದಲ್ಲಿಯ ಎಲ್ಲ ರಾಜ್ಯ ವಿಧಾನಸಭೆಗಳು ನಿರ್ಣಯವನ್ನು ತರಬೇಕು ಎಂದರು.
ನೋಟು ನಿಷೇಧ,ಈಗ ಹಿಂದೆಗೆದುಕೊಳ್ಳಲಾಗಿರುವ ಮೂರು ಕೃಷಿ ಕಾಯ್ದೆಗಳು ಮತ್ತು ಜಿಎಸ್ಟಿ ಕುರಿತೂ ಮಾನ್ ಕೇಂದ್ರವನ್ನು ತರಾಟೆಗೆತ್ತಿಕೊಂಡರು.
‘ಅಗ್ನಿಪಥ್’ ಕುರಿತಂತೆ ‘17 ವರ್ಷದ ಯುವಕರು ಸಶಸ್ತ್ರ ಪಡೆಗಳಿಗೆ ಸೇರುತ್ತಾರೆ ಮತ್ತು ಹೆಚ್ಚಿನವರು ಕೇವಲ ನಾಲ್ಕು ವರ್ಷಗಳ ಸೇವೆಯ ಬಳಿಕ ಮರಳುತ್ತಾರೆ ಎಂಬ ಪರಿಕಲ್ಪನೆಯ ಬಗ್ಗೆ ನಾವು ಯೋಚಿಸಿದಾಗ....ಮಾಜಿ ಯೋಧರು ಅರ್ಹರಾಗಿರುವ ಯಾವುದೇ ಸೌಲಭ್ಯಗಳಿಲ್ಲದೆ ಅವರು ನಾಲ್ಕು ವರ್ಷಗಳಲ್ಲಿ ‘ಮಾಜಿ ’ಯಾಗಿ ಬಿಡುತ್ತಾರೆ’ ಎಂದು ಹೇಳಿದ ಮಾನ್,ತಾನು ಈ ಯೋಜನೆಯನ್ನು ಕಟ್ಟುನಿಟ್ಟಾಗಿ ವಿರೋಧಿಸುತ್ತೇನೆ ಎಂದರು.
ಹಲವಾರು ಕಡೆಗಳಿಂದ ವಿರೋಧವನ್ನು ಎದುರಿಸುತ್ತಿರುವ ಇಂತಹ ಕಾನೂನುಗಳನ್ನು ಬಿಜೆಪಿ ಸರಕಾರವು ಏಕೆ ತರುತ್ತಿದೆ ಎನ್ನುವುದು ತನಗೆ ಅರ್ಥವಾಗುತ್ತಿಲ್ಲ ಎಂದು ಹೇಳಿದ ಮಾನ್,ಅವರು ಕೃಷಿ ಕಾಯ್ದೆಗಳನ್ನು,ಸಿಎಎ ಅನ್ನು ತಂದರು ಮತ್ತು ಈಗ ‘ಅಗ್ನಿಪಥ್’ ತಂದಿದ್ದಾರೆ. ಅವರು ಪ್ರತಿಬಾರಿಯೂ ಈ ಕಾನೂನುಗಳನ್ನು ತಂದಾಗ ಜನರು ಅವುಗಳನ್ನು ಅರ್ಥ ಮಾಡಿಕೊಂಡ ಬಳಿಕ ಅದರ ಲಾಭಗಳು ಅವರಿಗೆ ಗೊತ್ತಾಗುತ್ತವೆ ಎಂದು ಹೇಳುತ್ತಲೇ ಇರುತ್ತಾರೆ. ಅವರು ಮಾತ್ರ ಪ್ರತಿಯೊಂದನ್ನೂ ಅರ್ಥ ಮಾಡಿಕೊಳ್ಳುವ ಬುದ್ಧಿವಂತರೇ? ಜನರಿಗೆ ಅರ್ಥವಾಗದ ಕಾನೂನುಗಳನ್ನು ಮಾಡಲೇಬಾರದು ಎಂದರು.
‘ಅಗ್ನಿಪಥ್ ’ಯೋಜನೆಯನ್ನು ಸಮರ್ಥಿಸಿಕೊಂಡ ಪಂಜಾಬ್ ಬಿಜೆಪಿ ಮುಖ್ಯಸ್ಥ ಅಶ್ವನಿ ಶರ್ಮಾ ಅವರು,ಈ ವಿಷಯದಲ್ಲಿ ಸದನವನ್ನು ದಾರಿ ತಪ್ಪಿಸಲಾಗುತ್ತಿದೆ ಎಂದು ಆರೋಪಿಸಿದರು.
ಬಾಜ್ವಾರ ಸಲಹೆಗೆ ಪ್ರತಿಕ್ರಿಯಿಸಿದ ಶರ್ಮಾ,ವಿರೋಧಿಸಬೇಕು ಎನ್ನುವ ಕಾರಣಕ್ಕೆ ‘ಅಗ್ನಿಪಥ್’ ಯೋಜನೆಯನ್ನು ವಿರೋಧಿಸುವುದು ಅವರಿಗೆ ಅನಿವಾರ್ಯವಾಗಿದೆ. ಈ ಯೋಜನೆಯು ಜಾರಿಗೊಂಡರೆ 2029ರಲ್ಲಿಯೂ ತಾವು ಅಧಿಕಾರಕ್ಕೆ ಬರುವುದಿಲ್ಲ ಎನ್ನುವುದು ಅವರಿಗೆ ಗೊತ್ತಿದೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X