Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ನಕಲಿ ಅಭಿವೃದ್ಧಿ ಶೂರರು ಎಂಬುದನ್ನು ಸಾರಿ...

ನಕಲಿ ಅಭಿವೃದ್ಧಿ ಶೂರರು ಎಂಬುದನ್ನು ಸಾರಿ ಹೇಳುತ್ತದೆ: ಪ್ರತಾಪ್ ಸಿಂಹಗೆ ಎಚ್.ಸಿ ಮಹದೇವಪ್ಪ ತಿರುಗೇಟು

ವಾರ್ತಾಭಾರತಿವಾರ್ತಾಭಾರತಿ29 Jun 2022 6:36 PM IST
share
ನಕಲಿ ಅಭಿವೃದ್ಧಿ ಶೂರರು ಎಂಬುದನ್ನು ಸಾರಿ ಹೇಳುತ್ತದೆ: ಪ್ರತಾಪ್ ಸಿಂಹಗೆ ಎಚ್.ಸಿ ಮಹದೇವಪ್ಪ ತಿರುಗೇಟು

ಬೆಂಗಳೂರು, ಜೂ. 29: ‘ಸಂಸದ ಪ್ರತಾಪಸಿಂಹ ಅವರು ತಮ್ಮದೇ ಪಕ್ಷದ ಯಡಿಯೂರಪ್ಪ, ಶೆಟ್ಟರ್, ಕಾರಜೋಳ ಹಾಗೂ ಇನ್ನಿತರೆ ಬಿಜೆಪಿ ನಾಯಕರಿಗೆ ಕರೆ ಮಾಡಿ, ಸರ್ ನೀವು ಮಾಜಿ ಲೋಕೋಪಯೋಗಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರಿಗೆ, ಏಕೆ ಸನ್ಮಾನ ಮಾಡಿದ್ದಿರಿ? ಎಂದು ಕೇಳಿದರೆ ಅವರೇ ಉತ್ತರ ಹೇಳುತ್ತಾರೆ. ಆಗ ನನ್ನ ಸಮಯವೂ ಉಳಿಯುತ್ತದೆ ತಮ್ಮ ಸಮಯವೂ ಉಳಿಯುತ್ತದೆ!' ಎಂದು ಮಾಜಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ತಿಳಿಸಿದ್ದಾರೆ.

ಬುಧವಾರ ಈ ಸಂಬಂಧ ಪ್ರಕಟಣೆ ನೀಡಿರುವ ಅವರು, ‘ಯಡಿಯೂರಪ್ಪನವರು ಮುಖ್ಯಮಂತ್ರಿಗಳಾಗಿದ್ದ ಸಂದರ್ಭದಲ್ಲಿ ಕರ್ನಾಟಕದ ಉದ್ದಕ್ಕೂ ಮೂಲಸೌಕರ್ಯ ಅಭಿವೃದ್ಧಿಗೆ ಶ್ರಮಿಸಿದ್ದೀರ ಸರ್, ಎಂದು ಗೌರವದಿಂದ ಸನ್ಮಾನ ಮಾಡಿದರು. ಕೆಲಸ ಮಾಡಿದ ಒಬ್ಬರನ್ನು ಗೌರವಿಸುವ ನಿಟ್ಟಿನಲ್ಲಿ ಇದು ಇತ್ತೀಚಿನ ರಾಜಕಾರಣದಲ್ಲಿ ಪಕ್ಷಾತೀತವಾಗಿ ನಾವು ರೂಢಿಸಿಕೊಳ್ಳಬೇಕಾದ ಆರೋಗ್ಯಕರ ಪ್ರಜಾಪ್ರಭುತ್ವದ ನಡೆ' ಎಂದು ಸಲಹೆ ನೀಡಿದ್ದಾರೆ.

‘ಇದು ಪ್ರತಾಪ್ ಸಿಂಹ ಅವರಿಗೆ ತಿಳಿಯದೇ ಹೋದರೆ ಅದು ಅವರ ಸಮಸ್ಯೆಯೇ ವಿನಃ ನಮ್ಮದಲ್ಲ. ಅಭಿವೃದ್ಧಿ ಮಾಡಲು ಯೋಗ್ಯತೆ ಇಲ್ಲದ ಬಿಜೆಪಿಗರು ತಮ್ಮ ಕಳಪೆ ಐಟಿ ಸೆಲ್‍ಗಳಲ್ಲಿ ಫೊಟೋಶಾಪ್ ಮೂಲಕ ಅಭಿವೃದ್ಧಿಯ ಪರ್ವವನ್ನೇ ಹರಿಸಿದ್ದಾರೆ. ಇವರು ಯಾವ ಮಟ್ಟಕ್ಕೆ ಇಳಿಯುತ್ತಾರೆಂದರೆ ಅಲ್ಲೆಲ್ಲೋ ಫ್ರಾನ್ಸ್, ಅಮೇರಿಕಾ, ಸ್ವಿಟ್ಜಲೆರ್ಂಡ್‍ನಂತಹ ದೇಶದಲ್ಲಿ ಅಭಿವೃದ್ಧಿ ಮಾಡಿದ ರಸ್ತೆಗಳ ಫೋಟೋವನ್ನು ಬಳಸಿಕೊಂಡು ‘ನೋಡಿ ಇದೇ ಉತ್ತರ ಪ್ರದೇಶದ ರಸ್ತೆ, ಇದೇ ಗುಜರಾತಿನ ಅಭಿವೃದ್ಧಿ' ಎಂದೆಲ್ಲಾ ಸುಳ್ಳು ಹಬ್ಬಿಸುತ್ತಾರೆ. ಪಾಪ ನಮ್ಮ ಜನರು ಅಲ್ಲಿಗೆಲ್ಲಾ ಹೋಗಿ ಪರೀಕ್ಷೆ ಮಾಡುವುದಿಲ್ಲ ಅಲ್ಲವೇ?' ಎಂದು ಅವರು ಟೀಕಿಸಿದ್ದಾರೆ.

‘ಹಾಗಾಗಿ ಇವರು ಆಡಿದ್ದೇ ಆಟ, ಹೂಡಿದ್ದೇ ಲಗ್ಗಿ ಎಂಬಂತಾಗಿದೆ ಇವರ ನಕಲಿ ಅಭಿವೃದ್ಧಿಯ ಕಥೆ. ಮೊನ್ನೆ ಪ್ರಧಾನಿ ಬಂದು ಹೋದ ಮೇಲೆ ಜನರು ಬರಿಗೈಯಲ್ಲೇ ರಸ್ತೆಯ ಡಾಂಬರ್ ಅನ್ನು ಕಿತ್ತ ಸಂಗತಿಯು ಮಾಧ್ಯಮದಲ್ಲೇ ಪ್ರಸಾರವಾಯಿತು. ಇದು ಇವರು ಎಂತಹ ನಕಲಿ ಅಭಿವೃದ್ಧಿ ಶೂರರು ಎಂಬುದನ್ನು ಸಾರಿ ಹೇಳುತ್ತದೆ. ನನ್ನ ಸಾರ್ವಜನಿಕ ಜೀವನದಲ್ಲಿ ಇಂತಹ ಸುಳ್ಳು-ವಂಚನೆಯ ರಾಜಕಾರಣದ ಮಾರ್ಗವನ್ನು ನಾನು ಕಂಡಿರಲಿಲ್ಲ' ಎಂದು ಮಹದೇವಪ್ಪ ವಾಗ್ದಾಳಿ ನಡೆಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X