Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು ವಿವಿ; ಬಸವರಾಜ ಕಟ್ಟೀಮನಿ, ಸಾರಾ...

ಮಂಗಳೂರು ವಿವಿ; ಬಸವರಾಜ ಕಟ್ಟೀಮನಿ, ಸಾರಾ ಅಬೂಬಕ್ಕರ್ ಬದುಕು ಸಾಧನೆ ಕುರಿತ ವಿಚಾರಸಂಕಿರಣ, ಪ್ರಶಸ್ತಿ ಪ್ರದಾನ

ವಾರ್ತಾಭಾರತಿವಾರ್ತಾಭಾರತಿ29 Jun 2022 7:04 PM IST
share
ಮಂಗಳೂರು ವಿವಿ; ಬಸವರಾಜ ಕಟ್ಟೀಮನಿ, ಸಾರಾ ಅಬೂಬಕ್ಕರ್ ಬದುಕು ಸಾಧನೆ ಕುರಿತ ವಿಚಾರಸಂಕಿರಣ, ಪ್ರಶಸ್ತಿ ಪ್ರದಾನ

ಕೊಣಾಜೆ: ನವೋದಯ ಸಾಹಿತ್ಯ, ನವ್ಯ ಸಾಹಿತ್ಯಗಳ ನಡುವೆ ಬಂದ ಸಾಹಿತ್ಯ ಪಂಥವೇ ಪ್ರಗತಿಶೀಲ ಸಾಹಿತ್ಯ ಪಂಥ.  ಈ ಪ್ರಗತಿಶೀಲ ಸಾಹಿತ್ಯ ಪಂಥದ ಸಾಹಿತಿಗಳಲ್ಲಿ ಬಸವರಾಜ ಕಟ್ಟೀಮನಿ ಹಾಗೂ ಸಾರಾ ಅಬೂಬಕ್ಕರ್ ಅವರ ಬರಹಗಳು  ಸರ್ವಶ್ರೇಷ್ವವಾದುದು ಎಂದು ಮಂಗಳೂರು ವಿವಿ ಪ್ರಾಧ್ಯಾಪಕ , ಜಾನಪದ ವಿದ್ವಾಂಸ ಪ್ರೊ. ಅಭಯಕುಮಾರ್ ಅವರು ಹೇಳಿದರು.

ಅವರು ಬಸವರಾಜ ಕಟ್ಟೀಮನಿ ಪ್ರತಿಷ್ಠಾನ ಬೆಳಗಾವಿ, ಮಂಗಳೂರು ವಿವಿಯ ಎಸ್ ವಿ ಪಿ ಕನ್ನಡ ಅಧ್ಯಯನ ಸಂಸ್ಥೆಯ ಸಹಯೋಗದಲ್ಲಿ ಬಸವರಾಜ್ ಕಟ್ಟೀಮಣಿ ಮತ್ತು ಸಾರಾ ಅಬೂಬಕ್ಕರ್ ಅವರ ಬದುಕು ಸಾಧನೆ ಕುರಿತ ವಿಚಾರ ಸಂಕಿರಣ ಹಾಗೂ ಸಾರಾ ಅಬೂಬಕ್ಕರ್ ಅವರಿಗೆ 2021 ನೇ ಸಾಲಿನ ಬಸವರಾಜ ಕಟ್ಟೀಮನಿ ಕಾದಂಬರಿ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.

ಕಾವ್ಯ ಪ್ರಕಾರವನ್ನು ಬಿಟ್ಟು ಕಾದಂಬರಿ ಪ್ರಕಾರ ಆಯ್ಕೆ ಮಾಡುವಾಗ ವಿಶಿಷ್ಟವಾದ ಸಿದ್ದಾಂತವನ್ನು ಕೂಡ ಪ್ರಗತಿಶೀಲ ಸಾಹಿತಿಗಳು ಒದಗಿಸಿಕೊಟ್ಟಿದ್ದಾರೆ. ಸಾರಾ ಅಬೂಬಕ್ಕರ್  ಅವರಿಗೆ ಸಮುದಾಯದಲ್ಲಿ ಹಲವಾರು ತೊಂದರೆಗಳು ಎದುರಾದರೂ ಅವನ್ನೆಲ್ಲ ಎದುರಿಸಿ ಸಾಹಿತ್ಯ ಲೋಕಕ್ಕೆ ಅನನ್ಯ ಕೊಡುಗೆ ಕೊಟ್ಟವರಾಗಿದ್ದಾರೆ ಎಂದರು.

ಕಾರ್ಯಕ್ರಮದಲ್ಲಿ 'ಬಸವರಾಜ ಕಟ್ಟೀಮನಿ ಸಾಹಿತ್ಯವಲೋಕನ' ಎಂಬ ವಿಷಯದಲ್ಲಿ ಉಪನ್ಯಾಸ ನೀಡಿದ ನಿವೃತ್ತ ಕನ್ನಡ ಪ್ರಾಧ್ಯಾಪಕ ಡಾ.ಪೂವಪ್ಪ ಕಣಿಯೂರು ಅವರು, ಕತ್ತಲಾದ ಮೇಲೆ ಬೆಳಕು ಹರಿಯಲೇ ಬೇಕು ಎಂಬ ಭರವಸೆಯ ಚಿಂತನೆಗಳು ಕಟ್ಟೀಮನಿ ಅಥವಾ ಪ್ರಗತಿಪರ ಚಿಂತಕರ ಬರವಣಿಗೆಯಲ್ಲಿ ಕಾಣಲು ಸಾಧ್ಯವಾಗುತ್ತದೆ. ಪ್ರಗತಿಪರ ಚಿಂತನೆಗಳಲ್ಲಿ ತೊಡಗಿಸಿಕೊಂಡವರಿಗೆ ಸೋಲೇ ಆಗಿರಬಹುದು. ಪ್ರಗತಿಪರ ರನ್ನು  ಇಂದು ತಮಾಷೆಯ ರೂಪದಲ್ಲಿ ನೋಡುವ ಪರಿಸ್ಥಿತಿಯೂ ಇರಬಹುದು. ಆದರೆ ಜಡತ್ವದ ಸಮಾಜವನ್ನು ಈ ಪ್ರಗತಿಪರ ಚಿಂತನೆಗಳು ಎಚ್ಚರಗೊಳಿಸಿವೆ ಎಂಬುದನ್ನು  ಮರೆಯಲು ಸಾಧ್ಯವಿಲ್ಲ. ಬಸವರಾಜ ಕಟ್ಟೀಮಣಿ ಅವರ ಬರವಣಿಗೆಯಲ್ಲಿ‌ ಇಂತಹ ಸಂಗತಿಗಳನ್ನು ಕಾಣಲು ಸಾಧ್ಯವಾಗುತ್ತದೆ ಎಂದರು.

ಸಮಾಜದ ಅಜ್ಞಾನ, ಬಡತನ ಸೇರಿದಂತೆ ಅಸಮಾನತೆಯನ್ನು ಎತ್ತಿ ತೋರಿಸುವ ಅವರ ಬರಹಗಳಲ್ಲಿ ಸತ್ಯ, ನ್ಯಾಯದ ದೃಷ್ಟಿಯನ್ನು ಕಾಣುವುದಕ್ಕೆ ಸಾಧ್ಯವಾಗುತ್ತದೆ ಎಂದರು.

ಕರಾವಳಿ ಲೇಖಕಿಯರ ಹಾಗೂ ವಾಚಕಿಯರ ಸಂಘದ ಅಧ್ಯಕ್ಷರಾದ , ಪ್ರಾಧ್ಯಾಪಕಿ ಜ್ಯೋತಿ ಚೇಳ್ಯಾರು ಅವರು, 'ಸಾರಾ ಅಬೂಬಕ್ಕರ್: ವ್ಯಕ್ತಿ ಅಭಿವ್ಯಕ್ತಿ' ಎಂಬ ವಿಷಯದ ಕುರಿತು ಉಪನ್ಯಾಸ ನೀಡಿ,  ಹೆಣ್ಣು ಮಕ್ಕಳು ಶಿಕ್ಷಣ ಪಡೆಯಬೇಕು, ಬದಲಾವಣೆ ಕುಟುಂಬದಿಂದಲೇ ಆಗಬೇಕು ಎನ್ನುವ  ಧೋರಣೆ ಸಾರಾ ಅಬೂಬಕ್ಕರ್ ಅವರದಾಗಿತ್ತು. ಅವರ ಬರಹಗಳಲ್ಲಿ ಸಾಮಾಜಿಕ ಪ್ರಜ್ಞೆ ಮತ್ತು ರಾಜಕೀಯ ಪ್ರಜ್ಞೆ, ಜಾಗೃತಿಯ ತುಡಿತವನ್ನು ಕಾಣಬಹುದು.

ಸ್ತ್ರೀಪರ ಚಿಂತಕಿಯಾಗಿದ್ದು ಕೊಂಡು ಸತ್ಯದ ಧಾರೆಯ ನಿರೂಪಕಿ, ಸಾಮಾಜಿಕ ಬದ್ಧತೆಯ ಶೋಧವುಳ್ಳ  ಸಾರಾ ಅಬೂಬಕ್ಕರ್ ಅವರು  ಯುವ ಲೇಖಕರಿಗೆ, ಸಾಹಿತಿಗಳಿಗೆ ಮಾದರಿಯಾಗಿದ್ದಾರೆ ಎಂದರು.

ಎಸ್ ವಿಪಿ ಕನ್ನಡ ಅಧ್ಯಯನ ಸಂಸ್ಥೆಯ ಮುಖ್ಯಸ್ಥರಾದ ಪ್ರೊ.ಸೋಮಣ್ಣ ಹೊಂಗಳ್ಳಿ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.

ಬೆಳಗಾವಿ ಬಸವರಾಜ ಕಟ್ಟೀಮನಿ ಪ್ರತಿಷ್ಟಾನದ ಅಧ್ಯಕ್ಷರಾದ ಪ್ರೊ.ಮಲ್ಲಿಕಾರ್ಜುನ ಹಿರೇಮಠ ಅವರು ಅಧ್ಯಕ್ಷತೆ ಯನ್ನು ವಹಿಸಿ ಮಾತನಾಡಿ,  ಕಟ್ಟೀಮನಿ ಹಾಗೂ ಸಾರಾ ಇಬ್ಬರೂ ಲೇಖಕರು ವೈಚಾರಿಕತೆ, ಸಾಮಾಜಿಕ ಬದ್ಧತೆಯನ್ನು ಹೊಂದಿದ ಚಿಂತನಾಶೀಲರು. ಇಬ್ಬರೂ ಗಟ್ಟಿತನದ ಬರಹದ ಹೋರಾಟಗಾರರಾಗಿದ್ದಾರೆ. ಹೀಗಾಗಿ ಕಟ್ಟೀಮನಿ ಪ್ರಶಸ್ತಿ ಅರ್ಹವಾಗಿಯೇ ಸಾರಾ ಅಬೂಬಕ್ಕರ್ ಅವರಿಗೆ ದೊರೆತಿದೆ. ಸಾರಾ ಅಬೂಬಕ್ಕರ್ ಅವರಿಗೆ ಆರೋಗ್ಯ ತೊಂದರೆಯಿದ್ದು ಆಸ್ಪತ್ರೆಗೆ ದಾಖಲಾಗಿರುವ ಕಾರಣ ಅಲ್ಲಿಯೇ ತೆರಳಿ ಪ್ರಶಸ್ತಿ ಪ್ರದಾನ ಮಾಡಲಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಕನ್ನಡ ಅಧ್ಯಯನ ಸಂಸ್ಥೆಯ ಪ್ರಾಧ್ಯಾಪಕರಾದ ಡಾ.ನಾಗಪ್ಪ ಗೌಡ, ಡಾ.ಧನಂಜಯ ಕುಂಬ್ಳೆ, ಡಾ.ಲತಾ ಅಭಯ್ ಕುಮಾರ್, ಕಟ್ಟೀಮನಿ ಪ್ರತಿಷ್ಠಾನದ ವಿದ್ಯಾವತಿ ಭಜಂತ್ರಿ, ಶಿವಕುಮಾರ್ ಕಟ್ಟೀಮನಿ, ಪ್ರೊ.ಚಂದ್ರಶೇಖರ, ಡಾ.ಬಾಳಸಾಹೇಬ, ಡಾ.ಬಸವರಾಜ ಸಾದರ, ಶಿರೀಷ ಜೋಶಿ ಹಾಗೂ ಕನ್ನಡ ವಿಭಾಗದ ಸಂಶೋಧಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಬಸವರಾಜ ಕಟ್ಟೀಮನಿ ಪ್ರತಿಷ್ಠಾನದ ಸದಸ್ಯರಾದ ಡಾ.ಕೆ.ಆರ್. ದುರ್ಗಾದಾಸ್ ಅವರು ಸ್ವಾಗತಿಸಿ ಪ್ರಾಸ್ತಾವಿಕ ವಾಗಿ ಮಾತನಾಡಿದರು. ಡಾ.ರಾಮಕೃಷ್ಣ ಮರಾಠೆ ಅವರು ವಂದಿಸಿದರು. ಉಪನ್ಯಾಸಕರಾದ ಡಾ.ಯಶು ಕುಮಾರ್ ಅವರು ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X