ಮಡಿಕೇರಿ: ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

ಮಡಿಕೇರಿ ಜೂ.30 : ಬೈಕ್ ಹಾಗೂ ಟಿಟಿ ವಾಹನದ ನಡುವೆ ಭೀಕರ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಳತ್ತಮನೆ ಜಂಕ್ಷನ್ನಲ್ಲಿ ನಡೆದಿದೆ.
ತಾಳತ್ತಮನೆ ನಿವಾಸಿ, ವಿಜಯ ಕರ್ನಾಟಕ ಪತ್ರಿಕೆ ವರದಿಗಾರ್ತಿ ಉದಿಯಂಡ ಜಯಂತಿ ಅವರ ತಂದೆ ಉದಿಯಂಡ ಶಂಭು ಮಂದಣ್ಣ (62) ಮೃತ ದುರ್ಧೈವಿ ಎಂದು ತಿಳಿದು ಬಂದಿದೆ.
ಮೃತರು ಇಬ್ಬರು ಪುತ್ರರು ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದು, ಶುಕ್ರವಾರ ಮೃತರ ಸ್ವಗ್ರಾಮದಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
Next Story





