Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕುಂದಾಪುರ; ದಲಿತರಿಬ್ಬರ ಮನೆ ಸೇರಿ ಹಲವು...

ಕುಂದಾಪುರ; ದಲಿತರಿಬ್ಬರ ಮನೆ ಸೇರಿ ಹಲವು ಮನೆಗಳು ಜಲಾವೃತ್ತ

ವಾರ್ತಾಭಾರತಿವಾರ್ತಾಭಾರತಿ30 Jun 2022 7:15 PM IST
share
ಕುಂದಾಪುರ; ದಲಿತರಿಬ್ಬರ ಮನೆ ಸೇರಿ ಹಲವು ಮನೆಗಳು ಜಲಾವೃತ್ತ

ಕುಂದಾಪುರ : ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಕುಂದಾಪುರ ತಾಲೂಕಿನ ಗೋಪಾಡಿ ಗ್ರಾಪಂ ವ್ಯಾಪ್ತಿಯ ಪಡು ಚಾವಡಿಬೆಟ್ಟು ಎಂಬಲ್ಲಿನ ಎಂಟತ್ತು ಮನೆಗಳು ಜಲಾವೃತ್ತಗೊಂಡಿದ್ದು, ಹೆಂಗಸರು, ಮಕ್ಕಳು ಸೇರಿದಂತೆ ಹತ್ತಾರು ಮಂದಿ ಜಲ ದಿಗ್ಭಂಧನಕ್ಕೊಳಗಾಗಿದ್ದಾರೆ.

ಇಲ್ಲಿನ ನಿವಾಸಿಗಳಾದ ಪರಿಶಿಷ್ಟ ಜಾತಿಯ ರಾಧಾ, ಗಿರಿಜಾ ಅವರ ಮನೆ ಸಹಿತ ಅಕ್ಕಪಕ್ಕದ ಐದಾರು ಮನೆಗಳು ಮಳೆಯಿಂದ ಜಲಾವೃತವಾದ ಬಗ್ಗೆ ವರದಿಯಾಗಿದೆ. ಮನೆಯಿಂದ ಹೊರಗೆ ಬರಬೇಕಾದರೆ ಎದೆ ಎತ್ತರಕ್ಕೆ ನಿಂತಿರುವ  ನೀರಲ್ಲಿ ಹೆಜ್ಜೆಹಾಕಿ ಬರಬೇಕಾದ ಅನಿವಾರ್ಯತೆ ಇದೆ.

ಬೀಜಾಡಿ, ಗೋಪಾಡಿ ಭಾಗದ ರಾಷ್ಟ್ರೀಯ ಹೆದ್ದಾರಿಯಿಂದ ಹಿಡಿದು ಅಕ್ಕ ಪಕ್ಕದಿಂದ ಹರಿದು ಬರುವ ಮಳೆ ನೀರು,  ಹೊಳೆ ಸಾಲು ಎಂದು ಕರೆಯ್ಪಡುವ ಕಾಲುವೆ ಮೂಲಕವಾಗಿ ಸಮುದ್ರ ಸೇರುತ್ತಿತ್ತು. ಇತ್ತೀಚೆಗೆ ಕೆಲ ವರ್ಷಗಳಿಂದ ನೀರಿನ ಪ್ರಮಾಣ ಜಾಸ್ತಿಯಾಗಿದ್ದು ಹೊಳೆಸಾಲು ಕಿರಿದಾಗಿದೆ. ಮಾತ್ರವಲ್ಲದೆ ಹೂಳೆತ್ತದ ಕಾರಣ ಕಾಲುವೆಯಲ್ಲಿ ಸರಿಯಾಗಿ ನೀರು ಹರಿಯದೆ ಸಮೀಪದ ಕೃಷಿಭೂಮಿಗಳಿಗೆ ನುಗ್ಗುತ್ತಿದೆ. ಇನ್ನು ಗೋಪಾಡಿ ಕಾಂತೇಶ್ವರ ದೇವಸ್ಥಾನ ಸಮೀಪದಿಂದ ಸಮುದ್ರ ಕಿನಾರೆಯತ್ತ ಸಾಗುವ ರಸ್ತೆಯಿಂದ ಸಾಗಿದಾಗ ಸಿಗುವ ಸ್ವಾಮಿ ವಿವೇಕಾನಂದ ರಸ್ತೆಯ ಮನೆಗಳಿಗೆ ನೀರು ನುಗ್ಗಿ ಅಪಾರ ಹಾನಿ ಉಂಟಾಗಿದೆ.

ಅನಾರೋಗ್ಯ ಪೀಡಿತರು ಕಂಗಾಲು: ಪಡುಚಾವಡಿಬೆಟ್ಟು ಪ್ರದೇಶದಲ್ಲಿ ಎರಡು ಪ.ಜಾತಿ ಕುಟುಂಬ ಸಹಿತ ಐದಾರು ಮನೆಗಳಿಗೆ ಮಳೆ ನೀರು ನುಗ್ಗಿದೆ. ಇಲ್ಲಿನ ಶೀನ ಮೊಗವೀರ ಪ್ಯಾರಾಲಿಸಿಸ್ ಸಮಸ್ಯೆಯಿಂದ ಬಳಲುತ್ತಿದ್ದು, ಅವರ ಮನೆಯೂ ಜಲಾವೃತವಾಗಿದೆ. ಮಿಣ್ಕ ಮೊಗವೀರ ಎನ್ನುವವರ ಮಗಳು ತುಂಬು ಗರ್ಭಿಣಿಯಾಗಿದ್ದು ಮನೆ ನೀರಲ್ಲಿ ಮುಳುಗಡೆಯಾಗಿ ಜಲ ದಿಗ್ಭಂಧನ ಪರಿಸ್ಥಿತಿ ನಿರ್ಮಾಣವಾಗಿದೆ. 

ಉಳಿದಂತೆ ಹರೀಶ್, ಗಿರೀಶ್ ಎನ್ನುವವರ ಮನೆ ಸಹಿತ ಮಿಕ್ಕ ಹಲವು ಮನೆಗಳಿಗೆ ಮಳೆ ನೀರು ನುಗ್ಗಿದೆ.  ಗುರುವಾರ ಬೆಳಗಿನಿಂದ ಈ ಭಾಗದ ಮಂದಿ ಕೃತಕ ನೆರೆಯಿಂದಾಗಿ ಸಮಸ್ಯೆ ಅನುಭವಿಸುತ್ತಿದ್ದರೂ ಕೂಡ ಸಂಜೆ ತನಕ ಸ್ಥಳಿಯಾಡಳಿತ ಮಾತ್ರ ಯಾವುದೇ ಪೂರಕ ಸ್ಪಂದನೆ ನೀಡಿಲ್ಲ ಎನ್ನಲಾಗಿದೆ. ಸಂಜೆ ವೇಳೆ ಸ್ಥಳಿಯಾಡಳಿತ ಪ್ರತಿನಿಧಿಗಳು, ಅಧಿಕಾರಿಗಳು ಭೇಟಿ ನೀಡಿದ್ದು ಆಗ ಸ್ಥಳೀಯರು ಅಸಮಾಧಾನ ಹೊರಹಾಕಿದರು.

ಸ್ಥಳಕ್ಕೆ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಕುಂದಾಪುರ ತಾಲೂಕು ಸಂಚಾಲಕ ರಾಜು ಬೆಟ್ಟಿನಮನೆ ಭೇಟಿ ನೀಡಿ ಸಮಸ್ಯೆಗೊಳಗಾದ ಕುಟುಂಬಗಳಿಗೆ ಧೈರ್ಯ ತುಂಬಿದರು.

"ಪೂರ್ವಜರ ಕಾಲದಿಂದಲೂ ಇಲ್ಲೇ ವಾಸಿಸುತ್ತಿದ್ದೇವೆ. ವಿದ್ಯಾರ್ಥಿಗಳು, ಅನಾರೋಗ್ಯ ಪೀಡಿತರು ಇಲ್ಲಿ ತಿರುಗಾಡಲು ಹರಸಾಹಸ ಪಡಬೇಕು. ಸಂಬಂಧ ಪಟ್ಟವರಿಗೆ ತಿಳಿಸಿ ಸಾಕಾಗಿದೆ. ನಾವು ಸರಕಾರದವರ ಲೆಕ್ಕಕ್ಕೆ ಇಲ್ಲ ಅನ್ನಿಸುತ್ತಿದೆ".
-ರಾಧಾ, ಸ್ಥಳೀಯ ದಲಿತ ಮಹಿಳೆ

"ಕಳೆದ ಮೂರ್ನಾಲ್ಕು ದಶಕಗಳಿಂದ ಪ.ಜಾತಿ ಕುಟುಂಬ ಇಲ್ಲಿ ಸಮಸ್ಯೆ ಅನುಭವಿಸುತ್ತಿದೆ. ಈ ಬಾರೀ ಮಾತ್ರ ಮಳೆಯಿಂದಾಗಿ ಮನೆಯಿಂದ ಹೊರಗೆ ಕಾಲಿಡಲಾಗದ ಸ್ಥಿತಿ ನಿರ್ಮಾಣವಾಗಿದೆ. ಇದು ನಾಚಿಕೆಗೇಡಿನ ವ್ಯವಸ್ಥೆ. ಎಸ್ಸಿ-ಎಸ್ಟಿ ಅನುದಾನವನ್ನು ಅಗತ್ಯವಿಲ್ಲದಲ್ಲಿ ಬಳಸದೇ, ಇಂತಹ ಪ್ರದೇಶದಲ್ಲಿ ರಸ್ತೆ ಮೊದಲಾದ ಸೌಕರ್ಯಕ್ಕೆ ಉಪಯೋಗಿಸಬೇಕು. ಮುಂದಿನ ಮಳೆಗಾಲ ದೊಳಗೆ ಎರಡು ಮನೆಗಳು ಆಗಬೇಕು. ಈ ಹಿಂದೆ ಜಿಲ್ಲಾಧಿಕಾರಿಗಳ ಸಹಿತ ಸಂಬಂದಪಟ್ಟ ಅಧಿಕಾರಿಗಳಿಗೆ ಮನವಿ ಮಾಡಲಾಗಿದೆ. ನಮ್ಮ ತಾಳ್ಮೆಯನ್ನು ಅಸಹಾಯಕತೆ ಎಂದು ತಿಳಿದು ವ್ಯವಸ್ಥೆ ದುರುಪಯೋಗ ಮಾಡಲು ಹೊರಟರೆ ಗ್ರಾಮಪಂಚಾಯತ್ ಕಚೇರಿ ಮುಂದೆ ಅಹೋರಾತ್ರಿ ಧರಣಿ ಮಾಡಲಾಗುತ್ತದೆ".

-ರಾಜು ಬೆಟ್ಟಿನಮನೆ,
ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ
ಕುಂದಾಪುರ ತಾಲೂಕು ಸಂಚಾಲಕ 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X