Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಭಟ್ಕಳ; ಸರ್ಕಾರಿ ಕಟ್ಟಡಗಳ ನಾಮಫಲಕದಲ್ಲಿ...

ಭಟ್ಕಳ; ಸರ್ಕಾರಿ ಕಟ್ಟಡಗಳ ನಾಮಫಲಕದಲ್ಲಿ ಕನ್ನಡ, ಇಂಗ್ಲಿಷ್ ಹೊರತು ಇತರ ಭಾಷೆಗೆ ಅವಕಾಶವಿಲ್ಲ: ಜಿಲ್ಲಾಧಿಕಾರಿ

ವಾರ್ತಾಭಾರತಿವಾರ್ತಾಭಾರತಿ30 Jun 2022 9:10 PM IST
share
ಭಟ್ಕಳ; ಸರ್ಕಾರಿ ಕಟ್ಟಡಗಳ ನಾಮಫಲಕದಲ್ಲಿ ಕನ್ನಡ, ಇಂಗ್ಲಿಷ್ ಹೊರತು ಇತರ ಭಾಷೆಗೆ ಅವಕಾಶವಿಲ್ಲ: ಜಿಲ್ಲಾಧಿಕಾರಿ

ಭಟ್ಕಳ: ಪುರಸಭೆ ನೂತನ ವಾಣಿಜ್ಯ ಕಟ್ಟಡಕ್ಕೆ ಕನ್ನಡ ಇಂಗ್ಲಿಷ್ ಜೊತೆಗೆ ಉರ್ದು ಅಕ್ಷರಗಳನ್ನು ಅಳವಡಿಸುವ ವಿಚಾರವಾಗಿ ಸಂಘಪರಿವಾರದ ಸಂಘಟನೆಗಳಿಂದ ಪ್ರತಿರೋಧ ಉಂಟಾಗಿರುವ ಹಿನ್ನೆಲೆಯಲ್ಲಿ ವಿವಾದ ಉಂಟಾಗಿದ್ದು ಗುರುವಾರ  ಜಿಲ್ಲಾಧಿಕಾರಿ ಆದೇಶದಿಂದಾಗಿ ತೆರವುಗೊಂಡಿದೆ.

ಗುರುವಾರ ಪುರಸಭೆ ಸದಸ್ಯರು ಹಾಗೂ ಮುಖಂಡರೊಂದಿಗೆ ಸಹಾಯಕ ಆಯುಕ್ತರ ಕಚೇರಿಯಲ್ಲಿ ಸಭೆ ನಡೆಸಿದ ಜಿಲ್ಲಾಧಿಕಾರಿ ಮುಲೈ ಮುಹಿಲನ್, ಸರ್ಕಾರಿ ಕಟ್ಟಡದಲ್ಲಿ ಕನ್ನಡ ಇಂಗ್ಲಿಷ್ ಹೊರತು ಪಡಿಸಿ ಯಾವುದೇ ಭಾಷೆಯನ್ನು ಅಳವಡಿಸಲು ಕಾನೂನಿನಲ್ಲಿ ಅವಕಾಶ ಇಲ್ಲದ ಕಾರಣ ಭಟ್ಕಳ ಪುರಸಭೆ ಕಟ್ಟಡದ ನಾಮಫಲಕದಲ್ಲಿ ಅಳವಡಿಸಲಾಗಿರುವ ಉರ್ದು ಅಕ್ಷರಗಳನ್ನು ತೆರವುಗೊಳಿಸುವಂತೆ ಆದೇಶ ನೀಡಿ ಭಟ್ಕಳ ಪುರಸಭೆಯ ನಾಮಫಲಕದಲ್ಲಿ ಅಳವಡಿಸಲಾಗಿರುವ ಉರ್ದು ಭಾಷೆಯ ಅಕ್ಷರಗಳನ್ನು ತೆರವುಗೊಳಿಸಿದರು. 

ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಜಿಲ್ಲಾಧಿಕಾರಿ, ಭಟ್ಕಳದಲ್ಲಿ ಮುಂಬರುವ ಹಬ್ಬ ಮತ್ತು ಪುರಸಭೆಯ ವಿಷಯಕ್ಕೆ ಸಂಬಂಧಿಸಿದಂತೆ ಮುಖಂಡರು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯೊಂದಿಗೆ ಭಟ್ಕಳದಲ್ಲಿ ಸಭೆ ನಡೆಸಲಾಗಿದ್ದು, ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಭಟ್ಕಳ ಪುರಸಭೆ ನೂತನ ಕಟ್ಟಡದಲ್ಲಿ ಉರ್ದು ಅಳವಡಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಕಾನೂನಿನಲ್ಲಿ ಯಾವುದೇ ಅವಕಾಶ ಇಲ್ಲದ ಕಾರಣ ನಾಮಫಲಕದಿಂದ ಉರ್ದು ಭಾಷೆಯ ಅಕ್ಷರಗಳನ್ನು ತೆಗೆಯಲು ಆದೇಶ ನೀಡಲಾಗಿದೆ ಎಂದು ಮಾಹಿತಿ ನೀಡಿದರು. ಅಲ್ಲದೆ ಪುರಸಭೆಯ ಸಾಮಾನ್ಯ ಸಭೆಯಲ್ಲಿ ಈ ಕುರಿತಂತೆ ಯಾವುದೇ ಠರಾವು ಆಗದೆ ಇರುವುದರಿಂದ ಸ್ಪಷ್ಟನೆಯನ್ನು ಕೋರಿ ಪುರಸಭಾ ಮುಖ್ಯಾಧಿಕಾರಿ ಪತ್ರಬರೆಯಲಾಗಿತ್ತು. ಕಾನೂನು ಪ್ರಕಾರ ಯಾವುದೆ ಠರಾವು ಮಾಡದೆ ಇದನ್ನು ಅಳವಡಿಸಲಾಗಿದೆ. ನಾಮಫಲಕದಲ್ಲಿ ಉರ್ದು ಭಾಷೆಯನ್ನು ತೆರವುಗೊಳಿಸಲು ಪೊಲೀಸ್ ರಕ್ಷಣೆಯನ್ನು ಕೇಳಲಾಗಿತ್ತು. ಈ ಹಿನ್ನೆಲೆಯಲ್ಲಿ ಕಾನೂನನ್ನು ಪರಿಶೀಲಿಸಿದ್ದು ಇದಕ್ಕೆ ಕಾನೂನಿನಲ್ಲಿ ಯಾವುದೇ ಅವಕಾಶ ಇಲ್ಲದೆ ಕಾರಣ ತೆರವುಗೊಳಿಸುಂತೆ ಆದೇಶಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಪೌರಾಡಳಿತ ನಿರ್ದೇಶಾನಾಲಯವು 22-02-2018 ರಂದು ಇಂತಹದ್ದೇ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಕನ್ನಡ ಮತ್ತು ಆಂಗ್ಲ ಭಾಷೆಯನ್ನು ಹೊರತು ಪಡಿಸಿ ಬೇರೆ ಭಾಷೆಯನ್ನು ಸರ್ಕಾರ ಕಚೇರಿಯ ನಾಮಫಲಕದಲ್ಲಿ ಅಳವಡಿಸಲು ಕಾನೂನು ಮತ್ತು ನಿಯಮದಲ್ಲಿ ಯಾವುದೇ ಅವಕಾಶ ಇರುವುದಿಲ್ಲ ಎಂಬ ಸ್ಪಷ್ಟೀಕರಣವನ್ನು ನೀಡಿದ್ದು ಇರುತ್ತದೆ. ಇದರ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಮತ್ತು ಸಾರ್ವಜನಿಕರ ಹಿತಾದೃಷ್ಟಿಯಿಂದ ನಾಮಫಲಕದಲ್ಲಿ ಅಳವಡಿಸಿರುವ ಉರ್ದು ಅಕ್ಷರಗಳನ್ನು ತೆರವುಗೊಳಿಸುವಂತೆ ಆದೇಶವನ್ನು ನೀಡಿದ್ದಾಗಿ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಡಿ., ಪೆನ್ನೇಕರ್, ಸಹಾಯಕ ಆಯುಕ್ತೆ ಮಮತಾದೇವಿ, ತಹಸಿಲ್ದಾರ್ ಸುಮಂತ್ ಬಿ.ಇ., ಮತ್ತಿತರರು ಉಪಸ್ಥಿತರಿದ್ದರು. 

ಕಾನೂನು ಹೋರಾಟಕ್ಕೆ ತುರ್ತು ಸಭೆ ನಿರ್ಧಾರ: ಜಿಲ್ಲಾಧಿಕಾರಿಯ ಆದೇಶದ ಮೆರೆಗೆ ಭಟ್ಕಳ ಪುರಸಭಾ ವಾಣಿಜ್ಯಕಟ್ಟಡಕ್ಕೆ ಕನ್ನಡ ಇಂಗ್ಲಿಷ್ ಜೊತೆಗೆ ಅಳವಡಿಸಲಾಗಿದ್ದ ಉರ್ದು ಭಾಷೆಯ ಅಕ್ಷರಗಳನ್ನು ತೆಗೆಯಲಾಗಿದ್ದು ಇದೇ ವಿಷಯಕ್ಕಾಗಿ ಗುರುವಾರ ಸಂಜೆ ತುರ್ತು ಪುರಸಭೆಯ ವಿಶೇಷ ಸಾಮಾನ್ಯಸಭೆ ನಡೆದಿದ್ದು ಜಿಲ್ಲಾಧಿಕಾರಿಯವರ ಆದೇಶವನ್ನು ಸಾಮಾನ್ಯ ಸಭೆಯಲ್ಲಿ ಖಂಡಿಸಲಾಗಿದ್ದು ಇದರ ವಿರುದ್ಧ ಕನೂನು ಹೋರಾಟ ಮುಂದುವರೆಸಲಾಗುವುದು ಎಂದು ಒಕ್ಕೋರಲಿನಿಂದ ಠರಾವು ಕೈಗೊಳ್ಳಲಾಗಿದೆ ಎಂದು ಪುರಸಭೆ ಅಧ್ಯಕ್ಷ ಪರ್ವೇಝ್ ಕಾಶಿಮಜಿ ಮಾಧ್ಯಮಗಳಿಗೆ ತಿಳಿಸಿದರು.

ಉರ್ದು ಅಳವಡಿಕೆಗೆ ಸಂಬಂಧಿಸಿದಂತೆ ಇಷ್ಟೊಂದು ವಿವಾದ ಅನಗತ್ಯವಾಗಿತ್ತು. ಈಗ ಜಿಲ್ಲಾಧಿಕಾರಿಯವರ ಆದೇಶ ಪಾಲನೆಯಾಗಿದೆ. ಆದರೆ ಇದರ ವಿರುದ್ಧ ನಾವು ಸಂವಿಧಾನಿಕ ರೀತಿಯಲ್ಲಿ ಕಾನೂನು ಹೋರಾಟ ನಡೆಸುತ್ತೇವೆ. ಅಲ್ಪಸಂಖ್ಯಾತರ ಭಾಷೆಗೆ ಸಂಬಂದಿಸಿದಂತೆ ಕಾನೂನಿನಲ್ಲಿ ಅವಕಾಶವಿದ್ದು ಕಾನೂನಿನ ಮೂಲಕವೇ ಇದಕ್ಕೆ ಪರಿಹಾರ ಕಂಡುಕೊಳ್ಳುತ್ತೇವೆ. ಅಲ್ಲಿಯ ತನಕ ಸಾರ್ವಜನಿಕರು ಶಾಂತಿಯಿಂದ ವರ್ತಿಸಬೇಕೆಂದು ಅವರು ಮನವಿ ಮಾಡಿಕೊಂಡಿದ್ದಾರೆ.

ಈ ಸಂದರ್ಭದಲ್ಲಿ ಮಾತನಾಡಿದ ಜೆ.ಡಿ.ಎಸ್. ಮುಖಂಡ ಇನಾಯತುಲ್ಲಾ ಶಾಬಂದ್ರಿ, ನಾವು ಕನ್ನಡ ವಿರೋಧಿಗಳು ಎಂಬಂತೆ ಮಾಧ್ಯಮಗಳು ಬಿಂಬಿಸುತ್ತಿವೆ. ಆದರೆ ನಾವು ಕೂಡ ಕನ್ನಡಿಗರೆ, ದುಬೈ, ಸೌದಿ ಮತ್ತಿತರ ದೇಶಗಳಲ್ಲಿ ಕನ್ನಡ ಸಂಘ ಕಟ್ಟುವಲ್ಲಿ ಭಟ್ಕಳದ ಮುಸ್ಲಿಮರು ಮುಂಚೂಣಿಯಲ್ಲಿದ್ದಾರೆ. ಆದರೆ ಕೆಲ ಸಂಘಪರಿವಾರದವರು ಕನ್ನಡಶಾಲು ಹಾಕಿಕೊಂಡು ಬಂದು ತಾವು ಕನ್ನಡ ಪ್ರೇಮಿಗಳೆಂದು ಬಿಂಬಿಸಿಕೊಳ್ಳುತ್ತಿ ದ್ದಾರೆ. ಪುರಸಭೆಯ ತಪ್ಪಿನಿಂದಾಗಿ ನಾವು ಸಾರ್ವಜನಿಕರ ಮುಂದೆ ಅವಮಾನಿತರಾಗಬೇಕಾಗಿ ಬಂದಿದೆ. ಪುರಸಭೆಯಲ್ಲಿ ಠರಾವು ಮಾಡದೆ ಶಾಸಕ ಸುನಿಲ್ ನಾಯ್ಕ ಅನಧಿಕೃತವಾಗಿ ಆಟೋ ರಿಕ್ಷಾ ನಿಲ್ದಾಣ ಕಟ್ಟಿಸಿಕೊಟ್ಟಿದ್ದಾರೆ ಅದನ್ನು ಕೂಡ ಮುಂದಿನ ದಿನಗಳಲ್ಲಿ ತೆರವುಗೊಳಿಸಬಹುದು. ಹಾಗೆಯೆ ಶಾಸಕರ ಕುಮ್ಮಕ್ಕಿನಿಂದಾಗಿ ಒಂದುವರೆ ಕೋಟಿ ರೂ ವೆಚ್ಚ ಮಾಡಿ ಕಟ್ಟಿಸಿದ್ದ ನೂತನ ಮೀನುಮಾರುಕಟ್ಟೆ ಇದುವರೆಗೂ ಸ್ಥಳಾಂತರವಾಗದೆ ದುಸ್ಥಿತಿ ಕಾಣುತ್ತಿದೆ. ಈ ಎಲ್ಲ ವಿಷಯಗಳ ಬಗ್ಗೆಯೂ  ಜಿಲ್ಲಾದಿಕಾರಿಗಳು ವಿಶೇಷ ಕಾಳಜಿ ವಹಿಸಬೇಕು ಎಂದು ಆಗ್ರಹಿಸಿದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X