Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಜಾಗತಿಕ ರಾಜಕೀಯ ಹಿಂದೂ ಮಹಾ ಸಾಗರದಲ್ಲಿ...

ಜಾಗತಿಕ ರಾಜಕೀಯ ಹಿಂದೂ ಮಹಾ ಸಾಗರದಲ್ಲಿ ಅಂತರರಾಷ್ಟ್ರೀಯ ವೈರತ್ವ, ಹಿತಾಸಕ್ತಿ ಸಂಘರ್ಷಕ್ಕೆ ಕಾರಣವಾಗಲಿದೆ:ಅಜಿತ್ ದೋವಲ್

ವಾರ್ತಾಭಾರತಿವಾರ್ತಾಭಾರತಿ1 July 2022 12:07 AM IST
share
ಜಾಗತಿಕ ರಾಜಕೀಯ ಹಿಂದೂ ಮಹಾ ಸಾಗರದಲ್ಲಿ ಅಂತರರಾಷ್ಟ್ರೀಯ ವೈರತ್ವ, ಹಿತಾಸಕ್ತಿ ಸಂಘರ್ಷಕ್ಕೆ ಕಾರಣವಾಗಲಿದೆ:ಅಜಿತ್ ದೋವಲ್

ಹೊಸದಿಲ್ಲಿ, ಜೂ. 30: ಹಿಂದೂ ಮಹಾಸಾಗರ ವಲಯ (ಐಒಆರ್)ದಲ್ಲಿ ಅಂತರರಾಷ್ಟ್ರೀಯ ವೈರತ್ವ, ಪೈಪೋಟಿ ಹಾಗೂ ಹಿತಾಸಕ್ತಿಯ ಸಂಘರ್ಷ ಹೆಚ್ಚುತ್ತಿದೆ. ಆದುದರಿಂದ ನಾವು ಈ ಪ್ರದೇಶವನ್ನು ರಕ್ಷಿಸುವುದು ಮುಖ್ಯವಾಗಿದೆ ಎಂದು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರು ಗುರುವಾರ ಹೇಳಿದ್ದಾರೆ.

‘‘ಈ ಹಿಂದೆ ಇದು ಶಾಂತಿಯ ಸಾಗರವಾಗಿತ್ತು. ಆದರೆ, ಈಗ ಹಿಂದೂ ಮಹಾ ಸಾಗರ ವಲಯ (ಐಒಆರ್)ದಲ್ಲಿ ಜಾಗತಿಕ ರಾಜಕೀಯ ಬದಲಾಗುತ್ತಿದೆ’’ ಎಂದು ದೋವಲ್ ತಿಳಿಸಿದ್ದಾರೆ.

ಸಾಗರ ತೀರದ ಭದ್ರತೆ ಮೇಲೆ ಪರಿಣಾಮ ಬೀರುವ ವಿಷಯಗಳ ಪ್ರಮುಖ ನೀತಿ ಕುರಿತು ಚರ್ಚೆ ನಡೆಸಲು ಸಾಗರ ತೀರದ ಭದ್ರತಾ ಗುಂಪು  (ಎಂಎಎಂಎಸ್‌ಜಿ) ಆಯೋಜಿಸಿದ ಮೊಟ್ಟ ಮೊದಲ ಸಭೆಯಲ್ಲಿ ಅವರು ಮಾತನಾಡಿದರು.

ಇದು ಪ್ರಮುಖ ಕೇಂದ್ರ ಸಚಿವಾಲಯಗಳು, ಸಂಸ್ಥೆಗಳು, ಸಾಗರ ತೀರದ ವ್ಯವಹಾರಗಳನ್ನು ನಿರ್ವಹಿಸುತ್ತಿರುವ ಭದ್ರತಾ ಪಡೆಗಳು ಹಾಗೂ 13 ಕರಾವಳಿ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳನ್ನು ಪ್ರತಿನಿಧಿಸುವ ರಾಜ್ಯ ಸಾಗರ ತೀರ ಭದ್ರತಾ ಸಮನ್ವಯಕಾರರನ್ನು ಸದಸ್ಯರನ್ನಾಗಿ ಹೊಂದಿದೆ.

ಈ ಸಭೆಯಲ್ಲಿ ದೇಶದ ಮೊದಲ ಎನ್‌ಎಂಎಸ್‌ಸಿಯಾಗಿ ಫೆಬ್ರವರಿ 16ರಂದು ಅಧಿಕಾರ ವಹಿಸಿಕೊಂಡ ರಾಷ್ಟ್ರೀಯ ಸಾಗರ ತೀರ ಭದ್ರತಾ ಸಮನ್ವಯಕಾರ ವೈಸ್ ಅಡ್ಮಿರಲ್ ಜಿ. ಅಶೋಕ್ ಕುಮಾರ್ (ನಿವೃತ್ತ) ಅಧ್ಯಕ್ಷತೆ ವಹಿಸಿದ್ದರು. ನೌಕಾ ಪಡೆ ವರಿಷ್ಠ ಆರ್. ಹರಿ ಕುಮಾರ್ ಹಾಗೂ ಎನ್‌ಎಸ್‌ಸಿಎಸ್‌ನ ಉಪ ಎನ್‌ಎಸ್‌ಎಗಳು ಕೂಡ ಉಪಸ್ಥಿತರಿದ್ದರು.

ಹಿರಿಯ ಅಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಿದ ದೋವಲ್, ಹಿಂದೂ ಮಹಾ ಸಾಗರ ಭಾರತದ ಅತಿ ದೊಡ್ಡ ಆಸ್ತಿ, ಆದರೆ, ಅದರ ಸಮಸ್ಯೆಗಳು ಆ ಆಸ್ತಿಯ ಮೌಲ್ಯವನ್ನು ಕುಗ್ಗಿಸಬಹುದು ಎಂದರು.

ನಾವು ಸೊತ್ತುಗಳನ್ನು ಸೃಷ್ಟಿಸುತ್ತೇವೆ ಹಾಗೂ ಅಭಿವೃದ್ಧಿಪಡಿಸುತ್ತೇವೆ. ಇದರಿಂದ ವ್ಯಾಪಾರ ಹಾಗೂ ವಾಣಿಜ್ಯ ಹೆಚ್ಚಾಗುತ್ತದೆ. ಆದರೆ, ಇದು ಸಾಗರ ತೀರದಲ್ಲಿ ಸಮಸ್ಯೆಗೆ ಕಾರಣವಾಗುತ್ತದೆ ಹಾಗೂ ಸಾಗರ ತೀರದ ಭದ್ರತೆಗೆ ಸವಾಲನ್ನು ಒಡ್ಡುತ್ತದೆ ಎಂದು ಅವರು ಹೇಳಿದರು.

ಇದರೊಂದಿಗೆ ಈ ಹಿಂದಿನ ಸಮಸ್ಯೆಗಳು ಮುಂದುವರಿಯುತ್ತವೆ ಎಂದು ಹೇಳಿದ ಅವರು, ಕಡಲ್ಗಳ್ಳರು, ಮಾದಕ ವಸ್ತು ಸಾಗಾಟ, ಮಾನವ ಸಾಗಾಟದಂತದ ವಿಷಯಗಳು ಸಾಂಪ್ರದಾಯಿಕ ಭದ್ರತೆಗೆ ನಿರಂತರ ಸವಾಲಾಗುತ್ತಿದೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X