Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನೂಪುರ್‌ ಶರ್ಮಾ ವಿರುದ್ಧ ಸುಪ್ರೀಂಕೋರ್ಟ್...

ನೂಪುರ್‌ ಶರ್ಮಾ ವಿರುದ್ಧ ಸುಪ್ರೀಂಕೋರ್ಟ್ ನೀಡಿದ ಹೇಳಿಕೆಯನ್ನು ಹಿಂಪಡೆಯುವಂತೆ ಸಿಜೆಐಗೆ ಪತ್ರ

ವಾರ್ತಾಭಾರತಿವಾರ್ತಾಭಾರತಿ1 July 2022 11:12 PM IST
share
ನೂಪುರ್‌ ಶರ್ಮಾ ವಿರುದ್ಧ ಸುಪ್ರೀಂಕೋರ್ಟ್ ನೀಡಿದ ಹೇಳಿಕೆಯನ್ನು ಹಿಂಪಡೆಯುವಂತೆ ಸಿಜೆಐಗೆ ಪತ್ರ

ಹೊಸದಿಲ್ಲಿ: ಪ್ರವಾದಿ ಮಹಮ್ಮದರ ವಿರುದ್ಧ ನಿಂದನಾತ್ಮಕ ಹೇಳಿಕೆ ನೀಡಿ ಕೋಲಾಹಲಕ್ಕೆ ಕಾರಣವಾಗಿರುವ ಬಿಜೆಪಿಯಿಂದ ಅಮಾನತುಗೊಂಡಿರುವ ನಾಯಕಿ ನೂಪುರ್ ಶರ್ಮಾ ವಿರುದ್ಧ ಸುಪ್ರೀಂ ಕೋರ್ಟ್‌ನ ರಜಾಕಾಲದ ಪೀಠ ಮಾಡಿರುವ ಪ್ರತಿಕೂಲ ಹೇಳಿಕೆಗಳನ್ನು ಹಿಂಪಡೆಯುವಂತೆ ಕೋರಿ ಸಿಜೆಐ ಎನ್‌ವಿ ರಮಣ ಅವರಿಗೆ ಇಂದು ಅರ್ಜಿ ಸಲ್ಲಿಸಲಾಗಿದೆ. ಸಾಮಾಜಿಕ ಕಾರ್ಯಕರ್ತ ಅಜಯ್ ಗೌತಮ್ ನೀಡಿರುವ ಪತ್ರದಲ್ಲಿ ನೂಪುರ್ ಶರ್ಮಾ ವಿರುದ್ಧ ನ್ಯಾಯಮೂರ್ತಿ ಸೂರ್ಯಕಾಂತ್ ಮಾಡಿರುವ ಟೀಕೆಗಳನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿದ್ದಾರೆ.

ನೂಪುರ್ ಶರ್ಮಾ ವಿರುದ್ಧ ನ್ಯಾಯಮೂರ್ತಿ ಸೂರ್ಯಕಾಂತ್ ಮಾಡಿರುವ ಟೀಕೆಗಳನ್ನು ಹಿಂಪಡೆಯುವಂತೆ ಕೋರಿ ಸಾಮಾಜಿಕ ಕಾರ್ಯಕರ್ತ ಅಜಯ್ ಗೌತಮ್ ಅವರು ಸಿಜೆಐಗೆ ನೀಡಿರುವ ಪತ್ರದಲ್ಲಿ ನಿಪುರ್ ಶರ್ಮಾ ನ್ಯಾಯಯುತ ವಿಚಾರಣೆ ನಡೆಸಬೇಕು ಎಂದು ಕೋರಿದ್ದಾರೆ. ಇದಲ್ಲದೇ ನೂಪುರ್ ಶರ್ಮಾ ಅವರಿಗೆ ಪ್ರಾಣಾಪಾಯವಿದೆ ಎಂದು ಅಜಯ್ ಗೌತಮ್ ಹೇಳಿದ್ದಾರೆ. ಹೀಗಾಗಿ ಅವರ ವಿರುದ್ಧ ದಾಖಲಾಗಿರುವ ಎಲ್ಲ ಪ್ರಕರಣಗಳನ್ನು ದಿಲ್ಲಿಗೆ ವರ್ಗಾಯಿಸಬೇಕು ಎಂದು ಅವರು ಕೋರಿದ್ದಾರೆ.

ನ್ಯಾಯಮೂರ್ತಿ ಸೂರ್ಯಕಾಂತ್ ಅವರು ನೂಪುರ್ ಶರ್ಮಾ ಅವರ ಮೇಲೆ ಈ ಟೀಕೆಗಳನ್ನು ಮಾಡಿದ್ದಾರೆ ಎಂದು ಪತ್ರದ ಅರ್ಜಿಯಲ್ಲಿ ಹೇಳಲಾಗಿದೆ-

1- ಉದಯಪುರ ಹತ್ಯಾಕಾಂಡಕ್ಕೆ ನೂಪುರ್ ಶರ್ಮಾ ಕಾರಣ.

2- ದೇಶದ ಬೆಂಕಿಗೆ ಅವರೇ ಕಾರಣ.

3- ಟಿವಿ ಮುಂದೆ ಬೇಷರತ್ ಕ್ಷಮೆ ಕೇಳಬೇಕಿತ್ತು.

4- ನೂಪುರ್ ಶರ್ಮಾ ದೇಶದ ನಿರ್ದಿಷ್ಟ ಸಮುದಾಯದ ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡಿದ್ದಾರೆ.

5- ದೇಶದಲ್ಲಿ ಏನೇ ನಡೆದರೂ ಅದಕ್ಕೆ ನೂಪುರ್ ಶರ್ಮಾ ಮಾತ್ರ ಹೊಣೆ.

6- ನೂಪುರ್ ಶರ್ಮಾ ಅವರನ್ನು ಬಂಧಿಸುವಲ್ಲಿ ದೆಹಲಿ ಪೊಲೀಸರು ವಿಫಲರಾಗಿದ್ದಾರೆ.

7- ದೇಶಾದ್ಯಂತ ನಡೆಯುತ್ತಿರುವ ಘಟನೆಗಳಿಗೆ ಅವರೊಬ್ಬರೇ ಹೊಣೆಗಾರ್ತಿ.

8- ನೂಪುರ್ ಶರ್ಮಾ ಅವರ ಲಘು ನಾಲಿಗೆ ಇಡೀ ದೇಶವನ್ನೇ ಬೆಚ್ಚಿಬೀಳಿಸಿದೆ.

9- ಉದಯಪುರದಲ್ಲಿ ನಡೆದ ಅಹಿತಕರ ಘಟನೆಗೆ ನೂಪುರ್ ಮೇಲಿನ ಕೋಪವೇ ಕಾರಣ.

ಬಿಜೆಪಿ ಪಕ್ಷದಿಂದ ಹೊರಹಾಕಿತ್ತು

ಬಿಜೆಪಿಯ ವಕ್ತಾರರಾಗಿದ್ದ ನೂಪುರ್ ಶರ್ಮಾ ಅವರು ಇತ್ತೀಚೆಗೆ ಟಿವಿ ಚರ್ಚೆಯಲ್ಲಿ ಪ್ರವಾದಿ ಮಹಮ್ಮದ್ ವಿರುದ್ಧ ನಿಂದನಾತ್ಮಕ ಟೀಕೆಗಳನ್ನು ಮಾಡಿದ್ದರು. ಇದಕ್ಕೆ ಸಾಕಷ್ಟು ವಿರೋಧ ವ್ಯಕ್ತವಾಗಿತ್ತು. ಕುವೈತ್, ಯುಎಇ, ಕತಾರ್ ಸೇರಿದಂತೆ ಎಲ್ಲಾ ಮುಸ್ಲಿಂ ರಾಷ್ಟ್ರಗಳು ಭಾರತದ ರಾಯಭಾರಿ ಕಛೇರಿಗಳನ್ನು ಕರೆಸಿ ಆಡಳಿತರೂಢ ಪಕ್ಷದ ವಕ್ತಾರೆಯ ಹೇಳಿಕೆಗೆ ಖಂಡನೆ ವ್ಯಕ್ತಪಡಿಸಿತ್ತು. ಇದಾದ ಬಳಿಕ ಬಿಜೆಪಿ ನೂಪುರ್ ಶರ್ಮಾ ಅವರನ್ನು ಪಕ್ಷದಿಂದ ಅಮಾನತುಗೊಳಿಸಿತ್ತು. ಅದರ ಬೆನ್ನಲ್ಲೇ, ನೂಪುರ್‌ ಶರ್ಮಾ ತಮ್ಮ ಹೇಳಿಕೆಗೆ ಕ್ಷಮೆಯಾಚಿಸಿದ್ದಾರೆ. ಅಲ್ಲದೆ ನನ್ನ ಮಾತುಗಳನ್ನು ವಾಪಸ್ ತೆಗೆದುಕೊಳ್ಳುತ್ತೇನೆ, ಯಾರನ್ನೂ ಕೆಣಕುವುದು ನನ್ನ ಉದ್ದೇಶವಾಗಿರಲಿಲ್ಲ ಎಂದು ಹೇಳಿದ್ದರು.

 ಆದರೆ, ನೂಪುರ್‌ ಶರ್ಮಾ ಅವರ ವಿರುದ್ಧ ಯಾವುದೇ ಕಾನೂನು ಕ್ರಮ ಜರುಗದ ಹಿನ್ನೆಲೆಯಲ್ಲಿ, ಮಹಾರಾಷ್ಟ್ರ ಸೇರಿದಂತೆ ಹಲವು ರಾಜ್ಯಗಳಲ್ಲಿ ಆಕೆಯ  ವಿರುದ್ಧ ಪ್ರಕರಣಗಳೂ ದಾಖಲಾಗಿವೆ. ಅದೇ ಸಮಯದಲ್ಲಿ, ನೂಪುರ್ ಶರ್ಮಾ ಅವರು ಎಲ್ಲಾ ಪ್ರಕರಣಗಳನ್ನು ದಿಲ್ಲಿಗೆ ವರ್ಗಾಯಿಸಲು ಒತ್ತಾಯಿಸಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು, ಅದನ್ನು ತಿರಸ್ಕರಿಸಿದ ಸುಪ್ರೀಂ ಕೋರ್ಟ್‌, ದೇಶ ಹೊತ್ತಿ ಉರಿಯಲು ನೂಪುರ್‌ ಶರ್ಮಾ ಅವರೇ ಕಾರಣ ಎಂದು ಹೇಳಿ, ಶರ್ಮಾ ದೇಶದ ಕ್ಷಮೆ ಕೋರಬೇಕು ಎಂದು ಹೇಳಿತ್ತು. ಸುಪ್ರೀಂ ಕೋರ್ಟ್‌ ನ ಈ ಹೇಳಿಕೆ ವಿರುದ್ಧ ಬಲಪಂಥೀಯರು ಆಕ್ರೋಶಗೊಂಡಿದ್ದು, ಸುಪ್ರೀಂ ಕೋರ್ಟ್‌ ಅನ್ನೇ ನಿಂದಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಅಭಿಯಾನ ನಡೆಸಿದ್ದಾರೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X