Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಿದ್ದರಾಮಯ್ಯ, ಡಿಕೆಶಿಗೆ ಕೊಲೆ ಬೆದರಿಕೆ...

ಸಿದ್ದರಾಮಯ್ಯ, ಡಿಕೆಶಿಗೆ ಕೊಲೆ ಬೆದರಿಕೆ ಪ್ರಕರಣ; ಸ್ಪಷ್ಟನೆ ನೀಡಿದ ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್

ವಾರ್ತಾಭಾರತಿವಾರ್ತಾಭಾರತಿ1 July 2022 11:42 PM IST
share
ಸಿದ್ದರಾಮಯ್ಯ, ಡಿಕೆಶಿಗೆ ಕೊಲೆ ಬೆದರಿಕೆ ಪ್ರಕರಣ; ಸ್ಪಷ್ಟನೆ ನೀಡಿದ ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್

ಬೆಂಗಳೂರು:  ವಿಧಾನಸಭೆ ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರನ್ನು ಗುಂಡಿಕ್ಕಿ ಕೊಲ್ಲಿ ಎಂದು ಪಬ್ಲಿಕ್ ಟಿವಿಯ ನೇರಪ್ರಸಾರ ಕಾರ್ಯಕ್ರಮವೊಂದರಲ್ಲಿ ವೀಕ್ಷಕರೊಬ್ಬರು ಹೇಳಿಕೆ ನೀಡಿರುವ ವಿಚಾರಕ್ಕೆ ಸಂಬಂಧಿಸಿದ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, ಈ ಸಂಬಂಧ ದೂರು ಕೂಡ ದಾಖಲಾಗಿದೆ. 

ಇದೀಗ ಈ ವಿಚಾರಕ್ಕೆ ಸಂಬಂಧಿಸಿ ಪಬ್ಲಿಕ್ ಟಿವಿಯ ನಿರೂಪಕ ಅರುಣ್ ಬಡಿಗೇರ್ ಸ್ಪಷ್ಟನೆ ನೀಡಿದ್ದಾರೆ. 

'ಒಬ್ಬ ನಿರೂಪಕನಾಗಿ ನಾನಾಗಲಿ ಅಥವಾ ನಮ್ಮ ಮ್ಯಾನೇಜ್ ಮೆಂಟ್ ಆಗಲಿ ಇಂಥ ಹೇಳಿಕೆಗಳನ್ನು ಪ್ರೋತ್ಸಾಹಿಸುವಂತ ಮಾತೇ ಇಲ್ಲ' ಎಂದು ಅರುಣ್ ಬಡಿಗೇರ್ ಹೇಳಿದ್ದಾರೆ. 

ಅರುಣ್ ಬಡಿಗೇರ್ ಸ್ಪಷ್ಟನೆ ಏನು ? 

ನಿನ್ನೆ ಸಂಜೆ (ಗುರುವಾರ) 5ರಿಂದ 6 ಗಂಟೆಗೆ ಕನ್ನಯ್ಯಲಾಲ್ ಹತ್ಯೆಗೆ ಸಂಬಂಧಪಟ್ಟಂತೆ ಜನಾಭಿಪ್ರಾಯ ಸಂಗ್ರಹಿಸುವ ಉದ್ದೇಶದಿಂದ ನಾವು ನೇರಪ್ರಸಾರದಲ್ಲಿ ಫೋನ್ ಇನ್ ಕಾರ್ಯಕ್ರಮವನ್ನು ಮಾಡಿದ್ದೆವು. 

ಈ ನೇರ ಪ್ರಸಾರದಲ್ಲಿ ದಾವಣಗರೆಯಿಂದ ವೀರಣ್ಣ ಎಂಬವರು ಕರೆ ಮಾಡಿ ವಿಧಾನಸಭೆ ವಿರೋಧ ಪಕ್ಷದ ನಾಯದ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಗುಂಡಿಕ್ಕಿ ಕೊಳ್ಳಬೇಕು ಎಂಬ ಮಾತನ್ನು ಹೇಳುತ್ತಾರೆ. ಅದನ್ನು ನಾವು ಅಲ್ಲಿಗೆ ಕಟ್ ಮಾಡುವಂತ ಪ್ರಯತ್ನವನ್ನು ಮಾಡಿದ್ದೇವೆ. ಮತ್ತು ಇದು ತಾಲಿಬಾನ್ ಸಂಸ್ಕೃತಿ ಅಲ್ಲ ಎಂದೂ ಹೇಳಿದ್ದೇವೆ.  ಇಂತದಕ್ಕೆ ನಾನೊಬ್ಬ ನಿರೂಪಕನಾಗಿ ಯಾವುದೇ ಕಾರಣಕ್ಕೂ ಪ್ರೋತ್ಸಾಹ ನೀಡುವುದಿಲ್ಲ. ಜೊತೆಗೆ ನಮ್ಮ ಮ್ಯಾನೇಜ್ ಮೆಂಟ್ ಕೂಡ ಪ್ರೋತ್ಸಾಹಿಸುವಂತ ಮಾತೇ ಇಲ್ಲ. ಈ ಸಂಬಂಧ ಖಾಸಗಿ ದೂರು ಕೂಡ ಸಲ್ಲಿಕೆಯಾಗಿರುವ ಬಗ್ಗೆ ನಮ್ಮ ಗಮನಕ್ಕೆ ಬಂದಿದೆ ಎಂದು ಹೇಳಿದ್ದಾರೆ.

--------------------------

ವೀರಣ್ಣ ಅವರು ಹೇಳಿದ್ದು ಏನು? 

'ಮುಸಲ್ಮಾನರಿಗೆ ಯಾವುದೇ ರೀತಿಯ ಬೆಂಬಲ ಕೊಡಬಾರದು. ಪಬ್ಲಿಕ್‌ ಟಿ.ವಿ.ಗೆ ಮುಸಲ್ಮಾರನ್ನು ಕರೆಸಿ ಇದು ಮಾಡುತ್ತೀರಲ್ಲ, ಅದನ್ನು ಬಿಡಬೇಕು ಸರ್...  ಅವರಿಗೆ ಸ್ಥಾನ ಮಾನ ಕೊಡಬಾರದು. ಅವರಿಗೆ ಭಾರತ ದೇಶದಲ್ಲಿ ಯಾವುದೇ ಸ್ಥಾನಮಾನ ಕೊಡಬಾರದು. ಅನ್ನ ಹಾಕುವುದು ನಾವು ನೀರು ಹಾಕಿರುವವರು ನಾವು. ನಮ್ಮಮೇಲೆಯೇ ಬಾಲ ಬಿಚ್ಚುತ್ತಿದ್ದಾರಲ್ವಾ? ಎಷ್ಟು ಪೊಗರು ಸರ್ ಅವರಿಗೆ... ಫಸ್ಟ್‌ ಆ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್‌ಗೆ ಗುಂಡಿಕ್ಕಿ ಹೊಡೆದರೆ ಇವರೆಲ್ಲ ಸುಮ್ಮನಾಗುತ್ತಾರೆ' ಎಂದು ವೀರಣ್ಣ ವಿಷಕಾರಿ ಮಾತುಗಳನ್ನಾಡಿದ್ದರು.

ನಿರೂಪಕ ಅರುಣ್  ಬಡಿಗೇರ್‌, ವೀರಣ್ಣ ಅವರ ಈ ವಿವಾದಾತ್ಮಕ ಮಾತಿಗೆ ಮೊದಲು ಯಾವುದೇ ಆಕ್ಷೇಪ ವ್ಯಕ್ತಪಡಿಸದೆ ಪ್ರತಿಕ್ರಿಯೆ ನೀಡಿದ್ದಾರೆ. ಬಳಿಕ ವೀರಣ್ಣ ಅವರೇ ನಾಯಕರ ವಿಚಾರದಲ್ಲಿ ಹಾಗೆಲ್ಲ ಮಾತನಾಡಬಾರದು ಸರ್.... ಅವರ ಮೇಲೆ ಕೋಪ ಇದೆ ಎಂದು ಹೀಗೆಲ್ಲ ಹೇಳಬಾರದು. ಹಂತಕರಿಗೂ ನಿಮಗೂ ವ್ಯತ್ಯಾಸ ಏನಿದೆ? ಎಂದು ಪ್ರಶ್ನೆ ಮಾಡಿದ್ದರು. ಬಳಿಕ ಈ ವಿಡಿಯೋ  ಸಾಮಾಜಿಕ ಜಾಲತಾಣದಾದ್ಯಂತ ವ್ಯಾಪಕ ಆಕ್ರೋಶಕ್ಕೆ ಗುರಿಯಾಗಿದ್ದು, ಅರುಣ್ ಬಡಿಗೇರ್, ವೀರಣ್ಣ ಹಾಗೂ ಪಬ್ಲಿಕ್ ಟಿವಿಯ ಫೇಸ್ ಬುಕ್ ಪುಟದ ಅಡ್ಮಿನ್ ವಿರುದ್ಧ ಬೆಂಗಳೂರು ನಗರದ ಹೈ ಗ್ರೌಂಡ್ ಪೊಲೀಸ್ ಠಾಣೆಯಲ್ಲಿ ಕೆಪಿಸಿಸಿ ಕಾನೂನು ಮತ್ತು ಮಾನವ ಹಕ್ಕುಗಳ ವಿಭಾಗದ ಪ್ರಧಾನ ಕಾರ್ಯದರ್ಶಿ ಸೂರ್ಯ ಮುಕುಂದ್‌ರಾಜ್ ದೂರು ದಾಖಲಿಸಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X