Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ತೀಸ್ತಾ ಬಂಧನವನ್ನು ಪ್ರಶ್ನಿಸಬೇಕಾದ...

ತೀಸ್ತಾ ಬಂಧನವನ್ನು ಪ್ರಶ್ನಿಸಬೇಕಾದ ವಿವಿಗಳೇ ಮೌನವಾಗಿವೆ: ಮಾವಳ್ಳಿ ಶಂಕರ್

ವಾರ್ತಾಭಾರತಿವಾರ್ತಾಭಾರತಿ1 July 2022 11:51 PM IST
share
ತೀಸ್ತಾ ಬಂಧನವನ್ನು ಪ್ರಶ್ನಿಸಬೇಕಾದ ವಿವಿಗಳೇ ಮೌನವಾಗಿವೆ: ಮಾವಳ್ಳಿ ಶಂಕರ್

ಬೆಂಗಳೂರು, ಜು.1: ದೇಶದಲ್ಲಿ ಮಾನವೀಯತೆಯನ್ನು ಎತ್ತಿ ಹಿಡಿದಿದ್ದಕ್ಕಾಗಿ ಟೀಸ್ತಾ ಅವರನ್ನು ಬಂಧಿಸಿದ್ದಾರೆ. ಇದನ್ನೆಲ್ಲಾ ಪ್ರಶ್ನಿಸಬೇಕಾದ ವಿಶ್ವವಿದ್ಯಾಲಯಗಳೇ ಮೌನವಾಗಿವೆ. ಯುವಕರಲ್ಲಿ ಇದರ ಬಗ್ಗೆ ಅರಿವು ಮೂಡಿಸಲು ವಿಫಲರಾಗುತ್ತಿದ್ದೇವೆ ಎಂದ ದಲಿತ ಮುಖಂಡ ಮಾವಳ್ಳಿ ಶಂಕರ್ ಅಭಿಪ್ರಾಯಪಟ್ಟರು.

ಶುಕ್ರವಾರ ನಗರದ ಅಲುಮ್ನಿ ಸಭಾಂಗಣದಲ್ಲಿ ಆಯೋಜಿಸಿದ್ದ ಖಂಡನಾ ಸಭೆಯಲ್ಲಿ ಮಾತನಾಡಿದ ಅವರು, ಹಿಂದೆ ವಿವಿಗಳಲ್ಲಿ ಪ್ರಾಧ್ಯಾಪಕರು ಹೆಚ್ಚು ಉತ್ಸುಕರಾಗಿದ್ದರು. ಆದರೆ ಇಂದು ವಿವಿಯ ಪ್ರಾಧ್ಯಾಪಕರು ಸೇಫ್ ಜೋನ್‍ನಲ್ಲಿ ಕಾಲ ಕಳೆಯುತ್ತಿದ್ದಾರೆ. ವಿದ್ಯಾರ್ಥಿಗಳನ್ನು ವೈಚಾರಿಕತೆಯಿಂದ ದೂರವಿಡುತ್ತಿದ್ದಾರೆ ಎಂದು ಕಿಡಿಕಾರಿದರು.

ದೇಶದಲ್ಲಿ ಸಂವಿಧಾನಕ್ಕೆ ಬಹುದೊಡ್ಡ ಗಂಡಾಂತರವನ್ನು ತರುತ್ತಿದ್ದಾರೆ. ಆಡಳಿತ ಪಕ್ಷವು ಸಂವಿಧಾನವನ್ನೇ ಗುರಿಯಾಗಿಸಿಕೊಂಡಿದೆ. ಹೋರಾಟಗಳ ಮೂಲಕವೇ ಅದನ್ನು ಹಿಮ್ಮೆಟ್ಟಿಸಬೇಕು. ಟೀಸ್ತಾ ಅವರ ಬಂಧನವನ್ನು ಖಂಡಿಸುವುದು ಮಾತ್ರವಲ್ಲ, ಜನರಿಗೆ ಅರಿವು ಮೂಡಿಸುವುದು ಅಗತ್ಯವಾಗಿದೆ ಎಂದು ಕರೆ ನೀಡಿದರು. 

ವಕೀಲ ಬಾಲನ್ ಮಾತನಾಡಿ, ದೇಶದಲ್ಲಿ ಗಂಬೀರ ಘಟನೆಗಳು ನಡೆಯುತ್ತಿವೆ. ಆಕ್ಟೀವ್ ಜರ್ನಲಿಸ್ಟ್ ಸೇರಿದಂತೆ ಸಾಮಾಜಿಕ ಹೋರಾಟಗಾರರಿಗೆ ರಕ್ಷಣೆ ನೀಡುವುದು ಅನಿವಾರ್ಯವಾಗಿದೆ. ಕೊರೆಗಾಂವ್ ಪ್ರಕರಣದಲ್ಲಿ ಅಮಾಯಕರನ್ನು ಬಂಧಿಸಿದಂತೆ ಇಂದು ಟೀಸ್ತಾ ಅವರನ್ನು ಬಂಧಿಸಲಾಗಿದೆ. ಇದನ್ನು ದೇಶದ ಜನರು ತಿಳಿದು ಎಚ್ಚರಿಕೆ ವಹಿಸುವುದು ಅನಿವಾರ್ಯ ಎಂದರು.

ಲೇಖಕಿ ಕೆ.ಷರೀಫಾ ಮಾತನಾಡಿ, ಸಹಾಯಕ್ಕಾಗಿ ನಿಲ್ಲುವುದು ಮಾನವ ಧರ್ಮವಾಗಿದೆ. ಈ ಮಾನವ ಧರ್ಮವನ್ನು ಎತ್ತಿಹಿಡಿದಿದ್ದಕ್ಕಾಗಿ ಟೀಸ್ತಾ ಅವರನ್ನು ಬಂಧಿಸಲಾಗಿದೆ. ದೇಶದಲ್ಲಿ ದೌರ್ಜನ್ಯಕ್ಕೆ ಒಳಗಾಗಿದ್ದವರು ಬಂಧಿಸಲ್ಪಡುತ್ತಿದ್ದಾರೆ ಎಂದರು. 

ಪೊಲೀಸ್ ವ್ಯವಸ್ಥೆ ಈಗಾಗಲೇ ಕೇಸರಿಕರಣಗೊಂಡಿದೆ. ನ್ಯಾಯಾಲಯ, ರಾಜಕಾರಣ ಎಲ್ಲವೂ ಹಾಳಾಗಿದೆ. ಜನರು ಇದರ ವಿರುದ್ಧ ಧಂಗೆ ಏಳುವವರೆಗೂ ದೇಶದಲ್ಲಿ ಇದು ಮುಂದುವರೆಯುತ್ತದೆ ಎಂದು ಎಚ್ಚರಿಸಿದರು. 

ನೂಪುರ್ ಶರ್ಮ ಅವರಿಗೆ ಕೋಟ್ ಶಿಕ್ಷೆ ನೀಡಿರುವುದು ಶ್ಲಾಘನಾರ್ಹವಾಗಿದೆ. ನ್ಯಾಯಾಲಯಗಳು ಕೆಲವೊಮ್ಮೆ ಮಿಂಚಿನ ರೀತಿ ಕೆಲಸ ಮಾಡುತ್ತವೆ ಎಂಬುದಕ್ಕೆ ಇದು ನಿದರ್ಶನವಾಗಿದೆ. ಕನ್ನಯ್ಯ ಅವರನ್ನು ಕೊಂದವರ ಬಗ್ಗೆ ಯೋಚಿಸುವವರು, ಕೊಲೆಯ ಹಿಂದಿನ ಪ್ರೇರೇಪಣೆಯನ್ನು ಏಕೆ ಪರಿಗಣಿಸುವುದಿಲ್ಲ. ನಮಗೆ ಮುಸ್ಲಿಂ, ಕ್ರೈಸ್ತರ ಭಯವಿಲ್ಲ. ಆದರೆ ಕ್ರೋಧಗೊಂಡ ಹಿಂದುತ್ವ ಗುಂಪುಗಳ ಭಯ ಇದೆ. 

-ಬಿ.ಟಿ.ಲಲಿತಾನಾಯಕ್, ಮಾಜಿ ಸಚಿವೆ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X