Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ದಲಿತ ಸಮುದಾಯಕ್ಕೆ ಶೈಕ್ಷಣಿಕ, ಸಾಮಾಜಿಕ...

ದಲಿತ ಸಮುದಾಯಕ್ಕೆ ಶೈಕ್ಷಣಿಕ, ಸಾಮಾಜಿಕ ಮೀಸಲಾತಿ ಇಂದಿಗೂ ಸಿಕ್ಕಿಲ್ಲ: ಕೋಟಿಗಾನಹಳ್ಳಿ ರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ2 July 2022 10:35 PM IST
share
ದಲಿತ ಸಮುದಾಯಕ್ಕೆ ಶೈಕ್ಷಣಿಕ, ಸಾಮಾಜಿಕ ಮೀಸಲಾತಿ ಇಂದಿಗೂ ಸಿಕ್ಕಿಲ್ಲ: ಕೋಟಿಗಾನಹಳ್ಳಿ ರಾಮಯ್ಯ

ಕೋಲಾರ: ದಲಿತ ಸಮುದಾಯಕ್ಕೆ ರಾಜಕೀಯ ಮೀಸಲಾತಿ ಮಾತ್ರ ಸಿಕ್ಕಿದೆ ಆದರೆ ಶೈಕ್ಷಣಿಕ ಮತ್ತು ಸಾಮಾಜಿಕ ಮೀಸಲಾತಿ ಇಂದಿಗೂ ಸಿಕ್ಕಿಲ್ಲ, ಹಾಗಾಗಿ ತಳಸಮುದಾಯಗಳು ಒಗ್ಗಟ್ಟಾಗಲೇಬೇಕಾಗಿದೆ ಎಂದು ಸಾಹಿತಿ ಕೋಟಿಗಾನಹಳ್ಳಿ ರಾಮಯ್ಯ ಕರೆ ನೀಡಿದರು. 

ಕರ್ನಾಟಕ ಸ್ವಾಭಿಮಾನಿ ಎಸ್. ಸಿ. ಎಸ್. ಟಿ. ಸಂಘಟನೆಗಳ ಒಕ್ಕೂಟ ಮತ್ತು ಮೀಸಲಾತಿ ಹೆಚ್ಚಳ ಹೋರಾಟ ಕ್ರಿಯಾ ಸಮಿತಿ ವತಿಯಿಂದ ನಡೆದ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದರು.

ಅಭಿವೃದ್ಧಿ ಮೀಸಲಾತಿ ನೀತಿ ಜಾರಿಗೊಳಿಸದೆ ಉಳ್ಳವರ ಪರ ಆಳುವ ದೊರೆಗಳು ಇಂದು ದೇಶವನ್ನೇ ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. 

ಶೋಷಿತರ ಉದ್ದಾರಕ್ಕಾಗಿರುವ ಮೀಸಲಾತಿ ಸೌಲಭ್ಯಗಳನ್ನು ಪಡೆದು ಅಧಿಕಾರಕ್ಕೇರಿದ ಜನಪ್ರತಿನಿಧಿಗಳಿಗೆ ಸಮುದಾಯ ಏಳಿಗೆಗಿಂತ ಪಕ್ಷ ನಿಷ್ಟೆ ಎಂಬ ಗುಲಾಮಗಿರಿ ದೊಡ್ಡದಾಗಿದೆ ಹಾಗಾಗಿ 1930ರಲ್ಲಿ ಪೂನಾ ಒಪ್ಪಂದದಿಂದ ಕಳೆದುಕೊಂಡ ಪ್ರತ್ಯೇಕ ಮತದಾನ ಹಕ್ಕು ಮರಳಿ ಪಡೆಯಲು ಹೋರಾಟ ರೂಪಿಸಬೇಕು ಎಂದು ಕರೆ ನೀಡಿದರು. 

ಒಕ್ಕೂಟದ ಸದಸ್ಯರಾದ ಹೆಬ್ಬಾಳ ವೆಂಕಟೇಶ್ ಮಾತನಾಡಿ, ಮೀಸಲಾತಿ ಹೆಚ್ಚಳಕ್ಕಾಗಿ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಆಯೋಗದ ವರದಿಯನ್ನು ಜಾರಿಗೊಳಿಸಲು ಆಗ್ರಹಿಸಿ ರಾಜ್ಯಾದ್ಯಂತ ಎಲ್ಲಾ ಜಿಲ್ಲಾಧಿಕಾರಿ ಕಚೇರಿಗೆ ಜುಲೈ 11ರಂದು ಮುತ್ತಿಗೆ ಹಾಕಲು ಕರೆ ನೀಡಲಾಗಿದ್ದು ಕೋಲಾರದಲ್ಲೂ ಹೋರಾಟ ನಡೆಯಲಿದೆ ಎಂದು ತಿಳಿಸಿದರು. 

ಮತ್ತೋರ್ವ ಸದಸ್ಯ ವಾಲ್ಮೀಕಿ ಮುಖಂಡ ನರಸಿಂಹಯ್ಯ ಮಾತನಾಡಿ, ಮೀಸಲಾತಿ ಹೆಚ್ಚಳದ ವಿಷಯದಲ್ಲಿ ನಾಗಮೋಹನ್ ದಾಸ್ ಆಯೋಗದ ವರದಿಯನ್ನು ಕಾರ್ಯರೂಪಕ್ಕೆ ತರದೆ ನಿರ್ಲಕ್ಷ್ಯ ಭಾವನೆ ತೋರಿದ ಸರ್ಕಾರದ ವರ್ತನೆಗೆ ಬೇಸತ್ತು ಶ್ರೀ ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿಗಳು ಕಳೆದ ಫೆಬ್ರುವರಿ 10 ರಿಂದ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ರಾತ್ರಿ ಹಗಲು ಹೋರಾಟ ನಡೆಸುತ್ತಿದ್ದಾರೆ. ಈ ಹೋರಾಟಕ್ಕೆ ರಾಜ್ಯದ ಅಸಂಖ್ಯಾತ ಪ್ರಗತಿಪರ ಸಂಘಟನೆಗಳಿಂದ, ವಿರೋಧ ಪಕ್ಷಗಳ ಮುಖಂಡರಾದ ಸಿದ್ದರಾಮಯ್ಯ, ಕುಮಾರಸ್ವಾಮಿ ಯತಿಯಾಗಿ ಖುದ್ದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೋರಾಟ ಸ್ಥಳಕ್ಕೆ ಬೇಟಿ ನೀಡಿ ಕೊಟ್ಟ ಭರವಸೆಗಳು ಈಡೇರದ ಕಾರಣ ಹೋರಾಟವನ್ನು ತೀವ್ರಗೊಳಿಸಲಾಗುತ್ತಿದೆ ಎಂದರು. 

ಈ ಸಂದರ್ಭದಲ್ಲಿ ಪ್ರಜಾವಿಮೋಚನ ಚಳುವಳಿಯ ಮುನಿಆಂಜಿನಪ್ಪ, ಅರ್. ಪಿ. ಐ. ಅಂಬರೀಷ್, ಮುನಿಯಪ್ಪ, ಶ್ರೀನಿವಾಸ, ನಾಗರಾಜ, ರಮೇಶ್, ಆನಂದ್ ಮುಂತಾದವರು ಇದ್ದರು.
 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X