Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು | ಸ್ಮಾರ್ಟ್ ಸಿಟಿ ಕಾಮಗಾರಿ...

ಮಂಗಳೂರು | ಸ್ಮಾರ್ಟ್ ಸಿಟಿ ಕಾಮಗಾರಿ ಅವಾಂತರ: ಜನರ ತೆರಿಗೆ ದುಡ್ಡಿನಲ್ಲಿ ಪ್ರಯೋಗಗಳ ಸರಮಾಲೆ!

ವಾರ್ತಾಭಾರತಿವಾರ್ತಾಭಾರತಿ4 July 2022 3:44 PM IST
share
ಮಂಗಳೂರು | ಸ್ಮಾರ್ಟ್ ಸಿಟಿ ಕಾಮಗಾರಿ ಅವಾಂತರ: ಜನರ ತೆರಿಗೆ ದುಡ್ಡಿನಲ್ಲಿ ಪ್ರಯೋಗಗಳ ಸರಮಾಲೆ!

ಮಂಗಳೂರು, ಜು.4: ಸ್ಮಾರ್ಟ್ ಸಿಟಿ ಯೋಜನೆಯಡಿ ನಗರದಲ್ಲಿ ನಡೆಯುತ್ತಿರುವ ಕಾಮಗಾರಿಗಳು ಹೊಸ ಹೊಸ ಅವಾಂತರಗಳನ್ನು ಸೃಷ್ಟಿಸುತ್ತಿದೆ. ಜನರ ತೆರಿಗೆ ದುಡ್ಡಿನಲ್ಲಿ ಅಧಿಕಾರಿಗಳು ಯಾವುದೇ ಪೂರ್ವಾಲೋಚನೆ, ಸೂಕ್ತ ತಯಾರಿ ಇಲ್ಲದೆ ಕಾಮಗಾರಿಗಳನ್ನು ನಡೆಸುವುದು ಮತ್ತೆ ತೆರವುಗೊಳಿಸುವ ಕಾರ್ಯ ಅವ್ಯಾಹತವಾಗುತ್ತಿದೆ.

ಪಿವಿಎಸ್ ಬಳಿ ರೇಲಿಂಗ್‌ನೊಂದಿಗೆ ನಿರ್ಮಿಸಲಾಗಿರುವ ಫುಟ್ಪಾತ್ ಮಧ್ಯದಲ್ಲೇ ವಿದ್ಯುತ್ ಕಂಬವಿದೆ. ಫುಟ್ಪಾತ್ ರಚನೆ ಮಾಡುವಾಗ ಈ ಕಂಬವನ್ನು ಸ್ಥಳಾಂತರ ಮಾಡುವ ಯಾವುದೇ ಗೋಜಿಗೆ ಹೋಗದೆ ಅದನ್ನು ಮಧ್ಯದಲ್ಲಿಯೇ ಇರಿಸಿ ಜನಸಾಮಾನ್ಯರು ನಡೆದಾಡುವ ಫುಟ್ಪಾತನ್ನು ಇಕ್ಕಟ್ಟುಗೊಳಿಸಲಾಗಿದೆ. ಇಂತಹ ಫುಟ್ಪಾತ್‌ನಿಂದ ಯಾರಿಗೆ ಲಾಭ? ಎಂಬ ಮಾತುಗಳು ಜನಸಾಮಾನ್ಯರಿಂದ ವ್ಯಕ್ತವಾಗುತ್ತಿದೆ.

ರವಿವಾರವಷ್ಟೇ ಮಂಗಳೂರಿನ ಹಂಪಕನಟ್ಟೆಯ ಸಿಗ್ನಲ್ ವೃತ್ತದ ಬಳಿ ಝೀಬ್ರಾ ಕ್ರಾಸಿಂಗ್ ನಲ್ಲಿ ನಡೆದು ಬಳಿಕ ಫುಟ್‌ಪಾತ್‌ನಲ್ಲಿ ಹಾಕಲಾದ ರೇಲಿಂಗ್ (ಬ್ಯಾರಿಕೇಡ್) ಜಂಪ್‌ಮಾಡಿ ದಾಡಬೇಕಾದ ಪರಿಸ್ಥಿತಿಯನ್ನು ಸೃಷ್ಟಿಸಿದ್ದರು. ಈ ಬಗ್ಗೆ ಪತ್ರಿಕೆ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಟೀಕೆ, ಆಕ್ಷೇಪ ವ್ಯಕ್ತವಾಗುತ್ತಿದ್ದಂತೆಯೇ ಇಂದು ಆ ರೇಲಿಂಗ್ ನಡುವೆ ಪ್ರವೇಶ ಕಲ್ಪಿಸಲಾಗಿದೆ.

ಕಾಂಕ್ರಿಟ್ ಹಾಕುವುದು - ಅಗೆಯುವುದು!

ನಗರದಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಡಿ ಹಲವು ರಸ್ತೆಗಳು ಕಾಂಕ್ರಿಟೀಕರಣಗೊಂಡಿವೆ. ಒಂದೆಡೆ ಕ್ರಾಂಕಿಟೀಕರಣ ನಡೆಯುತ್ತಿದೆ. ಇನ್ನೊಂದೆಡೆ ಹಾಕಿರುವ ಕಾಂಕ್ರಿಟ್ ಅನ್ನು ರಸ್ತೆಯಡಿ ವಿದ್ಯುತ್ ತಂತಿ, ನೀರು ಸರಬರಾಜು ಪೈಪ್‌ಲೈನ್ ಒಡೆದಿದೆ ಎಂಬೆಲ್ಲಾ ಕಾರಣಕ್ಕೆ ಒಡೆಯುವುದು ಸಾಮಾನ್ಯವಾಗಿಬಿಟ್ಟಿದೆ. ಕಾಮಗಾರಿ ನಡೆಸುವ, ಕಾಂಕ್ರಿಟ್ ಹಾಕುವ ಸಂದರ್ಭ ಅಧಿಕಾರಿಳು, ಇಂಜಿನಿಯರ್‌ಗಳು ಈ ಬಗ್ಗೆ ಪೂರ್ವ ಲೆಕ್ಕಾಚಾರದೊಂದಿಗೆ ಕಾಂಕ್ರಿಟೀಕರಣ ಮಾಡದೆ ಜನರ ತೆರಿಗೆ ದುಡ್ಡನ್ನು ಯಾವ ರೀತಿಯಲ್ಲಿ ದುರ್ಬಳಕೆ ಮಾಡುತ್ತಾರೆ ಎಂಬುದಕ್ಕೆ ಇಂತಹ ಅವೈಜ್ಞಾನಿಕ ವ್ಯವಸ್ಥೆಗಳು ಪದೇಪದೇ ಕಂಡು ಬರುತ್ತಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

 ಇದೀಗ ಮಳೆ ಧಾರಾಕಾರವಾಗಿ ಸುರಿಯುತ್ತಿದೆ. ನಡುವೆ ನಗರದ ತುಂಬೆಲ್ಲಾ ಅಲ್ಲಲ್ಲಿ ರಸ್ತೆ ಅಗೆತ, ಫುಟ್‌ಪಾತ್ ಮೊದಲಾದ ಕಾಮಗಾರಿಗಳಿಂದಾಗಿ ಪ್ರಮುಖ ಜಂಕ್ಷನ್‌ಗಳಲ್ಲಿ ವಾಹನ ದಟ್ಟಣೆಯ ಒತ್ತಡ. ಇದು ಕೂಡಾ ಧಾರಾಕಾರ ಮಳೆಯ ನಡುವೆ ಮಧ್ಯಾಹ್ನದ ವೇಳೆ ಬಾವುಟಗುಡ್ಡೆಯಿಂದ ಡಾ. ಬಿ.ಆರ್ ಅಂಬೇಡ್ಕರ್ ವೃತ್ತ (ಜ್ಯೋತಿ ಸರ್ಕಲ್)ಕ್ಕೆ ಬರುವ ಕಾಂಕ್ರಿಟ್ ರಸ್ತೆಯ ಬಲ ಬದಿಯಲ್ಲಿ ರಸ್ತೆಯನ್ನು ಯಂತ್ರದಲ್ಲಿ ಕತ್ತರಿಸುವುದು ಮಧ್ಯಾಹ್ನದ ವೇಳೆ ಕಂಡುಬಂದಿದೆ. ಅಲ್ಲಿ ಕಾಮಗಾರಿ ನಡೆಸುವವರನ್ನು ಈ ಬಗ್ಗೆ ಪ್ರಶ್ನಿಸಿದರೆ ಅದು ಫುಟ್‌ಪಾತ್‌ಗೆ ತಾಗಿಕೊಂಡ ಹೆಚ್ಚುವರಿ ಕಾಂಕ್ರಿಟ್ ರಸ್ತೆ ಅದನ್ನು ಕತ್ತರಿಸಲಾಗುತ್ತಿದೆ ಎನ್ನುತ್ತಾರೆ.

ಸ್ಮಾರ್ಟ್ ಸಿಟಿ ಯೋಜನೆಯ ಅಧಿಕಾರಿಗಳು, ಇಂಜಿನಿಯರ್‌ಗಳು ಯಾವುದೇ ಪೂರ್ವಾಲೋಚನೆ ಇಲ್ಲದೆ ಈ ರೀತಿ ಕಾಂಕ್ರಿಟೀಕರಣ ನಡೆಸಿ ಮತ್ತೆ ಅಗೆಯುವುದಾದರೆ ಇಂತಹ ಯೋಜನೆಗಳು ಯಾಕೆ? ಈ ರೀತಿ ಜನರ ತೆರಿಗೆ ದುಡ್ಡನ್ನು ಪೋಲು ಮಾಡುತ್ತಿರುವುದೇಕೆ ಎಂಬ ಬಗ್ಗೆ ಮನಪಾ ಅಧಿಕಾರಿಗಳು, ಆಡಳಿತವನ್ನು ಸಾರ್ವಜನಿಕರು ಪ್ರಶ್ನಿಸುತ್ತಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X