ವಿದ್ಯಾರ್ಥಿ ನಿಲಯ ಪ್ರವೇಶ: ಅರ್ಜಿ ಆಹ್ವಾನ
ಉಡುಪಿ : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ ವರ್ಗದ ಮೆಟ್ರಿಕ್ ನಂತರದ ಬಾಲಕರ ಮತ್ತು ಬಾಲಕಿಯರಿಗೆ ಉಡುಪಿ ತಾಲೂಕು ಮಣಿಪಾಲದಲ್ಲಿರುವ ವಿದ್ಯಾರ್ಥಿನಿಲಯ ಪ್ರವೇಶಕ್ಕೆ ನವೀಕರಣ ವಿದ್ಯಾರ್ಥಿಗಳ ಸೀಟು ಹಂಚಿಕೆಯಾಗಿ ಬಾಕಿ ಉಳಿದಿರುವ ಸೀಟುಗಳಿಗೆ ಸೇವಾಸಿಂಧು ತಂತ್ರಾಂಶ - https://sevasindhu.karnataka.gov.in- ಮೂಲಕ ಆನ್ಲೈನ್ನಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಆಗಸ್ಟ್ ೧೫ ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ಮಣಿಪಾಲ, ಉಡುಪಿ ದೂ.ಸಂಖ್ಯೆ: ೦೮೨೦-೨೫೭೪೫೯೬, ೦೮೨೦-೨೫೭೩೫೯೬, ಕಾರ್ಕಳ ದೂ.ಸಂಖ್ಯೆ : ೦೮೨೫೮- ೨೩೧೧೦೧ ಹಾಗೂ ಕುಂದಾಪುರ ದೂ.ಸಂಖ್ಯೆ: ೦೮೨೫೪-೨೩೦೩೭೦ ತಾಲೂಕು ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story