Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರಾಹುಲ್ ಗಾಂಧಿ ಹೇಳಿಕೆ ತಿರುಚಿದ ಝೀ...

ರಾಹುಲ್ ಗಾಂಧಿ ಹೇಳಿಕೆ ತಿರುಚಿದ ಝೀ ನ್ಯೂಸ್ ನಿರೂಪಕ ರೋಹಿತ್ ರಂಜನ್ ಬಂಧನ ?

ವಾರ್ತಾಭಾರತಿವಾರ್ತಾಭಾರತಿ5 July 2022 10:34 AM IST
share
ರಾಹುಲ್ ಗಾಂಧಿ ಹೇಳಿಕೆ ತಿರುಚಿದ ಝೀ ನ್ಯೂಸ್ ನಿರೂಪಕ ರೋಹಿತ್ ರಂಜನ್ ಬಂಧನ ?

ಹೊಸದಿಲ್ಲಿ,ಜು.5: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಹೇಳಿಕೆಯನ್ನು ತಿರುಚಿದ್ದ ವೀಡಿಯೊವನ್ನು ಪ್ರಸಾರಿಸಿದ್ದ ಝೀ ನ್ಯೂಸ್ನ ಸುದ್ದಿ ನಿರೂಪಕ ರೋಹಿತ ರಂಜನ್ರನ್ನು ಮಂಗಳವಾರ ದಿಲ್ಲಿ ಸಮೀಪದ ಅವರ ನಿವಾಸದಿಂದ ಬಂಧಿಸಲಾಗಿದೆ. ವೀಡಿಯೊ ಪ್ರಸಾರಿಸಿದ್ದಕ್ಕಾಗಿ ಝೀ ನ್ಯೂಸ್ ಈ ಹಿಂದೆ ಕ್ಷಮೆಯನ್ನು ಕೋರಿತ್ತು.

ರಂಜನ್ ರನ್ನು ವಶಕ್ಕೆ ತೆಗೆದುಕೊಳ್ಳಲು ಕಾಂಗ್ರೆಸ್ ಆಡಳಿತದ ಛತ್ತೀಸ್ಗಡ ಮತ್ತು ಬಿಜೆಪಿ ಆಡಳಿತದ ಉತ್ತರ ಪ್ರದೇಶರು ಝಟಾಪಟಿ ನಡೆಸಿದ್ದ ನಾಟಕೀಯ ದೃಶ್ಯಗಳು ವೀಡಿಯೊದಲ್ಲಿ ಸೆರೆಯಾಗಿವೆ. ಛತ್ತೀಸ್ಗಡ ಪೊಲೀಸರು ರಂಜನ್ರನ್ನು ಬಂಧಿಸಲು ಯತ್ನಿಸಿದ್ದರು,ಆದರೆ ಅದಕ್ಕೆ ಅಡ್ಡಿಯನ್ನುಂಟು ಮಾಡಿದ ಉ.ಪ್ರ.ಪೊಲೀಸರು ಅವರನ್ನು ತಮ್ಮೊಂದಿಗೆ ಕರೆದೊಯ್ದಿದ್ದಾರೆ.

ನಸುಕಿನ 5:30ರ ಸುಮಾರಿಗೆ ಛತ್ತೀಸ್ಗಡ ಪೊಲೀಸರು ತನ್ನ ನಿವಾಸಕ್ಕೆ ಆಗಮಿಸಿದ್ದಾಗ ರಂಜನ್ ಉ.ಪ್ರ.ಪೊಲೀಸರಿಗೆ ತುರ್ತು ಸಂದೇಶವೊಂದನ್ನು ಟ್ವೀಟಿಸಿದ್ದರು. ಛತ್ತೀಸ್ಗಡ ಪೊಲೀಸರು ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡದೆ ತನ್ನನ್ನು ಬಂಧಿಸಲು ಬಂದಿದ್ದಾರೆ ಎಂದು ಅವರು ಆರೋಪಿಸಿದ್ದರು.

ತಮ್ಮ ಬಳಿ ವಾರಂಟ್ ಇತ್ತು,ಹೀಗಾಗಿ ತಾವು ಯಾರಿಗೂ ಮಾಹಿತಿ ನೀಡುವ ಅಗತ್ಯವಿರಲಿಲ್ಲ ಎಂದು ಛತ್ತೀಸ್ಗಡ ಪೊಲೀಸರು ಉತ್ತರಿಸಿದ್ದಾರೆ. ಛತ್ತೀಸ್ಗಡ ಪೊಲೀಸರಿಂದ ರಂಜನ್ ಬಂಧನವನ್ನು ತಡೆದ ಗಾಝಿಯಾಬಾದ್ ಪೊಲೀಸರು ಅವರನ್ನು ಅಜ್ಞಾತ ಸ್ಥಳಕ್ಕೆ ಸಾಗಿಸಿದ್ದರು. ಅವರೀಗ ಉ.ಪ್ರ.ಪೊಲೀಸರ ವಶದಲ್ಲಿದ್ದು,ತುಲನಾತ್ಮಕವಾಗಿ ಲಘು,ಜಾಮೀನಿಗೆ ಅರ್ಹ ಆರೋಪಗಳನ್ನು ಅವರ ಮೇಲೆ ಹೊರಿಸಲಾಗಿದೆ.

ತನ್ನ ವಯನಾಡ್ ಕಚೇರಿಯ ಮೇಲೆ ಎಸ್ಎಫ್ಐ ಕಾರ್ಯಕರ್ತರ ಹಿಂಸಾಚಾರ ಕುರಿತು ರಾಹುಲ್ ನೀಡಿದ್ದ ಹೇಳಿಕೆಯನ್ನು ಪ್ರಸಾರಿಸಿದ್ದ ರಂಜನ್, ಅದನ್ನು ಉದಯಪುರದಲ್ಲಿ ಕನ್ಹಯಲಾಲ್ ಅವರ ಘೋರ ಹತ್ಯೆಯ ಕುರಿತು ಹೇಳಿಕೆಯಂತೆ ಕಂಡು ಬರು ವಂತೆ ತಿರುಚಿದ್ದರು ಎಂದು ಆರೋಪಿಸಿ ಕಾಂಗ್ರೆಸ್ ಆಡಳಿತದ ರಾಜಸ್ಥಾನ ಮತ್ತು ಛತ್ತೀಸ್ಗಡಗಳಲ್ಲಿ ಪ್ರಕರಣಗಳು ದಾಖಲಾಗಿದ್ದವು. ವೀಡಿಯೊವನ್ನು ರಾಜ್ಯವರ್ಧನ ರಾಠೋಡ್ ಮತ್ತು ಇತರ ಬಿಜೆಪಿ ನಾಯಕರು ಹಂಚಿಕೊಂಡಿದ್ದು,ಅವರನ್ನೂ ದೂರಿನಲ್ಲಿ ಹೆಸರಿಸಲಾಗಿತ್ತು. 

ತಪ್ಪು ವರದಿಯನ್ನು ಪ್ರಸಾರಿಸಿದ್ದಕ್ಕಾಗಿ ಟಿವಿ ವಾಹಿನಿಯನ್ನು ಟೀಕಿಸಿದ್ದ ರಾಜಸ್ಥಾನದ ಮುಖ್ಯಮಂತ್ರಿ ಅಶೋಕ ಗೆಹ್ಲೋಟ್ ಅವರು, ‘ವಯನಾಡಿನಲ್ಲಿ ತನ್ನ ಕಚೇರಿಯ ಮೇಲೆ ದಾಳಿ ನಡೆಸಿದ ಮಕ್ಕಳು ಬೇಜವಾಬ್ದಾರಿಯಿಂದ ವರ್ತಿಸಿದ್ದಾರೆ. ಅವರು ಮಕ್ಕಳು,ಅವರನ್ನು ಕ್ಷಮಿಸಿ ಎಂದು ರಾಹುಲ್ ಹೇಳಿದ್ದರು. ಆದರೆ ಟಿವಿ ವಾಹಿನಿ ಮತ್ತು ನಿರೂಪಕರು,ಕನ್ಹಯಾಲಾಲ್ರನ್ನು ಕೊಂದವರು ಮಕ್ಕಳು ಮತ್ತು ಅವರನ್ನು ಕ್ಷಮಿಸಬೇಕು ಎಂದು ಹೇಳಿದಂತೆ ತೋರಿಸಿದ್ದಾರೆ ’ಎಂದು ಸ್ಪಷ್ಟಪಡಿಸಿದ್ದರು.

There is no such rule to inform. Still, now they are informed. Police team has shown you court’s warrant of arrest. You should in fact cooperate, join in investigation and put your defence in court.

— Raipur Police (@RaipurPoliceCG) July 5, 2022

बिना लोकल पुलिस को जानकारी दिए छत्तीसगढ़ पुलिस मेरे घर के बाहर मुझे अरेस्ट करने के लिए खड़ी है,क्या ये क़ानूनन सही है @myogiadityanath @SspGhaziabad @adgzonelucknow

— Rohit Ranjan (@irohitr) July 5, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X