Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಝೀಟಿವಿ ನಿರೂಪಕನ ಬಂಧನಕ್ಕೆ ಛತ್ತೀಸ್‌ಗಢ...

ಝೀಟಿವಿ ನಿರೂಪಕನ ಬಂಧನಕ್ಕೆ ಛತ್ತೀಸ್‌ಗಢ ಪೊಲೀಸರು ಬಂದರೂ, ವಶಕ್ಕೆ ಪಡೆದುಕೊಂಡಿದ್ದು ಉತ್ತರಪ್ರದೇಶ ಪೊಲೀಸರು !

ವಾರ್ತಾಭಾರತಿವಾರ್ತಾಭಾರತಿ5 July 2022 3:03 PM IST
share
ಝೀಟಿವಿ ನಿರೂಪಕನ ಬಂಧನಕ್ಕೆ ಛತ್ತೀಸ್‌ಗಢ ಪೊಲೀಸರು ಬಂದರೂ, ವಶಕ್ಕೆ ಪಡೆದುಕೊಂಡಿದ್ದು ಉತ್ತರಪ್ರದೇಶ ಪೊಲೀಸರು !

ಗಾಝಿಯಾಬಾದ್: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ತಮ್ಮ ವಯನಾಡ್ ಕಚೇರಿಯಲ್ಲಿ ನಡೆದ ದಾಂಧಲೆ ಕುರಿತು ನೀಡಿದ್ದ ಪ್ರತಿಕ್ರಿಯೆಯನ್ನು ಅವರು ಉದಯಪುರ್ ಟೈಲರ್ ಹತ್ಯೆ ಸಂಬಂಧ ನೀಡಿದ ಪ್ರತಿಕ್ರಿಯೆ ಎಂದು ಬಣ್ಣಿಸಿ ಸುದ್ದಿ ಪ್ರಸಾರ ಮಾಡಿದ್ದ ಝೀ ಸುದ್ದಿ ನಿರೂಪಕ ರೋಹಿತ್ ರಂಜನ್ ಅವರ ಗಾಝಿಯಾಬಾದ್‍ನ ಇಂದಿರಾಪುರಂ ಪ್ರದೇಶದಲ್ಲಿರುವ  ನಿವಾಸಕ್ಕೆ ಇಂದು ಬೆಳಿಗ್ಗೆ ಛತ್ತೀಸಗಢ ಪೊಲೀಸರು ಅವರನ್ನು ವಶಕ್ಕೆ ಪಡೆಯಲು ಆಗಮಿಸಿದ್ದರೂ, ಅಂತಿಮವಾಗಿ ಅವರನ್ನು ನೊಯ್ಡಾ ಪೊಲೀಸರು ತಮ್ಮ ವಶಕ್ಕೆ ಪಡೆದ ಘಟನೆ ನಡೆದಿದೆ.

ಕಾಂಗ್ರೆಸ್ ಆಡಳಿತವಿರುವ ಛತ್ತೀಸಗಢದ ಪೊಲೀಸ್ ತಂಡ ಹಾಗೂ ಬಿಜೆಪಿ ಆಡಳಿತವಿರುವ ಉತ್ತರ ಪ್ರದೇಶ ಪೊಲೀಸ್ ತಂಡ ಸರಿಸುಮಾರು ಒಂದೇ ಸಮಯಕ್ಕೆ ರೋಹಿತ್ ರಂಜನ್ ಅವರ ನಿವಾಸದಲ್ಲಿದ್ದವು.

ಆದರೆ ಅಂತಿಮವಾಗಿ ನೊಯ್ಡಾ ಪೊಲೀಸರೇ ಅವರನ್ನು ವಶಪಡಿಸಿಕೊಂಡಿದ್ದಾರೆ. ಅವರದ್ದೇ ವಾಹಿನಿ ನೀಡಿದ್ದ ದೂರಿನ ಆಧಾರದಲ್ಲಿ ಸೆಕ್ಷನ್ 505 ಅನ್ವಯ ಪ್ರಕರಣ ದಾಖಲಿಸಿ ನೊಯ್ಡಾ ಸೆಕ್ಟರ್ 20 ಪೊಲೀಸರು ಅವರನ್ನು ತಮ್ಮ ಕಸ್ಟಡಿಗೆ ಪಡೆದುಕೊಂಡರು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಅತ್ತ ಛತ್ತೀಸಗಢದಲ್ಲಿ ಕಾಂಗ್ರೆಸ್ ಶಾಸಕ ದೇವೇಂದ್ರ ಯಾದವ್ ಅವರು ರೋಹಿತ್ ರಂಜನ್ ವಿರುದ್ಧ ದೂರು ನೀಡಿದ್ದರು.

ರಾಹುಲ್ ಅವರು ತಮ್ಮ ವಯನಾಡ್ ಕಚೇರಿ ಮೇಲೆ ದಾಳಿ ನಡೆಸಿದವರನ್ನು ಮಕ್ಕಳು ಎಂದು ಸಂಬೋಧಿಸಿದ್ದರಿಂದ ಅದನ್ನೇ ಬಳಸಿಕೊಂಡು ಉದಯಪುರ್ ಟೈಲರ್ ಹಂತಕರನ್ನು ಮಕ್ಕಳು ಎಂದಿದ್ದಾರೆಂದು ತಪ್ಪಾಗಿ ಅರ್ಥ ನೀಡುವ ರೀತಿಯಲ್ಲಿ ಝೀ ನಿರೂಪಕ ಸುದ್ದಿ ಪ್ರಸಾರ ಮಾಡಿದ್ದರು ಎಂದು ಯಾದವ್ ತಮ್ಮ ದೂರಿನಲ್ಲಿ ಹೇಳಿದ್ದರು.

ಛತ್ತೀಸಗಢ ಪೊಲೀಸರು ತಮ್ಮ ನಿವಾಸದ ಹೊರಗಿದ್ದಾರೆ ಎಂಬ ಕುರಿತು ಟ್ವೀಟ್ ಮಾಡಿ ತಿಳಿಸಿದ್ದ ರೋಹಿತ್ ರಂಜನ್, ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡದೆ ಬರುವುದು ಸರಿಯೇ ಎಂದು ಪ್ರಶ್ನಿಸಿ ಉತ್ತರ ಪ್ರದೇಶ ಸೀಎಂ ಯೋಗಿ ಆದಿತ್ಯನಾಥ್ ಅವರನ್ನೂ ಟ್ಯಾಗ್ ಮಾಡಿದ್ದರು.

ಛತ್ತೀಸಗಢ ಪೊಲೀಸರ ಬಳಿ ರಾಯಪುರ್‍ನಲ್ಲಿ ದಾಖಲಿಸಲಾಗಿದ್ದ ಪ್ರಕರಣದ ಆಧಾರದಲ್ಲಿ ಅರೆಸ್ಟ್ ವಾರಂಟ್ ಇತ್ತು. ಜುಲೈ 2ರಂದು ವಿವಾದಿತ ವೀಡಿಯೋ ಹಾಗೂ ಸುದ್ದಿ ಪ್ರಸಾರಗೊಂಡಿದ್ದರೆ ಮರುದಿನವೇ ರೋಹಿತ್ ರಂಜನ್ ಅವರು ಕ್ಷಮೆ ಕೋರಿದ್ದರು.

ಛತ್ತೀಸಗಢದಲ್ಲಿ ಬಿಲಾಸ್ಪುರ್‍ನಲ್ಲಿ ಕೂಡ ಪ್ರಕರಣ ದಾಖಲಾಗಿದ್ದು ರಾಜಸ್ಥಾನದಲ್ಲೂ ಅವರ ವಿರುದ್ಧ ದೂರುಗಳು ಬಂದಿವೆ ಎಂದು ತಿಳಿದು ಬಂದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X