ಪುತ್ತೂರು; ಕಾಳುಮೆಣಸು ಕಳವು ಪ್ರಕರಣ: ನಾಲ್ವರು ಆರೋಪಿಗಳ ಬಂಧನ
ಪುತ್ತೂರು: ತಾಲೂಕಿನ ಕೊಳ್ತಿಗೆ ಗ್ರಾಮದ ಕುದ್ಕುಳಿ ಎಂಬಲ್ಲಿ ತೋಟದ ಗೋದಾಮಿನಿಂದ ಕಾಳು ಮೆಣಸು ಕಳ್ಳತನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ಳಾರೆ ಠಾಣೆ ಪೊಲೀಸರು ಮಂಗಳವಾರ ನಾಲ್ವರು ಆರೋಪಿಗಳನ್ನು ಬಂಧಿಸಿ, ಕಾಳು ಮೆಣಸು ಮತ್ತು ಸಾಗಾಟಕ್ಕೆ ಬಳಸಿದ ಕಾರೊಂದನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಸುಳ್ಯ ತಾಲೂಕಿನ ಜಾಲ್ಸೂರು ಗ್ರಾಮದ ಕಳಂಜಿ ಮನೆ ನಿವಾಸಿ ಮಂಜು, ಕೊಡಿಯಬ್ಯಲು ನಿವಾಸಿ ಪ್ರವೀಣ, ಜಾಲ್ಸೂರು ಗ್ರಾಮದ ಬರ್ಪೆಡ್ಕ ನಿವಾಸಿ ಪವನ್ ಕುಮಾರ್ ಮತ್ತು ಪುತ್ತೂರು ತಾಲೂಕಿನ ಕೊಳ್ತಿಗೆ ಗ್ರಾಮದ ಅಬ್ದುಲ್ ಬಾಸಿತ್ ಎಂಬವರನ್ನು ಬಂಧಿಸಿ ಸೊತ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಕೊಳ್ತಿಗೆ ಗ್ರಾಮದ ಕುದ್ಕುಳಿಯ ಮಹಮ್ಮದ್ ಶಾಫಿ ಎಂಬವರ ತೋಟದಲ್ಲಿರುವ ಗೋದಾಮುನಿಂದ 1,18,750 ರೂ. ಮೌಲ್ಯದ ಕಾಳು ಮೆಣಸು ಕಳ್ಳತನ ನಡೆಸಲಾಗಿತ್ತು.
Next Story