Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಪುದು ಗ್ರಾಮದ ಹಲವೆಡೆ ಮಳೆಗೆ ಹಾನಿ;...

ಪುದು ಗ್ರಾಮದ ಹಲವೆಡೆ ಮಳೆಗೆ ಹಾನಿ; ಗ್ರಾಪಂ ನಿಯೋಗದಿಂದ ಪರಿಶೀಲನೆ: ಪರಿಹಾರಕ್ಕೆ ಸೂಚನೆ

ವಾರ್ತಾಭಾರತಿವಾರ್ತಾಭಾರತಿ5 July 2022 10:49 PM IST
share
ಪುದು ಗ್ರಾಮದ ಹಲವೆಡೆ ಮಳೆಗೆ ಹಾನಿ; ಗ್ರಾಪಂ ನಿಯೋಗದಿಂದ ಪರಿಶೀಲನೆ: ಪರಿಹಾರಕ್ಕೆ ಸೂಚನೆ

ಬಂಟ್ವಾಳ, ಜು. 5: ಪುದು ಗ್ರಾಮ ವ್ಯಾಪ್ತಿಯ ಅಮ್ಮೆಮಾರಿನ ಗುಡ್ಡ ಕುಸಿತ ಪ್ರದೇಶ ಸೇರಿದಂತೆ ಪ್ರಾಕೃತಿಕ ವಿಕೋಪದ ಹಲವು ಪ್ರದೇಶಗಳಿಗೆ ಪುದು ಗ್ರಾಪಂ ಅಧ್ಯಕ್ಷ ರಮ್ಲಾನ್ ಮಾರಿಪಳ್ಳ ಹಾಗೂ ಪಿಡಿಒ ಹರೀಶ್ ಕೆ.ಎ.ಅವರ ನಿಯೋಗ ತೆರಳಿ ಪರಿಶೀಲನೆ ನಡೆಸಿದರು. 

ಜತೆಗೆ ಪರಿಹಾರಕ್ಕಾಗಿ ಶಾಸಕ ಯು.ಟಿ.ಖಾದರ್ ಅವರ ಜತೆ ಚರ್ಚಿಸಿ ಹೆಚ್ಚಿನ ಪರಿಹಾರಕ್ಕೆ ಅಧಿಕಾರಿಗಳಿಗೆ ಸೂಚನೆ ನೀಡಲು ಮನವಿ ಮಾಡಿದರು. 

ಕಲ್ಲತಡಮೆ ಕುಂಪನಮಜಲು ಪ್ರದೇಶದಲ್ಲಿ ಚರಂಡಿಯಲ್ಲಿ ಹೂಳು ತುಂಬಿ ಕೃತಕ ನೆರೆ ಉಂಟಾದ ಪ್ರದೇಶದಲ್ಲಿ ಗ್ರಾ.ಪಂ.ನಿಂದ ಜೇಸಿಬಿ ಮೂಲಕ ಹೂಳು ತೆಗೆದು ನೀರು ಹರಿಯುವುದಕ್ಕೆ ವ್ಯವಸ್ಥೆ ಮಾಡಲಾಯಿತು. ಅಮ್ಮೆಮಾರ್, ಪುಂಚಮೆ ಎರಡೂ ರಸ್ತೆಯೂ ನೀರು ತುಂಬಿ ಬ್ಲಾಕ್ ಆಗಿದ್ದು, ಅದನ್ನು ತೆರವು ಮಾಡಲಾಯಿತು. 

ಫರಂಗಿಪೇಟೆ ಹೊಳೆಬದಿ ಜುಮಾದಿಗುಡ್ಡೆಯಲ್ಲಿ ಗುಡ್ಡ ಕುಸಿತದಿಂದ ಹಾನಿಗೊಳಗಾದ ಪ್ರದೇಶದಲ್ಲಿ ಅಪಾಯಕಾರಿಯಾಗಿದ್ದ ೨ ತೆಂಗಿನಮರ ತೆರವು ಮಾಡಲಾಯಿತು. ಅಮ್ಮೆಮಾರ್ ಪದೆಂಜಾರು ನಾರಾಯಣ ಮುಖಾರಿ ಅವರ ಮನೆಗೆ ತೆರಳಿ ಪರ್ಯಾಯ ವ್ಯವಸ್ಥೆಗಾಗಿ ಕಂದಾಯ ಇಲಾಖೆಗೆ ಸೂಚಿಸಲಾಯಿತು. 

ಸುಜೀರ್ ಮಲ್ಲಿ ಶಿವಪ್ಪ ಅಂಚನ್ ಅವರ ಮನೆಯ ಬಳಿ ಕುಸಿತಕ್ಕೊಳಗಾಗಿ ಮನೆ ಅಪಾಯದಲ್ಲಿದ್ದು, ಅಲ್ಲಿದ್ದ ೭-೮ ಮರಗಳನ್ನು ತೆರವು‌ ಮಾಡಲಾಯಿತು. ಜತೆಗೆ ಅಮ್ಮೆಮಾರ್ ಹಾಜಿರಾ, ಉಸ್ಮಾನ್ ಅವರ ಮನೆಯ ಅಪಾಯಕಾರಿ ಸ್ಥಿತಿಯಲ್ಲಿರುವುದನ್ನು ಪರಿಶೀಲಿಸಲಾಯಿತು.

ಗ್ರಾಪಂ ನವರ ಸೂಚನೆ ಮೇರೆಗೆ ಗ್ರಾಮಕರಣಿಕೆ ವಿಜೇತಾ ಅವರು ಹಾನಿಗೊಳಗಾದ ಪ್ರದೇಶಗಳಿಗೆ ತೆರಳಿ ಪರಿಹಾರಕ್ಕಾಗಿ ವರದಿ ನೀಡಿದರು. 

ಉಪಾಧ್ಯಕ್ಷೆ ಲಿಡಿಯಾ ಪಿಂಟೋ, ಗ್ರಾ.ಪಂ.ಸದಸ್ಯರಾದ ಝಾಹೀರ್ ಕುಂಪನಮಜಲು, ರಿಯಾಝ್ ಕುಂಪನಮಜಲು, ರಝಾಕ್, ಇಕ್ಬಾಲ್ ಸುಜಿರ್, ಗ್ರಾಪಂ ಸಿಬಂದಿ ಮೊಹಮ್ಮದ್ ಶರೀಫ್, ಸ್ಥಳೀಯರಾದ ಸುಂದರ ಶೆಟ್ಟಿ, ಧನರಾಜ್, ಸೂರ್ಯ, ಸೈಯದ್ ಬಾವಾ, ಅಲ್ತಾಫ್ ಫರಂಗಿಪೇಟೆ, ಹುಸೇನ್ ಅಮ್ಮೆಮಾರ್, ಫಾರೂಕ್ ಪುಂಚಮೆ, ಮುಹಮ್ಮದ್ ಮೋನು, ರಝಾಕ್, ಇಕ್ಬಾಲ್ ಮಾರಿಪಳ್ಳ, ಫಯಾಝ್ ಪುಂಚಮೆ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X