Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬಿಜೆಪಿ ಸರಕಾರ ಭ್ರಷ್ಟರನ್ನು ಜೈಲಿಗಟ್ಟುವ...

ಬಿಜೆಪಿ ಸರಕಾರ ಭ್ರಷ್ಟರನ್ನು ಜೈಲಿಗಟ್ಟುವ ಕೆಲಸ ಮಾಡುತ್ತಿದೆ: ಶಾಸಕ ಸಿ.ಟಿ.ರವಿ

ವಾರ್ತಾಭಾರತಿವಾರ್ತಾಭಾರತಿ6 July 2022 6:44 PM IST
share
ಬಿಜೆಪಿ ಸರಕಾರ ಭ್ರಷ್ಟರನ್ನು ಜೈಲಿಗಟ್ಟುವ ಕೆಲಸ ಮಾಡುತ್ತಿದೆ: ಶಾಸಕ ಸಿ.ಟಿ.ರವಿ

ಚಿಕ್ಕಮಗಳೂರು, ಜು.6: ಹಿಂದಿನ ಸರಕಾರಗಳು ಹಗರಣಗಳನ್ನು ಮುಚ್ಚಿಹಾಕುವ ಕೆಲಸ ಮಾಡುತ್ತಿತ್ತು, ಆದರೆ ಬಿಜೆಪಿ ಸರಕಾರ ಭ್ರಷ್ಟಾಚಾರಿಗಳನ್ನು ಜೈಲಿಗಟ್ಟುವ ಕೆಲಸ ಮಾಡುತ್ತಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಶಾಸಕ ಸಿ.ಟಿ.ರವಿ ಹೇಳಿದರು.

ಬುಧವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿರುವ ಬಿಜೆಪಿ ಸರಕಾರ ಮೊದಲ ಬಾರಿಗೆ ಹಗರಣಗಳ ವಿರುದ್ಧ ಕಠಿಣ ಕ್ರಮ ಕೈಗೊಂಡಿದ್ದರಿಂದ ಐಎಎಸ್, ಐಪಿಎಸ್ ಅಧಿಕಾರಿಗಳು ಜೈಲು ಸೇರುತ್ತಿದ್ದಾರೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೇಲೆ ಅನೇಕ ಹಗರಣಗಳ ಆರೋಪ ಕೇಳಿ ಬಂದಿತ್ತು. ಕೆಂಪಣ್ಣ ಆಯೋಗದಲ್ಲಿ ಅರ್ಕಾವತಿ ಹಗರಣದಲ್ಲಿ ಸಾವಿರಾರು ಕೋಟಿ ಹಣ ಸರಕಾರದ ಬೊಕ್ಕಸಕ್ಕೆ ನಷ್ಟವಾಗಿದೆ ಎಂದು ವರದಿ ನೀಡಲಾಗಿದೆ. ಇದರ ಹೊಣೆಯನ್ನು ಅಂದಿನ ಮುಖ್ಯಮಂತ್ರಿ ಹೊರಬೇಕಿತ್ತು, ಅವರು ಅವರು ಹಗರಣವನ್ನು ಮುಚ್ಚಿ ಹಾಕುವ ಕೆಲಸ ಮಾಡಿದರು ಎಂದು ಆರೋಪಿಸಿದರು.

ಅಕ್ರಮಗಳ ವಿರುದ್ಧ ಬಿಜೆಪಿ ಸರಕಾರ ಕಠಿಣ ಕ್ರಮ ಕೈಗೊಂಡಿದೆ. ಹಗರಣದಲ್ಲಿ ಭಾಗಿಯಾದರೇ ಜೈಲಿಗೆ ಹೋಗುವುದು ಗ್ಯಾರೆಂಟಿ ಎಂದು ತೋರಿಸಿಕೊಟ್ಟಿದೆ. ಈ ಕಠಿಣ ನಿಲುವನ್ನು ಹಿಂದಿನ ಸರಕಾರ  ತಗೆದುಕೊಂಡಿದ್ದರೇ ಭ್ರಷ್ಟಾಚಾರವನ್ನು ಬೇರು ಸಮೇತ ಕಿತ್ತು ಹಾಕಬಹುದಿತ್ತು ಎಂದು ಹಿಂದಿನ ಸಿದ್ದರಾಮಯ್ಯ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಪಿಎಸ್ಸೈ ಹಗರಣದಲ್ಲಿ ಎಡಿಜಿಪಿ ಅವರ ಬಂಧನವಾಗಿದೆ. ಈ ಕಾರ್ಯವನ್ನು ಸಿದ್ದರಾಮಯ್ಯ ಅವರು ಶ್ಲಾಘಿಸಬೇಕಿತ್ತು. ಜಮೀರ್ ಅಹ್ಮದ್ ಮನೆಮೇಲೆ ಎಸಿಬಿ ದಾಳಿ ನಡೆಸಿ ಪಿಎಸ್ಸೈ ಹಗರಣ ಮುಚ್ಚಿಹಾಕಲು ಸರಕಾರ ಮುಂದಾಗಿದೆ ಎನ್ನುವ ಅವರ ಹೇಳಿಕೆ ಹಾಸ್ಯಾಸ್ಪದವಾಗಿದೆ ಎಂದರು.

ಸಿದ್ದರಾಮಯ್ಯ ಅವರು ವಾಚ್ ಹಗರಣವನ್ನು ಮುಚ್ಚಿ ಹಾಕಿದರು. ಅರ್ಕಾವತಿ ಹಗರಣ ಮುಚ್ಚಿ ಹಾಕಿದರು. ಮರಳು ಮಾಫಿಯ ಮುಚ್ಚಿ ಹಾಕಿದರು. ಆದರೆ ನಮ್ಮ ಸರಕಾರ ಹಗರಣಗಳನ್ನು ಮುಚ್ಚಿ ಹಾಕುತ್ತಿಲ್ಲ. ಇಡಿ ಸೂಚನೆ ಮೇರೆಗೆ ಜಮೀರ್ ಅಹ್ಮದ್ ಮನೆ ಮೇಲೆ ಎಸಿಬಿ ದಾಳಿ ನಡೆಸಿದೆ ಎಂದು ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿದರು.

ಕಾನೂನು ರಚಿಸಿರುವುದು ಶಾಸನ ಸಭೆ, ಕಾನೂನು ಮಾಡುವಾಗ ಕಾಂಗ್ರೆಸ್‍ನವರಿಗೆ ಅನ್ವಯ ಆಗುವುದಿಲ್ಲ ಎಂದು ಕಾನೂನು ಮಾಡಿದ್ದಾರೆಯೇ, ಬೇರೆಯವರ ಮನೆಮೇಲೆ  ರೈಡ್ ಆದರೆ ಕಾನೂನು ಕ್ರಮಕೈಗೊಳ್ಳುತ್ತೆ, ಪ್ರಾಮಾಣಿಕರು ಇದ್ದರೇ ಏಕೆ ಭಯಪಡಬೇಕು ಎಂದು ಇದೇ ಮಾಜಿ ಮುಖ್ಯಮಂತ್ರಿಗಳು ಸಾಕಷ್ಟು ಬಾರಿ ಹೇಳಿಕೆ ನೀಡಿದ್ದಾರೆ. ಅವರ ಆಪ್ತರ ಮನೆಮೇಲೆ ರೈಡ್ ಆದರೇ ಏಕೆ ಸಂಕಟ ಪಡುತ್ತಾರೆ ಎಂದು ಪ್ರಶ್ನಿಸಿದರು.

ತಪ್ಪು ಮಾಡಿಲ್ಲ ಎಂದರೇ ಏಕೆ ಹೆದರಬೇಕು. ಎಸಿಬಿ ರಚನೆ ಮಾಡಿದ್ದು, ಸಿದ್ದರಾಮಯ್ಯ ಕಾಲದಲ್ಲಿ ಅವರು ಹಗರಣ ಮುಚ್ಚಿಹಾಕಲು ಮಾಡಿದರು. ನಾವು ಹಗರಣ ಬಿಚ್ಚಿಡುವ ಕೆಲಸ ಮಾಡುತ್ತಿದ್ದೇವೆ. ಲೋಕಾಯುಕ್ತವನ್ನು ಹಲ್ಲುಕಿತ್ತ ಹಾವಿನಂತೆ ಮಾಡಿದರು. ಎಸಿಬಿ ರಚಿಸಿ ಎಷ್ಟು ಹಗರಣ ಮುಚ್ಚಿ ಹಾಕಿದ್ದಾರೋ, ಫೈಲ್ ತಗೆದರೇ ಅರ್ಧ ಜನ ಜೈಲಿಗೆ ಹೋಗುತ್ತಾರೆಂದು ಲೇವಡಿ ಮಾಡಿದರು.

ಮಹಾರಾಷ್ಟ್ರದಲ್ಲಿ 40 ಜನ ಶಾಸಕರು ಪಕ್ಷ ತೊರೆದಿದ್ದಾರೆ. ರಾಜಕೀಯ ನಿಂತ ನೀರಲ್ಲ ರಾಜಕೀಯ ಧ್ರುವೀಕರಣ ಆಗುತ್ತಿರುತ್ತದೆ. ದೇವೇಂದ್ರ ಫಡ್ನಾವಿಸ್, ಮೋದಿ ನೇತೃತ್ವದಲ್ಲಿ ಶಿವಸೇನೆ ಮತ ಕೇಳಿದ್ದು, ಜನರು ಈ ಇಬ್ಬರ ನಾಯಕತ್ವಕ್ಕೆ ಓಟ್ ನೀಡಿದ್ದಾರೆ. ಹೊಂದಾಣಿಕೆ ಇದ್ದದ್ದು ಬಿಜೆಪಿ, ಶಿವಸೇನೆ ನಡುವೆ. ಜನವಿರೋಧಿ ಆಡಳಿತ, ಭ್ರಷ್ಟಾಚಾರ ಆಡಳಿತ ತೊಲಗಬೇಕು. ರಾಷ್ಟ್ರವಿರೋಧಿ ನಿಲುವು ಈ ಹಿನ್ನೆಲೆಯಲ್ಲಿ ಬದಲಾಯಿಸಿದ್ದೇವೆ ಎಂದರು.

ಪಠ್ಯಪುಸ್ತಕ ವಿಚಾರದಲ್ಲಿ ಸ್ಪಷ್ಟ ನಿಲುವು ಸರಕಾರ ತಗೆದುಕೊಂಡಿದೆ, ಒಲ್ಲದ ಗಂಡನಿಗೆ ಮೊಸರಲ್ಲಿ ಕಲ್ಲು ಎಂಬಂತೆ ಅವರನ್ನು ಮೆಚ್ಚಿಸಲು ಸಾಧ್ಯವಿಲ್ಲ. ಬರಗೂರು ರಾಮಚಂದ್ರಪ್ಪ ಮತ್ತು ರೋಹಿತ್ ಚಕ್ರತೀರ್ಥ ಪಠ್ಯಕ್ರಮವನ್ನು ಸಾರ್ವಜನಿಕರ ತೀರ್ಮಾನಕ್ಕೆ ಸರಕಾರ ಬಿಟ್ಟಿದೆ. ತಪ್ಪುಗಳಿದ್ದರೇ ಸರಿಪಡಿಸುವುದಾಗಿ ಸಿಎಂ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X