Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ ಜಿಲ್ಲೆಯಲ್ಲಿ 30ಕ್ಕೂ ಅಧಿಕ...

ಉಡುಪಿ ಜಿಲ್ಲೆಯಲ್ಲಿ 30ಕ್ಕೂ ಅಧಿಕ ಮನೆಗಳಿಗೆ ಹಾನಿ; 15 ಲಕ್ಷ ರೂ. ನಷ್ಟ

ಹೆಬ್ರಿಯ ಅನೇಕ ಕಡೆಗಳಲ್ಲಿ ಭತ್ತದ ನೇಜಿ ನಾಶದ ಭೀತಿ

ವಾರ್ತಾಭಾರತಿವಾರ್ತಾಭಾರತಿ6 July 2022 8:13 PM IST
share
ಉಡುಪಿ ಜಿಲ್ಲೆಯಲ್ಲಿ 30ಕ್ಕೂ ಅಧಿಕ ಮನೆಗಳಿಗೆ ಹಾನಿ; 15 ಲಕ್ಷ ರೂ. ನಷ್ಟ

ಉಡುಪಿ: ಕಳೆದೆರಡು ದಿನಗಳ ಸತತ ಮಳೆ ಹಾಗೂ ಗಾಳಿಯಿಂದ ಉಡುಪಿ ಜಿಲ್ಲೆಯಾದ್ಯಂತ 30ಕ್ಕೂ ಅಧಿಕ ಮನೆಗಳಿಗೆ ಹಾನಿಯಾಗಿದ್ದು, ಹೆಬ್ರಿ ತಾಲೂಕಿನ ಅನೇಕ ಗ್ರಾಮಗಳ ಗದ್ದೆಗಳಲ್ಲಿ ನೀರು ನಿಂತು ವ್ಯಾಪಕವಾಗಿ ಭತ್ತದ ನೇಜಿ ನಾಶವಾಗಿರುವ ರೈತರು ಆತಂಕ ವ್ಯಕ್ತಪಡಿಸಿದ್ದಾರೆ.

ಹೆಬ್ರಿಯ ವರಂಗ, ಶಿವಪುರ, ಅಂಡಾರು, ಬೇಳಂಜೆ ಸೇರಿದಂತೆ ಹಲವು ಗ್ರಾಮಗಳಲ್ಲಿ ಧಾರಾಕಾರ ಮಳೆಯಿಂದ ರೈತರು ತಡವಾಗಿ ಭಿತ್ತನೆ ಮಾಡಿದ ಬೀಜ ಮೊಳಕೆಯೊಡೆಯುವ ಸಮಯದಲ್ಲೇ ಮಳೆ ನೀರಿಗೆ ಕೊಚ್ಚಿಕೊಂಡು ಹೋಗಿರುವ ಬಗ್ಗೆ ರೈತರು ಭೀತಿಯನ್ನು ವ್ಯಕ್ತಪಡಿಸುತಿದ್ದಾರೆ. ಕಳೆದ ಮೂರ್ನಾಲ್ಕು ದಿನಗಳಿಂದ ಗದ್ದೆಗಳಲ್ಲಿ ನೀರು ನಿಂತಿರುವುದರಿಂದ ಎಷ್ಟು ಪ್ರಮಾಣದ ಹಾನಿ ಸಂಭವಿಸಿದೆ ಎಂಬ ಸರಿಯಾದ ಮಾಹಿತಿ ಇನ್ನೂ ಸಿಕ್ಕಿಲ್ಲ.

ಈ ಬಗ್ಗೆ ಹೆಬ್ರಿಯ ತಹಶೀಲ್ದಾರ್ ಪುರಂದರ ಕೆ. ಅವರನ್ನು ವಿಚಾರಿಸಿದಾಗ, ಹೆಬ್ರಿಯ ಅನೇಕ ಗ್ರಾಮಗಳ ಗದ್ದೆ ಗಳಲ್ಲಿ ನೀರು ಇನ್ನೂ ನಿಂತುಕೊಂಡಿದೆ. ಹೀಗಾಗಿ ನಷ್ಟದ ಅಂದಾಜು ಇನ್ನೂ ಮಾಡಲಾಗಿಲ್ಲ. ನೀರು ಇಳಿದು ಹೋದ ಬಳಿಕ ಅಧಿಕಾರಿಗಳು ಸ್ಥಳಕ್ಕೆ ತೆರಳಿ ಹಾನಿಯ ಹಾಗೂ ನಷ್ಟದ ಪ್ರಮಾಣವನ್ನು ಖಚಿತವಾಗಿ ಹೇಳಬಹುದಾಗಿದೆ ಎಂದರು.

ಅಂಡಾರು ಗ್ರಾಮದ ಲಲಿತಾ, ರಾಜೇಂದ್ರ, ಜಗನ್ನಾಥ ಹಾಗೂ ನಾರಾಯಣ ಶೆಟ್ಟಿಗಾರ್, ರಾಜಶೇಖರ್ ಸೇರ್ವೆಗಾರ್, ಕಲ್ಯಾಣಿ ಪೂಜಾರ್ತಿ, ವರಂಗದ ನಾಗಪ್ರ ಶೆಟ್ಟಿಗಾರ್, ಪಡುಕುಡೂರಿನ ರವೀಂದ್ರ ಶೆಟ್ಟಿ, ಗುಲಾಬಿ ಶೆಟ್ಟಿ, ದೇಜು ಪೂಜಾರಿ, ಅಮರನಾಥ ಶೆಟ್ಟಿ, ಕುಡಿಬೈಲಿನ ಅಣ್ಣ.ಯ್ಯ ನಾಯ್ಕ್, ಸತೀಶ್ ಶೆಟ್ಟಿ, ಗಣೇಶ್ ಮುಂತಾದವರು ಬೀಜ ಮಳೆ ನೀರಿನಲ್ಲಿ ಕೊಚ್ಚಿಕೊಂಡು ಹೋಗಿರುವ ಬಗ್ಗೆ ಮಾಹಿತಿ ನೀಡಿದ್ದಾರೆ. ಇದರಿಂದ ಲಕ್ಷಾಂತರ ರೂ.ನಷ್ಟದ ಅಂದಾಜು ಮಾಡಲಾಗಿದೆ.

ಕಳೆದ 24 ಗಂಟೆಗಳ ಅಂತರದಲ್ಲಿ ಜಿಲ್ಲೆಯಲ್ಲಿ ಸುಮಾರು 30 ಮನೆಗಳಿಗೆ ಹಾನಿಯಾಗಿರುವ ಬಗ್ಗೆ ವರದಿಗಳು ಬಂದಿದ್ದು, ಇದರಿಂದ ಒಟ್ಟು ೧೫ ಲಕ್ಷರೂ. ನಷ್ಟವಾಗಿರುವ ಅಂದಾಜು ಮಾಡಲಾಗಿದೆ. ಕುಂದಾಪುರ ತಾಲೂಕಿನಲ್ಲಿ ೧೩, ಬ್ರಹ್ಮಾವರ ತಾಲೂಕಿನ ೭,ಉಡುಪಿಯ ೫ ಹಾಗೂ ಕಾಪು ಮತ್ತು ಬೈಂದೂರು ಗಳಲ್ಲಿ ತಲಾ ಎರಡು ಮನೆಗಳಿಗೆ ಹಾನಿಯಾಗಿರುವ ಮಾಹಿತಿ ಜಿಲ್ಲಾ ಕಂಟ್ರೋಲ್ ರೂಮಿಗೆ ಬಂದಿದೆ.

ಉಡುಪಿ ತಾಲೂಕಿನಲ್ಲಿ ಪುತ್ತೂರು ಗ್ರಾಮದ ರಾಘು ಪೂಜಾರಿ ಮನೆ ಮೇಲೆ ಮರಬಿದ್ದು ೫೦ಸಾವಿರ ರೂ., ಶೇಷಗಿರಿ ನಾಯಕ್ ಇವರ ಮನೆಯ ಮಣ್ಣಿನ ಗೋಡೆ ಕುಸಿದು 40 ಸಾವಿರ, ಮೂಡನಿಡಂಬೂರಿನ ವನಜ ಶೆಟ್ಟಿ ಹಾಗೂ ಬಡಾ ನಿಡಿಯೂರಿನ ವಾಸು ಪೂಜಾರಿ ಇವರ ಮನೆಗಳಿಗೆ ಹಾನಿಯಾಗಿ ತಲಾ ೫೦ ಸಾವಿರ ರೂ. ನಷ್ಟದ ಅಂದಾಜು ಮಾಡಲಾಗಿದೆ.

ಬ್ರಹ್ಮಾವರ ತಾಲೂಕಿನಲ್ಲಿ ಹೊಸೂರಿನ ಈರಾ ಎಂಬವರ ವಾಸ್ತವ್ಯದ ಪಕ್ಕಾ ಮನೆ ಮಳೆಗೆ ಕುಸಿದಿದ್ದು ಒಂದು ಲಕ್ಷ ರೂ.ನಷ್ಟವಾಗಿದೆ. ಉಳಿದಂತೆ ಕಾವಡಿಯ ಸರಸ್ವತಿ ಕುಲಾಲ್‌ರ ಮನೆಗೆ ೪೦ ಸಾವಿರ, ಮೂಡುಹಡು ಗ್ರಾಮದ ಗೀತಾ ಮರಕಾಲ್ತಿ ಮನೆಗೆ 35 ಸಾವಿರ, ಗಿಳಿಯಾರು ಜಯಲಕ್ಷ್ಮೀ ಮನೆಗೆ ೨೫ ಸಾವಿರ ರೂ. ನಷ್ಟವಾಗಿರುವ ಬಗ್ಗೆ ವರದಿಗಳು ಬಂದಿವೆ.

ಕುಂದಾಪುರ ತಾಲೂಕ ಗಂಗೊಳ್ಳಿಯ ಸಫೀಯರ ಮನೆಗೆ ೬೦ ಸಾವಿರ, ದೇವದಾಸ ಖಾರ್ವಿ ಮನೆಗೆ ೩೦ಸಾವಿರ, ಬಸ್ರೂರಿನ ರಾಘವೇಂದ್ರ ಮನೆಗೆ ೪೦ ಸಾವಿರ, ಯಡ್ಯಾಡಿಯ ಪದ್ದು ಮೊಗೇರ್ತಿ ಮನೆಗೆ ೭೦ ಸಾವಿರ, ಕುಳುಂಜೆ ಯಶೋಧ ಶೆಡ್ತಿ ಮನೆಗೆ ೪೦ ಸಾವಿರ, ಕೊರ್ಗಿಯ ಚಿತ್ರಾ, ಸಿದ್ಧಾಪುರದ ಸಾದಮ್ಮ ಶೆಡ್ತಿ ಮನೆಗೆ ತಲಾ ೫೦ ಸಾವಿರ,ಹೆಮ್ಮಾಡಿ ಯೂಸೂಫ್‌ರ ಮನೆಗೆ  ೬೫ಸಾವಿರ ರೂ.ನಷ್ಟವಾಗಿದೆ.

ಕಾಪು ತಾಲೂಕಿನ ಕೋಟೆ ಗ್ರಾಮದ ಶಿವ ಹಾಗೂ ಕಳತ್ತೂರು ಗ್ರಾಮದ ಸುಮತಿ ಶೆಟ್ಟಿಗಾರ್ ಮನೆಗೆ ಭಾಗಶ: ಹಾನಿಯಿಂದ ತಲಾ ೩೦ಸಾವಿರ ರೂ. ನಷ್ಟವಾಗಿದೆ. ಬೈಂದೂರು ತಾಲೂಕಿನ ಶಿರೂರು ಗ್ರಾಮದ ನೇಜಿ ಹಸನ್ ಮನೆಗೆ ೭೫,೦೦೦ ಹಾಗೂಬ ನಾವುಂದದ ಕತಿಜಾ ಬೆನ್ ಮನೆಗೆ ೫೦ ಸಾವಿರ ರೂ. ನಷ್ಟವಾಗಿರುವ ಮಾಹಿತಿ ಇಲ್ಲಿಗೆ ಬಂದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X