Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಪ್ರಕೃತಿ ವಿಕೋಪಕ್ಕೆ ಸ್ಪಂದಿಸದ ಸರಕಾರ:...

ಪ್ರಕೃತಿ ವಿಕೋಪಕ್ಕೆ ಸ್ಪಂದಿಸದ ಸರಕಾರ: ಶಾಸಕ ಯು.ಟಿ. ಖಾದರ್ ಆಕ್ರೋಶ

ವಾರ್ತಾಭಾರತಿವಾರ್ತಾಭಾರತಿ6 July 2022 10:27 PM IST
share
ಪ್ರಕೃತಿ ವಿಕೋಪಕ್ಕೆ ಸ್ಪಂದಿಸದ ಸರಕಾರ: ಶಾಸಕ ಯು.ಟಿ. ಖಾದರ್ ಆಕ್ರೋಶ

ಮಂಗಳೂರು: ದ.ಕ. ಜಿಲ್ಲಾದ್ಯಂತ ಕಳೆದೊಂದು ವಾರದಿಂದ ಬಿರುಸಿನ ಮಳೆಯಾಗುತ್ತಿದ್ದರೂ ಕೂಡ ರಾಜ್ಯ ಸರಕಾರ ಯಾವುದೇ ರೀತಿಯಲ್ಲೂ ಸ್ಪಂದಿಸುತ್ತಿಲ್ಲ ಎಂದು ರಾಜ್ಯ ವಿಧಾನ ಸಭೆಯ ವಿಪಕ್ಷ ಉಪನಾಯಕ ಯು.ಟಿ.ಖಾದರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಾರದಿಂದ ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ. ಮಂಗಳೂರು ವಿಧಾನಸಭಾ ಕ್ಷೇತ್ರದ ವಿವಿಧ ಪ್ರದೇಶಗಳಲ್ಲಿ ಮನೆಗೆ ಹಾನಿ, ಗುಡ್ಡ ಕುಸಿತ ಸಂಭವಿಸಿದೆ. ಕಡಲ್ಕೊರೆತವೂ ತೀವ್ರವಾಗಿದೆ. ಆದರೆ ಯಾವೊಬ್ಬ ಸಚಿವರೂ ಇನ್ನೂ ಕ್ಷೇತ್ರಕ್ಕೆ ಭೇಟಿ ನೀಡಿಲ್ಲ. ಉಳ್ಳಾಲ ನಗರಸಭೆ ವ್ಯಾಪ್ತಿಯ ಸೀ ಗ್ರೌಂಡ್ ಹಾಗೂ ಸೋಮೇಶ್ವರ ಪುರಸಭೆ ವ್ಯಾಪ್ತಿಯ ಬಟಪಾಡಿಯ ಮತ್ತಿತರ ಪ್ರದೇಶಗಳ ಜನರು ಪ್ರಕೃತಿ ವಿಕೋಪದಿಂದ ತತ್ತರಿಸಿದ್ದಾರೆ. ಇಂಥಹ ತುರ್ತು ಸಂದರ್ಭಗಳಲ್ಲಿ ತಕ್ಷಣ ಭೇಟಿ ನೀಡಿ ಪರಿಹಾರ ಕಂಡುಕೊಳ್ಳುವುದು ಸರಕಾರದ ಜವಾಬ್ದಾರಿಯಾಗಿದೆ. ಆದರೆ ಯಾವ ಸಚಿವರೂ ಭೇಟಿ ನೀಡದೆ ಅನ್ಯಾಯ ಎಸಗಿದ್ದಾರೆ. ಒದೊಂದ ಕರುಣೆ ಮತ್ತು ಮಾನವೀಯತೆ ಇಲ್ಲದ ಸರಕಾರ ಎಂದು ಖಾದರ್ ಆಕ್ರೋಶ ವ್ಯಕ್ತಪಡಿಸಿದರು.

ಸಚಿವರ ಜೊತೆ ಮಾತುಕತೆ

ಜಿಲ್ಲಾ ಉಸ್ತುವಾರಿ ಸಚಿವ ವಿ.ಸುನಿಲ್ ಕುಮಾರ್, ಬಂದರು ಮತ್ತು ಮೀನುಗಾರಿಕಾ ಸಚಿವ ಎಸ್.ಅಂಗಾರರ ಜೊತೆ ದೂರವಾಣಿ ಮೂಲಕ ಮಾತುಕತೆ ನಡೆಸಿದ ಯು.ಟಿ.ಖಾದರ್ ತಕ್ಷಣ ಜಿಲ್ಲಾ ಮಟ್ಟದ ಪ್ರಾಕೃತಿಕ ವಿಕೋಪದ ಸಭೆ ಕರೆದು ಹಾನಿ ಸಂಭವಿಸಿದ ಮನೆಗಳಿಗೆ ಪರಿಹಾರ ಒದಗಿಸಲು ಮತ್ತು ಗುಡ್ಡ, ಗೋಡೆ ಕುಸಿತದ ಸಂಭವಿಸಿದ ಪ್ರದೇಶಗಳಿಗೆ ಅನುದಾನ ಬಿಡುಗಡೆಗೊಳಿಸಿ ದುರಸ್ಥಿ ಪಡಿಸುವಂತೆ ಒತ್ತಾಯಿಸಿದರು.

ಅನುದಾನ ಬಿಡುಗಡೆಗೆ ಆಗ್ರಹ

ಕಡಲ್ಕೊರೆತದಿಂದ ಹಾನಿಗೊಳಗಾದ ತಡೆಗೋಡೆ ಹಾಗೂ ರಸ್ತೆ ನಿರ್ಮಾಣಕ್ಕಾಗಿ ಅಧಿಕಾರಿಗಳು ಅಂದಾಜು ಪಟ್ಟಿ ಸಲ್ಲಿಸಿದ್ದಾರೆ. ಅದರಂತೆ ಉಳ್ಳಾಲ ಸೀಗ್ರೌಂಡ್ ಬಳಿ 60 ಲಕ್ಷ ರೂ. ಹಾಗೂ ಸೋಮೇಶ್ವರ ಬಟಪಾಡಿಗೆ 1.30 ಕೋ.ರೂ. ಅನುದಾನವನ್ನು ಶೀಘ್ರ ಬಿಡುಗಡೆಗೊಳಿಸುವಂತೆ ಖಾದರ್ ಆಗ್ರಹಿಸಿದರು.

ಮಂಗಳೂರು ಕ್ಷೇತ್ರ ವ್ಯಾಪ್ತಿಯ ತೊಕ್ಕೊಟ್ಟು, ಕೆರೆಬೈಲು, ಹಳೆಕೋಟೆ, ಕೋಟೆಪುರ, ಮೊಗವೀರ ಪಟ್ಣ, ಬಟಪಾಡಿ, ಉಚ್ಛಿಲ, ಮುನ್ನೂರು ಮತ್ತಿತರ ಕಡೆ ಮಳೆ ಹಾನಿ ಮತ್ತು ಕಡಲ್ಕೊರೆತ ಸಂಭವಿಸಿದ ಸ್ಥಳಗಳಿಗೆ ಭೇಟಿ ನೀಡಿದ ಶಾಸಕ ಖಾದರ್ ಸರಕಾರದಿಂದ ಪರಿಹಾರ ಒದಗಿಸುವ ಭರವಸೆ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X