Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ರಶ್ಯ ವಿರುದ್ಧದ ನಿರ್ಬಂಧ ಕ್ರಮಗಳು...

ರಶ್ಯ ವಿರುದ್ಧದ ನಿರ್ಬಂಧ ಕ್ರಮಗಳು ಮನುಕುಲಕ್ಕೆ ಗಂಡಾಂತರ ಆಗಬಹುದು: ರಶ್ಯ ಮಾಜಿ ಅಧ್ಯಕ್ಷರ ಎಚ್ಚರಿಕೆ‌

ವಾರ್ತಾಭಾರತಿವಾರ್ತಾಭಾರತಿ7 July 2022 10:17 PM IST
share

ಕೀವ್, ಜು.7: ಉಕ್ರೇನ್ ಮೇಲಿನ ಆಕ್ರಮಣದ ಹಿನ್ನೆಲೆಯಲ್ಲಿ ರಶ್ಯದಂತಹ ಪರಮಾಣು ಶಕ್ತ ದೇಶವನ್ನು ಶಿಕ್ಷಿಸುವ ಪಾಶ್ಚಿಮಾತ್ಯರ ಪ್ರಯತ್ನಗಳು ಮಾನವ ಕುಲವನ್ನು ಅಪಾಯಕ್ಕೆ ದೂಡುವ ಗಂಡಾಂತರಕ್ಕೆ ಕಾರಣವಾಗಬಹುದು ಎಂದು ರಶ್ಯದ ಮಾಜಿ ಅಧ್ಯಕ್ಷ ಡಿಮಿಟ್ರಿ ಮೆಡ್ವೆಡೇವ್ ಹೇಳಿದ್ದಾರೆ. 

‌
ಫೆಬ್ರವರಿ 24ರಂದು ಉಕ್ರೇನ್ ಮೇಲೆ ರಶ್ಯ ನಡೆಸಿದ ಆಕ್ರಮಣವು ರಶ್ಯ ಮತ್ತು ಪಾಶ್ಚಿಮಾತ್ಯ ದೇಶಗಳ ನಡುವಿನ ಸಂಬಂಧದಲ್ಲಿ 19626 ಕ್ಯೂಬಾ ಕ್ಷಿಪಣಿ ಬಿಕ್ಕಟ್ಟಿನ ಬಳಿಕದ ಅತ್ಯಂತ ಗಂಭೀರ ಬಿಕ್ಕಟ್ಟಿಗೆ ಕಾರಣವಾಗಿದ್ದು ಇದು ಜಗತ್ತನ್ನು ಪರಮಾಣು ಯುದ್ಧದ ಅಂಚಿಗೆ ತಂದು ನಿಲ್ಲಿಸಿದೆ ಎಂದು ಹಲವರು ಆತಂಕ ವ್ಯಕ್ತಪಡಿಸಿದ್ದಾರೆ. 

ಅತ್ಯಂತ ದೊಡ್ಡ ಪರಮಾಣು ಸಾಮರ್ಥ್ಯ ಹೊಂದಿರುವ ದೇಶವನ್ನು ಶಿಕ್ಷಿಸುವ ಪರಿಕಲ್ಪನೆ ಅಸಂಬದ್ಧವಾಗಿದೆ. ಮತ್ತು ಇದು ಮನುಕುಲವನ್ನು ಗಂಡಾಂತರಕ್ಕೆ ತಳ್ಳುವ ಅಪಾಯವನ್ನು ತೆರೆದಿಟ್ಟಿದೆ ಎಂದು ಮೆಡ್ವೆಡೇವ್ ಹೇಳಿದ್ದಾರೆ. ಅವರು ಈಗ ರಶ್ಯದ ಭದ್ರತಾ ಸಮಿತಿಯ ಉಪಾಧ್ಯಕ್ಷರಾಗಿದ್ದಾರೆ. ಅಮೆರಿಕವು ಪ್ರಪಂಚಾದ್ಯಂತ ರಕ್ತವನ್ನು ಚೆಲ್ಲಿದ ಸಾಮ್ರಾಜ್ಯವಾಗಿದೆ. 

ಇದಕ್ಕೆ ಸ್ಥಳೀಯ ಅಮೆರಿಕನ್ನರ ಹತ್ಯೆ, ಜಪಾನ್ನ ಮೇಲೆ ಪರಮಾಣು ದಾಳಿ, ವಿಯೆಟ್ನಾಮ್ನಿಂದ ಅಫ್ಘಾನಿಸ್ತಾನದವರೆಗೆ ಹಲವು ಯುದ್ಧಗಳು ಉತ್ತಮ ನಿದರ್ಶನಗಳಾಗಿವೆ. 
ಉಕ್ರೇನ್ನಲ್ಲಿ ರಶ್ಯ ನಡೆಸುತ್ತಿರುವ ಕಾರ್ಯಾಚರಣೆಯನ್ನು ತನಿಖೆ ನಡೆಸಲು ನ್ಯಾಯಾಲಯ ಅಥವಾ ನ್ಯಾಯಮಂಡಳಿಗಳನ್ನು ಬಳಸುವ ಪ್ರಯತ್ನ ನಿರರ್ಥಕ ಮತ್ತು ಜಾಗತಿಕ ವಿನಾಶಕಾರಿ ಎಂದವರು ಹೇಳಿದ್ದಾರೆ. 

ರಶ್ಯ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಓರ್ವ ಯುದ್ಧಾಪರಾಧಿಯಾಗಿದ್ದು ಉಕ್ರೇನ್ಗೆ ಪಾಶ್ಚಿಮಾತ್ಯರ ಶಸ್ತ್ರಾಸ್ತ್ರ ಪೂರೈಕೆ ಹಾಗೂ ರಶ್ಯದ ವಿರುದ್ಧದ ಕಠಿಣ ನಿರ್ಬಂಧ ಜಾರಿಗೆ ಅವರೇ ಸಂಪೂರ್ಣ ಹೊಣೆ ಎಂದು ಅಮೆರಿಕ ಅಧ್ಯಕ್ಷ ಜೋ ಬೈಡನ್ ಇತ್ತೀಚೆಗೆ ಹೇಳಿದ್ದರು. ರಶ್ಯವು ಸಾಮ್ರಾಜ್ಯಶಾಹಿ ಶೈಲಿಯ ಭೂಸ್ವಾಧೀನಕ್ಕೆ ಮುಂದಾಗಿದ್ದು ಇದು ಎರಡನೆಯ ಮಹಾಯುದ್ಧದ ನಂತರ ಯುರೋಪ್ನಲ್ಲಿ ಬಹುದೊಡ್ಡ ಸಂಘರ್ಷವನ್ನು ಹುಟ್ಟುಹಾಕಿದೆ ಎಂದು ಉಕ್ರೇನ್ ಮತ್ತು ಅದರ ಮಿತ್ರರಾಷ್ಟ್ರಗಳು ಹೇಳಿವೆ. 

ಉಕ್ರೇನ್ ಅನ್ನು ನೇಟೊ ಒಕ್ಕೂಟಕ್ಕೆ ಸೇರಿಸುವ ಪ್ರಯತ್ನಗಳು ತನ್ನ ಭದ್ರತೆಗೆ ಅಪಾಯಕಾರಿಯಾಗಿದೆ. ಅಲ್ಲದೆ ಉಕ್ರೇನ್ನಲ್ಲಿರುವ ರಶ್ಯ ಭಾಷಿಕರ ವಿರುದ್ಧ ದೌರ್ಜನ್ಯ ನಡೆಯುತ್ತಿದ್ದು ಉಕ್ರೇನ್ ಅನ್ನು ನಿರಸ್ತ್ರೀಕರಣಗೊಳಿಸಲು ತಾನು ವಿಶೇಷ ಸೇನಾ ಕಾರ್ಯಾಚರಣೆ ನಡೆಸುತ್ತಿರುವುದಾಗಿ ರಶ್ಯ ಪ್ರತಿಪಾದಿಸುತ್ತಿದೆ. ವಿಶ್ವದ ಪರಮಾಣು ಶಸ್ತ್ರಾಸ್ತ್ರಗಳಲ್ಲಿ ಸುಮಾರು 90%ದಷ್ಟು ಶಸ್ತ್ರಾಸ್ತ್ರ ರಶ್ಯ ಮತ್ತು ಅಮೆರಿಕದ ಬಳಿಯಿದೆ. ಎರಡೂ ದೇಶಗಳ ಸೇನೆಯ ಬತ್ತಳಿಕೆಯಲ್ಲಿ ಸುಮಾರು 4,000 ಪರಮಾಣು ಅಸ್ತ್ರಗಳ ಸಂಗ್ರಹವಿದೆ ಎಂದು ಅಮೆರಿಕ ವಿಜ್ಞಾನಿಗಳ ಸಂಘಟನೆ ಹೇಳಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X