Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಸಚಿವ ಉಮೇಶ್ ಕತ್ತಿ ಇಲಾಖೆಯಲ್ಲಿ ಧೂಳು...

ಸಚಿವ ಉಮೇಶ್ ಕತ್ತಿ ಇಲಾಖೆಯಲ್ಲಿ ಧೂಳು ತಿನ್ನುತ್ತಿರುವ 4,199 ಕಡತಗಳು!

ಜಿ.ಮಹಾಂತೇಶ್ಜಿ.ಮಹಾಂತೇಶ್8 July 2022 8:21 AM IST
share
ಸಚಿವ ಉಮೇಶ್ ಕತ್ತಿ ಇಲಾಖೆಯಲ್ಲಿ ಧೂಳು ತಿನ್ನುತ್ತಿರುವ 4,199 ಕಡತಗಳು!

ಬೆಂಗಳೂರು, ಜು.8: ಪ್ರತ್ಯೇಕ ರಾಜ್ಯದ ಬಗ್ಗೆ ಆಗಾಗ ಹೂಂಕರಿಸುವ ಸಚಿವ ಉಮೇಶ್ ವಿ. ಕತ್ತಿ ಅವರು ನಿಭಾಯಿಸುತ್ತಿರುವ  ಅರಣ್ಯ ಇಲಾಖೆಯಲ್ಲಿ ಕಡತಗಳು ವಿಲೇವಾರಿಯಾಗದೆ ಧೂಳುಹಿಡಿದು ಕೂತಿವೆ. ಸಚಿವಾಲಯ ವಾಹಿನಿ, ಇ-ಆಫೀಸ್ ಸೇರಿ ಒಟ್ಟು 4,199 ಕಡತಗಳು ವಿಲೇವಾರಿಯಾಗದೆ ಬಾಕಿ ಇರುವುದು ಇದೀಗ ಬಹಿರಂಗವಾಗಿದೆ.

ಅರಣ್ಯ ಇಲಾಖೆಯ ಸರಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅಧ್ಯಕ್ಷತೆಯಲ್ಲಿ 2022ರ ಜೂನ್ 23ರಂದು ನಡೆದ ಸಭೆಯಲ್ಲಿ ಕಡತಗಳು ವಿಲೇವಾರಿಯಾಗದೆ ಇರುವ ಕುರಿತು ಚರ್ಚೆಯಾಗಿದೆ. ಅದರಲ್ಲೂ ತುಂಬಾ ಮುಖ್ಯವಾಗಿ ನ್ಯಾಯಾಲಯದ ಪ್ರಕರಣಗಳಿಗೆ ಸಂಬಂಧಿಸಿದಂತೆ ವಿಲೇವಾರಿಯಾಗದೆ ಇರುವ  ಕಡತಗಳ ಸಂಖ್ಯೆಯೂ ಹೆಚ್ಚಿನ ಸಂಖ್ಯೆಯಲ್ಲಿವೆ. ಸಭೆ ನಡಾವಳಿಗಳ ಪ್ರತಿಯು the-file.in ಗೆ ಲಭ್ಯವಾಗಿದೆ.

ಕಡತ ವಿಲೇವಾರಿ ಕುರಿತು ಸಚಿವ ಉಮೇಶ್ ಕತ್ತಿ ಅವರು ನಿಯಮಿತವಾಗಿ ಸಭೆ ನಡೆಸದಿರುವುದೇ 4,199 ಕಡತಗಳು ಬಾಕಿ ಇರುವುದಕ್ಕೆ ಕಾರಣ ಎಂದು ತಿಳಿದು ಬಂದಿದೆ. ಮುಖ್ಯ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ಪ್ರತೀ ತಿಂಗಳು ನಡೆಯುವ ಕೆಡಿಪಿ ಸಭೆಯಲ್ಲಿಯೂ ಎಲ್ಲಾ ಇಲಾಖೆಗಳ ಕಡತಗಳ ವಿಲೇವಾರಿ ಕುರಿತು ಚರ್ಚೆ ನಡೆಯುತ್ತದೆಯಾದರೂ ಅರಣ್ಯ ಇಲಾಖೆಯಲ್ಲಿ ಮಾತ್ರ ವಿಲೇವಾರಿಯಾಗದ ಕಡತಗಳು ಬೆಟ್ಟದಂತೆ ಏರುತ್ತಿವೆ.

2022ರ ಮೇ 16ರಿಂದ ಜೂನ್ 15ರವರೆಗಿನ ಅಂಕಿ ಅಂಶಗಳ ಪ್ರಕಾರ ಸಚಿವಾಲಯ ವಾಹಿನಿಯಲ್ಲಿ 2,399 ಮತ್ತು ಇ-ಆಫೀಸ್‌ನಲ್ಲಿ 1,800 ಕಡತಗಳು ಸೇರಿ ಒಟ್ಟು 4,199 ಕಡತಗಳು ಬಾಕಿ ಇವೆ. ಈ ಪೈಕಿ 3 ವರ್ಷಗಳಿಗಿಂತ ಹಳೆಯದಾದ ಕಡತಗಳ ಸಂಖ್ಯೆ 1,069ರಷ್ಟಿದೆ. ಇದರಲ್ಲಿ ನ್ಯಾಯಾಲಯ, ಲೋಕಾಯುಕ್ತ, ಕರ್ನಾಟಕ ಆಡಳಿತ ನ್ಯಾಯಮಂಡಳಿ, ಇಲಾಖೆ ವಿಚಾರಣೆ, ಅರಣ್ಯ ವಿಮೋಚನಾ ಪ್ರಕರಣಗಳಿಗೆ ಸಂಬಂಧಿಸಿದ ಕಡತಗಳೇ ಹೆಚ್ಚಿರುವುದು ನಡಾವಳಿಯಿಂದ ತಿಳಿದು ಬಂದಿದೆ.

ಕರ್ತವ್ಯಲೋಪ, ಭ್ರಷ್ಟಾಚಾರ, ಅಧಿಕಾರ ದುರುಪಯೋಗ, ಹಣಕಾಸು ದುರುಪಯೋಗ ಸೇರಿದಂತೆ ಇನ್ನಿತರ ಲೋಪಗಳಿಗೆ ಸಂಬಂಧಿಸಿದಂತೆ ಲೋಕಾಯುಕ್ತ ವಿಚಾರಣೆಗೆ ಗುರಿಯಾಗಿರುವ ಅಧಿಕಾರಿ, ನೌಕರರ ವಿರುದ್ಧವೂ ಯಾವುದೇ ಕ್ರಮ ಕೈಗೊಂಡಿಲ್ಲ. ಈ ವಿಭಾಗದಲ್ಲಿ ಇದುವರೆಗೆ ಒಟ್ಟು 25 ಕಡತಗಳು ಬಾಕಿ ಇವೆ. ಕಾರಣ ಕೇಳುವ ನೋಟಿಸ್‌ಗೆ
ಆಪಾದಿತರೆಂದು ಹೇಳಲಾಗಿರುವ ಬಹುತೇಕ ಅಧಿಕಾರಿಗಳಿಂದ ಇಲಾಖೆಗೆ ಉತ್ತರ ಬಂದಿಲ್ಲ ಎಂದು ಗೊತ್ತಾಗಿದೆ.

ಇನ್ನು ಅರಣ್ಯ, ಜೀವಿಪರಿಸ್ಥಿತಿ ಮತ್ತು ಪರಿಸರ ಇಲಾಖೆಯಲ್ಲಿ ನ್ಯಾಯಾಲಯ ಪ್ರಕರಣಗಳಿಗೆ ಸಂಬಂಧಿಸಿದಂತೆ ಒಟ್ಟು 797 ಪ್ರಕರಣಗಳು ಚಾಲ್ತಿಯಲ್ಲಿವೆ. ಈ ಪೈಕಿ ಸರ್ವೋಚ್ಚ ನ್ಯಾಯಾಲಯದಲ್ಲಿ 70, ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ 493, ಕರ್ನಾಟಕ ಆಡಳಿತ ನ್ಯಾಯಮಂಡಳಿಯಲ್ಲಿ 138, ಇತರ ನ್ಯಾಯಾಲಯಗಳಲ್ಲಿ 96 ಪ್ರಕರಣಗಳು ಬಾಕಿ ಇವೆ.
ಅರಣ್ಯ ಇಲಾಖೆಯಲ್ಲಿ ಕಡತ ವಿಲೇವಾರಿ ಮತ್ತು ವಿವಿಧ ಪ್ರಕರಣಗಳು ಬಾಕಿ ಇದ್ದರೂ ಸಚಿವ ಉಮೇಶ್ ಕತ್ತಿ ಅವರು ನಿಯಮಿತವಾಗಿ ಸಭೆ ನಡೆಸುತ್ತಿಲ್ಲ.

ಬದಲಿಗೆ ಪ್ರತ್ಯೇಕ ರಾಜ್ಯಕ್ಕೆ ಬೇಡಿಕೆ ಇರಿಸುವುದರಲ್ಲಿಯೇ ಕಾಲಹರಣ ಮಾಡುತ್ತಿರುವ ಕಾರಣ ಅಧಿಕಾರಿಶಾಹಿಯೂ ಜವಾಬ್ದಾರಿಯಿಂದ ಕಾರ್ಯನಿರ್ವಹಿಸುತ್ತಿಲ್ಲ ಎಂಬುದು ಮೇಲ್ನೋಟಕ್ಕೆ ಕಂಡು ಬಂದಿದೆ.

share
ಜಿ.ಮಹಾಂತೇಶ್
ಜಿ.ಮಹಾಂತೇಶ್
Next Story
X