ಕೆಪಿಸಿಸಿ ವಾರ್ ರೂಮ್ ಮುಖ್ಯಸ್ಥರಾಗಿ ಶಶಿಕಾಂತ್ ಸೆಂಥಿಲ್ ನೇಮಕ
ಬೆಂಗಳೂರು, ಜು. 8: ಮುಂಬರಲಿರುವ ವಿಧಾನಸಭೆ ಚನಾವಣೆಯ ಹಿನ್ನೆಲೆಯಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(ಕೆಪಿಸಿಸಿ) ವಾರ್ ರೂಮ್ ಮುಖ್ಯಸ್ಥರನ್ನಾಗಿ ಶಶಿಕಾಂತ್ ಸೆಂಥಿಲ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ನೇಮಕ ಮಾಡಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು ಇಂದಿಲ್ಲಿ ಆದೇಶ ಹೊರಡಿಸಿದ್ದಾರೆ.
ಇದೇ ವೇಳೆ ಸುನೀಲ್ ಕಾನುಗೋಳು ಅವರನ್ನು ಒಟ್ಟು ಉಸ್ತುವಾರಿಯಾಗಿ ಮುಂದುವರಿಯಲಿದ್ದಾರೆ. ಜೊತೆಗೆ ಕೆಪಿಸಿಸಿಯ ಉಪಾಧ್ಯಕ್ಷರನ್ನಾಗಿ ಸೂರಜ್ ಹೆಗ್ಡೆ ಮತ್ತು ಪ್ರಧಾನ ಕಾರ್ಯದರ್ಶಿ ಮೆಹರೋಝ್ ಖಾನ್ ಅವರಿಗೆ ವಾರ್ರೂಮ್ನ ಪ್ರತಿನಿತ್ಯದ ಮೇಲ್ವಿಚಾರಣೆಯ ಹೊಣೆಗಾರಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.
Next Story