Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಬೆಳ್ತಂಗಡಿ: ಬಹುಜನ ಚಳುವಳಿಯ ಹಿರಿಯ...

ಬೆಳ್ತಂಗಡಿ: ಬಹುಜನ ಚಳುವಳಿಯ ಹಿರಿಯ ನಾಯಕ, ಅಂಬೇಡ್ಕರ್ ವಾದಿ ಪಿ. ಡೀಕಯ್ಯ ನಿಧನ

ವಾರ್ತಾಭಾರತಿವಾರ್ತಾಭಾರತಿ8 July 2022 12:55 PM IST
share
ಬೆಳ್ತಂಗಡಿ: ಬಹುಜನ ಚಳುವಳಿಯ ಹಿರಿಯ ನಾಯಕ, ಅಂಬೇಡ್ಕರ್ ವಾದಿ ಪಿ. ಡೀಕಯ್ಯ ನಿಧನ

ಬೆಳ್ತಂಗಡಿ: ಮೆದುಳಿನ ರಕ್ತಸ್ರಾವದಿಂದ ಗಂಭೀರ ಸ್ಥಿತಿಯಲ್ಲಿದ್ದ ಬಹುಜನ ಚಳುವಳಿಯ ಹಿರಿಯ ನಾಯಕ, ಅಂಬೇಡ್ಕರ್ ವಾದಿ ಪಿ. ಡೀಕಯ್ಯ ಅವರು  ಮಣಿಪಾಲ  ಕೆಎಂಸಿ ಆಸ್ಪತ್ರೆಯಲ್ಲಿ ಶುಕ್ರವಾರ ನಿಧನರಾಗಿದ್ದಾರೆ.

ಅವರಿಗೆ 63 ವರ್ಷ ವಯಸ್ಸಾಗಿತ್ತು.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಹುಜನ ಚಳುವಳಿಯನ್ನು ಕಟ್ಟಿ ಬೆಳೆಸುವುದರಲ್ಲಿ ಡಿಕಯ್ಯ ಅವರ ಪಾತ್ರ ಅತ್ಯಂತ ಹಿರಿದು. ಜಿಲ್ಲೆಯ ಗ್ರಾಮ ಗ್ರಾಮಗಳಲ್ಲಿ ಸಂಚರಿಸಿ ಅವರು ಚಳವಳಿಯನ್ನು ಕಟ್ಟಿದವರು. ತುಳುನಾಡಿನಲ್ಲಿ ತಮ್ಮದೇ ಶೈಲಿಯಲ್ಲಿ ಬಹುಜನ ಚಳುವಳಿಯನ್ನು ಕಟ್ಟಿದವರು.

ಅವರು ಸಾಕಷ್ಟು ಯುವ ನಾಯಕರನ್ನು ಸೃಷ್ಟಿಸಿದ್ದರು. ʼಕಾನದ ಕಟದರʼ ಇತಿಹಾಸದ ಕುರಿತು ಅಧ್ಯಯನ ಮಾಡಿ ಪುಸ್ತಕ ಬರೆದಿದ್ದ ಡೀಕಯ್ಯರು ಅಪ್ರತಿಮ ಬರಹಗಾರರು ಕೂಡ ಆಗಿದ್ದರು. ಅವರ ಬರಹಗಳು ವಿವಿಧ ಪತ್ರಿಕೆಗಳಲ್ಲಿ ಪ್ರಕಟವಾಗಿತ್ತು. ಮನುವಾದದ ಕಡು ವಿರೋಧಿಯಾಗಿದ್ದ ಡೀಕಯ್ಯರು, ಅಸ್ಪೃಶ್ಯತೆ ವಿರುದ್ಧದ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದರು. ಅವರು ತುಳುನಾಡು ಮನ್ಸ ಸಮಾಜ ಸೇವಾ ಸಂಘದ ಸ್ಥಾಪಕ ಅಧ್ಯಕ್ಷ, ಬಿ.ಎಸ್.ಎನ್.ಎಲ್ ನಿವೃತ ಉದ್ಯೋಗಿಯಾಗಿದ್ದರು.

ಅವರು ಪತ್ನಿ ಹಿರಿಯ ಸಾಹಿತಿ ಅತ್ರಾಡಿ ಅಮೃತಾ ಶೆಟ್ಟಿ, ಕುಟುಂಬ ವರ್ಗದವರು ಹಾಗೂ ಅಪಾರ ಬೆಂಬಲಿಗರನ್ನು ಅಗಲಿದ್ದಾರೆ.

ಪಿ.ಡೀಕಯ್ಯನವರ ಅಕಾಲಿಕ ನಿಧನದಿಂದ ಅವರ ಅಭಿಮಾನಿಗಳು, ಹಿತೈಷಿಗಳು ತೀವ್ರವಾಗಿ ದುಃಖಿತರಾಗಿದ್ದಾರೆ. ಸಾಕಷ್ಟು ಹೋರಾಟಗಳಿಗೆ ಮಾರ್ಗದರ್ಶಕರಾಗಿದ್ದ ಪಿ.ಡೀಕಯ್ಯನವರ ನಿಧನದಿಂದ ಬಹುಜನ ಚಳುವಳಿಗೆ ಭಾರೀ ನಷ್ಟವಾಗಿದೆ.

ಸಾವಿನಲ್ಲೂ ಸಾರ್ಥಕತೆ ಮೆರೆದಿರುವ ಪಿ. ಡಿಕಯ್ಯನವರ ಕುಟುಂಬಸ್ಥರು ಅವರ  ಅಂಗಾಂಗಗಳನ್ನು ದಾನ ಮಾಡಿ ಹಲವರ ಬದುಕಿಗೆ ದಾರಿ ತೋರಿದ್ದಾರೆ. ಅವರ ಅಂಗಾಗಳ ದಾನದ ಪ್ರಕ್ರಿಯೆಗಳು ಮಣಿಪಾಲದ ಕೆ.ಎಂ.ಸಿ ಆಸ್ಪತ್ರೆಯಲ್ಲಿ ನಡೆಯುತ್ತಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X