Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಭಟ್ಕಳ ತಾಲೂಕಿನಲ್ಲಿ ಭಾರೀ ಮಳೆ; ಅಪಾರ...

ಭಟ್ಕಳ ತಾಲೂಕಿನಲ್ಲಿ ಭಾರೀ ಮಳೆ; ಅಪಾರ ನಷ್ಟ

ವಾರ್ತಾಭಾರತಿವಾರ್ತಾಭಾರತಿ8 July 2022 11:30 PM IST
share
ಭಟ್ಕಳ ತಾಲೂಕಿನಲ್ಲಿ ಭಾರೀ ಮಳೆ; ಅಪಾರ ನಷ್ಟ

ಭಟ್ಕಳ: ಗುರುವಾರ ರಾತ್ರಿಯಿಡೀ ಸುರಿದ ಮಳೆಯಿಂದಾಗಿ ಭಟ್ಕಳ ತಾಲೂಕಿನಲ್ಲಿ ಅಪಾರ ಹಾನಿಯಾಗಿರುವ ಬಗ್ಗೆ ವರದಿಯಾಗಿದೆ. 

ರಾತ್ರಿಯಿಂದಲೇ ಮಳೆ ಸುರಿಯುತ್ತಿದ್ದರೂ ಮಧ್ಯರಾತ್ರಿಯಿಂದ ಒಂದೇ ಸವನೆ ಜೋರಾಗಿ ಬರಲಾರಂಭಿಸಿದ್ದರಿಂದ ಅನೇಕ ಕಡೆಗಳಲ್ಲಿ ಮನೆಯೊಳಕ್ಕೆ ನೀರು ನುಗ್ಗಿ ಮನೆಯವರೆಲ್ಲರೂ ಆತಂಕದಿಂದ ದಿನ ಕಳೆಯುವಂತೆ ಆಗಿದೆ.

ನಗರದ ಚೌಥನಿಯಲ್ಲಿ ಹೊಳೆಯು ಉಕ್ಕಿ ಹರಿಯಲಾರಂಭಿಸಿದ್ದು ಸೇತುವೆ ಮುಳುಗಡೆಯಾಯಿತು. ಕುದ್ರೆಬೀರಪ್ಪ ದೇವಸ್ಥಾನ ಅರ್ಧದಷ್ಟು ಮುಳುಗಿದ್ದು ಮುಂಡಳ್ಳಿ ಸಂಪರ್ಕವೇ ಕಡಿತಗೊಂಡಿತು. ಅನೇಕ ಮನೆಗಳಿಗೆ ನೀರು ನುಗ್ಗಿದ್ದು ಹೊಳೆದಂಡೆಯಲ್ಲಿರುವ ಅಪಾಯದ ಅಂಚಿನ ಮನೆಗಳಲ್ಲಿ ಜನರನ್ನು ಮುಂಜಾಗ್ರತಾ ಕ್ರಮವಾಗಿ ಸ್ಥಳಾಂತರ ಮಾಡಲಾಯಿತು. ತಗ್ಗು ಪ್ರದೇಶಗಳು ಸಂಪೂರ್ಣ ನೀರಿನಿಂದಾವೃತವಾಗಿದ್ದು ಕಿ.ಮಿ. ಗಟ್ಟಲೆ ಎಲ್ಲಿ ನೋಡಿದರೂ ನೀರೇ ಕಾಣುತ್ತಿದ್ದು ಜನ ಭಯಭೀತರಾಗಿದ್ದಾರೆ. ತಾಲೂಕಿನ ಬೈಲೂರಿನಿಂದ ಗೊರ್ಟೆಯ ತನಕ ರೈತರ ಗದ್ದೆಗಳು, ತೋಟ ಸಂಪೂರ್ಣ ಜಲಾವೃತವಾಗಿದ್ದರೆ ಹಲವು ಕಡೆಗಳಲ್ಲಿ ಗದ್ದೆಯಲ್ಲಿ ನಾಟಿ ಮಾಡಿದ ಸಸಿಗಳು ಕೊಳೆತು ಹೋಗುವ ಭೀತಿ ರೈತರದ್ದಾಗಿದೆ.

ಮಾರುತಿ ನಗರ, ಮಣ್ಕುಳಿ, ಮುಖ್ಯ ರಸ್ತೆ, ರಂಗೀಕಟ್ಟೆ, ಕೋಗ್ತಿ ನಗರ ಇತ್ಯಾದಿ ಭಾಗದಲ್ಲಿ ಚರಂಡಿ ವ್ಯವಸ್ಥೆ ಸರಿಯಿಲ್ಲದೇ ನೀರು ಮನೆಗಳಿಗೆ ನುಗ್ಗಿ ಹಾನಿಯಾಗಿದೆ. ರಂಗೀಕಟ್ಟೆಯಲ್ಲಿ ನೀರು ಹೋಗಲು ವ್ಯವಸ್ಥೆಯೇ ಇಲ್ಲದೇ ವಿಠಲ ಪ್ರಭು ಎನ್ನುವವರ ಮನೆಯೊಳಗೆ ರಾತ್ರಿ ೨ ಗಂಟೆಯ ಸಮಯ ಸುಮಾರು ಎರಡು ಅಡಿಗಳಷ್ಟು ನೀರು ನಿಂತು ಅನೇಕ ವಸ್ತುಗಳು ನೀರಿನಿಂದ ಒದ್ದೆಯಾಗಿದೆ. ಪ್ರತಿ ವರ್ಷವೂ ಕೂಡಾ ಇದೇ ಗೋಳು ಎನ್ನುವುದು ಮನೆಯವರ ಆಕ್ರೋಶ.

"ಗುರುವಾರ ರಾತ್ರಿ ಬಿದ್ದ ಭಾರೀ ಮಳೆಗೆ ಅನೇಕ ಮನೆಗಳಿಗೆ ನೀರು ನುಗ್ಗಿದೆ. ಚೌಥನಿಯಲ್ಲಿ ರಾತ್ರಿ 3 ಗಂಟೆಯ ಸುಮಾರಿಗೆ ನೀರು ಉಕ್ಕಿ ಹರಿದಿರುವುದರಿಂದ ಆತಂಕವ ವಾತಾವರಣ ಸೃಷ್ಟಿಯಾಗಿತ್ತು. ತಕ್ಷಣ ಭೇಟಿ ಕೊಟ್ಟು ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡಿದ್ದು ನೋಡಲ್ ಅಧಿಕಾರಿ ದೇವಿದಾಸ ಮೊಗೇರ ಸ್ಥಳದಲ್ಲಿಯೇ ಯವುದೇ ಅನಾಹುತವಾಗದಂತೆ ಜಾಗೃತೆ ವಹಿಸಿದ್ದಾರೆ. ತಾಲೂಕಿನಲ್ಲಿ ಯಾವುದೇ ಸಂದರ್ಭದಲ್ಲಿ ಜನರ ರಕ್ಷಣೆಗೆ ತಂಡ ಸಿದ್ದವಿದ್ದು ಕಾಳಜಿ ಕೇಂದ್ರಗಳನ್ನು ತೆರೆಯಲು ಕೂಡಾ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ"

-ಡಾ. ಸುಮಂತ್ ಬಿ.ಇ., ತಹಶೀಲ್ದಾರ್, ಭಟ್ಕಳ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X