Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಟ್ವಿಟ್ಟರ್ ಖರೀದಿ ಡೀಲ್‍ನಿಂದ ಹಿಂದೆ...

ಟ್ವಿಟ್ಟರ್ ಖರೀದಿ ಡೀಲ್‍ನಿಂದ ಹಿಂದೆ ಸರಿದ ಇಲಾನ್ ಮಸ್ಕ್; ಕಾನೂನು ಸಮರದ ಎಚ್ಚರಿಕೆ ನೀಡಿದ ಸಂಸ್ಥೆ

ವಾರ್ತಾಭಾರತಿವಾರ್ತಾಭಾರತಿ9 July 2022 3:28 PM IST
share
ಟ್ವಿಟ್ಟರ್ ಖರೀದಿ ಡೀಲ್‍ನಿಂದ ಹಿಂದೆ ಸರಿದ ಇಲಾನ್ ಮಸ್ಕ್; ಕಾನೂನು ಸಮರದ ಎಚ್ಚರಿಕೆ ನೀಡಿದ ಸಂಸ್ಥೆ

ನ್ಯೂಯಾರ್ಕ್, ಜು.9: ಟ್ವಿಟರ್ ಸಂಸ್ಥೆಯನ್ನು 44 ಬಿಲಿಯನ್ ಡಾಲರ್ ಬೃಹತ್ ಮೊತ್ತಕ್ಕೆ ಖರೀದಿಸುವ ತನ್ನ ನಿರ್ಧಾರದಿಂದ ಹಿಂದೆ ಸರಿದಿರುವುದಾಗಿ ಉದ್ಯಮಿ ಎಲಾನ್ ಮಸ್ಕ್ ಶುಕ್ರವಾರ ಘೋಷಿಸಿದ್ದಾರೆ. ಇದಕ್ಕೆ ತಕ್ಷಣ ಪ್ರತಿಕ್ರಿಯಿಸಿರುವ ಟ್ವಿಟರ್, ಮಸ್ಕ್ ವಿರುದ್ಧ ಮೊಕದ್ದಮೆ ದಾಖಲಿಸುವುದಾಗಿ ತಿಳಿಸಿದೆ.
‌
ನಕಲಿ ಖಾತೆಗಳ ಬಗ್ಗೆ ಟ್ವಿಟರ್ ಸಾಕಷ್ಟು ಮಾಹಿತಿ ಒದಗಿಸಲು ವಿಫಲವಾಗಿರುವ ಹಿನ್ನೆಲೆಯಲ್ಲಿ ಒಪ್ಪಂದ ರದ್ದುಗೊಳಿಸಲು ನಿರ್ಧರಿಸಿರುವುದಾಗಿ ಟೆಸ್ಲಾ ಸಂಸ್ಥೆಯ ಸಿಇಒ ಎಲಾನ್ ಮಸ್ಕ್ ಸ್ಪಷ್ಟಪಡಿಸಿದ್ದಾರೆ. ವಿಶ್ವದ ಶ್ರೀಮಂತ ವ್ಯಕ್ತಿ ಮತ್ತು ವಿಶ್ವದ ಅತ್ಯಂತ ಪ್ರಭಾವಶಾಲೀ ಸಾಮಾಜಿಕ ಮಾಧ್ಯಮದ ನಡುವಿನ ವ್ಯವಹಾರ ಮತ್ತೊಂದು ತಿರುವು ಪಡೆದಿದ್ದು, ಮುಂದಿನ ದಿನದಲ್ಲಿ ಬೃಹತ್ ಕಾನೂನು ಸಮರವಾಗಿ ಮಾರ್ಪಡುವ ಸಾಧ್ಯತೆಯಿದೆ.
 
ಒಪ್ಪಂದ ಉಲ್ಲಂಘಿಸಿದರೆ ಮಸ್ಕ್ 1 ಬಿಲಿಯನ್ ಡಾಲರ್ ದಂಡ ಪಾವತಿಸುವ ಬಗ್ಗೆ ಕರಾರಿನಲ್ಲಿ ಉಲ್ಲೇಖಿಸಲಾಗಿದೆ. ಆದರೆ ಮಸ್ಕ್ ದಂಡ ಪಾವತಿಸುವುದು ಬೇಡ, ಈ ಹಿಂದೆ ಮಾಡಿಕೊಂಡ ಒಪ್ಪಂದದಂತೆ ಸಂಸ್ಥೆಯನ್ನು ಖರೀದಿಸಬೇಕು ಎಂಬ ವಾದವನ್ನು ಮುಂದಿಟ್ಟಿಕೊಂಡು ಕಾನೂನು ಸಮರಕ್ಕೆ ಟ್ವಿಟರ್ ನಿರ್ಧರಿಸಿದೆ.

ಟ್ವಿಟರ್ ವೇದಿಕೆಯಲ್ಲಿ ಅನಪೇಕ್ಷಿತ ಮತ್ತು ನಕಲಿ ಖಾತೆಗಳ ಬಗ್ಗೆ ನಮ್ಮ ಗ್ರಾಹಕರು ಕಳೆದ 2 ತಿಂಗಳಿಂದ ಕೋರಿದ್ದರು . ಆದರೆ ಇದಕ್ಕೆ ಟ್ವಿಟರ್ ವಿಫಲವಾಗಿದೆ ಅಥವಾ ನಿರಾಕರಿಸಿದೆ. ಕೆಲವೊಮ್ಮೆ ಮಸ್ಕ್ ಅವರ ಕೋರಿಕೆಯನ್ನು ಕಡೆಗಣಿಸಿದೆ, ಕೆಲವೊಮ್ಮೆ ಸಮರ್ಥನೀಯವಲ್ಲದ ರೀತಿಯ ಕಾರಣ ನೀಡಿ ತಿರಸ್ಕರಿಸಿದೆ, ಮತ್ತು ಕೆಲವೊಮ್ಮೆ ಅಪೂರ್ಣ ಅಥವಾ ಪ್ರಯೋಜನಕ್ಕೆ ಬಾರದ ಮಾಹಿತಿ ನೀಡಿದೆ ಎಂದು ಟ್ವಿಟರ್ ನ ಆಡಳಿತ ಮಂಡಳಿಗೆ ಮಸ್ಕ್ ಅವರ ವಕೀಲರು ರವಾನಿಸಿದ ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಈ ಮಾಹಿತಿಗಳು ಟ್ವಿಟರ್ ನ ವ್ಯವಹಾರ ಮತ್ತು ಹಣಕಾಸಿನ ಕಾರ್ಯಕ್ಷಮತೆಗೆ ಆಧಾರವಾಗಿವೆ ಮತ್ತು ವಿಲೀನ ಪ್ರಕ್ರಿಯೆ ಪೂರ್ಣಗೊಳಿಸಲು ಅಗತ್ಯವಾಗಿದೆ ಎಂದು ಮಸ್ಕ್ ಹೇಳಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಟ್ವಿಟರ್ ಮಂಡಳಿಯ ಅಧ್ಯಕ್ಷ ಬ್ರೆಟ್ ಟೇಲರ್, ಮಸ್ಕ್ ಅವರೊಂದಿಗೆ ಒಪ್ಪಿಕೊಂಡ ದರ ಮತ್ತು ಷರತ್ತಿಗೆ ಅನುಗುಣವಾಗಿ ಈ ವ್ಯವಹಾರವನ್ನು ಪೂರ್ಣಗೊಳಿಸಲು ಆಡಳಿತ ಮಂಡಳಿ ಬದ್ಧವಾಗಿದೆ. ವಿಲೀನ ಒಪ್ಪಂದ ಅನುಷ್ಟಾನಕ್ಕೆ ಕಾನೂನು ಕ್ರಮವನ್ನು ಮುಂದುವರಿಸಲು ಯೋಜಿಸಿದೆ ಎಂದಿದ್ದಾರೆ.ಈ ಮಧ್ಯೆ, ಮಸ್ಕ್ ಘೋಷಣೆ ಹೊರಬಿದ್ದೊಡನೆ ಶೇರ್ ಮಾರ್ಕೆಟ್ನಲ್ಲಿ ಟ್ವಿಟರ್ ನ ಶೇರುಗಳ ದರದಲ್ಲಿ 5% ಕುಸಿತ ಮತ್ತು ಟೆಸ್ಲಾದ ಶೇರುಗಳ ದರದಲ್ಲಿ 2.5% ಹೆಚ್ಚಳ ದಾಖಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X