Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಆರೆಸೆಸ್ಸ್ ಷಡ್ಯಂತ್ರ ಅರಿಯದಿದ್ದರೆ...

ಆರೆಸೆಸ್ಸ್ ಷಡ್ಯಂತ್ರ ಅರಿಯದಿದ್ದರೆ ಭಾರತದ ಭವಿಷ್ಯ ಭೀಕರ: ಮಾವಳ್ಳಿ ಶಂಕರ್ ಎಚ್ಚರಿಕೆ

ವಾರ್ತಾಭಾರತಿವಾರ್ತಾಭಾರತಿ9 July 2022 8:28 PM IST
share
ಆರೆಸೆಸ್ಸ್ ಷಡ್ಯಂತ್ರ ಅರಿಯದಿದ್ದರೆ ಭಾರತದ ಭವಿಷ್ಯ ಭೀಕರ: ಮಾವಳ್ಳಿ ಶಂಕರ್ ಎಚ್ಚರಿಕೆ

ಬೆಂಗಳೂರು, ಜು. 9: ‘ಭಾರತದ ವೈದಿಕ ವಿರೋಧಿ ನಿಜವಾದ ಚರಿತ್ರೆಯನ್ನು ನಾಶ ಮಾಡಿ ಶಾಲಾ ಮಕ್ಕಳ ಪಠ್ಯ ಪುಸ್ತಕಗಳ ಪರಿಷ್ಕರಣೆ ಮೂಲಕ ಪುರೋಹಿತಶಾಹಿ ಇತಿಹಾಸವನ್ನು ವಿಜೃಂಭಿಸಲು ಮುಂದಾಗಿರುವುದು ಆತಂಕಕಾರಿ' ಎಂದು ದಸಂಸ ರಾಜ್ಯ ಪ್ರಧಾನ ಸಂಚಾಲಕ ಮಾವಳ್ಳಿ ಶಂಕರ್ ಅಭಿಪ್ರಾಯಪಟ್ಟಿದ್ದಾರೆ.

ಶನಿವಾರ ಇಲ್ಲಿನ ಅಂಬೇಡ್ಕರ್ ಭವನದಲ್ಲಿ ಮೂಲನಿವಾಸಿ ಸಂಘಟನೆಗಳ ಒಕ್ಕೂಟದಿಂದ ಏರ್ಪಡಿಸಿದ್ದ ‘ಮೂಲನಿವಾಸಿ ಬಂಧುತ್ವ ಸಮಾವೇಶ'ದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ‘ಇತಿಹಾಸವನ್ನು ಅರಿತವನು ಮಾತ್ರ ಚರಿತ್ರೆ ಸೃಷ್ಟಿಸಲು ಸಾಧ್ಯ' ಎಂದು ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರು ಹೇಳಿದ್ದಾರೆ. ಆದರೆ, ನಾವಿಂದು ನಮ್ಮ ಮೂಲ ಇತಿಹಾಸವನ್ನೇ ಮರೆಯುವಂತೆ ಆಗಿದೆ' ಎಂದು ಬೇಸರ ವ್ಯಕ್ತಪಡಿಸಿದರು.

‘ಚಾರ್ವಾಕರು, ಬುದ್ಧ, ಬಸವ, ಶಾಹುಮಹಾರಾಜ್, ಅಂಬೇಡ್ಕರ್ ಸೇರಿದಂತೆ ನಮ್ಮ ಸಮಾಜದ ಸುಧಾರಕರ ನೈಜ ಹೋರಾಟದ ಇತಿಹಾಸವನ್ನು ಅರಿತರೆ ಮಾತ್ರ ನಿಜವಾದ ಭಾರತದ ಚರಿತ್ರೆ ಅರ್ಥವಾಗಲು ಸಾಧ್ಯ ಎಂದ ಮಾವಳ್ಳಿ ಶಂಕರ್, ಶೋಷಿತ ಮತ್ತು ಕೆಳಜಾತಿ ಜನರಿಗೆ ಮಾನವ ಘನತೆ ಕಲ್ಪಿಸುವ ದೃಷ್ಟಿಯಿಂದ ಮೊಟ್ಟ ಮೊದಲ ಬಾರಿಗೆ ಮೀಸಲಾತಿ ನೀಡಿದ್ದು ಛತ್ರಪತಿ ಶಾಹುಮಹರಾಜ್ ಎಂದು ಸ್ಮರಿಸಿದರು.

ಭವಿಷ್ಯ ಭೀಕರ: ಮೋದಿ ನೇತೃತ್ವದ ಸರಕಾರ ಸಂವಿಧಾನ, ಪ್ರಜಾಪ್ರಭುತ್ವ ಮತ್ತು ಮೀಸಲಾತಿಯನ್ನೇ ನಾಶ ಮಾಡಲು ಮುಂದಾಗಿದ್ದು, ಆರೆಸೆಸ್ಸ್, ಸಂಘ ಪರಿವಾರ ಸಂವಿಧಾನವನ್ನು ಕಿತ್ತು ಹಾಕಲು ಹೊರಟಿದ್ದಾರೆ. ಆರೆಸೆಸ್ಸ್ ಷಡ್ಯಂತ್ರವನ್ನು ಅರಿತುಕೊಳ್ಳದಿದ್ದರೆ ಭವಿಷ್ಯದ ಭಾರತ ಅತ್ಯಂತ ಭೀಕರವಾಗಿರಲಿದೆ' ಎಂದು ಮಾವಳ್ಳಿ ಶಂಕರ್ ಎಚ್ಚರಿಸಿದರು.

‘ಸ್ವಾತಂತ್ರ್ಯ, ಸಾಮಾನತೆ, ಜಾತ್ಯತೀತತೆ ಸಂವಿಧಾನದ ಮೂಲ ಆಶಯ. ಆದರೆ, ಆರೆಸೆಸ್ಸ್ ಮತ್ತು ಸಂಘ ಪರಿವಾರದವರು ಈ ಆಶಯಗಳ ವಿರುದ್ಧ ಇದ್ದಾರೆ. ಇವರ ಕುತಂತ್ರಗಳನ್ನು ಅರಿತುಕೊಳ್ಳಬೇಕು. ಜತೆಗೆ ಶಾಲಾ ಪಠ್ಯ ಪುಸ್ತಕಗಳ ಪರಿಷ್ಕರಣೆ ವಿರುದ್ಧ ತಳ ಸಮುದಾಯದ ಯುವಕರು ಎಚ್ಚರಗೊಳ್ಳಬೇಕು' ಎಂದು ಮಾವಳ್ಳಿ ಶಂಕರ್ ಕರೆ ನೀಡಿದರು.

ಸಮಾವೇಶದಲ್ಲಿ ಭಾಗವಹಿಸಿದ್ದ ಪ್ರಜಾ ಪರಿರ್ವನಾ ವೇದಿಕೆ ರಾಜ್ಯಾಧ್ಯಕ್ಷ ಬಿ.ಗೋಪಾಲ್ ಮಾತನಾಡಿ, ‘ಮೊಟ್ಟ ಮೊದಲ ಬಾರಿಗೆ ಶೋಷಣೆಗೆ ಗುರಿಯಾಗಿದ್ದ ದಲಿತ ಹಾಗೂ ಅಸ್ಪೃಶ್ಯರಿಗೆ ಮೀಸಲಾತಿ ಕಲ್ಪಿಸಿದ್ದು ಛತ್ರಪತಿ ಶಾಹು ಮಹಾರಾಜರು. ಅವರು ತಮ್ಮ ಆಸ್ಥಾನದ ಆಡಳಿತದಲ್ಲಿ ಶೇ.50ರಷ್ಟು ದಲಿತ ಮತ್ತು ಹಿಂದುಳಿದ ವರ್ಗಗಳಿಗೆ ಪ್ರಾತಿನಿಧ್ಯ ನೀಡಿದ್ದರು' ಎಂದು ನುಡಿದರು.

‘ಶೋಷಿತ ಸಮುದಾಯಗಳು ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕವಾಗಿ ಮುಂದೆ ಬರುವ ದೃಷ್ಟಿಯಿಂದ ಕೈಗಾರಿಕೆ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲಿಯೂ ಮೀಸಲಾತಿಯನ್ನು ಕಲ್ಪಿಸಿದ್ದರು. ದೇಶದಲ್ಲಿ ಹತ್ತು-ಹಲವು ರಾಜ ಮಹಾರಾಜರು ಆಳ್ವಿಕೆ ನಡೆಸಿದರೂ ಶೋಷಿತರಿಗೆ ಮೀಸಲಾತಿಯನ್ನು ಕಲ್ಪಿಸಿದ್ದು ಕೇವಲ ನಾಲ್ವರು ಮಹಾರಾಜರು' ಎಂದು ಶಾಹು ಮಹಾರಾಜರ ಇತಿಹಾಸವನ್ನು ಮೆಲುಕು ಹಾಕಿದರು. ಕಾರ್ಯಕ್ರಮದಲ್ಲಿ ಒಕ್ಕೂಟದ ಅಧ್ಯಕ್ಷ ಆರ್.ಕೇಶವಮೂರ್ತಿ, ಕರವೇ ಶಿವರಾಮೇಗೌಡ, ದಾಸ್ ಪ್ರಕಾಶ್, ಗೋವಿಂದಸ್ವಾಮಿ ಸೇರಿದಂತೆ ಇನ್ನಿತರರು ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X