Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ದ.ಕ.ಜಿಲ್ಲೆ: ಸತತವಾಗಿ ಸುರಿದ ಮಳೆಗೆ...

ದ.ಕ.ಜಿಲ್ಲೆ: ಸತತವಾಗಿ ಸುರಿದ ಮಳೆಗೆ ತತ್ತರಿಸಿದ ಜನತೆ

ಜು.12ರವರೆಗೆ ರೆಡ್ ಅಲರ್ಟ್ ಘೋಷಣೆ

ವಾರ್ತಾಭಾರತಿವಾರ್ತಾಭಾರತಿ9 July 2022 9:12 PM IST
share
ದ.ಕ.ಜಿಲ್ಲೆ: ಸತತವಾಗಿ ಸುರಿದ ಮಳೆಗೆ ತತ್ತರಿಸಿದ ಜನತೆ

ಮಂಗಳೂರು: ದ.ಕ.ಜಿಲ್ಲೆಯಲ್ಲಿ ಒಂದು ವಾರದಿಂದ ಸತತವಾಗಿ ಸುರಿದ ಭಾರೀ ಗಾಳಿ ಮಳೆಗೆ ಜಿಲ್ಲೆಯ ಜನತೆ ತತ್ತರಿಸಿದ್ದಾರೆ. ದಿನದಿಂದ ದಿನಕ್ಕೆ ಮಳೆಯ ಪ್ರಮಾಣ ಹೆಚ್ಚಾಗುತ್ತಿದೆ. ಇನ್ನೊಂದೆಡೆ ಮಳೆ ಹಾನಿ ಪ್ರಕರಣವೂ ಹೆಚ್ಚುತ್ತಿದೆ.

ಕಡಲಿನ ಆರ್ಭಟ ಮತ್ತು ಕಡಲ್ಕೊರೆತವು ತೀವ್ರಗೊಳ್ಳುತ್ತಿವೆ. ಇದರಿಂದ ನಗರ ಮತ್ತು ಗ್ರಾಮಾಂತರ ಪ್ರದೇಶದ ಜನ ಜೀವನ ಅಸ್ತವ್ಯಸ್ಥಗೊಂಡಿದ್ದರೆ. ಕಡಲ ತೀರದ ಪ್ರದೇಶದ ಜನರು ಆತಂಕದ ಕ್ಷಣಗಳನ್ನು ಕಳೆಯುತ್ತಿದ್ದಾರೆ. ಕಡಲ್ಕೊರೆತದಿಂದ ತೀರ ಪ್ರದೇಶದ ಮನೆ, ರಸ್ತೆಗಳು, ಮರಗಳನ್ನು ಸಮುದ್ರದ ಭಾರೀ ಗಾತ್ರದ ಅಲೆಗಳು ಆಹುತಿ ಪಡೆಯುತ್ತಿದೆ.

ಶನಿವಾರ ದಿನವಿಡೀ ಎಡೆಬಿಡದೆ ಮಳೆ ಸುರಿದಿದೆ. ಹವಾಮಾನ ಇಲಾಖೆಯು ಜು.12ರವರೆಗೆ ರೆಡ್ ಅಲರ್ಟ್ ಮತ್ತು ಜು.14ರವರೆಗೆ ಆರೇಂಜ್ ಅಲರ್ಟ್ ಘೋಷಿಸಿದೆ.

ಉಳ್ಳಾಲದ ಬಟಪಾಡಿ, ಪಣಂಬೂರು, ಬೈಕಂಪಾಡಿಯಲ್ಲಿ ಶನಿವಾರ ಕಡಲ್ಕೊರೆತ ತೀವ್ರಗೊಂಡಿತ್ತು. ಬೈಕಂಪಾಡಿ ಮೀನಕಳಿಯದಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ವತಿಯಿಂದ ನಿರ್ಮಿಸಲಾಗಿದ್ದ ಸಗಟು ಮೀನು ಮಾರುಕಟ್ಟೆಯನ್ನು ಸಮುದ್ರ ಆಹುತಿ ಪಡೆದಿದೆ. ಇಲ್ಲಿನ ಕಾಂಕ್ರೀಟ್ ರಸ್ತೆಯು ಅಪಾಯದಲ್ಲಿದೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.

ಉಳ್ಳಾಲದ ಬಟಪಾಡಿಯಲ್ಲೂ ಕಡಲು ಪ್ರಕ್ಷುಬ್ಧಗೊಂಡಿವೆ. ಅಪಾಯದಲ್ಲಿದ್ದ ಅನೇಕ ಮನೆಮಂದಿ ಸುರಕ್ಷಿತ ಪ್ರದೇಶಗಳಿಗೆ ತೆರಳಿದ್ದಾರೆ ಎಂದು ತಿಳಿದು ಬಂದಿದೆ.

ಶುಕ್ರವಾರ ರಾತ್ರಿಯಿಡೀ ಸುರಿದ ಭಾರೀ ಮಳೆಯಿಂದಾಗಿ ನಗರದ ಬಜ್ಜೋಡಿ ಎಂಬಲ್ಲಿ ಧರೆ ಕುಸಿದು ಅಲ್ಲಿನ ಎರಡು ಮನೆಗಳಿಗೆ ಮಣ್ಣು- ನೀರು ನುಗ್ಗಿದ ಪರಿಣಾಮ ಹಾನಿಯಾಗಿವೆ. ಮಾಲೇಮಾರು ಪ್ರದೇಶದಲ್ಲಿ ಕೂಡ ಕೆಲವು ಮನೆಗಳಿಗೆ ನೀರು ನುಗ್ಗಿದ್ದು ಶನಿವಾರ ಅಪರಾಹ್ನದ ವೇಳೆಗೆ ನೀರು ಇಳಿದಿದೆ. ಕಣ್ಣೂರು ಬಳ್ಳೂರುಗುಡ್ಡೆ ಪ್ರದೇಶದಲ್ಲಿ ಗುಡ್ಡ ಕುಸಿತದ ಭೀತಿ ಎದುರಾಗಿದೆ.

ಕೂಳೂರಿನ ಹಳೆ ಸೇತುವೆ ಹಾಗೂ ತೊಕ್ಕೊಟ್ಟು-ದೇರಳಕಟ್ಟೆ ನಡುವಿನ ಪ್ರಮುಖ ರಸ್ತೆಯಲ್ಲಿ ಭಾರೀ ಮಳೆಗೆ ಹೊಂಡಗಳು ಸೃಷ್ಟಿಯಾಗಿವೆ. ಇದರಿಂದ ಸುಗಮ ಸಂಚಾರಕ್ಕೆ ಅಡಚಣೆಯಾಗಿದೆ.

ಅಪಾರ ಹಾನಿ

ಜಿಲ್ಲೆಯಲ್ಲಿ ವಾರದಿಂದ ಸುರಿಯುತ್ತಿರುವ ಭಾರೀ ಗಾಳಿ ಮಳೆಯಿಂದ ಶನಿವಾರವೂ ಅಪಾರ ಹಾನಿಯಾಗಿದೆ. ಜಿಲ್ಲೆಯಲ್ಲಿ ಶನಿವಾರ ಒಂದು ಮನೆ ಸಂಪೂರ್ಣ ನೆಲಸಮವಾಗಿದೆ. ಅಲ್ಲದೆ 9 ಮನೆಗಳಿಗೆ ಭಾಗಶಃ ಹಾನಿಯಾ ಗಿವೆ. ಒಟ್ಟಾರೆ ಈವರೆಗೆ ೫೬ ಮನೆಗಳು ಸಂಪೂರ್ಣ ಮತ್ತು ೪೨೭ ಮನೆಗಳಿಗೆ ಭಾಗಶಃ ಹಾನಿಯಾಗಿವೆ.

ಮಂಗಳೂರು ತಾಲೂಕಿನಲ್ಲಿ ೧೭, ಬಂಟ್ವಾಳದಲ್ಲಿ ೧೦, ಪುತ್ತೂರಿನಲ್ಲಿ ೧, ಬೆಳ್ತಂಗಡಿಯಲ್ಲಿ ೪, ಸುಳ್ಯದಲ್ಲಿ ೨, ಮೂಡುಬಿದಿರೆಯಲ್ಲಿ ೪, ಕಡಬದಲ್ಲಿ ೨, ಮುಲ್ಕಿಯಲ್ಲಿ ೭, ಉಳ್ಳಾಲದಲ್ಲಿ ೯ ಸಹಿತ ೫೬ ಮನೆಗಳು ಸಂಪೂರ್ಣ ನೆಲಸಮವಾಗಿದೆ. ಅಲ್ಲದೆ ಮಂಗಳೂರು ತಾಲೂಕಿನಲ್ಲಿ ೮೬, ಬಂಟ್ವಾಳದಲ್ಲಿ ೨೭, ಪುತ್ತೂರಿನಲ್ಲಿ ೨೧, ಬೆಳ್ತಂಗಡಿಯಲ್ಲಿ ೫೫, ಸುಳ್ಯದಲ್ಲಿ ೫೦ ಮೂಡುಬಿದಿರೆ ೨೯, ಕಡಬದಲ್ಲಿ ೫೮, ಮುಲ್ಕಿಯಲ್ಲಿ ೨೨, ಉಳ್ಳಾಲದಲ್ಲಿ ೯೯ ಸಹಿತ ೪೨೭ ಮನೆಗಳಿಗೆ ಭಾಗಶಃ ಹಾನಿಯಾಗಿವೆ ಎಂದು ದ.ಕ. ಜಿಲ್ಲಾಡಳಿತದ ಮೂಲಗಳು ತಿಳಿಸಿವೆ.
 
ದ.ಕ.ಜಿಲ್ಲೆಯ ಮಳೆ ವಿವರ
*ಮಂಗಳೂರು: 31.4 ಮಿ.ಮೀ.
*ಬಂಟ್ವಾಳ: 30.1 ಮಿ.ಮೀ.
*ಪುತ್ತೂರು: 36.3 ಮಿ.ಮೀ.
*ಬೆಳ್ತಂಗಡಿ: 38.8 ಮಿ.ಮೀ
*ಸುಳ್ಯ: 42.9 ಮಿ.ಮೀ.
*ಮೂಡುಬಿದಿರೆ: 59.1 ಮಿ.ಮೀ
*ಕಡಬ: 24.9 ಮಿ.ಮೀ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X