Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರಾಜಕೀಯ ಅವಕಾಶವಾದಕ್ಕಾಗಿ ಜನರನ್ನು...

ರಾಜಕೀಯ ಅವಕಾಶವಾದಕ್ಕಾಗಿ ಜನರನ್ನು ವಿಭಜಿಸಲಾಗುತ್ತಿದೆ: ಖ್ಯಾತ ಅರ್ಥಶಾಸ್ತ್ರಜ್ಞ ಅಮರ್ತ್ಯ ಸೇನ್

ವಾರ್ತಾಭಾರತಿವಾರ್ತಾಭಾರತಿ9 July 2022 9:22 PM IST
share
ರಾಜಕೀಯ ಅವಕಾಶವಾದಕ್ಕಾಗಿ ಜನರನ್ನು ವಿಭಜಿಸಲಾಗುತ್ತಿದೆ: ಖ್ಯಾತ ಅರ್ಥಶಾಸ್ತ್ರಜ್ಞ ಅಮರ್ತ್ಯ ಸೇನ್

ಕೋಲ್ಕತಾ,ಜು.9: ರಾಜಕೀಯ ಅವಕಾಶವಾದಕ್ಕಾಗಿ ದೇಶದ ಜನರನ್ನು ವಿಭಜಿಸಲಾಗುತ್ತಿದೆ ಎಂದು ನೊಬೆಲ್ ಪ್ರಶಸ್ತಿ ಪುರಸ್ಕೃತ ಅರ್ಥಶಾಸ್ತ್ರಜ್ಞ ಅಮರ್ತ್ಯ ಸೇನ್ ಅವರು ಶನಿವಾರ ಇಲ್ಲಿ ಹೇಳಿದರು.

ಭಾರತಕ್ಕೆ ಸ್ವಾತಂತ್ರ ಲಭಿಸಿ ದಶಕಗಳೇ ಕಳೆದಿದ್ದರೂ ರಾಜಕೀಯ ಕಾರಣಗಳಿಗಾಗಿ ಜನರನ್ನು ಜೈಲಿಗೆ ತಳ್ಳುವ ವಸಾಹತುಶಾಹಿ ಪದ್ಧತಿ ಈಗಲೂ ಮುಂದುವರಿದಿದೆ ಎಂದು ‘ಆನಂದಬಝಾರ್ ಪತ್ರಿಕಾ’ದ ಶತಾಬ್ದಿ ಆಚರಣೆಯಲ್ಲಿ ಮಾಡಿದ ವರ್ಚುವಲ್ ಭಾಷಣದಲ್ಲಿ ಹೇಳಿದ ಸೇನ್,ಭಾರತೀಯರನ್ನು ವಿಭಜಿಸುವ ಪ್ರಯತ್ನಗಳು ನಡೆಯುತ್ತಿವೆ. ರಾಜಕೀಯ ಲಾಭಕ್ಕಾಗಿ ಹಿಂದುಗಳು ಮತ್ತು ಮುಸ್ಲಿಮರ ಸಹಬಾಳ್ವೆಯಲ್ಲಿ ಬಿರುಕನ್ನು ಮೂಡಿಸಲಾಗುತ್ತಿದೆ ಎಂದರು.

ಬೆಂಗಾಳಿ ಭಾಷೆಯ ಆನಂದಬಝಾರ್ ಪತ್ರಿಕಾದ ಮೊದಲ ಸಂಚಿಕೆ 1922,ಮಾ.13ರಂದು ಪ್ರಕಟಗೊಂಡಿತ್ತು. ಪ್ರಫುಲ್ ಕುಮಾರ ಸರ್ಕಾರ್ ಅದರ ಸ್ಥಾಪಕ ಸಂಪಾದಕರಾಗಿದ್ದರು.‘ಬ್ರಿಟಿಷರ ಕಾಲದಲ್ಲಿ ದೇಶದ ಹಲವಾರು ಜನರನ್ನು ರಾಜಕೀಯ ಕಾರಣಗಳಿಗಾಗಿ ಜೈಲಿಗೆ ತಳ್ಳಲಾಗುತ್ತಿತ್ತು. ಆಗ ನಾನು ತುಂಬ ಚಿಕ್ಕವನಿದ್ದೆ ಮತ್ತು ಯಾವುದೇ ಅಪರಾಧವನ್ನು ಮಾಡದಿದ್ದರೂ ಜನರನ್ನು ಜೈಲಿಗೆ ತಳ್ಳುವ ಈ ಪದ್ಧತಿ ಎಂದಾದರೂ ನಿಲ್ಲುತ್ತದೆಯೇ ಎಂದು ನಾನು ಆಗಾಗ್ಗೆ ಪ್ರಶ್ನಿಸುತ್ತಿದ್ದೆ. ಬಳಿಕ ಭಾರತವು ಸ್ವತಂತ್ರಗೊಂಡಿತಾದರೂ ಈ ಪದ್ಧತಿ ಈಗಲೂ ಅಸ್ತಿತ್ವದಲ್ಲಿದೆ’ ಎಂದು 88ರ ಹರೆಯದ ಸೇನ್ ಹೇಳಿದರು.ನ್ಯಾಯದ ಮಾರ್ಗವನ್ನು ಅನುಸರಿಸಲು ಪ್ರಯತ್ನಗಳನ್ನು ಮಾಡಲೇಬೇಕಿದೆ ಎನ್ನುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದರು.

ಕಳೆದ ತಿಂಗಳು ಕೋಲ್ಕತಾದಲ್ಲಿ ಅಮರ್ತ್ಯ ಸಂಶೋಧನಾ ಕೇಂದ್ರದ ಉದ್ಘಾಟನಾ ಸಮಾರಂಭದಲ್ಲಿ ಭಾರತದಲ್ಲಿಯ ಇಂದಿನ ಸ್ಥಿತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದ ಸೇನ್,‘ಏಕತೆಯನ್ನು ಕಾಯ್ದುಕೊಳ್ಳಲು ಜನರು ಶ್ರಮಿಸಬೇಕಿದೆ. ನನಗೆ ಯಾವುದರ ಬಗ್ಗೆಯಾದರೂ ಭೀತಿಯಿದೆಯೇ ಎಂದು ಯಾರಾದರೂ ನನ್ನನ್ನು ಪ್ರಶ್ನಿಸಿದರೆ ಹೌದು ಎಂದು ಉತ್ತರಿಸುತ್ತೇನೆ. ಹೆದರಿಕೊಳ್ಳಲು ಈಗ ಕಾರಣಗಳಿವೆ. ದೇಶದಲ್ಲಿಯ ಪ್ರಚಲಿತ ಸ್ಥಿತಿಯು ಭೀತಿಗೆ ಕಾರಣವಾಗಿದೆ’ ಎಂದು ಹೇಳಿದ್ದರು.
 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X